AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಸರಿಯಾದ ನಿರ್ಧಾರ ತೆಗೆದುಕೊಳ್ಳುವುದಲ್ಲ, ನಿರ್ಧಾರ ತೆಗೆದುಕೊಂಡ ನಂತರ ಸರಿ ಮಾಡಿ: ರತನ್ ಟಾಟಾ ಹೀಗೆ ಹೇಳಿರುವುದು ನಿಜವೇ?

‘‘ಸರಿಯಾದ ನಿರ್ಧಾರ ತೆಗೆದುಕೊಳ್ಳುವುದರ ಮೇಲೆ ನನಗೆ ನಂಬಿಕೆ ಇಲ್ಲ. ನಾನು ನಿರ್ಧಾರವನ್ನು ತೆಗೆದುಕೊಳ್ಳುತ್ತೇನೆ. ಆಮೇಲೆ ಅದನ್ನು ಸರಿ ಮಾಡುತ್ತೇನೆ’’. ಹೀಗೆ ರತನ್ ಟಾಟಾ ಹೇಳಿದ್ದರು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕೋಟ್ ವೈರಲ್ ಆಗುತ್ತಿದೆ.

Fact Check: ಸರಿಯಾದ ನಿರ್ಧಾರ ತೆಗೆದುಕೊಳ್ಳುವುದಲ್ಲ, ನಿರ್ಧಾರ ತೆಗೆದುಕೊಂಡ ನಂತರ ಸರಿ ಮಾಡಿ: ರತನ್ ಟಾಟಾ ಹೀಗೆ ಹೇಳಿರುವುದು ನಿಜವೇ?
Fact Check
ಮಾಲಾಶ್ರೀ ಅಂಚನ್​
| Edited By: |

Updated on:Oct 10, 2024 | 12:26 PM

Share

‘‘ಜನರು ನಿಮ್ಮ ಮೇಲೆ ಎಸೆಯುವ ಕಲ್ಲುಗಳನ್ನು ತೆಗೆದುಕೊಂಡು ಅವುಗಳ ಮೂಲಕ ಸ್ಮಾರಕಗಳನ್ನು ನಿರ್ಮಿಸಿ…’’ ರತನ್ ಟಾಟಾ ಈ ಹಿಂದೆ ಈ ರೀತಿ ಹೇಳಿದ್ದರು. ಹಾಗೆಯೇ ಬದುಕಿದರು ಕೂಡ. ಎದುರಾಳಿಗಳಿಗೆ ತಕ್ಕ ಉತ್ತರ ನೀಡಿ ವಿಶ್ವದ ಶ್ರೇಷ್ಠ ಉದ್ಯಮಿಯಾಗುವ ಮೂಲಕ ಇತಿಹಾಸದಲ್ಲಿ ಚಿರಸ್ಥಾಯಿಯಾದರು. ರತನ್ ಟಾಟಾ ಇನ್ನಿಲ್ಲ ನಿಜ. ಆದರೆ ಅವರ ಮಾತು ಎಂದೆಂದಿಗೂ ಜೀವಂತ. ಯುವಕರಿಗೆ ಸ್ಪೂರ್ತಿದಾಯಕ ಮಾತುಗಳನ್ನು ಆಡಿ ಅವರನ್ನು ಪ್ರೋತ್ಸವಾಹಿಸಿದವರು ರತನ್. ಆದರೆ, ಇದೀಗ ರತನ್ ಟಾಟಾ ಹೇಳಿದ್ದಾರೆ ಎನ್ನಲಾಗುತ್ತಿರುವ ಸುಳ್ಳು ಕೋಟ್ ವೈರಲ್ ಆಗುತ್ತಿದೆ.

‘‘ಸರಿಯಾದ ನಿರ್ಧಾರ ತೆಗೆದುಕೊಳ್ಳುವುದರ ಮೇಲೆ ನನಗೆ ನಂಬಿಕೆ ಇಲ್ಲ. ನಾನು ನಿರ್ಧಾರವನ್ನು ತೆಗೆದುಕೊಳ್ಳುತ್ತೇನೆ. ಆಮೇಲೆ ಅದನ್ನು ಸರಿ ಮಾಡುತ್ತೇನೆ’’. ಹೀಗೆ ರತನ್ ಟಾಟಾ ಹೇಳಿದ್ದರು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಕೋಟ್ ವೈರಲ್ ಆಗುತ್ತಿದೆ. ವೈರಲ್ ಆಗುತ್ತಿರುವ ಹೇಳಿಕೆಯನ್ನು ನೀವು ಕೆಳಗೆ ನೋಡಬಹುದು.

ವೈರಲ್ ಆಗುತ್ತಿರುವ ಹೇಳಿಕೆ

ವೈರಲ್ ಆಗುತ್ತಿರುವ ಹೇಳಿಕೆ

Fact Check:

ಈ ಹೇಳಿಕೆಯ ಸತ್ಯಾಸತ್ಯತೆಯನ್ನು ಟಿವಿ9 ಕನ್ನಡ ಪರಿಶೋದಿಸಿದಾಗ ಇದು ಸುಳ್ಳು ಎಂಬುದು ಕಂಡು ಬಂದಿದೆ. ಅಸಲಿಗೆ ರತನ್ ಟಾಟಾ ಈ ರೀತಿ ಹೇಳಲೇ ಇಲ್ಲ. ನಿಜಾಂಶವನ್ನು ತಿಳಿಯಲು ನಾವು ಗೂಗಲ್​​ನಲ್ಲಿ ಈ ಕೋಟ್ ಅನ್ನು ಕಾಪಿ-ಪೇಸ್ಟ್ ಮಾಡಿದೆವು. ಆಗ ರತನ್ ಟಾಟಾ ಅವರೇ ಈ ರೀತಿ ಹೇಳಿದ್ದಾರೆ ಎಂಬ ಅನೇಕ ಫೋಟೋಗಳು ಕಂಡವು. ಆದರೆ, ಇವುಗಳ ಮಧ್ಯೆ ಒಂದು ಯೂಟ್ಯೂಬ್ ಚಾನೆಲ್​ನ ವಿಡಿಯೋ ಸಿಕ್ಕಿತು. ಲರ್ನ್ ವಿಥ್ ಜಸ್ಪಾಲ್ ಎಂಬ ಯೂಟ್ಯೂಬ್ ಖಾತೆಯಲ್ಲಿ ವಿದೇಶಿ ಆ್ಯಂಕರ್ ಒಬ್ಬರು ರತನ್ ಟಾಟಾ ಅವರನ್ನು ಸಂದರ್ಶನ ಮಾಡುವ ವಿಡಿಯೋ ಇದೆ. ಆಗಸ್ಟ್ 19, 2022 ರಂದು ಅಪ್ಲೋಡ್ ಆಗಿರುವ ಈ ಪೋಸ್ಟ್​ನಲ್ಲಿ ಆ್ಯಂಕರ್, ‘ನೀವು ಈ ಹಿಂದೆ ಸರಿಯಾದ ನಿರ್ಧಾರ ತೆಗೆದುಕೊಳ್ಳುವುದರ ಮೇಲೆ ನನಗೆ ನಂಬಿಕೆ ಇಲ್ಲ. ನಾನು ನಿರ್ಧಾರವನ್ನು ತೆಗೆದುಕೊಳ್ಳುತ್ತೇನೆ. ಆಮೇಲೆ ಅದನ್ನು ಸರಿ ಮಾಡುತ್ತೇನೆ ಎಂದು ಹೇಳಿದ್ದೀರಿ, ಈ ರೀತಿಯ ವಾಕ್ಯ ನಿಮಗೆ ಹೇಗೆ ಬರುತ್ತದೆ’ ಎಂದು ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ರತನ್ ಟಾಟಾ, ‘ಕ್ಷಮಿಸಿ ನಾನು ನಿಮಗೆ ಬೇಸರ ಮಾಡುತ್ತಿದ್ದೇನೆ, ಟ್ವಿಟ್ಟರ್ ಮತ್ತು ಫೇಸ್​ಬುಕ್ ಆ ಕೋಟ್ ಹಂಚಿಕೊಂಡಿದೆ. ನಾನು ಎಂದಿಗೂ ಆ ರೀತಿಯ ಸ್ಟೇಟ್ಮೆಂಟ್ ಕೊಟ್ಟಿಲ್ಲ’ ಎಂದು ಹೇಳಿದ್ದಾರೆ.

ಇದು ಮಾತ್ರವಲ್ಲ ರತನ್ ಟಾಟಾ ಹೇಳಿದ್ದಾರೆ ಎನ್ನಲಾಗುತ್ತಿರುವ ಅನೇಕ ಕೋಟ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಇರುತ್ತವೆ. ಇತ್ತೀಚೆಗಷ್ಟೆ ರತನ್ ಟಾಟಾ ಅವರು ಜೆಎನ್‌ಯು ಪದವೀಧರರನ್ನು ಟಾಟಾ ಗ್ರೂಪ್‌ಗೆ ಪ್ರವೇಶಿಸದಂತೆ ಬ್ಲಾಕ್ ಲಿಸ್ಟ್​ಗೆ ಸೇರಿಸಿದ್ದಾರೆ ಎಂನ ಸುದ್ದಿ ವೈರಲ್ ಆಗಿತ್ತು. ಇದು ಕೂಡ ನಕಲಿ ಸುದ್ದಿಯಾಗಿದೆ. ಇನ್ನಾದರೂ ಸೋಷಿಯಲ್ ಮೀಡಿಯಾ ಬಳಕೆದಾರರು ನಿಜಾಂಶವನ್ನು ತಿಳಿಯದೆ ಈ ರೀತಿಯ ಸುಳ್ಳು ಸುದ್ದಿ ಹರಡುವುದನ್ನು ನಿಲ್ಲಿಸಬೇಕಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:09 pm, Thu, 10 October 24

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!