AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಜೊತೆಯಾಗಿ ಕುಳಿತು ಊಟ ಮಾಡಿದ ಮೋದಿ -ಕೇಜ್ರಿವಾಲ್?: ವೈರಲ್ ಫೋಟೋದ ಸತ್ಯಾಂಶ ಇಲ್ಲಿದೆ

ಫೇಸ್‌ಬುಕ್‌ನಲ್ಲಿ ವೈರಲ್ ಆಗುತ್ತಿರುವ ಈ ಚಿತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಊಟದ ಮೇಜಿನ ಬಳಿ ಒಟ್ಟಿಗೆ ಕುಳಿತಿದ್ದಾರೆ. ಇಬ್ಬರ ಮುಖದಲ್ಲೂ ನಗುವಿದ್ದು, ಪ್ರಧಾನಿ ಮೋದಿ ಮತ್ತು ಕೇಜ್ರಿವಾಲ್ ಒಟ್ಟಿಗೆ ಕುಳಿತು ಊಟ ಮಾಡುತ್ತಿರುವಂತೆ ಫೋಟೋವನ್ನು ಪ್ರಸ್ತುತಪಡಿಸಲಾಗಿದೆ. ಈ ವೈರಲ್ ಸುದ್ದಿಯ ಸತ್ಯಾಂಶ ಏನು?, ಇಲ್ಲಿದೆ ನೋಡಿ ಮಾಹಿತಿ

Fact Check: ಜೊತೆಯಾಗಿ ಕುಳಿತು ಊಟ ಮಾಡಿದ ಮೋದಿ -ಕೇಜ್ರಿವಾಲ್?: ವೈರಲ್ ಫೋಟೋದ ಸತ್ಯಾಂಶ ಇಲ್ಲಿದೆ
Narendra Modi And Kejriwal Fact Check
ಪ್ರೀತಿ ಭಟ್​, ಗುಣವಂತೆ
| Edited By: |

Updated on: Feb 17, 2025 | 5:07 PM

Share

ದೆಹಲಿ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಬಿಜೆಪಿ ಬಹುಮತ ಪಡೆದ ನಂತರ, ಎಲ್ಲರ ಕಣ್ಣುಗಳು ಈಗ ರಾಷ್ಟ್ರ ರಾಜಧಾನಿಯ ಮುಖ್ಯಮಂತ್ರಿ ಹೆಸರಿನ ಮೇಲೆ ನೆಟ್ಟಿವೆ. ಚುನಾವಣೆಯಲ್ಲಿ ಬಿಜೆಪಿ 48 ಸ್ಥಾನಗಳನ್ನು ಗೆದ್ದುಕೊಂಡಿತು, ಆಮ್ ಆದ್ಮಿ ಪಕ್ಷ ತನ್ನ 10 ವರ್ಷಗಳ ಆಳ್ವಿಕೆಯನ್ನು ಕೊನೆಗೊಳಿಸಿತು. ಆಮ್ ಆದ್ಮಿ ಪಕ್ಷ 22 ಸ್ಥಾನಗಳನ್ನು ಗಳಿಸಿತಷ್ಟೆ. ಅದೇ ಸಮಯದಲ್ಲಿ, ಈ ಬಾರಿಯೂ ಕಾಂಗ್ರೆಸ್ ದೆಹಲಿ ವಿಧಾನಸಭೆಯಲ್ಲಿ ತನ್ನ ಖಾತೆಯನ್ನು ತೆರೆದಿಲ್ಲ. ಏತನ್ಮಧ್ಯೆ, ಸಾಮಾಜಿಕ ಮಾಧ್ಯಮದಲ್ಲಿ ಒಂದು ಫೋಟೋ ಹಂಚಿಕೊಳ್ಳಲಾಗಿದ್ದು, ಇದರಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಒಟ್ಟಿಗೆ ಕುಳಿತಿರುವುದು ಕಂಡುಬರುತ್ತದೆ.

ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿರುವ ಈ ಚಿತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅರವಿಂದ್ ಕೇಜ್ರಿವಾಲ್ ಊಟದ ಮೇಜಿನ ಬಳಿ ಒಟ್ಟಿಗೆ ಕುಳಿತಿದ್ದಾರೆ. ಇಬ್ಬರ ಮುಖದಲ್ಲೂ ನಗುವಿದ್ದು, ಪ್ರಧಾನಿ ಮೋದಿ ಮತ್ತು ಕೇಜ್ರಿವಾಲ್ ಒಟ್ಟಿಗೆ ಕುಳಿತು ಊಟ ಮಾಡುತ್ತಿರುವಂತೆ ಫೋಟೋವನ್ನು ಪ್ರಸ್ತುತಪಡಿಸಲಾಗಿದೆ.

ವೈರಲ್ ಆಗುತ್ತಿರುವುದೇನು?:

ಫೇಸ್​ಬುಕ್ ಬಳಕೆದಾರರೊಬ್ಬರು ಈ ಫೋಟೋವನ್ನು ಹಂಚಿಕೊಂಡು, ‘‘ಪ್ರಧಾನಿ ನರೇಂದ್ರ ಮೋದಿ ಮತ್ತು ಅರವಿಂದ್ ಕೇಜ್ರಿವಾಲ್ ನೈಟ್ ಡಿನ್ನರ್’’ ಎಂದು ಬರೆದುಕೊಂಡಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಕೆಲವು ಹ್ಯಾಶ್‌ಟ್ಯಾಗ್‌ಗಳನ್ನು ಸಹ ಈ ಪೋಸ್ಟ್‌ನಲ್ಲಿ ಬಳಸಲಾಗಿದೆ.

Fact Check:

ಈ ಸುದ್ದಿಯ ಸತ್ಯಾಸತ್ಯತೆಯನ್ನು ಟಿವಿ9 ಕನ್ನಡ ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ಈ ಫೋಟೋ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ಈ ಫೋಟೋವನ್ನು ಫೆಬ್ರವರಿ 8 ರ ರಾತ್ರಿ ಫೇಸ್‌ಬುಕ್‌ನಲ್ಲಿ ಹಂಚಿಕೊಳ್ಳಲಾಗಿದೆ. ದೆಹಲಿ ಚುನಾವಣೆಗೆ ಸಂಬಂಧಿಸಿದ ಕೀವರ್ಡ್‌ಗಳನ್ನು ಗೂಗಲ್‌ನಲ್ಲಿ ಹುಡುಕಿದಾಗ, ಫೆಬ್ರವರಿ 8 ರಂದು ಚುನಾವಣಾ ಫಲಿತಾಂಶಗಳು ಪ್ರಕಟವಾದ ನಂತರ, ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು ಎಂದು ನಮಗೆ ತಿಳಿದುಬಂದಿತು.

Fact Check: ದುಬೈನ ಬುರ್ಜ್ ಖಲೀಫಾಗೆ ಬೆಂಕಿ?: ಹೊತ್ತಿ ಉರಿಯುತ್ತಿರುವ ವಿಡಿಯೋ ವೈರಲ್

ಆ ದಿನ ಪ್ರಧಾನಿ ಮೋದಿ ಯಾವುದೇ ವಿರೋಧ ಪಕ್ಷ ಅಥವಾ ನಾಯಕರೊಂದಿಗೆ ಭೋಜನ ಕಾರ್ಯಕ್ರಮ ನಡೆಸಲಿಲ್ಲ. ಅದರಲ್ಲೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಜೊತೆಗೆ ಮೋದಿ ಊಟ ಮಾಡಿದ್ದರು ಎಂದಿದ್ದರೆ ಅದು ದೊದ್ಡ ಸುದ್ದಿ ಆಗಿರುತ್ತಿತ್ತು. ಅಂತಹ ಯಾವುದೇ ಸುದ್ದಿ ಕೂಡ ನಮಗೆ ಕಂಡುಬಂದಿಲ್ಲ. ಅಂತಹ ಪರಿಸ್ಥಿತಿಯಲ್ಲಿ, ಹೆಚ್ಚಿನ ತನಿಖೆಗಾಗಿ, ನಾವು AI ಪರಿಕರಗಳ ಸಹಾಯದಿಂದ ಈ ವೈರಲ್ ಫೋಟೋವನ್ನು ಪರಿಶೀಲಿಸಿದ್ದೇವೆ.

D Copy.AI ಮೂಲಕ ಪರಿಶೀಲಿಸಿದಾಗ, ಈ ಫೋಟೋ AI ನಿಂದ ರಚಿತವಾಗಿದೆ ಎಂದು ಕಂಡುಬಂದಿದೆ. ತನಿಖೆಯಲ್ಲಿ, ಈ ಫೋಟೋ 97.25 ಪ್ರತಿಶತ AI ನಿಂದ ಹುಟ್ಟುಕೊಂಡಿದೆ ಎಂದು ಕಂಡುಬಂದಿದೆ. ಈ ಮೂಲಕ ದೆಹಲಿ ಚುನಾವಣಾ ಫಲಿತಾಂಶದ ನಂತರ ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಒಟ್ಟಿಗೆ ಊಟ ಮಾಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ಫೋಟೋ ನಕಲಿ ಎಂದು ನಾವು ಖಚಿತವಾಗಿ ಹೇಳುತ್ತೇವೆ. ನಮ್ಮ ತನಿಖೆಯಲ್ಲಿ ಈ ಫೋಟೋವನ್ನು AI ಮೂಲಕ ರಚಿಸಲಾಗಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ಫ್ಯಾಕ್ಟ್ ಚೆಕ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ