AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check ಪಾಕ್ ಸಂಚಿನ ಭಾಗವಾಗಿ ಭಾರತದಲ್ಲಿ ರೋಗ ಉಂಟುಮಾಡಲು ಅಪಾಯಕಾರಿ ಪಟಾಕಿಗಳನ್ನು ತಯಾರಿಸಿದೆಯೇ ಚೀನಾ?

ಪಾಕಿಸ್ತಾನಕ್ಕೆ ನೇರವಾಗಿ ಭಾರತದ ಮೇಲೆ ದಾಳಿ ಮಾಡಲು ಸಾಧ್ಯವಿಲ್ಲದ ಕಾರಣ, ಅದು ಭಾರತದ ಮೇಲೆ ಸೇಡು ತೀರಿಸಿಕೊಳ್ಳಲು ಒತ್ತಾಯಿಸಿದೆ. ಭಾರತದಲ್ಲಿ ಅಸ್ತಮಾ ಹರಡಲು ಕಾರ್ಬನ್ ಮಾನಾಕ್ಸೈಡ್ ಅನಿಲಕ್ಕಿಂತ ಹೆಚ್ಚು ವಿಷಕಾರಿ ಪಟಾಕಿಗಳನ್ನು ಚೀನಾ ತಯಾರಿಸಿದೆ...

Fact Check ಪಾಕ್ ಸಂಚಿನ ಭಾಗವಾಗಿ ಭಾರತದಲ್ಲಿ ರೋಗ ಉಂಟುಮಾಡಲು ಅಪಾಯಕಾರಿ ಪಟಾಕಿಗಳನ್ನು ತಯಾರಿಸಿದೆಯೇ ಚೀನಾ?
ವಾಟ್ಸಾಪ್ ಸಂದೇಶ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Oct 17, 2022 | 9:30 AM

Share

ದೀಪಾವಳಿ ಹಬ್ಬ (Deepavali) ಹತ್ತಿರಬರುತ್ತಿದ್ದಂತೆ ಇದಕ್ಕೆ ಸಂಬಂಧಿಸಿದ ಸಂದೇಶಗಳು ವಾಟ್ಸಾಪ್​​ನಲ್ಲಿ(WhatsApp) ಹರಿದಾಡುತ್ತಿವೆ. ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್‌ನಲ್ಲಿ ಸಂದೇಶವೊಂದು ವೈರಲ್ ಆಗುತ್ತಿದ್ದು ಈ ಸಂದೇಶದಲ್ಲಿ ಗೃಹ ಸಚಿವಾಲಯದ ಅಧಿಕಾರಿಯೊಬ್ಬರ ಹೆಸರನ್ನೂ ಬರೆಯಲಾಗಿದೆ. ಈ ಸಂದೇಶದಲ್ಲಿ ಪಾಕಿಸ್ತಾನವು ನೇರವಾಗಿ ಭಾರತದ ಮೇಲೆ ದಾಳಿ ಮಾಡಲು ಸಾಧ್ಯವಿಲ್ಲದ ಕಾರಣ ಚೀನಾ ಮೂಲಕ ಅದು ಸಂಚು ರೂಪಿಸುತ್ತಿದೆ. ಹಾಗಾಗಿ ಈ ಬಾರಿಯ ದೀಪಾವಳಿಗೆ ಚೀನಾದ ವಸ್ತುಗಳನ್ನು ಬಳಸಬೇಡಿ. ಚೀನಾವು ಭಾರತದಲ್ಲಿ ಅಸ್ತಮಾ ಹರಡಲು ಮತ್ತು ಕಣ್ಣಿನ ಕಾಯಿಲೆಗಳನ್ನು ಉಂಟುಮಾಡಲು ವಿವಿಧ ರೀತಿಯ ಪಟಾಕಿಗಳು ಮತ್ತು ಅಲಂಕಾರಗಳಲ್ಲಿ ಬಳಸುವ ದೀಪಗಳನ್ನು ಕಳುಹಿಸುತ್ತಿದೆ. ಈ ಸಂದೇಶವನ್ನು ಎಲ್ಲ ಭಾರತೀಯರಿಗೂ ತಲುಪಿಸಿ ಎಂದು ಈ ಮೆಸೇಜ್ ವಾಟ್ಸಾಪ್ ನಲ್ಲಿ ಫಾರ್ವರ್ಡ್ ಆಗುತ್ತಿದೆ. ಆದಾಗ್ಯೂ,ಈ ವಾಟ್ಸಾಪ್  ಸಂದೇಶ ಸುಳ್ಳು ಎಂದು ಪಿಐಬಿ ಫ್ಯಾಕ್ಟ್ ಚೆಕ್ (Fact Check) ಮಾಡಿದೆ.

ವೈರಲ್ ಸಂದೇಶದಲ್ಲೇನಿದೆ?

ಹಿಂದಿಯಲ್ಲಿ ಬರೆದಿರುವ ಈ ಸಂದೇಶದಲ್ಲಿ ಗುಪ್ತಚರ ಮಾಹಿತಿ ಪ್ರಕಾರ, ಪಾಕಿಸ್ತಾನಕ್ಕೆ ನೇರವಾಗಿ ಭಾರತದ ಮೇಲೆ ದಾಳಿ ಮಾಡಲು ಸಾಧ್ಯವಿಲ್ಲದ ಕಾರಣ, ಅದು ಭಾರತದ ಮೇಲೆ ಸೇಡು ತೀರಿಸಿಕೊಳ್ಳಲು ಒತ್ತಾಯಿಸಿದೆ. ಭಾರತದಲ್ಲಿ ಅಸ್ತಮಾ ಹರಡಲು ಕಾರ್ಬನ್ ಮಾನಾಕ್ಸೈಡ್ ಅನಿಲಕ್ಕಿಂತ ಹೆಚ್ಚು ವಿಷಕಾರಿ ಪಟಾಕಿಗಳನ್ನು ಚೀನಾ ತಯಾರಿಸಿದೆ. ಇದಲ್ಲದೆ, ಕಣ್ಣಿನ ಕಾಯಿಲೆಗಳು ಹರಡುವುದಕ್ಕಾಗಿ ಭಾರತದಲ್ಲಿ ವಿಶೇಷ ಬೆಳಕಿನ ಅಲಂಕಾರಿಕ ದೀಪಗಳನ್ನೂ ತಯಾರಿಸಲಾಗಿದೆ. ಇದು ಅಂಧತೆ ಉಂಟುಮಾಡುತ್ತದೆ. ಇದರಲ್ಲಿ ಪಾದರಸದ ಬಳಕೆ ಬಹಳಷ್ಟಿದೆ, ದಯವಿಟ್ಟು ಈ ದೀಪಾವಳಿಯಲ್ಲಿ ಜಾಗರೂಕರಾಗಿರಿ ಮತ್ತು ಈ ಚೈನೀಸ್ ಉತ್ಪನ್ನಗಳನ್ನು ಬಳಸಬೇಡಿ. ದಯವಿಟ್ಟು ಈ ಸಂದೇಶವನ್ನು ಎಲ್ಲಾ ಭಾರತೀಯರಿಗೆ ತಲುಪಿಸಿ. ಸಂದೇಶವನ್ನು ಸ್ವೀಕರಿಸಿದ ನಂತರ, ಅದನ್ನು ನಿಮ್ಮ ಎಲ್ಲಾ ಗುಂಪುಗಳು, ಸ್ನೇಹಿತರು ಮತ್ತು ಸಂಬಂಧಿಕರೊಂದಿಗೆ ಹಂಚಿಕೊಳ್ಳಿ . ಈ ದೀಪಾವಳಿಯಲ್ಲಿ ಚೀನಾದ ಪಟಾಕಿ ಖರೀದಿಸಬೇಡಿ.

ಫ್ಯಾಕ್ಟ್ ಚೆಕ್

ಗೃಹ ಸಚಿವಾಲಯದ ಅಧಿಕಾರಿ ಹೇಳಿದ್ದಾರೆ ಎಂದು ವಾಟ್ಸಾಪ್‌ನಲ್ಲಿ ವೈರಲ್ ಆಗುತ್ತಿರುವ ಈ ಸಂದೇಶವನ್ನು ಪಿಐಬಿ ಫ್ಯಾಕ್ಟ್ ಚೆಕ್ ಮಾಡಿದೆ. ಪಿಐಬಿ ಫ್ಯಾಕ್ಟ್ ಚೆಕ್‌ನ ಈ ಬಗ್ಗೆ ಟ್ವೀಟ್ ಮಾಡಿದ್ದು ಈ ವೈರಲ್ ಸಂದೇಶವು ನಕಲಿ ಎಂದಿದೆ. ಭಾರತದಲ್ಲಿ ಚೀನಾ ಅಸ್ತಮಾವನ್ನು ಹರಡಲು ಮತ್ತು ಕಣ್ಣಿನ ಕಾಯಿಲೆಗಳನ್ನು ಉಂಟುಮಾಡಲು ವಿಶೇಷ ರೀತಿಯ ಪಟಾಕಿ ಮತ್ತು ಅಲಂಕಾರ ದೀಪಗಳನ್ನು ಮಾರುಕಟ್ಟೆಗೆ ತಂದಿದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಗೃಹ ಸಚಿವಾಲಯವು ಅಂತಹ ಯಾವುದೇ ಮಾಹಿತಿಯನ್ನು ನೀಡಿಲ್ಲ ಎಂದು ಪಿಐಬಿ ಹೇಳಿದೆ.

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್