AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಅದಾನಿ ಪತ್ನಿಗೆ ನಮಸ್ಕಾರ ಮಾಡಿದ್ರಾ ಪ್ರಧಾನಿ ನರೇಂದ್ರ ಮೋದಿ?

ಖ್ಯಾತ ಉದ್ಯಮಿ ಅದಾನಿಯವರ ಪತ್ನಿ ಪ್ರೀತಿ ಅದಾನಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ನಮಸ್ಕರಿಸುತ್ತಿದ್ದಾರೆ ಎಂಬ ಒಕ್ಕಣೆಯೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಫೋಟೊದ ಫ್ಯಾಕ್ಟ್​ಚೆಕ್ ಇಲ್ಲಿದೆ.

Fact Check: ಅದಾನಿ ಪತ್ನಿಗೆ ನಮಸ್ಕಾರ ಮಾಡಿದ್ರಾ ಪ್ರಧಾನಿ ನರೇಂದ್ರ ಮೋದಿ?
ವೈರಲ್ ಆಗಿರುವ ಫೋಟೊ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jun 07, 2021 | 3:31 PM

Share

ಬೆಂಗಳೂರು: ಮಹಿಳೆಯೊಬ್ಬರಿಗೆ ಪ್ರಧಾನಿ ನರೇಂದ್ರ ಮೋದಿ ನಮಸ್ಕರಿಸುತ್ತಿರುವ ಫೋಟೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಮೋದಿ ನಮಸ್ಕರಿಸುತ್ತಿರುವ ಮಹಿಳೆ ಉದ್ಯಮಿ ಗೌತಮ್ ಅದಾನಿ ಅವರ ಪತ್ನಿ ಪ್ರೀತಿ ಅದಾನಿ ಎಂಬ ವಿವರಣೆಯೊಂದಿಗೆ ಹಲವಾರು ನೆಟ್ಟಿಗರು ಈ ಫೋಟೊ ಶೇರ್ ಮಾಡಿದ್ದಾರೆ.

ಕಿಸಾನ್ ಕಾಂಗ್ರೆಸ್​ನ ರಾಷ್ಟ್ರೀಯ ಉಪಾಧ್ಯಕ್ಷ ಸುರೇಂದರ್ ಸೋಲಂಕಿ ಅವರು ಇದೇ ಫೋಟೊ ಮತ್ತು ನೀತಾ ಅಂಬಾನಿ ಜತೆ ಮೋದಿ ನಗುತ್ತಾ ಮಾತನಾಡುತ್ತಿರುವ ಫೋಟೊವನ್ನು ಶೇರ್ ಮಾಡಿ ಇದು ನಾಚಿಕೆಗೇಡಿನ ಸರ್ಕಾರ. ಚಳಿಯಲ್ಲಿ ರೈತರು ಉಸಿರುಗಟ್ಟುತ್ತಿರುವಾಗ ಮೋದಿ ಶಿರಬಾಗಿ ತಮ್ಮ ಮಾಲಕಿ ಪ್ರೀತಿ ಅದಾನಿ ಮತ್ತು ನೀತಾ ಅಂಬಾನಿಗಾಗಿ ತಟಸ್ಥರಾಗಿದ್ದರು ಎಂದು ಟ್ವೀಟಿಸಿದ್ದಾರೆ.

ಫ್ಯಾಕ್ಟ್ ಚೆಕ್ ಈ ಫೋಟೊವನ್ನು ಆಲ್ಟ್ ನ್ಯೂಸ್ ಫ್ಯಾಕ್ಟ್ ಚೆಕ್ ಮಾಡಿದ್ದು, ಫೋಟೊದಲ್ಲಿರುವ ಮಹಿಳೆ ಅದಾನಿಯವರ ಪತ್ನಿ ಪ್ರೀತಿ ಅದಾನಿ ಅಲ್ಲ ಎಂದು ಹೇಳಿದೆ. ಫೋಟೊದ ಸತ್ಯಾಸತ್ಯತೆ ಅರಿಯಲು TinEyeನಲ್ಲಿ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ 2018ರಲ್ಲಿ ಒನ್ ಇಂಡಿಯಾ ಹಿಂದಿಯಲ್ಲಿ ಪ್ರಕಟವಾಗಿರುವ ಲೇಖನದಲ್ಲಿ ಈ ಫೋಟೊ ಬಳಸಿರುವುದು ಗಮನಕ್ಕೆ ಬಂದಿದೆ.

ಇದು 2015ರಲ್ಲಿ ಕ್ಲಿಕ್ಕಿಸಿದ ಫೋಟೊ. ಫೋಟೊದಲ್ಲಿರುವ ಮಹಿಳೆ ದೀಪಿಕಾ ಮಂಡೋಲ್. ಇವರು ದೆಹಲಿ ಮೂಲದ ಎನ್​ಜಿಒ ದಿವ್ಯಜ್ಯೋತಿ ಕಲ್ಚರಲ್ ಆರ್ಗನೈಸೇಷನ್ ಮತ್ತು ಸೋಷ್ಯಲ್ ವೆಲ್ಫೇರ್ ಸೊಸೈಟಿಯ (DCOWS) ಸಿಎಫ್ಒ ಆಗಿದ್ದಾರೆ. 2018ರಲ್ಲಿ ಅಮರ್ ಉಜಾಲಾದಲ್ಲಿಯೂ ಇದೇ ಫೋಟೊ ಪ್ರಕಟವಾಗಿತ್ತು.

Fact Check | ಭಾರತೀಯ ರೈಲ್ವೆಯನ್ನು ಅದಾನಿ ಖರೀದಿಸಿದ್ದಾರೆ ಎಂಬ ವೈರಲ್ ವಿಡಿಯೊ ಹಿಂದಿನ ಮರ್ಮವೇನು?

Published On - 7:54 pm, Fri, 18 December 20

Follow Us
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
BJP ಶಾಸಕ ಬಿ.ಪಿ. ಹರೀಶ್ ಮೇಲೆ ಮೊಟ್ಟೆ ಎಸೆತ ಕೇಸ್​​: ಆರೋಪಿ ಬಂಧನ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
ಬಾಗಲಕೋಟೆ ಬೇಕರಿ ತಪಾಸಣೆ ನಡೆಸಿ ಉಪಲೋಕಾಯುಕ್ತರ ಎಚ್ಚರಿಕೆ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
‘ನನಗೆ 2 ಸೆಕೆಂಡ್ ಸಾಕು ಕಾಂಗ್ರೆಸ್ಸನ್ನು ಸೋಲಿಸಲು’: ಇಕ್ಬಾಲ್ ಅನ್ಸಾರಿ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?