AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ನೀಡಲಾಗುತ್ತಿದೆ ಎಂಬ ಸಂದೇಶ ಸುಳ್ಳು

pmssgovt.online ವೆಬ್‌ಸೈಟ್ 11 ನೇ ತರಗತಿಯಿಂದ ಹಿಡಿದು ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಲ್ಯಾಪ್‌ಟಾಪ್ ಯೋಜನೆ 2022 ಹೆಸರಿನಲ್ಲಿ ನೀಡುವುದಾಗಿ ಹೇಳುತ್ತಿದೆ. ಈ ವೆಬ್‌ಸೈಟ್ ನಕಲಿ.

Fact Check ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ನೀಡಲಾಗುತ್ತಿದೆ ಎಂಬ ಸಂದೇಶ ಸುಳ್ಳು
ಹರಿದಾಡುತ್ತಿರುವ ಸಂದೇಶ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Oct 10, 2022 | 4:42 PM

Share

11 ನೇ ತರಗತಿಯ ವಿದ್ಯಾರ್ಥಿಗಳಿಂದ ಪದವಿ ಹಂತದವರೆಗಿನ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು (Laptop) ಒದಗಿಸುವ ಬಗ್ಗೆ ಸಂದೇಶವೊಂದು ಹರಿದಾಡುತ್ತಿದ್ದು ಇದು ಫೇಕ್ ಸಂದೇಶ ಎಂದು ಪ್ರೆಸ್ ಇನ್ಫಾರ್ಮೇಶನ್ ಬ್ಯೂರೋ (PIB) ಫ್ಯಾಕ್ಟ್ ಚೆಕ್ (Fact Check) ಮಾಡಿದೆ.ಶಿಕ್ಷಣ ಸಚಿವಾಲಯವು ಲ್ಯಾಪ್‌ಟಾಪ್ ಒದಗಿಸಲು ಮೀಸಲಾದ ವೆಬ್ ಪೋರ್ಟಲ್ ‘ಪ್ರಧಾನ ಮಂತ್ರಿ ರಾಷ್ಟ್ರೀಯ ಲ್ಯಾಪ್‌ಟಾಪ್ ಯೋಜನೆ 2022’ ಅನ್ನು ಸಹ ಪ್ರಾರಂಭಿಸಿದೆ, ಅದರ ಮೊತ್ತವನ್ನು 2022-23ರ ಶೈಕ್ಷಣಿಕ ಅವಧಿಯ ಅವಧಿಯಲ್ಲಿ ಒಂದೇ ಕಂತಿನಲ್ಲಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗಳಿಗೆ ಜಮಾ ಮಾಡಲಾಗುತ್ತದೆ ಎಂದು ಸಂದೇಶದಲ್ಲಿ ಹೇಳಲಾಗಿದೆ. ಆದರೆ ಇದು ಸತ್ಯಕ್ಕೆ ದೂರವಾದುದು, ವೆಬ್‌ಸೈಟ್ pmssgovt.online ನಕಲಿ ಎಂದು ಪಿಐಬಿ ಹೇಳಿದೆ.

pmssgovt.online ವೆಬ್‌ಸೈಟ್ 11 ನೇ ತರಗತಿಯಿಂದ ಹಿಡಿದು ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಲ್ಯಾಪ್‌ಟಾಪ್ ಯೋಜನೆ 2022 ಹೆಸರಿನಲ್ಲಿ ನೀಡುವುದಾಗಿ ಹೇಳುತ್ತಿದೆ. ಈ ವೆಬ್‌ಸೈಟ್ ನಕಲಿ. ಭಾರತ ಸರ್ಕಾರವು ಅಂತಹ ಯಾವುದೇ ಯೋಜನೆಯನ್ನು ನಡೆಸುತ್ತಿಲ್ಲ ಎಂದು ಪಿಐಬಿ ಟ್ವೀಟ್ ಮಾಡಿದೆ.

ಭಾರತ ಸರ್ಕಾರವು ಈ ರಾಷ್ಟ್ರೀಯ ಲ್ಯಾಪ್‌ಟಾಪ್ ಸ್ಕೀಮ್ ಅನ್ನು ವಿಶೇಷವಾಗಿ ಎಲ್ಲಾ ಭಾರತೀಯ ರಾಜ್ಯಗಳಿಗೆ ಪ್ರಾರಂಭಿಸಿದೆ, ಎಲ್ಲಾ ಅರ್ಹ ವಿದ್ಯಾರ್ಥಿಗಳು ಪ್ರಧಾನಮಂತ್ರಿ ರಾಷ್ಟ್ರೀಯ ಲ್ಯಾಪ್‌ಟಾಪ್ ಯೋಜನೆಗೆ ಅಧಿಕೃತ ವೆಬ್‌ಸೈಟ್ www.pmssgovt.online ಮೂಲಕ ಅರ್ಜಿ ಸಲ್ಲಿಸಬಹುದು ಎಂದು ನಕಲಿ ವೆಬ್ ಸೈಟ್ pmssgovt.online ನಲ್ಲಿ ಹೇಳಿದೆ. XI, XII, B.A-1st, B.A-2nd, B.A-3rd, B.A-4th, B.A-5th ಮತ್ತು B.A-6th ಸೆಮಿಸ್ಟರ್‌ನ ಎಲ್ಲಾ ವಿದ್ಯಾರ್ಥಿಗಳು ಪ್ರಧಾನಮಂತ್ರಿ ರಾಷ್ಟ್ರೀಯ ಲ್ಯಾಪ್‌ಟಾಪ್ ಯೋಜನೆಯಡಿ ನೋಂದಾಯಿಸಿಕೊಳ್ಳಬಹುದು.2022-23 ರ ಶೈಕ್ಷಣಿಕ ವರ್ಷಕ್ಕೆ ನೋಂದಣಿ ಫಾರ್ಮ್ ಅನ್ನು ಸಲ್ಲಿಸಬೇಕು . ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡುತ್ತಿರಬೇಕು. ಅಲ್ಲಿ ನೀವು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಲ್ಯಾಪ್‌ಟಾಪ್ ಯೋಜನೆಯ ಲಿಂಕ್ ಪಡೆಯಬಹುದು ಎಂದು ವೆಬ್ ಸೈಟ್ ನಲ್ಲಿ ಹೇಳಲಾಗಿದೆ.

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?