AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ನನಗೆ ಬಾಂಗ್ಲಾ ಹಿಂದೂಗಳ ಬಗ್ಗೆ ಕಾಳಜಿಯಿಲ್ಲವೆಂದು ಪ್ರಿಯಾಂಕ ಗಾಂಧಿ ಬ್ಯಾಗ್ ಮೇಲೆ ಬರೆಯಲಾಗಿದೆಯೇ?

ಅನೇಕ ಬಳಕೆದಾರರು ಇದನ್ನು ನಿಜವೆಂದು ಪರಿಗಣಿಸಿ ಹಂಚಿಕೊಳ್ಳುತ್ತಿದ್ದಾರೆ. ಆದರೆ, ಟಿವಿ9 ಕನ್ನಡ ವೈರಲ್ ಫೊಟೋವನ್ನು ತನಿಖೆ ಮಾಡಿದೆ. ಆಗ ಇದು ನಕಲಿ ಎಂದು ಸಾಬೀತಾಯಿತು. ವೈರಲ್ ಆಗಿರುವ ಫೋಟೋವನ್ನು ಉದ್ದೇಶಪೂರ್ವಕವಾಗಿ ಪ್ರಿಯಾಂಕಾ ಗಾಂಧಿಯವರ ಮೂಲ ಚಿತ್ರದೊಂದಿಗೆ ತಿರುಚಲಾಗಿದೆ. ಹುಡುಕಾಟದ ಸಮಯದಲ್ಲಿ ಮೂಲ ಚಿತ್ರವನ್ನು ಹಂಚಿಕೊಂಡು ಅನೇಕ ಸುದ್ದಿ ಮಾಧ್ಯಮ ವರದಿ ಮಾಡಿರುವುದು ನಮಗೆ ಸಿಕ್ಕಿದೆ.

Fact Check: ನನಗೆ ಬಾಂಗ್ಲಾ ಹಿಂದೂಗಳ ಬಗ್ಗೆ ಕಾಳಜಿಯಿಲ್ಲವೆಂದು ಪ್ರಿಯಾಂಕ ಗಾಂಧಿ ಬ್ಯಾಗ್ ಮೇಲೆ ಬರೆಯಲಾಗಿದೆಯೇ?
ವೈರಲ್​​ ಪೋಸ್ಟ್​​
ಪ್ರೀತಿ ಭಟ್​, ಗುಣವಂತೆ
| Edited By: |

Updated on: Dec 18, 2024 | 11:39 AM

Share

ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಪ್ಯಾಲೆಸ್ತೀನ್‌ಗೆ ಬೆಂಬಲ ಸೂಚಿಸುವ ಬ್ಯಾಗ್​ನೊಂದಿಗೆ ಡಿಸೆಂಬರ್ 16 ರಂದು ಸಂಸತ್ತನ್ನು ಪ್ರವೇಶಿಸಿದ್ದರು. ಇದರ ನಂತರ, ಡಿಸೆಂಬರ್ 17 ರಂದು ಪ್ರಿಯಾಂಕಾ ಮತ್ತೊಂದು ಹೊಸ ಬ್ಯಾಗ್‌ನೊಂದಿಗೆ ಆಗಮಿಸಿದರು, ಅದರಲ್ಲಿ ಬಾಂಗ್ಲಾದೇಶದ ಅಲ್ಪಸಂಖ್ಯಾತರನ್ನು ಬೆಂಬಲಿಸುವ ಬರಹವನ್ನು ಬರೆಯಲಾಗಿದೆ. ಬ್ಯಾಗ್‌ನಲ್ಲಿ ಹೀಗೆ ಬರೆಯಲಾಗಿತ್ತು ‘ಬಾಂಗ್ಲಾದೇಶದಲ್ಲಿರುವ ಹಿಂದೂ ಹಾಗೂ ಕ್ರಿಶ್ಚಿಯನ್ನರ ಪರವಾಗಿ ನಿಲ್ಲೋಣ’. ಈ ನಡುವೆ ಇದೀಗ ಪ್ರಿಯಾಂಕಾ ಗಾಂಧಿಯ ಮತ್ತೊಂದು ಫೋಟೋ ವೈರಲ್ ಆಗಿದೆ. ಬಾಂಗ್ಲಾದೇಶದ ಹಿಂದೂಗಳ ಬಗ್ಗೆ ನನಗೆ ಕಾಳಜಿ ಇಲ್ಲ ಎಂದು ಅವರ ಬ್ಯಾಗ್‌ನಲ್ಲಿ ಬರೆಯಲಾಗಿದೆ.

ವೈರಲ್ ಆಗುತ್ತಿರುವುದೇನು?:

ಫೇಸ್‌ಬುಕ್ ಬಳಕೆದಾರ ಮನೋಜ್ ಶರ್ಮಾ ಎಂಬವರು, ಪ್ರಿಯಾಂಕಾ ಗಾಂಧಿ ಅವರು ಸಂಸತ್ತಿನ ಒಳಗೆ ಪ್ರವೇಶಿಸುವ ಮುನ್ನ ಫೋಟೋವನ್ನು ಹಂಚಿಕೊಂಡಿದ್ದಾರೆ. ಅವರ ಹಾಕಿಕೊಂಡಿರುವ ಬ್ಯಾಗ್ ಮೇಲೆ “ನಾನು ಬಾಂಗ್ಲಾದೇಶಿ ಹಿಂದೂಗಳ ಬಗ್ಗೆ ಕಾಳಜಿ ವಹಿಸುವುದಿಲ್ಲ” ಎಂದು ಬರೆಯಲಾಗಿದೆ.

Fact Check:

ಅನೇಕ ಬಳಕೆದಾರರು ಇದನ್ನು ನಿಜವೆಂದು ಪರಿಗಣಿಸಿ ಹಂಚಿಕೊಳ್ಳುತ್ತಿದ್ದಾರೆ. ಆದರೆ, ಟಿವಿ9 ಕನ್ನಡ ವೈರಲ್ ಫೊಟೋವನ್ನು ತನಿಖೆ ಮಾಡಿದೆ. ಆಗ ಇದು ನಕಲಿ ಎಂದು ಸಾಬೀತಾಯಿತು. ವೈರಲ್ ಆಗಿರುವ ಫೋಟೋವನ್ನು ಉದ್ದೇಶಪೂರ್ವಕವಾಗಿ ಪ್ರಿಯಾಂಕಾ ಗಾಂಧಿಯವರ ಮೂಲ ಚಿತ್ರದೊಂದಿಗೆ ತಿರುಚಲಾಗಿದೆ.

ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರ ವೈರಲ್ ಫೋಟೋ ಸತ್ಯಾಸತ್ಯತೆಯನ್ನು ಕಂಡುಹಿಡಿಯಲು ನಾವು ಗೂಗಲ್ ಲೆನ್ಸ್ ಟೂಲ್ ಅನ್ನು ಮೊದಲು ಬಳಸಿದ್ದೇವೆ. ಹುಡುಕಾಟದ ಸಮಯದಲ್ಲಿ ಮೂಲ ಚಿತ್ರವನ್ನು ಹಂಚಿಕೊಂಡು ಅನೇಕ ಸುದ್ದಿ ಮಾಧ್ಯಮ ವರದಿ ಮಾಡಿರುವುದು ನಮಗೆ ಸಿಕ್ಕಿದೆ. ಸ್ವತಃ ಟಿವಿ9 ಕನ್ನಡ ಕೂಡ ಈ ಬಗ್ಗೆ ವಿವರವಾಗಿ ಸುದ್ದಿ ಪ್ರಕಟಿಸಿದೆ. ಡಿಸೆಂಬರ್ 17 ರ ಈ ಸುದ್ದಿಯಲ್ಲಿ, ‘ನಿನ್ನೆ ಪ್ಯಾಲೆಸ್ತೀನ್ ಇಂದು ಬಾಂಗ್ಲಾದೇಶ, ಪ್ರಿಯಾಂಕಾಳ ದಿನಕ್ಕೊಂದು ಬ್ಯಾಗ್, ದಿನಕ್ಕೊಂದು ಬರಹ’ ಎಂದು ಶೀರ್ಷಿಕೆ ನೀಡಲಾಗಿದೆ.

ಸುದ್ದಿಯ ಪ್ರಕಾರ, ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಪ್ಯಾಲೆಸ್ತೀನ್ ಬೆಂಬಲಿಸುವ ಬ್ಯಾಗ್ ನೊಂದಿಗೆ ಸೋಮವಾರ ಸಂಸತ್ತಿಗೆ ಬಂದಿದ್ದರು, ನಂತರ ಬಿಜೆಪಿ ಅವರನ್ನು ಸಾಕಷ್ಟು ಟೀಕಿಸಿತ್ತು. ಕಾಂಗ್ರೆಸ್​ ಸಂಸದೆ ಪ್ರಿಯಾಂಕಾ ಗಾಂಧಿ ನಿನ್ನೆಯಷ್ಟೇ ಪ್ಯಾಲೆಸ್ತೀನ್ ಎಂದು ಬರೆದಿರುವ ಬ್ಯಾಗ್​ನ್ನು ಸಂಸತ್ತಿಗೆ ತೆಗೆದುಕೊಂಡು ಬಂದಿದ್ದರಿಂದ ದೊಡ್ಡ ವಿವಾದವೇ ಸೃಷ್ಟಿಯಾಗಿತ್ತು. ಆದರೆ ಇಂದು ಬಾಂಗ್ಲಾದೇಶದಲ್ಲಿರುವ ಹಿಂದೂ ಹಾಗೂ ಕ್ರಿಶ್ಚಿಯನ್ನರ ಪರವಾಗಿ ನಿಲ್ಲೋಣ ಎನ್ನುವ ಬರಹವಿರುವ ಬ್ಯಾಗ್​ ಹಿಡಿದು ಬಂದಿದ್ದರು. ಕೇರಳದ ವಯನಾಡ್‌ನಿಂದ ಇತ್ತೀಚಿನ ಚುನಾವಣಾ ಗೆಲುವಿನ ನಂತರ ತಮ್ಮ ಚೊಚ್ಚಲ ಸಂಸತ್ ಅಧಿವೇಶನದಲ್ಲಿ ಭಾಗವಹಿಸುತ್ತಿರುವ ಪ್ರಿಯಾಂಕಾ ಗಾಂಧಿ ಅವರು ಸೋಮವಾರ ಲೋಕಸಭೆಯ ಅಧಿವೇಶನದಲ್ಲಿ ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲೆ ನಡೆದ ದೌರ್ಜನ್ಯದ ವಿರುದ್ಧ ಧ್ವನಿ ಎತ್ತಿದರು ಎಂಬ ಮಾಹಿತಿ ಇದರಲ್ಲಿದೆ. ಸಂಪೂರ್ಣ ಸುದ್ದಿಯನ್ನು ಇಲ್ಲಿ ಓದಿ.

ನಿನ್ನೆ ಪ್ಯಾಲೆಸ್ತೀನ್ ಇಂದು ಬಾಂಗ್ಲಾದೇಶ, ಪ್ರಿಯಾಂಕಾಳ ದಿನಕ್ಕೊಂದು ಬ್ಯಾಗ್, ದಿನಕ್ಕೊಂದು ಬರಹ

ತನಿಖೆಯ ಸಮಯದಲ್ಲಿ, ನಾವು ಪ್ರಿಯಾಂಕಾ ಗಾಂಧಿ ಅವರ ಅಧಿಕೃತ ಇನ್​ಸ್ಟಾಗ್ರಾಮ್ ಖಾತೆಯಲ್ಲಿ ರೀಲ್ ಅನ್ನು ಕಂಡುಕೊಂಡಿದ್ದೇವೆ. ಇದರಲ್ಲೂ ನೈಜ ಚಿತ್ರಗಳು ಮತ್ತು ವಿಡಿಯೋಗಳನ್ನು ಬಳಸಲಾಗಿದೆ. ಈ ರೀಲ್ ಅನ್ನು ಡಿಸೆಂಬರ್ 17 ರಂದು ಅಪ್‌ಲೋಡ್ ಮಾಡಲಾಗಿದೆ.

ಕಾಂಗ್ರೆಸ್ ಮಾಧ್ಯಮದ ಪ್ಯಾನೆಲಿಸ್ಟ್ ಡಾ. ಅಜಯ್ ಉಪಾಧ್ಯಾಯ ಅವರು ಬಾಂಗ್ಲಾದೇಶದ ಅಲ್ಪಸಂಖ್ಯಾತರನ್ನು ಬೆಂಬಲಿಸುವ ಕುರಿತು ಮಾತನಾಡಿರುವ ಪ್ರಿಯಾಂಕಾ ಗಾಂಧಿಯವರ ಚಿತ್ರವನ್ನು ಹಂಚಿಕೊಂಡಿದ್ದಾರೆ. ಬ್ಯಾಗ್‌ನಲ್ಲಿ ಬಾಂಗ್ಲಾದೇಶದ ಹಿಂದೂಗಳು ಮತ್ತು ಕ್ರಿಶ್ಚಿಯನ್ನರು ಎಂದು ಸ್ಪಷ್ಟವಾಗಿ ಬರೆಯಲಾಗಿದೆ.

ಇದುವರೆಗಿನ ತನಿಖೆಯಿಂದ ಪ್ರಿಯಾಂಕಾ ಗಾಂಧಿ ಪ್ಯಾಲೆಸ್ತೀನ್‌ಗೆ ಬೆಂಬಲ ವ್ಯಕ್ತಪಡಿಸಿರುವ ಫೋಟೋವನ್ನು ತಿರುಚಿರುವುದು ಸ್ಪಷ್ಟವಾಗಿದೆ. ಬಾಂಗ್ಲಾದೇಶ ಹಿಂದೂಗಳ ಬಗ್ಗೆ ನನಗೆ ಕಾಳಜಿ ಇಲ್ಲ ಎಂದು ಚಿತ್ರದಲ್ಲಿ ಉದ್ದೇಶಪೂರ್ವಕವಾಗಿ ಇಂಗ್ಲಿಷ್‌ನಲ್ಲಿ ಬರೆಯಲಾಗಿದೆ. ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಸುಪ್ರಿಯಾ ಶ್ರೀನೆಟ್ ಕೂಡ ವೈರಲ್ ಚಿತ್ರ ನಕಲಿ ಎಂದು ಹೇಳಿದ್ದಾರೆ. ಈ ಮೂಲಕ ಟಿವಿ9 ಕನ್ನಡ ತನಿಖೆಯಲ್ಲಿ, ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರ ವೈರಲ್ ಚಿತ್ರ ನಕಲಿ ಎಂದು ಸಾಬೀತಾಗಿದೆ. ಅವರ ಮೂಲ ಚಿತ್ರವನ್ನು ಎಡಿಟ್ ಮಾಡಲಾಗಿದೆ.

ಫ್ಯಾಕ್ಟ್ ಚೆಕ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
‘ಕಂಟ್ರಿ ಮೇಡ್’ ಸಿನಿಮಾನಲ್ಲಿ ಕತೆಯೇ ನಾಯಕ: ವಿಡಿಯೋ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ನಾಯಕತ್ವ ಬದಲಾವಣೆ ಗುದ್ದಾಟಕ್ಕೆ ಸ್ಫೋಟಕ ತಿರುವು ನೀಡಿದ ಸಭೆ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಕೇಸ್: ಯುವಕನಿಗೆ ಗೂಸಾ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ