AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಐಟಿ ಮಾರ್ಗಸೂಚಿಯಂತೆ 3 ಹಂತದ ಅಧಿಕಾರಿಗಳನ್ನು ನೇಮಿಸಿ ಕೇಂದ್ರಕ್ಕೆ ವಿವರ ಸಲ್ಲಿಸಿದ ಪ್ರಮುಖ ಸಾಮಾಜಿಕ ಜಾಲತಾಣ ಕಂಪೆನಿಗಳು

ಫೆಬ್ರುವರಿ 25ರಂದು ಘೋಷಣೆಯಾಗಿದ್ದ ಹೊಸ ಐಟಿ ನಿಯಮಗಳು ಮೇ 26ರಿಂದ, ಅಂದರೆ ಮೂರು ತಿಂಗಳ ಅಂತರದಲ್ಲಿ ಜಾರಿಗೆ ಬಂದಿವೆ. ಸದ್ಯ ಫೇಸ್‌ಬುಕ್‌, ವಾಟ್ಸಾಫ್, ಗೂಗಲ್, ಲಿಂಕ್ಡ್​ಇನ್, ಕೂ, ಶೇರ್ ಚಾಟ್, ಟೆಲಿಗ್ರಾಂ ಮೂರು ಹಂತದ ಅಧಿಕಾರಿಗಳನ್ನು ನೇಮಿಸಿ ವಿವರಗಳನ್ನು ಸರ್ಕಾರಕ್ಕೆ ಸಲ್ಲಿಸಿವೆ.

ಹೊಸ ಐಟಿ ಮಾರ್ಗಸೂಚಿಯಂತೆ 3 ಹಂತದ ಅಧಿಕಾರಿಗಳನ್ನು ನೇಮಿಸಿ ಕೇಂದ್ರಕ್ಕೆ ವಿವರ ಸಲ್ಲಿಸಿದ ಪ್ರಮುಖ ಸಾಮಾಜಿಕ ಜಾಲತಾಣ ಕಂಪೆನಿಗಳು
ಪ್ರಾತಿನಿಧಿಕ ಚಿತ್ರ
Follow us
guruganesh bhat
|

Updated on:May 28, 2021 | 10:48 PM

ದೆಹಲಿ: ಕೇಂದ್ರ ಸರ್ಕಾರದ ಹೊಸ ಐಟಿ ಮಾರ್ಗಸೂಚಿ ಪಾಲಿಸಲು 7 ಸಾಮಾಜಿಕ ಜಾಲತಾಣ ಕಂಪೆನಿಗಳು ಒಪ್ಪಿಗೆ ಸೂಚಿಸಿದ್ದು, ನೋಡಲ್ ಸಂಪರ್ಕ ಅಧಿಕಾರಿ, ದೂರು ಪರಿಹಾರ ಅಧಿಕಾರಿ ಮತ್ತು ಮುಖ್ಯ ಅನುಪಾಲನಾ ಅಧಿಕಾರಿ ನೇಮಿಸಿರುವ ವಿವರಗಳನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿವೆ. ಆದರೆ ಪ್ರಮುಖ ಮೈಕ್ರೋ ಬ್ಲಾಗಿಂಗ್ ತಾಣವಾದ ಟ್ವಿಟರ್ ಮಾತ್ರ ಈವರೆಗೆ ಹೊಸ ಐಟಿ ಮಾರ್ಗಸೂಚಿಗೆ ಸಮ್ಮಿತಿ ಸೂಚಿಸಿಲ್ಲ. ಸದ್ಯ ಫೇಸ್‌ಬುಕ್‌, ವಾಟ್ಸಾಫ್, ಗೂಗಲ್, ಲಿಂಕ್ಡ್​ಇನ್, ಕೂ, ಶೇರ್ ಚಾಟ್, ಟೆಲಿಗ್ರಾಂ ಮೂರು ಹಂತದ ಅಧಿಕಾರಿಗಳನ್ನು ನೇಮಿಸಿ ವಿವರಗಳನ್ನು ಸರ್ಕಾರಕ್ಕೆ ಸಲ್ಲಿಸಿವೆ.

ಐಟಿ ನಿಯಮಗಳಲ್ಲಿರುವ ಕೆಲ ಷರತ್ತುಗಳು ವಾಕ್​ ಸ್ವಾತಂತ್ರ್ಯದ ಆಶಯಗಳನ್ನೇ ಉಲ್ಲಂಘಿಸುತ್ತದೆ ಎಂದು ಗುರುವಾರ ಬಿಡುಗಡೆ ಮಾಡಿದ್ದ ಹೇಳಿಕೆಯಲ್ಲಿ ಟ್ವಿಟರ್ ತಿಳಿಸಿತ್ತು. ಟ್ವಿಟರ್​ನ ಹೇಳಿಕೆಯನ್ನು ಖಂಡಿಸಿದ್ದ ಕೇಂದ್ರ ಸರ್ಕಾರವು, ಸಾಕಷ್ಟು ಚರ್ಚೆಗಳ ನಂತರವೇ ಹೊಸ ಐಟಿ ನಿಯಮಗಳನ್ನು ಅಂತಿಮಗೊಳಿಸಲಾಯಿತು. ಟ್ವಿಟರ್ ಸುಮ್ಮನೆ ಟೀಕಿಸುವುದು ಬಿಟ್ಟು, ನೆಲದ ಕಾನೂನಿಗೆ ಬದ್ಧವಾಗಿರಬೇಕು. ದೇಶದ ಕಾನೂನು ಹೇಗಿರಬೇಕು ಎಂಬುದನ್ನು ಸಾರ್ವಭೌಮ ಸರ್ಕಾರ ನಿರ್ಧರಿಸುತ್ತದೆ. ಒಂದು ಸಾಮಾಜಿಕ ಜಾಲತಾಣವಾಗಿರುವ ಟ್ವಿಟರ್ ಅದಕ್ಕೆ ಬದ್ಧವಾಗಿರಬೇಕು ಎಂದು ಕೇಂದ್ರ ಸರ್ಕಾರ ಹೇಳಿತ್ತು.

ದೇಶದ ಜನಪ್ರಿಯ ಸಾಮಾಜಿಕ ಜಾಲತಾಣ ಟ್ವಿಟರ್​ ಹೊಸ ಐಟಿ ನಿಯಮಗಳಿಗೆ ಬದ್ಧವಾಗಿಲ್ಲ ಎಂದು ದೂರಿ ದೆಹಲಿ ಹೈಕೋರ್ಟ್​ನಲ್ಲಿ ಶುಕ್ರವಾರ ಅರ್ಜಿಯೊಂದು ದಾಖಲಾಗಿದೆ. ದೆಹಲಿ ಹೈಕೋರ್ಟ್​ ಮತ್ತು ಸುಪ್ರೀಂಕೋರ್ಟ್​​ನಲ್ಲಿ ವಕೀಲರಾಗಿರುವ ಅಮಿತ್ ಆಚಾರ್ಯ ಈ ಸಂಬಂಧ ಅರ್ಜಿ ಸಲ್ಲಿಸಿದ್ದಾರೆ. ಅತಿಮುಖ್ಯ ಸಾಮಾಜಿಕ ಮಾಧ್ಯವಾಗಿರುವ ಟ್ವಿಟರ್ ಶಾಸನಬದ್ಧ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಅವರು ಅರ್ಜಿಯಲ್ಲಿ ಹೇಳಿದ್ದಾರೆ.

ಫೆಬ್ರುವರಿ 25ರಂದು ಘೋಷಣೆಯಾಗಿದ್ದ ಹೊಸ ಐಟಿ ನಿಯಮಗಳು ಮೇ 26ರಿಂದ, ಅಂದರೆ ಮೂರು ತಿಂಗಳ ಅಂತರದಲ್ಲಿ ಜಾರಿಗೆ ಬಂದಿವೆ. ಈ ನಿಯಮಗಳ ಪ್ರಕಾರ, ಅಧಿಕಾರಿಗಳು ತಿಳಿಯಬಯಸಿದಾಗ ಸಾಮಾಜಿಕ ಮಾಧ್ಯಮ ಸಂಸ್ಥೆಗಳು ಯಾವುದೇ ಸಂದೇಶದ ಮೂಲ ಕರ್ತೃಗಳು ಯಾರು ಎಂಬುದನ್ನು ಬಹಿರಂಗಪಡಿಸಬೇಕಾಗುತ್ತದೆ. ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಾಮಾಜಿಕ ಜಾಲತಾಣ ವೇದಿಕೆಗಳು ಬದ್ಧವಾಗಿರಬೇಕೆಂದು ಕೇಂದ್ರ ಸರ್ಕಾರ ರೂಪಿಸಿರುವ ಹಲವು ನಿಯಮಗಳ ಪೈಕಿ ಇದು ಮುಖ್ಯವಾದುದು.

ಈ ಅರ್ಜಿಗೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್​ಗೆ ಪ್ರತಿಕ್ರಿಯಿಸಿರುವ ಟ್ವಿಟರ್​ ಸಂಸ್ಥೆಯು, ಸರ್ಕಾರಕ್ಕೆ ಸಹಕರಿಸಲು ತಾನು ಬದ್ಧವಾಗಿರುವುದಾಗಿ ಹೇಳಿದೆ. ಆದರೆ ಈಚಿನ ದಿನಗಳಲ್ಲಿ ನಡೆದ ಕೆಲ ಬೆಳವಣಿಗೆಗಳು ಭಾರತದಲ್ಲಿರುವ ತನ್ನ ಉದ್ಯೋಗಿಗಳ ಸುರಕ್ಷೆ ಬಗ್ಗೆ ಭೀತಿಯುಂಟು ಮಾಡಿದೆ ಎಂದು ಹೇಳಿದೆ. ಈಚೆಗಷ್ಟೇ ಟ್ವಿಟರ್​ನ ದೆಹಲಿ ಕಚೇರಿಗೆ ದೆಹಲಿ ಪೊಲೀಸರು ತಂಡವೊಂದು ಭೇಟಿ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ಬಿಜೆಪಿ ವಕ್ತಾರರ ಟ್ವೀಟ್ ಒಂದಕ್ಕೆ ‘ತಿರುಚಿದ ಮಾಹಿತಿ’ ಟ್ಯಾಗ್ ಅಂಟಿಸಿದ್ದಕ್ಕಾಗಿ ವಿಚಾರಣೆ ನಡೆಸಲು ದೆಹಲಿ ಪೊಲೀಸರು ಟ್ವಿಟರ್ ಕಚೇರಿಗೆ ಭೇಟಿ ನೀಡಿದ್ದರು.

ಇದನ್ನೂ ಓದಿ: ಕೊವಿಡ್ ಚಿಕಿತ್ಸೆಗೆ ಕ್ರೀಡಾಪಟುಗಳಿಗೆ ಕರ್ನಾಟಕ ಒಲಿಂಪಿಕ್ ಸಂಸ್ಥೆಯಿಂದ ಆರ್ಥಿಕ ನೆರವು 

ಹಳ್ಳಿಗಳಲ್ಲಿ ಕೊವಿಡ್ ಕಡಿಮೆ ಮಾಡಲು ಹೆಚ್ಚಿನ ಗಮನ ಕೊಡಿ; ಸಿಎಂ ಯಡಿಯೂರಪ್ಪ ಸೂಚನೆ

(Facebook WhatsApp and others comply with new guidelines Twitter yet to follow)

Published On - 10:43 pm, Fri, 28 May 21

ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
ಗರ್ಭವತಿಯಾದ ಹೆಣ್ಣಿನ ಸಂತೋಷ ಕುಟುಂಬಕ್ಕೆ ಸರ್ವಶುಭಮಂಗಳ ಹೇಗೆ?
Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ
Daily Horoscope: ಈ ರಾಶಿಯವರು ಆತುರದಲ್ಲಿ ಏನನ್ನಾದರೂ ಮಾಡಲು ಹೋಗದಿರಿ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಪ್ರೆಸಿಡೆನ್ಸಿ ಕಾಲೇಜಿಗೆ ಭೇಟಿ ನೀಡಿದ ‘ಎಕ್ಸ್ ಆ್ಯಂಡ್ ವೈ’ ಚಿತ್ರತಂಡ
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಚಿತ್ರರಂಗದಲ್ಲಿ 50 ವರ್ಷ ಪೂರೈಸಿದ ಸಾಯಿ ಕುಮಾರ್; ‘ರಂಗಿತರಂಗ’ ಸ್ಪೆಷಲ್
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಜಮೀರ್ ಅಹ್ಮದ್​​ರಂಥ ಬೇಜವಾಬ್ದಾರಿ ಸಚಿವನನ್ನು ನೋಡೇ ಇಲ್ಲ: ಬೊಮ್ಮಾಯಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ಹುಲಿಗಳ ಅಸಹಜ ಸಾವನ್ನು ಸರ್ಕಾರ ಹಗುರವಾಗಿ ಪರಿಗಣಿಸಿದಂತಿದೆ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ತಾಜ್​ ಮಹಲ್ ಮುಂದೆ ವಿಜಯಲಕ್ಷ್ಮಿಗೆ ಪ್ರಪೋಸ್ ಮಾಡಿದ ಪ್ರೇಮ್ ಥಾಪ: ವಿಡಿಯೋ
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಕೊನೆಯ ಎಸೆತ, 1 ರನ್ ಬೇಕು; ಕ್ಯಾಚ್ ಬಿಟ್ಟ ನೈಟ್ ರೈಡರ್ಸ್ ತಂಡಕ್ಕೆ ಸೋಲು
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?
ಶಾಸಕ ಅಶ್ವಥ್ ನಾರಾಯಣ್ ಮನೇಲಿ ಬಿಜೆಪಿ ನಾಯಕರ ಸಭೆ ನಡೆದಿದ್ದು ಯಾಕೆ?