AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check ಪಾಕ್ ಸಂಚಿನ ಭಾಗವಾಗಿ ಭಾರತದಲ್ಲಿ ರೋಗ ಉಂಟುಮಾಡಲು ಅಪಾಯಕಾರಿ ಪಟಾಕಿಗಳನ್ನು ತಯಾರಿಸಿದೆಯೇ ಚೀನಾ?

ಪಾಕಿಸ್ತಾನಕ್ಕೆ ನೇರವಾಗಿ ಭಾರತದ ಮೇಲೆ ದಾಳಿ ಮಾಡಲು ಸಾಧ್ಯವಿಲ್ಲದ ಕಾರಣ, ಅದು ಭಾರತದ ಮೇಲೆ ಸೇಡು ತೀರಿಸಿಕೊಳ್ಳಲು ಒತ್ತಾಯಿಸಿದೆ. ಭಾರತದಲ್ಲಿ ಅಸ್ತಮಾ ಹರಡಲು ಕಾರ್ಬನ್ ಮಾನಾಕ್ಸೈಡ್ ಅನಿಲಕ್ಕಿಂತ ಹೆಚ್ಚು ವಿಷಕಾರಿ ಪಟಾಕಿಗಳನ್ನು ಚೀನಾ ತಯಾರಿಸಿದೆ...

Fact Check ಪಾಕ್ ಸಂಚಿನ ಭಾಗವಾಗಿ ಭಾರತದಲ್ಲಿ ರೋಗ ಉಂಟುಮಾಡಲು ಅಪಾಯಕಾರಿ ಪಟಾಕಿಗಳನ್ನು ತಯಾರಿಸಿದೆಯೇ ಚೀನಾ?
ವಾಟ್ಸಾಪ್ ಸಂದೇಶ
TV9 Web
| Edited By: |

Updated on: Oct 17, 2022 | 9:30 AM

Share

ದೀಪಾವಳಿ ಹಬ್ಬ (Deepavali) ಹತ್ತಿರಬರುತ್ತಿದ್ದಂತೆ ಇದಕ್ಕೆ ಸಂಬಂಧಿಸಿದ ಸಂದೇಶಗಳು ವಾಟ್ಸಾಪ್​​ನಲ್ಲಿ(WhatsApp) ಹರಿದಾಡುತ್ತಿವೆ. ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್‌ನಲ್ಲಿ ಸಂದೇಶವೊಂದು ವೈರಲ್ ಆಗುತ್ತಿದ್ದು ಈ ಸಂದೇಶದಲ್ಲಿ ಗೃಹ ಸಚಿವಾಲಯದ ಅಧಿಕಾರಿಯೊಬ್ಬರ ಹೆಸರನ್ನೂ ಬರೆಯಲಾಗಿದೆ. ಈ ಸಂದೇಶದಲ್ಲಿ ಪಾಕಿಸ್ತಾನವು ನೇರವಾಗಿ ಭಾರತದ ಮೇಲೆ ದಾಳಿ ಮಾಡಲು ಸಾಧ್ಯವಿಲ್ಲದ ಕಾರಣ ಚೀನಾ ಮೂಲಕ ಅದು ಸಂಚು ರೂಪಿಸುತ್ತಿದೆ. ಹಾಗಾಗಿ ಈ ಬಾರಿಯ ದೀಪಾವಳಿಗೆ ಚೀನಾದ ವಸ್ತುಗಳನ್ನು ಬಳಸಬೇಡಿ. ಚೀನಾವು ಭಾರತದಲ್ಲಿ ಅಸ್ತಮಾ ಹರಡಲು ಮತ್ತು ಕಣ್ಣಿನ ಕಾಯಿಲೆಗಳನ್ನು ಉಂಟುಮಾಡಲು ವಿವಿಧ ರೀತಿಯ ಪಟಾಕಿಗಳು ಮತ್ತು ಅಲಂಕಾರಗಳಲ್ಲಿ ಬಳಸುವ ದೀಪಗಳನ್ನು ಕಳುಹಿಸುತ್ತಿದೆ. ಈ ಸಂದೇಶವನ್ನು ಎಲ್ಲ ಭಾರತೀಯರಿಗೂ ತಲುಪಿಸಿ ಎಂದು ಈ ಮೆಸೇಜ್ ವಾಟ್ಸಾಪ್ ನಲ್ಲಿ ಫಾರ್ವರ್ಡ್ ಆಗುತ್ತಿದೆ. ಆದಾಗ್ಯೂ,ಈ ವಾಟ್ಸಾಪ್  ಸಂದೇಶ ಸುಳ್ಳು ಎಂದು ಪಿಐಬಿ ಫ್ಯಾಕ್ಟ್ ಚೆಕ್ (Fact Check) ಮಾಡಿದೆ.

ವೈರಲ್ ಸಂದೇಶದಲ್ಲೇನಿದೆ?

ಹಿಂದಿಯಲ್ಲಿ ಬರೆದಿರುವ ಈ ಸಂದೇಶದಲ್ಲಿ ಗುಪ್ತಚರ ಮಾಹಿತಿ ಪ್ರಕಾರ, ಪಾಕಿಸ್ತಾನಕ್ಕೆ ನೇರವಾಗಿ ಭಾರತದ ಮೇಲೆ ದಾಳಿ ಮಾಡಲು ಸಾಧ್ಯವಿಲ್ಲದ ಕಾರಣ, ಅದು ಭಾರತದ ಮೇಲೆ ಸೇಡು ತೀರಿಸಿಕೊಳ್ಳಲು ಒತ್ತಾಯಿಸಿದೆ. ಭಾರತದಲ್ಲಿ ಅಸ್ತಮಾ ಹರಡಲು ಕಾರ್ಬನ್ ಮಾನಾಕ್ಸೈಡ್ ಅನಿಲಕ್ಕಿಂತ ಹೆಚ್ಚು ವಿಷಕಾರಿ ಪಟಾಕಿಗಳನ್ನು ಚೀನಾ ತಯಾರಿಸಿದೆ. ಇದಲ್ಲದೆ, ಕಣ್ಣಿನ ಕಾಯಿಲೆಗಳು ಹರಡುವುದಕ್ಕಾಗಿ ಭಾರತದಲ್ಲಿ ವಿಶೇಷ ಬೆಳಕಿನ ಅಲಂಕಾರಿಕ ದೀಪಗಳನ್ನೂ ತಯಾರಿಸಲಾಗಿದೆ. ಇದು ಅಂಧತೆ ಉಂಟುಮಾಡುತ್ತದೆ. ಇದರಲ್ಲಿ ಪಾದರಸದ ಬಳಕೆ ಬಹಳಷ್ಟಿದೆ, ದಯವಿಟ್ಟು ಈ ದೀಪಾವಳಿಯಲ್ಲಿ ಜಾಗರೂಕರಾಗಿರಿ ಮತ್ತು ಈ ಚೈನೀಸ್ ಉತ್ಪನ್ನಗಳನ್ನು ಬಳಸಬೇಡಿ. ದಯವಿಟ್ಟು ಈ ಸಂದೇಶವನ್ನು ಎಲ್ಲಾ ಭಾರತೀಯರಿಗೆ ತಲುಪಿಸಿ. ಸಂದೇಶವನ್ನು ಸ್ವೀಕರಿಸಿದ ನಂತರ, ಅದನ್ನು ನಿಮ್ಮ ಎಲ್ಲಾ ಗುಂಪುಗಳು, ಸ್ನೇಹಿತರು ಮತ್ತು ಸಂಬಂಧಿಕರೊಂದಿಗೆ ಹಂಚಿಕೊಳ್ಳಿ . ಈ ದೀಪಾವಳಿಯಲ್ಲಿ ಚೀನಾದ ಪಟಾಕಿ ಖರೀದಿಸಬೇಡಿ.

ಫ್ಯಾಕ್ಟ್ ಚೆಕ್

ಗೃಹ ಸಚಿವಾಲಯದ ಅಧಿಕಾರಿ ಹೇಳಿದ್ದಾರೆ ಎಂದು ವಾಟ್ಸಾಪ್‌ನಲ್ಲಿ ವೈರಲ್ ಆಗುತ್ತಿರುವ ಈ ಸಂದೇಶವನ್ನು ಪಿಐಬಿ ಫ್ಯಾಕ್ಟ್ ಚೆಕ್ ಮಾಡಿದೆ. ಪಿಐಬಿ ಫ್ಯಾಕ್ಟ್ ಚೆಕ್‌ನ ಈ ಬಗ್ಗೆ ಟ್ವೀಟ್ ಮಾಡಿದ್ದು ಈ ವೈರಲ್ ಸಂದೇಶವು ನಕಲಿ ಎಂದಿದೆ. ಭಾರತದಲ್ಲಿ ಚೀನಾ ಅಸ್ತಮಾವನ್ನು ಹರಡಲು ಮತ್ತು ಕಣ್ಣಿನ ಕಾಯಿಲೆಗಳನ್ನು ಉಂಟುಮಾಡಲು ವಿಶೇಷ ರೀತಿಯ ಪಟಾಕಿ ಮತ್ತು ಅಲಂಕಾರ ದೀಪಗಳನ್ನು ಮಾರುಕಟ್ಟೆಗೆ ತಂದಿದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಗೃಹ ಸಚಿವಾಲಯವು ಅಂತಹ ಯಾವುದೇ ಮಾಹಿತಿಯನ್ನು ನೀಡಿಲ್ಲ ಎಂದು ಪಿಐಬಿ ಹೇಳಿದೆ.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?