AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ಬಾರಿ MLA ಆದ್ರೂ ಪುಟ್ಟ ಮನೆಯಲ್ಲಿ ವಾಸ್ತವ್ಯ: ಶಾಸಕನ ವೈರಲ್​ ಫೋಟೋ ಹಿಂದಿನ ಅಸಲಿಯತ್ತು ಏನು?

ಬಿಹಾರದ ಬಲ್ರಾಮ್​ಪುರದಲ್ಲಿ ಐದನೇ ಬಾರಿ ಶಾಸಕರಾಗಿ ಆಯ್ಕೆಯಾದ ಸಿಪಿಐ(ಎಂ)(ಎಲ್) ಪಕ್ಷದ ಮೆಹಬೂಬ್ ಅಲಮ್ ಅವರ ಮಗ ಚಿಕ್ಕ ಮನೆಯಲ್ಲಿ ಶುಭಾಶಯ ಕೋರುತ್ತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿವೆ. ಅಲ್ಲದೇ ಅಲನ್ ಸರಳ ಜೀವಿ, ಸ್ವಂತ ಮನೆಯೂ ಇಲ್ಲದ ಶಾಸಕ ಎಂಬ ವರದಿಗಳು ಆಂಗ್ಲ ಸುದ್ದಿತಾಣಗಳಲ್ಲಿ ಹರಿದಾಡುತ್ತಿವೆ. ಅಲನ್ ನಿಜಕ್ಕೂ ಬಡವರೇ? ಈ ಮಾಹಿತಿಯ ಸತ್ಯಾಸತ್ಯತೆಯನ್ನು ಬೆನ್ನತ್ತಿದ ಟಿವಿ9 ಡಿಜಿಟಲ್ ತಂಡಕ್ಕೆ ಹಲವು ಅಚ್ಚರಿಯ ಮಾಹಿತಿಗಳು ಲಭಿಸಿತು. ಈ ಬಾರಿ ಚುನಾವಣೆಯಲ್ಲಿ ಅವರು ಘೋಷಿಸಿದ ಆಸ್ತಿಯ […]

4 ಬಾರಿ MLA ಆದ್ರೂ ಪುಟ್ಟ ಮನೆಯಲ್ಲಿ ವಾಸ್ತವ್ಯ: ಶಾಸಕನ ವೈರಲ್​ ಫೋಟೋ ಹಿಂದಿನ ಅಸಲಿಯತ್ತು ಏನು?
ಪೃಥ್ವಿಶಂಕರ
|

Updated on: Nov 14, 2020 | 7:16 PM

Share

ಬಿಹಾರದ ಬಲ್ರಾಮ್​ಪುರದಲ್ಲಿ ಐದನೇ ಬಾರಿ ಶಾಸಕರಾಗಿ ಆಯ್ಕೆಯಾದ ಸಿಪಿಐ(ಎಂ)(ಎಲ್) ಪಕ್ಷದ ಮೆಹಬೂಬ್ ಅಲಮ್ ಅವರ ಮಗ ಚಿಕ್ಕ ಮನೆಯಲ್ಲಿ ಶುಭಾಶಯ ಕೋರುತ್ತಿರುವ ಚಿತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿವೆ. ಅಲ್ಲದೇ ಅಲನ್ ಸರಳ ಜೀವಿ, ಸ್ವಂತ ಮನೆಯೂ ಇಲ್ಲದ ಶಾಸಕ ಎಂಬ ವರದಿಗಳು ಆಂಗ್ಲ ಸುದ್ದಿತಾಣಗಳಲ್ಲಿ ಹರಿದಾಡುತ್ತಿವೆ.

ಅಲನ್ ನಿಜಕ್ಕೂ ಬಡವರೇ? ಈ ಮಾಹಿತಿಯ ಸತ್ಯಾಸತ್ಯತೆಯನ್ನು ಬೆನ್ನತ್ತಿದ ಟಿವಿ9 ಡಿಜಿಟಲ್ ತಂಡಕ್ಕೆ ಹಲವು ಅಚ್ಚರಿಯ ಮಾಹಿತಿಗಳು ಲಭಿಸಿತು. ಈ ಬಾರಿ ಚುನಾವಣೆಯಲ್ಲಿ ಅವರು ಘೋಷಿಸಿದ ಆಸ್ತಿಯ ಮೌಲ್ಯ 31.8 ಲಕ್ಷ. 2015ರ ಬಿಹಾರ ವಿಧಾನಸಭೆ ಚುನಾವಣೆಗಿಂತ ಅವರ ಆಸ್ತಿ 8.84 ಲಕ್ಷ ಏರಿಕೆಯಾಗಿದೆ! ಸ್ವಂತ ಮನೆ ಇಲ್ಲದಿದ್ದರೂ ಅಲನ್ ಅವರು ಲಕ್ಷಾಧೀಶ್ವರರೇ.

ಅಬ್ಬಬ್ಬಾ..ಎಷ್ಟೆಲ್ಲಾ ಕೇಸ್! ಅಲನ್ ಅವರ ಕ್ರಿಮಿನಲ್ ಹಿನ್ನೆಲೆ ತಿಳಿದರೆ ನೀವು ನಿಜಕ್ಕೂ ದಂಗಾಗುತ್ತೀರಿ!. ಬಿಹಾರದಲ್ಲಿ ಆಯ್ಕೆಯಾದ ಶೇ.70 ಎಂಎಲ್​ಎಗಳಿಗೆ ಶುದ್ಧಾಂಗ ಅಪರಾಧ ಹಿನ್ನೆಲೆಯಿದೆ. ಅಲನ್ ಅವರೂ ಈ ಲೆಕ್ಕದಲ್ಲಿ ಹಿಂದೆಬಿದ್ದಿಲ್ಲ. 2015ರಲ್ಲಿ ಚುನಾವಣೆಗೆ ನಿಲ್ಲುವಾಗ 3 ಕೊಲೆ ಆರೋಪವೂ ಸೇರಿ 13 ಅಪರಾಧಗಳನ್ನು ಅಫಿಡವಿಟ್​ನಲ್ಲಿ ಘೋಷಿಸಿದ್ದರು. ಈಬಾರಿ ಈ ಸಂಖ್ಯೆಯಲ್ಲೂ ಪ್ರಗತಿ ಕಂಡಿದೆ. ಒಟ್ಟು 28 ಪ್ರಕರಣಗಳಲ್ಲಿ ಮೆಹಬೂಬ್ ಅಲನ್ ಆರೋಪಿಯಾಗಿದ್ದಾರೆ.

ಅಫಿಡವಿಟ್​ನಲ್ಲಿ ಕೃಷಿಕರೆಂದು ಅಲನ್ ಘೋಷಿಸಿಕೊಳ್ಳುತ್ತಾರೆ. ಅವರ ಮೇಲಿನ ಆರೋಪಗಳನ್ನು ಗಮನಿಸಿದರೆ ಕೊಲೆ, ದಂಗೆಗೆ ಪ್ರಚೋದನೆ, ಅಧಿಕಾರಿಗಳಿಗೆ ದೈಹಿಕ ಹಲ್ಲೆ ಪ್ರಕರಣಗಳು ಕಾಣಸಿಗುತ್ತವೆ. 2014ರ ಲೋಕಸಭೆ ಚುನಾವಣೆಗೆ ಕಾತಿಹಾರ್ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ ಅವರನ್ನು ಕೊಲೆ ಪ್ರಕರಣದಲ್ಲಿ ನಾಮಿನೇಶನ್ ಫೈಲ್ ಮಾಡಿದ ನಂತರ ಪೋಲೀಸರು ಬಂಧಿಸಿದ್ದರು.

ಬಿಹಾರ ಸಿಪಿಐ(ಎಂ)(ಎಲ್) ನ ರಾಜ್ಯ ಶಾಖೆಯ ಸದಸ್ಯರೂ ಆದ ಅವರನ್ನು ಪಕ್ಷ ಸಮರ್ತಿಸಿಕೊಂಡಿದೆ. ಮೆಹಬೂಬ್ ಅಲನ್ ಅವರನ್ನು ವ್ಯವಸ್ಥಿತ ಸಂಚಿಗೆ ಗುರಿಪಡಿಸಲಾಗುತ್ತಿದೆ. ಹೀಗಾಗಿಯೇ ಅವರ ಮೇಲೆ ಪ್ರಕರಣಗಳು ದಾಖಲಾಗಿವೆ ಎಂದು ಹೇಳಿಕೆ ನೀಡಿದೆ.

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!