AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಮಹಾರಾಷ್ಟ್ರ ಚುನಾವಣಾ ಸಮಯದಲ್ಲಿ ಕಂತೆ ಕಂತೆ ನೋಟು ಪತ್ತೆ: ವೈರಲ್ ವಿಡಿಯೋದ ಅಸಲಿ ಕತೆ

ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಒಂದು ಕೋಣೆಯಲ್ಲಿ ನೋಟುಗಳ ಬಂಡಲ್ ಅನ್ನು ಕಾಣಬಹುದು. ಮಹಾರಾಷ್ಟ್ರ ಚುನಾವಣೆ ವೇಳೆ ಈ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅನೇಕರು ಪೋಸ್ಟ್ ಹಂಚಿಕೊಳ್ಳುತ್ತಿದ್ದಾರೆ. ಈ ವೈರಲ್ ವಿಡಿಯೋದ ಅಸಲಿ ಕತೆ ಇಲ್ಲಿದೆ ಓದಿ.

Fact Check: ಮಹಾರಾಷ್ಟ್ರ ಚುನಾವಣಾ ಸಮಯದಲ್ಲಿ ಕಂತೆ ಕಂತೆ ನೋಟು ಪತ್ತೆ: ವೈರಲ್ ವಿಡಿಯೋದ ಅಸಲಿ ಕತೆ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on:Nov 18, 2024 | 10:22 AM

Share

ನವೆಂಬರ್ 20 ರಂದು ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಅಕ್ಟೋಬರ್ 15 ರಿಂದ ಇಡೀ ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ಇದೇ ವೇಳೆ ಅಕ್ಟೋಬರ್ 21 ರಂದು ಮುಂಬೈ-ಬೆಂಗಳೂರು ಹೆದ್ದಾರಿಯ ಖೇಡ್-ಶಿವಪುರ ಪ್ಲಾಜಾ ಬಳಿ ಪುಣೆ ಗ್ರಾಮಾಂತರ ಪೊಲೀಸರು ಕಾರಿನಲ್ಲಿ ಸಾಗಿಸುತ್ತಿದ್ದ 5 ಕೋಟಿ ರೂಪಾಯಿ ನಗದನ್ನು ವಶಪಡಿಸಿಕೊಂಡಿದ್ದರು. ಇದೀಗ ಇದಕ್ಕೆ ಸಂಬಂಧಿಸಿದ ವಿಡಿಯೋ ಕ್ಲಿಪ್ ವೈರಲ್ ಆಗುತ್ತಿದೆ.

ವೈರಲ್ ಆಗುತ್ತಿರುವ ವಿಡಿಯೋದಲ್ಲಿ ಒಂದು ಕೋಣೆಯಲ್ಲಿ ನೋಟುಗಳ ಬಂಡಲ್ ಅನ್ನು ಕಾಣಬಹುದು. ಮಹಾರಾಷ್ಟ್ರ ಚುನಾವಣೆ ವೇಳೆ ಈ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅನೇಕರು ಪೋಸ್ಟ್ ಹಂಚಿಕೊಳ್ಳುತ್ತಿದ್ದಾರೆ.

ವೈರಲ್ ಆಗುತ್ತಿರುವುದು ಏನು?:

ಫೇಸ್‌ಬುಕ್ ಬಳಕೆದಾರರೊಬ್ಬರು ಅಕ್ಟೋಬರ್ 22 ರಂದು ಈ ವಿಡಿಯೋವನ್ನು ಅಪ್ಲೋಡ್ ಮಾಡಿದ್ದು, ‘‘ಮಹಾರಾಷ್ಟ್ರವು ಮನಿ ಆರ್ಡರ್‌ಗಳೊಂದಿಗೆ ಜನಾದೇಶವನ್ನು ಖರೀದಿಸುವ ಪ್ರಜಾಪ್ರಭುತ್ವದ ಕಳ್ಳರ ಮುಂದಿನ ಗುರಿಯಾಗಿದೆ. ದೇಶದ ಸಂಪತ್ತನ್ನು ಕೊಂಡುಕೊಳ್ಳುವ ಅಹಂಕಾರದಿಂದ ಅವರ ಹಣಬಲದ ಈ ಬೆತ್ತಲೆ ನೃತ್ಯವನ್ನು ಇಡೀ ದೇಶವೇ ನೋಡಬೇಕು. ಈ ವಿಡಿಯೋ ಮಹಾರಾಷ್ಟ್ರದಲ್ಲಿ ಸಿಕ್ಕಿಬಿದ್ದ ವಾಹನ. ಚುನಾವಣೆಯ ಮೊದಲ ಕಂತಾಗಿ ಆಡಳಿತ ಪಕ್ಷದ ಅಭ್ಯರ್ಥಿಗಳಿಗೆ 25-25 ಕೋಟಿ ರೂಪಾಯಿ ನೀಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಈ ಪೈಕಿ ಒಂದು ವಾಹನ ನಿನ್ನೆ ಖೇಡ್ ಶಿವಾಪುರದ ಪರ್ಬತ್ ಪೊದೆಯಲ್ಲಿ ಸಿಕ್ಕಿಬಿದ್ದಿದೆ. ಒಂದು ದಿನದ ಹಿಂದೆ, ಶಿವಸೇನಾ ಯುಬಿಟಿ ಸಂಸದ ಸಂಜಯ್ ರಾವುತ್ ಅವರು ಏಕನಾಥ್ ಶಿಂಧೆ ತಮ್ಮ ಜನರಿಗೆ 50-50 ಕೋಟಿ ರೂಪಾಯಿಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದ್ದರು. ಮೊದಲು ಚುನಾವಣಾ ಆಯೋಗದ ಮೇಲೆ ಒತ್ತಡ ಹೇರಿ ಚುನಾವಣೆಯನ್ನು ವಿಳಂಬಗೊಳಿಸಲಾಯಿತು. ಈಗ ಮಹಾರಾಷ್ಟ್ರದ ಜನರನ್ನು ಹಣ ಕೊಟ್ಟು ಖರೀದಿಸುವ ಪ್ರಯತ್ನ ನಡೆಯುತ್ತಿದೆ.’’ ಎಂದು ಬರೆದುಕೊಂಡಿದ್ದಾರೆ.

Fact Check:

ವೈರಲ್ ಪೋಸ್ಟ್‌ನಲ್ಲಿರುವ ಕ್ಲಿಪ್ ಬಗ್ಗೆ ತಿಳಿಯಲು, ಟಿವಿ9 ಕನ್ನಡ ಮೊದಲು ಹಲವಾರು ಕೀಫ್ರೇಮ್‌ಗಳನ್ನು ಹೊರತೆಗೆದು ಅವುಗಳನ್ನು ಗೂಗಲ್ ಲೆನ್ಸ್ ಉಪಕರಣದ ಸಹಾಯದಿಂದ ಹುಡುಕಿದೆ. ಆಗ ಜೂನ್ 23, 2021 ರಂದು ಯೂಟ್ಯೂಬ್ ಚಾನಲ್‌ನಲ್ಲಿ ಅದೇ ಕ್ಲಿಪ್ ಅನ್ನು ನಾವು ಕಂಡುಕೊಂಡಿದ್ದೇವೆ. ಈ ಮೂಲಕ ಮಹಾರಾಷ್ಟ್ರ ಚುನಾವಣೆಗೂ ಇದಕ್ಕೂ ಸಂಬಂಧವಿಲ್ಲ ಎಂಬುದು ಇದರಿಂದ ಸಾಬೀತಾಗಿದೆ.

ನಾವು ಮಹಾರಾಷ್ಟ್ರದಲ್ಲಿ ನೀತಿ ಸಂಹಿತೆ ಜಾರಿಯಾದ ನಂತರ ಹಣವನ್ನು ವಶಪಡಿಸಿಕೊಳ್ಳಲಾಗಿದೆಯೇ ಎಂದು ತಿಳಿಯಲು ಗೂಗಲ್​ನಲ್ಲಿ ಹುಡುಕಿದ್ದೇವೆ. ಈ ಸಂದರ್ಭ, ಟಿವಿ9 ಹಿಂದಿ ಅಕ್ಟೋಬರ್ 22 ರಂದು ತನ್ನ ವೆಬ್‌ಸೈಟ್‌ನಲ್ಲಿ ಸುದ್ದಿಯನ್ನು ಪ್ರಕಟಿಸುವಾಗ ಹೀಗೆ ಬರೆದಿದೆ, ‘‘ಮಹಾರಾಷ್ಟ್ರದಲ್ಲಿ ವಿಧಾನಸಭಾ ಚುನಾವಣಾ ಪ್ರಚಾರದ ನಡುವೆ, ಕಾರಿನಿಂದ ಸುಮಾರು 5 ಕೋಟಿ ರೂಪಾಯಿ ವಸೂಲಿ ಮಾಡಿದ್ದರಿಂದ ರಾಜ್ಯದ ರಾಜಕೀಯ ಮತ್ತೊಮ್ಮೆ ಗಮನ ಸೆಳೆದಿದೆ. ಹಣ ವಶಪಡಿಸಿಕೊಂಡ ಕಾರು ಪುಣೆಯಿಂದ ಕೊಲ್ಲಾಪುರ ಕಡೆಗೆ ಹೋಗುತ್ತಿತ್ತು. ಚುನಾವಣೆ ಘೋಷಣೆಯಾದ ಬಳಿಕ ಪೊಲೀಸರು ಕಾರನ್ನು ತಡೆದು ತಪಾಸಣೆ ನಡೆಸಿದಾಗ ಸುಮಾರು 5 ಕೋಟಿ ರೂ. ಸಿಕ್ಕಿದೆ’’ ಎಂದು ಬರೆಯಲಾಗಿದೆ.

ಸಂಪೂರ್ಣ ಸುದ್ದಿಯನ್ನು ಇಲ್ಲಿ ಓದಬಹುದು. ಆದರೆ, ಈ ವೈರಲ್ ವಿಡಿಯೋಕ್ಕೂ ಈ ಸುದ್ದಿಗೂ ಯಾವುದೇ ಸಂಬಂಧವಿಲ್ಲ ಎಂಬುದನ್ನು ನಾವು ಕಂಡುಕೊಂಡಿದ್ದೇವೆ.

https://www.tv9hindi.com/elections/assembly-election/maharashtra-vidhan-sabha-chunav/pune-cash-seized-in-car-mva-leader-sanjay-raut-shinde-govt-alleges-ajit-pawar-defends-2903023.html

ಹೀಗಾಗಿ ಟಿವಿ9 ಕನ್ನಡ ತನಿಖೆಯಲ್ಲಿ, ವೈರಲ್ ಪೋಸ್ಟ್ ತಪ್ಪುದಾರಿಗೆಳೆಯುವಂತಿದೆ ಎಂದು ಸಾಬೀತಾಗಿದೆ. ಈ ವಿಡಿಯೋ 2021 ರಿಂದ ಇಂಟರ್ನೆಟ್‌ನಲ್ಲಿದೆ. ಇದಕ್ಕೂ ಮಹಾರಾಷ್ಟ್ರದ ವಿಧಾನಸಭೆ ಚುನಾವಣೆಗೂ ಯಾವುದೇ ಸಂಬಂಧವಿಲ್ಲ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:41 pm, Sat, 26 October 24

ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ