AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಮಹಾರಾಷ್ಟ್ರ ಚುನಾವಣಾ ಸಮಯದಲ್ಲಿ ಕಂತೆ ಕಂತೆ ನೋಟು ಪತ್ತೆ: ವೈರಲ್ ವಿಡಿಯೋದ ಅಸಲಿ ಕತೆ

ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಒಂದು ಕೋಣೆಯಲ್ಲಿ ನೋಟುಗಳ ಬಂಡಲ್ ಅನ್ನು ಕಾಣಬಹುದು. ಮಹಾರಾಷ್ಟ್ರ ಚುನಾವಣೆ ವೇಳೆ ಈ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅನೇಕರು ಪೋಸ್ಟ್ ಹಂಚಿಕೊಳ್ಳುತ್ತಿದ್ದಾರೆ. ಈ ವೈರಲ್ ವಿಡಿಯೋದ ಅಸಲಿ ಕತೆ ಇಲ್ಲಿದೆ ಓದಿ.

Fact Check: ಮಹಾರಾಷ್ಟ್ರ ಚುನಾವಣಾ ಸಮಯದಲ್ಲಿ ಕಂತೆ ಕಂತೆ ನೋಟು ಪತ್ತೆ: ವೈರಲ್ ವಿಡಿಯೋದ ಅಸಲಿ ಕತೆ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on:Nov 18, 2024 | 10:22 AM

Share

ನವೆಂಬರ್ 20 ರಂದು ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಅಕ್ಟೋಬರ್ 15 ರಿಂದ ಇಡೀ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಇದೇ ವೇಳೆ ಅಕ್ಟೋಬರ್ 21 ರಂದು ಮುಂಬೈ-ಬೆಂಗಳೂರು ಹೆದ್ದಾರಿಯ ಖೇಡ್-ಶಿವಪುರ ಪ್ಲಾಜಾ ಬಳಿ ಪುಣೆ ಗ್ರಾಮಾಂತರ ಪೊಲೀಸರು ಕಾರಿನಲ್ಲಿ ಸಾಗಿಸುತ್ತಿದ್ದ 5 ಕೋಟಿ ರೂಪಾಯಿ ನಗದನ್ನು ವಶಪಡಿಸಿಕೊಂಡಿದ್ದರು. ಇದೀಗ ಇದಕ್ಕೆ ಸಂಬಂಧಿಸಿದ ವಿಡಿಯೋ ಕ್ಲಿಪ್ ವೈರಲ್ ಆಗುತ್ತಿದೆ.

ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಒಂದು ಕೋಣೆಯಲ್ಲಿ ನೋಟುಗಳ ಬಂಡಲ್ ಅನ್ನು ಕಾಣಬಹುದು. ಮಹಾರಾಷ್ಟ್ರ ಚುನಾವಣೆ ವೇಳೆ ಈ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅನೇಕರು ಪೋಸ್ಟ್ ಹಂಚಿಕೊಳ್ಳುತ್ತಿದ್ದಾರೆ.

ವೈರಲ್ ಆಗುತ್ತಿರುವುದು ಏನು?:

ಫೇಸ್‌ಬುಕ್ ಬಳಕೆದಾರರೊಬ್ಬರು ಅಕ್ಟೋಬರ್ 22 ರಂದು ಈ ವಿಡಿಯೋವನ್ನು ಅಪ್ಲೋಡ್ ಮಾಡಿದ್ದು, ‘‘ಮಹಾರಾಷ್ಟ್ರವು ಮನಿ ಆರ್ಡರ್‌ಗಳೊಂದಿಗೆ ಜನಾದೇಶವನ್ನು ಖರೀದಿಸುವ ಪ್ರಜಾಪ್ರಭುತ್ವದ ಕಳ್ಳರ ಮುಂದಿನ ಗುರಿಯಾಗಿದೆ. ದೇಶದ ಸಂಪತ್ತನ್ನು ಕೊಂಡುಕೊಳ್ಳುವ ಅಹಂಕಾರದಿಂದ ಅವರ ಹಣಬಲದ ಈ ಬೆತ್ತಲೆ ನೃತ್ಯವನ್ನು ಇಡೀ ದೇಶವೇ ನೋಡಬೇಕು. ಈ ವಿಡಿಯೋ ಮಹಾರಾಷ್ಟ್ರದಲ್ಲಿ ಸಿಕ್ಕಿಬಿದ್ದ ವಾಹನ. ಚುನಾವಣೆಯ ಮೊದಲ ಕಂತಾಗಿ ಆಡಳಿತ ಪಕ್ಷದ ಅಭ್ಯರ್ಥಿಗಳಿಗೆ 25-25 ಕೋಟಿ ರೂಪಾಯಿ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಈ ಪೈಕಿ ಒಂದು ವಾಹನ ನಿನ್ನೆ ಖೇಡ್ ಶಿವಾಪುರದ ಪರ್ಬತ್ ಪೊದೆಯಲ್ಲಿ ಸಿಕ್ಕಿಬಿದ್ದಿದೆ. ಒಂದು ದಿನದ ಹಿಂದೆ, ಶಿವಸೇನಾ ಯುಬಿಟಿ ಸಂಸದ ಸಂಜಯ್ ರಾವುತ್ ಅವರು ಏಕನಾಥ್ ಶಿಂಧೆ ತಮ್ಮ ಜನರಿಗೆ 50-50 ಕೋಟಿ ರೂಪಾಯಿಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದ್ದರು. ಮೊದಲು ಚುನಾವಣಾ ಆಯೋಗದ ಮೇಲೆ ಒತ್ತಡ ಹೇರಿ ಚುನಾವಣೆಯನ್ನು ವಿಳಂಬಗೊಳಿಸಲಾಯಿತು. ಈಗ ಮಹಾರಾಷ್ಟ್ರದ ಜನರನ್ನು ಹಣ ಕೊಟ್ಟು ಖರೀದಿಸುವ ಪ್ರಯತ್ನ ನಡೆಯುತ್ತಿದೆ.’’ ಎಂದು ಬರೆದುಕೊಂಡಿದ್ದಾರೆ.

Fact Check:

ವೈರಲ್ ಪೋಸ್ಟ್‌ನಲ್ಲಿರುವ ಕ್ಲಿಪ್ ಬಗ್ಗೆ ತಿಳಿಯಲು, ಟಿವಿ9 ಕನ್ನಡ ಮೊದಲು ಹಲವಾರು ಕೀಫ್ರೇಮ್‌ಗಳನ್ನು ಹೊರತೆಗೆದು ಅವುಗಳನ್ನು ಗೂಗಲ್ ಲೆನ್ಸ್ ಉಪಕರಣದ ಸಹಾಯದಿಂದ ಹುಡುಕಿದೆ. ಆಗ ಜೂನ್ 23, 2021 ರಂದು ಯೂಟ್ಯೂಬ್ ಚಾನಲ್‌ನಲ್ಲಿ ಅದೇ ಕ್ಲಿಪ್ ಅನ್ನು ನಾವು ಕಂಡುಕೊಂಡಿದ್ದೇವೆ. ಈ ಮೂಲಕ ಮಹಾರಾಷ್ಟ್ರ ಚುನಾವಣೆಗೂ ಇದಕ್ಕೂ ಸಂಬಂಧವಿಲ್ಲ ಎಂಬುದು ಇದರಿಂದ ಸಾಬೀತಾಗಿದೆ.

ನಾವು ಮಹಾರಾಷ್ಟ್ರದಲ್ಲಿ ನೀತಿ ಸಂಹಿತೆ ಜಾರಿಯಾದ ನಂತರ ಹಣವನ್ನು ವಶಪಡಿಸಿಕೊಳ್ಳಲಾಗಿದೆಯೇ ಎಂದು ತಿಳಿಯಲು ಗೂಗಲ್​ನಲ್ಲಿ ಹುಡುಕಿದ್ದೇವೆ. ಈ ಸಂದರ್ಭ, ಟಿವಿ9 ಹಿಂದಿ ಅಕ್ಟೋಬರ್ 22 ರಂದು ತನ್ನ ವೆಬ್‌ಸೈಟ್‌ನಲ್ಲಿ ಸುದ್ದಿಯನ್ನು ಪ್ರಕಟಿಸುವಾಗ ಹೀಗೆ ಬರೆದಿದೆ, ‘‘ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣಾ ಪ್ರಚಾರದ ನಡುವೆ, ಕಾರಿನಿಂದ ಸುಮಾರು 5 ಕೋಟಿ ರೂಪಾಯಿ ವಸೂಲಿ ಮಾಡಿದ್ದರಿಂದ ರಾಜ್ಯದ ರಾಜಕೀಯ ಮತ್ತೊಮ್ಮೆ ಗಮನ ಸೆಳೆದಿದೆ. ಹಣ ವಶಪಡಿಸಿಕೊಂಡ ಕಾರು ಪುಣೆಯಿಂದ ಕೊಲ್ಲಾಪುರ ಕಡೆಗೆ ಹೋಗುತ್ತಿತ್ತು. ಚುನಾವಣೆ ಘೋಷಣೆಯಾದ ಬಳಿಕ ಪೊಲೀಸರು ಕಾರನ್ನು ತಡೆದು ತಪಾಸಣೆ ನಡೆಸಿದಾಗ ಸುಮಾರು 5 ಕೋಟಿ ರೂ. ಸಿಕ್ಕಿದೆ’’ ಎಂದು ಬರೆಯಲಾಗಿದೆ.

ಸಂಪೂರ್ಣ ಸುದ್ದಿಯನ್ನು ಇಲ್ಲಿ ಓದಬಹುದು. ಆದರೆ, ಈ ವೈರಲ್ ವಿಡಿಯೋಕ್ಕೂ ಈ ಸುದ್ದಿಗೂ ಯಾವುದೇ ಸಂಬಂಧವಿಲ್ಲ ಎಂಬುದನ್ನು ನಾವು ಕಂಡುಕೊಂಡಿದ್ದೇವೆ.

https://www.tv9hindi.com/elections/assembly-election/maharashtra-vidhan-sabha-chunav/pune-cash-seized-in-car-mva-leader-sanjay-raut-shinde-govt-alleges-ajit-pawar-defends-2903023.html

ಹೀಗಾಗಿ ಟಿವಿ9 ಕನ್ನಡ ತನಿಖೆಯಲ್ಲಿ, ವೈರಲ್ ಪೋಸ್ಟ್ ತಪ್ಪುದಾರಿಗೆಳೆಯುವಂತಿದೆ ಎಂದು ಸಾಬೀತಾಗಿದೆ. ಈ ವಿಡಿಯೋ 2021 ರಿಂದ ಇಂಟರ್ನೆಟ್‌ನಲ್ಲಿದೆ. ಇದಕ್ಕೂ ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಗೂ ಯಾವುದೇ ಸಂಬಂಧವಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:41 pm, Sat, 26 October 24

Follow Us
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಪ್ರಧಾನಿ ಅತ್ಯಂತ ಸಂವೇದನಾಶೀಲರಾಗಿದ್ದಾರೆ
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು
ಮಹಾರಾಷ್ಟ್ರದಲ್ಲಿ ಮಳೆ: ಏರಿಕೆ ಕಂಡ ಕೃಷ್ಣಾ, ಘಟಪ್ರಭಾ ನದಿಗಳ ಒಳಹರಿವು