AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ರಾಮ ಮಂದಿರ ಕೆಡವಿ ಮಸೀದಿ ನಿರ್ಮಾಣದ ವಿಡಿಯೋವನ್ನು ವಯನಾಡ್ ಕಾಂಗ್ರೆಸ್ ಹಂಚಿಕೊಂಡಿದ್ದು ನಿಜವೇ?

ಈ ಸುದ್ದಿಯ ಸತ್ಯಾಸತ್ಯತೆಯನ್ನು ಟಿವಿ9 ಕನ್ನಡ ಪರಿಶೋದಿಸಿದಾಗ ವಯನಾಡ್ ಕಾಂಗ್ರೆಸ್ ಈ ರೀತಿಯ ಯಾವುದೇ ವಿಡಿಯೋ ಹಂಚಿಕೊಂಡಿಲ್ಲ ಎಂಬುದು ತಿಳಿದುಬಂದಿದೆ. 2024 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ವಯನಾಡ್ ಕಾಂಗ್ರೆಸ್ ಈ ವಿಡಿಯೋ ಮಾಡಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪೊಲೀಸರಿಗೆ ದೂರು ಕೂಡ ನೀಡಿದ್ದಾರೆ.

Fact Check: ರಾಮ ಮಂದಿರ ಕೆಡವಿ ಮಸೀದಿ ನಿರ್ಮಾಣದ ವಿಡಿಯೋವನ್ನು ವಯನಾಡ್ ಕಾಂಗ್ರೆಸ್ ಹಂಚಿಕೊಂಡಿದ್ದು ನಿಜವೇ?
ವೈರಲ್​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:Nov 18, 2024 | 10:14 AM

ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಲಿಂಕ್ ಮಾಡುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋದ ಆರಂಭದಲ್ಲಿ ರಾಮಮಂದಿರವನ್ನು ತೋರಿಸಲಾಗುತ್ತದೆ ನಂತರ ಅದರ ಸ್ಥಳದಲ್ಲಿ ಮಸೀದಿ ಕಟ್ಟಿರುವುದು ಇದೆ. ವಿಡಿಯೋದ ಕೊನೆಯಲ್ಲಿ, ವಯನಾಡ್ ಕಾಂಗ್ರೆಸ್ ಸಮಿತಿಯು ರಾಹುಲ್ ಗಾಂಧಿಗೆ ಮತ ನೀಡುವಂತೆ ಮನವಿ ಮಾಡಿದೆ ಎಂದು ಬರೆಯಲಾಗಿದೆ. ಕೆಲ ಬಳಕೆದಾರರು ಈ ವಿಡಿಯೋವನ್ನು ಹಂಚಿಕೊಂಡು ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ ಪರವಾಗಿ ಮತ ಚಲಾಯಿಸಲು ಕಾಂಗ್ರೆಸ್ ರಾಮಮಂದಿರದ ಬದಲಿಗೆ ಮಸೀದಿಯ ವಿಡಿಯೋವನ್ನು ಮಾಡಿದೆ ಎಂದು ಹೇಳಿಕೊಳ್ಳುತ್ತಿದ್ದಾರೆ.

ಫೇಸ್‌ಬುಕ್ ಬಳಕೆದಾರ ಅವನೀಶ್ ಕುಮಾರ್ ಎಂಬವರು ಈ ವಿಡಿಯೋವನ್ನು ಹಂಚಿಕೊಂಡು, ‘‘ರಾಹುಲ್ ಗಾಂಧಿಗೆ ಮತ ಹಾಕಲು ಕಾಂಗ್ರೆಸ್ ತನ್ನ ವಯನಾಡ್ ಲೋಕಸಭಾ ಸ್ಥಾನಕ್ಕಾಗಿ ಮಾಡಿರುವ ಜಾಹೀರಾತನ್ನು ನೋಡಿ ನಾಚಿಕೆ, ನಾಚಿಕೆ, ನಾಚಿಕೆಗೇಡು, ಕಾಂಗ್ರೆಸ್, ಜಾತ್ಯತೀತ ಹಿಂದೂಗಳೇ, ಈಗಲಾದರೂ ನಿಮ್ಮ ಕಣ್ಣು ತೆರೆಯಿರಿ.’’ ಎಂದು ಬರೆದುಕೊಂಡಿದ್ದಾರೆ.

Fact Check:

ಈ ಸುದ್ದಿಯ ಸತ್ಯಾಸತ್ಯತೆಯನ್ನು ಟಿವಿ9 ಕನ್ನಡ ಪರಿಶೋದಿಸಿದಾಗ ವಯನಾಡ್ ಕಾಂಗ್ರೆಸ್ ಈ ರೀತಿಯ ಯಾವುದೇ ವಿಡಿಯೋ ಹಂಚಿಕೊಂಡಿಲ್ಲ ಎಂಬುದು ತಿಳಿದುಬಂದಿದೆ. 2024 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ವಯನಾಡ್ ಕಾಂಗ್ರೆಸ್ ಈ ವಿಡಿಯೋ ಮಾಡಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪೊಲೀಸರಿಗೆ ದೂರು ಕೂಡ ನೀಡಿದ್ದಾರೆ. ಎರ್ನಾಕುಲಂ ಗ್ರಾಮಾಂತರ ಸೈಬರ್ ಪೊಲೀಸರು ವಿಡಿಯೋವನ್ನು ಶೇರ್ ಮಾಡಿದ್ದಕ್ಕಾಗಿ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ವೈರಲ್ ಕ್ಲೈಮ್ ಅನ್ನು ಪರಿಶೀಲಿಸಲು ನಾವು ಗೂಗಲ್​ನಲ್ಲಿ ಕೀವರ್ಡ್‌ಗಳನ್ನು ಬಳಸಿಕೊಂಡು ಹುಡುಕಿದಾಗ, ಏಪ್ರಿಲ್ 26, 2024 ರಂದು ANI ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿಯನ್ನು ನಾವು ಕಂಡುಕೊಂಡಿದ್ದೇವೆ. ಪಕ್ಷದ ಘಟಕದ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ‘ನಕಲಿ ವೀಡಿಯೋ’ಗೆ ಸಂಬಂಧಿಸಿದಂತೆ ಕಾಂಗ್ರೆಸ್ ವಯನಾಡ್ ಜಿಲ್ಲಾ ಸಮಿತಿಯು ಪೊಲೀಸರಿಗೆ ದೂರು ನೀಡಿದೆ ಎಂದು ಬರೆಯಲಾಗಿದೆ. ದೇಶದ ಧಾರ್ಮಿಕ ಸಾಮರಸ್ಯವನ್ನು ಹಾಳು ಮಾಡುವ ಉದ್ದೇಶದಿಂದ ವಯನಾಡ್ ಜಿಲ್ಲಾ ಕಾಂಗ್ರೆಸ್ ಸಮಿತಿಯ ಹೆಸರಿನಲ್ಲಿ ನಕಲಿ ವಿಡಿಯೋ ಮಾಡಿ ಶೇರ್ ಮಾಡುತ್ತಿರುವುದು ಗಮನಕ್ಕೆ ಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ದೂರಿನಲ್ಲಿ, ವಿಡಿಯೋ ಮಾಡಿದವರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ, ಅದನ್ನು ಸಾಮಾಜಿಕ ಮಾಧ್ಯಮದಿಂದ ತೆಗೆದುಹಾಕುವಂತೆ ಮನವಿಯನ್ನೂ ಮಾಡಲಾಗಿದೆ.

ಇದಕ್ಕೆ ಸಂಬಂಧ ಪಟ್ಟ ಸುದ್ದಿಯನ್ನು ನೀವು ಇಲ್ಲಿ ಓದಬಹುದು.

Congress lodges police complaint against ‘fake video’ of Rahul Gandhi circulated on social media

ಹಾಗೆಯೆ ಖಾಸಗಿ ವೆಬ್​ಸೈಟ್ ಒಂದರ ಪ್ರಕಾರ, ಮುವಾಟ್ಟುಪುಳ ಶಾಸಕ ಮ್ಯಾಥ್ಯೂ ಕುಜಲನಾಡನ್ ಅವರ ದೂರಿನ ಮೇರೆಗೆ ಎರ್ನಾಕುಲಂ ಗ್ರಾಮಾಂತರ ಸೈಬರ್ ಪೊಲೀಸರು ರಾಜೇಶ್ ಜಿ ನಾಯರ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಬರೆಯಲಾಗಿದೆ. ಈ ವಿಡಿಯೋವನ್ನು ವಾಟ್ಸಾಪ್ ಗ್ರೂಪ್‌ನಲ್ಲಿ ಶೇರ್ ಮಾಡಿದ್ದ ಎನ್ನಲಾಗಿದೆ. 30 ಸೆಕೆಂಡುಗಳ ವಿಡಿಯೋ ಅಯೋಧ್ಯೆಯ ರಾಮ ಮಂದಿರವನ್ನು ಚಿತ್ರಿಸುವ ಹಾಡಿನೊಂದಿಗೆ ಪ್ರಾರಂಭವಾಗುತ್ತದೆ. ನಂತರ ದೇವಾಲಯವನ್ನು ಕೆಡವಿ ಮಸೀದಿ ನಿರ್ಮಿಸಲಾಗಿದೆ ಎಂದು ತೋರಿಸಲಾಗಿದೆ.

ಈ ಕುರಿತು ಕೇರಳ ಕಾಂಗ್ರೆಸ್ ಉಪಾಧ್ಯಕ್ಷ ವಿಟಿ ಬಲರಾಮ್ ಅವರು, ಈ ವಿಡಿಯೋವನ್ನು ವೈರಲ್ ಮಾಡಿರುವ ವಯನಾಡ್ ಕಾಂಗ್ರೆಸ್ ಆರೋಪ ಅಸಂಬದ್ಧವಾಗಿದೆ. ಇದು ವಿರೋಧ ಪಕ್ಷದ ಕೆಲಸವಾಗಬೇಕು. ನಾವು ಸಾಮಾನ್ಯವಾಗಿ ವಯನಾಡ್ ಕಾಂಗ್ರೆಸ್ ಸಮಿತಿಯನ್ನು ಬಳಸುವುದಿಲ್ಲ. ನಾವು ಇಲ್ಲಿ ಯುಡಿಎಫ್ ಹೆಸರಿನಲ್ಲಿ ಚುನಾವಣೆ ಎದುರಿಸುತ್ತಿದ್ದೇವೆ, ಬರೀ ಕಾಂಗ್ರೆಸ್ ಹೆಸರಿನಲ್ಲಿ ಅಲ್ಲ. ನಾವು ಪಕ್ಷದ ಹೆಸರನ್ನು ಬಳಸಿದರೆ ನಾವು ‘ಜಿಲ್ಲಾ ಕಾಂಗ್ರೆಸ್ ಸಮಿತಿ ವಯನಾಡ್’ ಎಂದು ಬಳಸುತ್ತೇವೆ ಎಂದು ಹೇಳಿದ್ದಾರೆ ಎಂದು ವರದಿಯಲ್ಲಿದೆ.

ಹೀಗಾಗಿ ವಯನಾಡ್ ಜಿಲ್ಲಾ ಕಾಂಗ್ರೆಸ್ ಸಮಿತಿಯು 2024 ರ ಏಪ್ರಿಲ್‌ನಲ್ಲಿ ರಾಮ ಮಂದಿರವನ್ನು ಕೆಡವಿ ಮಸೀದಿ ನಿರ್ಮಿಸುವ ವಿಡಿಯೋದ ಕುರಿತು ಪೊಲೀಸರಿಗೆ ದೂರು ನೀಡಿದ್ದು, ವಿಡಿಯೋ ತಯಾರಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದೆ. ಆದರೆ, ಈಗ ಈ ವಿಡಿಯೋ ಪುನಃ ಜಿಲ್ಲಾ ವಯನಾಡ್ ಕಾಂಗ್ರೆಸ್ ಸಮಿತಿ ಹೆಸರಿನಲ್ಲಿ ಶೇರ್ ಮಾಡಲಾಗಿದೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:00 pm, Wed, 13 November 24

ಬುರ್ಖಾ ಮಹಿಳೆಯರ ಕರಾಮತ್ತು ಸಿಸಿಟಿವಿಯಲ್ಲಿ ಸೆರೆ
ಬುರ್ಖಾ ಮಹಿಳೆಯರ ಕರಾಮತ್ತು ಸಿಸಿಟಿವಿಯಲ್ಲಿ ಸೆರೆ
16 ವರ್ಷದ ಹುಡುಗನ ಪಾತ್ರಕ್ಕಾಗಿ ತೂಕ ಕಡಿಮೆ ಮಾಡಿಕೊಂಡ ವಿನಯ್ ರಾಜ್​ಕುಮಾರ್
16 ವರ್ಷದ ಹುಡುಗನ ಪಾತ್ರಕ್ಕಾಗಿ ತೂಕ ಕಡಿಮೆ ಮಾಡಿಕೊಂಡ ವಿನಯ್ ರಾಜ್​ಕುಮಾರ್
ತೂಫಾನ್ ಅರ್ಧಶತಕ ಸಿಡಿಸಿ ಮತ್ತೊಮ್ಮೆ ಪಂದ್ಯ ಗೆಲ್ಲಿಸಿದ ಹೆಟ್ಮೆಯರ್
ತೂಫಾನ್ ಅರ್ಧಶತಕ ಸಿಡಿಸಿ ಮತ್ತೊಮ್ಮೆ ಪಂದ್ಯ ಗೆಲ್ಲಿಸಿದ ಹೆಟ್ಮೆಯರ್
​ಹಾವುಗಳ ಪ್ರೇಮದ ಬೆಸುಗೆ: ಬರೋಬ್ಬರಿ ಅರ್ಧ ಗಂಟೆ ಮಿಲನ..!
​ಹಾವುಗಳ ಪ್ರೇಮದ ಬೆಸುಗೆ: ಬರೋಬ್ಬರಿ ಅರ್ಧ ಗಂಟೆ ಮಿಲನ..!
ಬಹುದಿನಗಳ ಬಳಿಕ ಒಟ್ಟಿಗೆ ಕಾಣಿಸಿಕೊಂಡ ಜಾರಕಿಹೋಳಿ ಅಣ್ತಮ್ಮಸ್
ಬಹುದಿನಗಳ ಬಳಿಕ ಒಟ್ಟಿಗೆ ಕಾಣಿಸಿಕೊಂಡ ಜಾರಕಿಹೋಳಿ ಅಣ್ತಮ್ಮಸ್
5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
5 ವಿಕೆಟ್ ಕಬಳಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಸ್ಫೋಟಕ ಬ್ಯಾಟರ್
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
ಏರು ಧ್ವನಿಯಲ್ಲಿ ಮಾತನಾಡಿದ್ರೆಂದು ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ