AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಚಂದ್ರಯಾನ-3ರಲ್ಲಿ ಕೆಲಸ ಮಾಡಿರುವ ಇಸ್ರೋ ವಿಜ್ಞಾನಿಗಳಿಗೆ 3 ತಿಂಗಳಿಂದ ಸಂಬಳ ನೀಡಿಲ್ಲವೇ, ಸತ್ಯವೇನು? ಇಲ್ಲಿದೆ ಮಾಹಿತಿ

ಭಾರತೀಯರ ಕನಸಾಗಿರುವ ಚಂದ್ರಯಾನ 3 ಮಿಷನ್ ಇನ್ನೇನು ಕೆಲವೇ ದಿನಗಳಲ್ಲಿ ಚಂದ್ರನ ಮೇಲ್ಮೈ ಮೇಲೆ ಇಳಿಯಲಿದ್ದು, ಮಿಷನ್ ಯಶಸ್ವಿಯಾಗುವ ಭರವಸೆ ಎಲ್ಲರಿಗೂ ಇದೆ. ಹಾಗೆಯೇ ಈ ಯೋಜನೆಗೆ ಇಸ್ರೋ ವಿಜ್ಞಾನಿಗಳ ಶ್ರಮ ಕೂಡ ಅಷ್ಟೇ ಇದೆ. ಚಂದ್ರಯಾನ 2 ಮಿಷನ್ ವಿಫಲವಾದ ಬಳಿಕ ಧೃತಿ ಗೆಡದೆ ಹಗಲು ರಾತ್ರಿ ಎನ್ನದೆ ವಿಜ್ಞಾನಿಗಳು ಕೆಲಸ ಮಾಡಿದ್ದಾರೆ.

Fact Check: ಚಂದ್ರಯಾನ-3ರಲ್ಲಿ ಕೆಲಸ ಮಾಡಿರುವ ಇಸ್ರೋ ವಿಜ್ಞಾನಿಗಳಿಗೆ 3 ತಿಂಗಳಿಂದ ಸಂಬಳ ನೀಡಿಲ್ಲವೇ, ಸತ್ಯವೇನು? ಇಲ್ಲಿದೆ ಮಾಹಿತಿ
ತೆಹ್ಸೀನ್
ನಯನಾ ರಾಜೀವ್
|

Updated on: Aug 17, 2023 | 10:26 AM

Share

ಭಾರತೀಯರ ಕನಸಾಗಿರುವ ಚಂದ್ರಯಾನ 3(Chandrayaan 3) ಮಿಷನ್ ಇನ್ನೇನು ಕೆಲವೇ ದಿನಗಳಲ್ಲಿ ಚಂದ್ರನ ಮೇಲ್ಮೈ ಮೇಲೆ ಇಳಿಯಲಿದ್ದು, ಮಿಷನ್ ಯಶಸ್ವಿಯಾಗುವ ಭರವಸೆ ಎಲ್ಲರಿಗೂ ಇದೆ. ಹಾಗೆಯೇ ಈ ಯೋಜನೆಗೆ ಇಸ್ರೋ ವಿಜ್ಞಾನಿಗಳ ಶ್ರಮ ಕೂಡ ಅಷ್ಟೇ ಇದೆ. ಚಂದ್ರಯಾನ 2 ಮಿಷನ್ ವಿಫಲವಾದ ಬಳಿಕ ಧೃತಿ ಗೆಡದೆ ಹಗಲು ರಾತ್ರಿ ಎನ್ನದೆ ವಿಜ್ಞಾನಿಗಳು ಕೆಲಸ ಮಾಡಿದ್ದಾರೆ. ಆದರೆ ಚಂದ್ರಯಾನ 3 ಮಿಷನ್​ನಲ್ಲಿ ಇಸ್ರೋ ವಿಜ್ಞಾನಿಗಳು ಕಳೆದ ಮೂರು ತಿಂಗಳಿನಿಂದ ಸಂಬಳ ನೀಡಿಲ್ಲ ಎನ್ನುವ ವದಂತಿ ಎಲ್ಲೆಡೆ ಹರಿದಾಡುತ್ತಿದೆ. ಹಾಗಾದರೆ ಈ ಸುದ್ದಿ ಎಷ್ಟರ ಮಟ್ಟಿಗೆ ಸತ್ಯ ಎಂಬುದನ್ನು ನೋಡೋಣ.

ವದಂತಿ ಏನು?

ದಿ ರಣವೀರ್ ಶೋ ಪಾಡ್​ಕಾಸ್ಟ್​ನಲ್ಲಿ ಪಾಲ್ಗೊಂಡಿದ್ದ ಖ್ಯಾತ ಯೂಟ್ಯೂಬರ್ ತೆಹ್ಸೀನ್ ಎಂಬುವವರು ಚಂದ್ರಯಾನ 3 ಮಿಷನ್​ನಲ್ಲಿ ಕೆಲಸ ಮಾಡಿರುವ ಇಸ್ರೋ ವಿಜ್ಞಾನಿಗಳಿಗೆ ಮೂರು ತಿಂಗಳಿಂದ ಸಂಬಳ ಕೊಟ್ಟಿಲ್ಲ ಎಂದು ಹೇಳಿದ್ದರು. ಇದೇ ಕಾರಣಕ್ಕೆ ಸರ್ಕಾರದ ಮೇಲೆ ಕೋಪ ಬರುತ್ತದೆ ಎಂದು ಹೇಳಿದ್ದರು.

ಮತ್ತಷ್ಟು ಓದಿ: Fact Check: ಹಿಂದೂಗಳ ಜತೆ ವ್ಯಾಪಾರ ಬಹಿಷ್ಕರಿಸಿ ಎಂದರೇ ಬೆಂಗಳೂರಿನ ಮುಸ್ಲಿಮರು? ವಾಸ್ತವ ಇಲ್ಲಿದೆ ನೋಡಿ

ಸ್ಪಷ್ಟನೆ ಏನು?

ಇಸ್ರೋ ವಿಜ್ಞಾನಿಗಳು ತಮ್ಮ ಸಂಬಳವನ್ನು ಪ್ರತಿ ತಿಂಗಳ ಕೊನೆಯ ದಿನದಂದು ಸ್ವೀಕರಿಸುತ್ತಾರೆ ಎಂದು ಪಿಐಬಿ ಫ್ಯಾಕ್ಟ್​ ಚೆಕ್​ ದೃಢಪಡಿಸಿದೆ. ಇಸ್ರೋ ವಿಜ್ಞಾನಿಗಳ ಸಂಬಳದ ಕುರಿತು ತೆಹ್ಸೀನ್ ಹೇಳಿದ್ದು ಸುಳ್ಳು ಎಂದು ಪಿಐಬಿ ಫ್ಯಾಕ್ಟ್​ಚೆಕ್​ನಲ್ಲಿ ತಿಳಿಸಿದೆ.

ತೆಹ್ಸೀನ್ ಪೂನಾವಾಲಾ ಬಿಜೆಪಿ ವಕ್ತಾರ ಶೆಹಜಾದ್ ಪೂನಾವಅಲಾ ಅವರ ಸಹೋದರ, ಇದ್ರೋದಲ್ಲಿ ಸಂಬಳ ಪಡೆಯದ 10 ವಿಜ್ಞಾನಿಗಳ ಹೆಸರು ಹಾಗೂ ಹುದ್ದೆಯ ಬಗ್ಗೆ ಮಾಹಿತಿ ಕೊಡಿ ಎಂದು ಶೆಹಜಾದ್ ಅವರನ್ನು ಕೇಳಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ
ಸಿದ್ದರಾಮಯ್ಯ-ರಾಹುಲ್ ಗಾಂಧಿ ಹೈವೋಲ್ಟೇಜ್ ಸಭೆಯ ಇನ್ಸ್​​​ಸೈಡ್ ಮಾಹಿತಿ