AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಅದಾನಿ ಪತ್ನಿಗೆ ನಮಸ್ಕಾರ ಮಾಡಿದ್ರಾ ಪ್ರಧಾನಿ ನರೇಂದ್ರ ಮೋದಿ?

ಖ್ಯಾತ ಉದ್ಯಮಿ ಅದಾನಿಯವರ ಪತ್ನಿ ಪ್ರೀತಿ ಅದಾನಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ನಮಸ್ಕರಿಸುತ್ತಿದ್ದಾರೆ ಎಂಬ ಒಕ್ಕಣೆಯೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಫೋಟೊದ ಫ್ಯಾಕ್ಟ್​ಚೆಕ್ ಇಲ್ಲಿದೆ.

Fact Check: ಅದಾನಿ ಪತ್ನಿಗೆ ನಮಸ್ಕಾರ ಮಾಡಿದ್ರಾ ಪ್ರಧಾನಿ ನರೇಂದ್ರ ಮೋದಿ?
ವೈರಲ್ ಆಗಿರುವ ಫೋಟೊ
ರಶ್ಮಿ ಕಲ್ಲಕಟ್ಟ
|

Updated on:Jun 07, 2021 | 3:31 PM

Share

ಬೆಂಗಳೂರು: ಮಹಿಳೆಯೊಬ್ಬರಿಗೆ ಪ್ರಧಾನಿ ನರೇಂದ್ರ ಮೋದಿ ನಮಸ್ಕರಿಸುತ್ತಿರುವ ಫೋಟೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಮೋದಿ ನಮಸ್ಕರಿಸುತ್ತಿರುವ ಮಹಿಳೆ ಉದ್ಯಮಿ ಗೌತಮ್ ಅದಾನಿ ಅವರ ಪತ್ನಿ ಪ್ರೀತಿ ಅದಾನಿ ಎಂಬ ವಿವರಣೆಯೊಂದಿಗೆ ಹಲವಾರು ನೆಟ್ಟಿಗರು ಈ ಫೋಟೊ ಶೇರ್ ಮಾಡಿದ್ದಾರೆ.

ಕಿಸಾನ್ ಕಾಂಗ್ರೆಸ್​ನ ರಾಷ್ಟ್ರೀಯ ಉಪಾಧ್ಯಕ್ಷ ಸುರೇಂದರ್ ಸೋಲಂಕಿ ಅವರು ಇದೇ ಫೋಟೊ ಮತ್ತು ನೀತಾ ಅಂಬಾನಿ ಜತೆ ಮೋದಿ ನಗುತ್ತಾ ಮಾತನಾಡುತ್ತಿರುವ ಫೋಟೊವನ್ನು ಶೇರ್ ಮಾಡಿ ಇದು ನಾಚಿಕೆಗೇಡಿನ ಸರ್ಕಾರ. ಚಳಿಯಲ್ಲಿ ರೈತರು ಉಸಿರುಗಟ್ಟುತ್ತಿರುವಾಗ ಮೋದಿ ಶಿರಬಾಗಿ ತಮ್ಮ ಮಾಲಕಿ ಪ್ರೀತಿ ಅದಾನಿ ಮತ್ತು ನೀತಾ ಅಂಬಾನಿಗಾಗಿ ತಟಸ್ಥರಾಗಿದ್ದರು ಎಂದು ಟ್ವೀಟಿಸಿದ್ದಾರೆ.

ಫ್ಯಾಕ್ಟ್ ಚೆಕ್ ಈ ಫೋಟೊವನ್ನು ಆಲ್ಟ್ ನ್ಯೂಸ್ ಫ್ಯಾಕ್ಟ್ ಚೆಕ್ ಮಾಡಿದ್ದು, ಫೋಟೊದಲ್ಲಿರುವ ಮಹಿಳೆ ಅದಾನಿಯವರ ಪತ್ನಿ ಪ್ರೀತಿ ಅದಾನಿ ಅಲ್ಲ ಎಂದು ಹೇಳಿದೆ. ಫೋಟೊದ ಸತ್ಯಾಸತ್ಯತೆ ಅರಿಯಲು TinEyeನಲ್ಲಿ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ 2018ರಲ್ಲಿ ಒನ್ ಇಂಡಿಯಾ ಹಿಂದಿಯಲ್ಲಿ ಪ್ರಕಟವಾಗಿರುವ ಲೇಖನದಲ್ಲಿ ಈ ಫೋಟೊ ಬಳಸಿರುವುದು ಗಮನಕ್ಕೆ ಬಂದಿದೆ.

ಇದು 2015ರಲ್ಲಿ ಕ್ಲಿಕ್ಕಿಸಿದ ಫೋಟೊ. ಫೋಟೊದಲ್ಲಿರುವ ಮಹಿಳೆ ದೀಪಿಕಾ ಮಂಡೋಲ್. ಇವರು ದೆಹಲಿ ಮೂಲದ ಎನ್​ಜಿಒ ದಿವ್ಯಜ್ಯೋತಿ ಕಲ್ಚರಲ್ ಆರ್ಗನೈಸೇಷನ್ ಮತ್ತು ಸೋಷ್ಯಲ್ ವೆಲ್ಫೇರ್ ಸೊಸೈಟಿಯ (DCOWS) ಸಿಎಫ್ಒ ಆಗಿದ್ದಾರೆ. 2018ರಲ್ಲಿ ಅಮರ್ ಉಜಾಲಾದಲ್ಲಿಯೂ ಇದೇ ಫೋಟೊ ಪ್ರಕಟವಾಗಿತ್ತು.

Fact Check | ಭಾರತೀಯ ರೈಲ್ವೆಯನ್ನು ಅದಾನಿ ಖರೀದಿಸಿದ್ದಾರೆ ಎಂಬ ವೈರಲ್ ವಿಡಿಯೊ ಹಿಂದಿನ ಮರ್ಮವೇನು?

Published On - 7:54 pm, Fri, 18 December 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ