AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರನ ಮೇಲ್ಮೈಯಲ್ಲಿ ಇಸ್ರೋ ಲೋಗೊ ಮತ್ತು ರಾಷ್ಟ್ರೀಯ ಲಾಂಛನದ ಚಿತ್ರ; ವೈರಲ್ ಫೋಟೊ ಫೇಕ್

Fact Check: ಚಂದ್ರನ ಮೇಲ್ಮೈಯಲ್ಲಿ ರಾಷ್ಟ್ರೀಯ ಲಾಂಛನದ ಚಿತ್ರ, ಇಸ್ರೋ ಲೋಗೊ ಮುದ್ರೆ ಹೀಗೆ ಅಚ್ಚೊತ್ತಿದೆ ಎಂಬ ಬರಹದೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ಮಂದಿ ಶೇರ್ ಮಾಡುತ್ತಿರುವ ಈ ಚಿತ್ರ ಫೋಟೋಶಾಪ್ ಮಾಡಿದ್ದು. ಇಂಥಾ ಯಾವುದೇ ಫೋಟೊವನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಇಸ್ರೋ ಹಂಚಿಕೊಂಡಿಲ್ಲ. ಈ ಚಿತ್ರದ ಫ್ಯಾಕ್ಟ್​​ ಚೆಕ್ ಇಲ್ಲಿದೆ.

ಚಂದ್ರನ ಮೇಲ್ಮೈಯಲ್ಲಿ ಇಸ್ರೋ ಲೋಗೊ ಮತ್ತು ರಾಷ್ಟ್ರೀಯ ಲಾಂಛನದ ಚಿತ್ರ; ವೈರಲ್ ಫೋಟೊ ಫೇಕ್
ಚಂದ್ರನ ಮೇಲೆ ರಾಷ್ಟ್ರೀಯ ಲಾಂಛನ, ಇಸ್ರೋ ಮುದ್ರೆ ಚಿತ್ರ ನಕಲಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Aug 24, 2023 | 5:15 PM

Share

ದೆಹಲಿ ಆಗಸ್ಟ್24: ಚಂದ್ರಯಾನ-3 (Chandrayaan-3) ಯಶಸ್ವಿಯಾದ ಬೆನ್ನಲ್ಲೇ ಸಾಮಾಜಿಕ ಮಾಧ್ಯಮಗಳಲ್ಲಿ ಚಂದ್ರನ ಮೇಲ್ಮೈಯಲ್ಲಿ ಇಳಿದ ವಿಕ್ರಮ್ ಲ್ಯಾಂಡರ್ (Vikram Lander) ತೆಗೆದ ಚಿತ್ರ, ವಿಡಿಯೊ ಎಂಬ ಬರಹಗಳೊಂದಿಗೆ ಹಲವಾರು ಪೋಸ್ಟ್​​​ ಹರಿದಾಡುತ್ತಿವೆ. ಇವುಗಳ ಪೈಕಿ ರಾಷ್ಟ್ರೀಯ ಲಾಂಛನದ ಚಿತ್ರ, ಚಂದ್ರನ ಮೇಲ್ಮೈಯಲ್ಲಿ ಇಸ್ರೋ ಲೋಗೊ ಇರುವ ಫೋಟೊವೊಂದು ವೈರಲ್ ಆಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಹಲವಾರು ಮಂದಿ ಶೇರ್ ಮಾಡುತ್ತಿರುವ ಈ ಚಿತ್ರ ಫೋಟೋಶಾಪ್ ಮಾಡಿದ್ದು. ಇಂಥಾ ಯಾವುದೇ ಫೋಟೊವನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಇಸ್ರೋ ಹಂಚಿಕೊಂಡಿಲ್ಲ. ಈ ವೈರಲ್ ಚಿತ್ರದ ಬಗ್ಗೆ ಬೂಮ್ ಲೈವ್ ಫ್ಯಾಕ್ಟ್ ಚೆಕ್ ಮಾಡಿದ್ದು, ಇದು ಅಸಲಿ ಫೋಟೊ ಅಲ್ಲ ಎಂದು ಹೇಳಿದೆ.

ಆಗಸ್ಟ್ 23, 2023 ರಂದು ಚಂದ್ರಯಾನ 3 ರ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಇಳಿದ ನಂತರ ಭಾರತವು ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದ ಮೊದಲ ದೇಶ ಮತ್ತು ಚಂದ್ರನ ಮೇಲೆ ಇಳಿದ ವಿಶ್ವದ ನಾಲ್ಕನೇ ದೇಶವಾಗಿದೆ.

ಟೈರ್ಸ್ ಆಫ್ ರೋವರ್ ಈ ಮುದ್ರೆಯನ್ನು ಹೊಂದಿದ್ದು, ಇಂದು ಚಂದ್ರನ ಮೇಲ್ಮೈಯಲ್ಲಿ ಈ ಚಿತ್ರ ಶಾಶ್ವತವಾಗಿ ಅಚ್ಚೊತ್ತಿದೆ, ಏಕೆಂದರೆ ಚಂದ್ರನ ಮೇಲೆ ಗಾಳಿಯಿಲ್ಲ ಆದ್ದರಿಂದ ಈ ಗುರುತುಗಳು ಶಾಶ್ವತವಾಗಿರುತ್ತವೆ ಎಂಬ ಬರಹದೊಂದಿಗೆ ಈ ಚಿತ್ರ ವಾಟ್ಸಾಪ್ ನಲ್ಲಿ ಹರಿದಾಡಿದೆ.

ಫ್ಯಾಕ್ಟ್ ಚೆಕ್

ಫೋಟೋಶಾಪ್ ಬಳಸಿ ಮಾಡಿದ ಚಿತ್ರ ಇದು. ಚಂದ್ರನ ಮೇಲ್ಮೈಯಲ್ಲಿ ಇಸ್ರೋದ ಲೋಗೊ ಮತ್ತು ರಾಷ್ಟ್ರೀಯ ಲಾಂಛನದ ಚಿತ್ರ ನಿಜವಾದ ಫೋಟೋ ಅಲ್ಲ. ಈ ಫೋಟೊವನ್ನು ಸೂಕ್ಷ್ಮವಾಗಿ ನೋಡಿದರೆ ಕೆಳಗೆ ಎಡಭಾಗದಲ್ಲಿ ‘ಕೃಷ್ಣಾಂಶು ಗಾರ್ಗ್’ (‘Krishanshu Garg ) ಎಂದು ಬರೆದಿರುವ ವಾಟರ್‌ಮಾರ್ಕ್ ಕಾಣುತ್ತದೆ.

ಇದನ್ನೇ ಸುಳಿವು ಆಗಿ ಇಟ್ಟುಕೊಂಡು ಬೂಮ್ ತಂಡ ಕೃಷ್ಣಾಂಶು ಗಾರ್ಗ್ ಅವರ X ಪ್ರೊಫೈಲ್ ಅನ್ನು ಹುಡುಕಿದೆ. ಅದರಲ್ಲಿಅವರು ಆಗಸ್ಟ್ 23 ರಂದು “Can’t wait for this! 🌕🇮🇳 ” ಎಂಬ ಪಠ್ಯದೊಂದಿಗೆ ಚಿತ್ರವನ್ನು ಹಂಚಿಕೊಂಡಿರುವುದು ಕಂಡುಬಂದಿದೆ.

ಗಾರ್ಗ್ ಅವರನ್ನು ಸಂಪರ್ಕಿಸಿದಾಗ ಇದು ಚಂದ್ರನ ಮೇಲ್ಮೈನಲ್ಲಿ ತೆಗೆದ ಫೋಟೊ ಅಲ್ಲ ಎಂದು ಹೇಳಿದ್ದಾರೆ. ಬೂಮ್‌ನೊಂದಿಗೆ ಮಾತನಾಡಿದ ಗಾರ್ಗ್, “ನಾನು ರೋವರ್‌ನ ಲ್ಯಾಂಡಿಂಗ್‌ ಕೌಂಟ್ ಡೌನ್ ಸಮಯದಲ್ಲಿ ಈ ಚಿತ್ರವನ್ನು ಮಾಡಲು ಅಡೋಬಿ ಫೋಟೋಶಾಪ್ ಅನ್ನು ಬಳಸಿದ್ದೇನೆ, ನಾನು ಅದನ್ನು ನನ್ನ ಇನ್‌ಸ್ಟಾಗ್ರಾಮ್ ಸ್ಟೋರಿಯಾಗಿ ಹಂಚಿಕೊಂಡಿದ್ದೇನೆ. ಜನರು ಅದನ್ನು ನಿಜವಾದ ಚಿತ್ರ ಎಂದು ತಪ್ಪಾಗಿ ಭಾವಿಸಿದ್ದಾರೆ. ಅದು ವೈರಲ್ ಆಗುತ್ತದೆ ಎಂದು ನಿರೀಕ್ಷಿಸಿರಲಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: 6 ದೇಶಗಳನ್ನು ಆಹ್ವಾನಿಸಲು ನಿರ್ಧರಿಸಿದ ಬ್ರಿಕ್ಸ್; ಇದು ಗುಂಪನ್ನು ಬಲಪಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ hiclipart.com ವೆಬ್‌ಸೈಟ್‌ನಲ್ಲಿ ಗಾರ್ಗ್‌ನ ಚಿತ್ರದಲ್ಲಿ ಬಳಸಿರುವ ಇಂಪ್ರಿಟ್​​ನ ಬಾರ್ಡರ್​​ನ ವೆಕ್ಟರ್ ಅನ್ನು ನಾವು ಕಂಡುಕೊಂಡಿದ್ದೇವೆ. ಜುಲೈ 14, 2023 ರಂದು ಗುಜರಾತ್‌ನ ಗೃಹ ಸಚಿವ ಹರ್ಷ್ ಸಾಂಘ್ವಿ ಅವರ ಈ ಪೋಸ್ಟ್ ಪ್ರಕಾರ, ಪ್ರಗ್ಯಾನ್‌ನ ಚಕ್ರವು ರಾಷ್ಟ್ರೀಯ ಲಾಂಛನ ಮತ್ತು ಇಸ್ರೋದ ಲೋಗೊ ಹೊಂದಿದೆ.

ವಿಕ್ರಮ್ ಲ್ಯಾಂಡರ್‌ನಲ್ಲಿರುವ ಪ್ರಗ್ಯಾನ್ ರೋವರ್ ಈಗ ಚಂದ್ರನ ಮೇಲ್ಮೈಯನ್ನು ಮತ್ತಷ್ಟು ಅರ್ಥಮಾಡಿಕೊಳ್ಳಲು ಮತ್ತು ಅನ್ವೇಷಿಸಲು 14 ದಿನಗಳ ಕಾರ್ಯಯೋಜನೆಯನ್ನು ನಡೆಸುತ್ತಿದೆ.

ಪ್ರಗ್ಯಾನ್ ಚಕ್ರದ ಮೇಲೆ ಕೆತ್ತಲಾಗಿರುವ ಮುದ್ರೆಯ ಚಿತ್ರಕ್ಕೆ ಹೋಲಿಸಿದಾಗ ಅವು ಒಂದೇ ಆಗಿಲ್ಲ ಎಂದು ತಿಳಿದುಬಂದಿದೆ. ಪ್ರಗ್ಯಾನ್ ಚಕ್ರವು ಎರಡು ಲಂಬವಾದ ಗಡಿಗಳಲ್ಲಿ ಇಸ್ರೋದ ಲೋಗೋ ಮತ್ತು ರಾಷ್ಟ್ರೀಯ ಲಾಂಛನವನ್ನು ಹೊಂದಿದ್ದರೆ, ವೈರಲ್ ಚಿತ್ರವು ಎರಡು ಬಾರ್ಡರ್​​​ಗಳ ಮಧ್ಯದಲ್ಲಿ ಮುದ್ರೆಗಳನ್ನು ತೋರಿಸುತ್ತದೆ.

ಮತ್ತಷ್ಟು ಫ್ಯಾಕ್ಟ್ ಚೆಕ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
66 ರೌಡಿಶೀಟರ್​ಗಳಿಗೆ ಮುಕ್ತಿ ಸದ್ಯಕ್ಕಿಲ್ಲ: ಕ್ರಮ ತಡೆಹಿಡಿದ ಸಚಿವ ಖರ್ಗೆ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ತಾಯಿ ಪಾರ್ಥೀವ ಶರೀರದ ಎದುರು ಕಣ್ಣೀರು ಹಾಕಿದ ಶ್ರೀಮುರಳಿ
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಸಿಎಂ ಡಿಕೆಶಿಗೆ ಮೋಹನ್ ದಾಸ್ ಪೈ ಸಲಹೆ: ಉದ್ಯಮಿ ಹೇಳಿದ್ದೇನು?
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಕೊನೆಗೂ ಖಾತೆ ವಹಿಸಿಕೊಂಡ ಸಚಿವ ಕೃಷ್ಣ ಭೈರೇಗೌಡ: ಜಿಬಿಎ ಕಚೇರಿಯಲ್ಲಿ ಸಭೆ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ
ಹುಬ್ಬಳ್ಳಿ ಭಂಡಿವಾಡದಲ್ಲಿ ಹತ್ತೇ ನಿಮಿಷದಲ್ಲಿ ಉಳೀತು ಇನ್ನೂರು ಮಕ್ಕಳ ಜೀವ