Fact Check: ಅದಾನಿ ಪತ್ನಿಗೆ ನಮಸ್ಕಾರ ಮಾಡಿದ್ರಾ ಪ್ರಧಾನಿ ನರೇಂದ್ರ ಮೋದಿ?

ಖ್ಯಾತ ಉದ್ಯಮಿ ಅದಾನಿಯವರ ಪತ್ನಿ ಪ್ರೀತಿ ಅದಾನಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ನಮಸ್ಕರಿಸುತ್ತಿದ್ದಾರೆ ಎಂಬ ಒಕ್ಕಣೆಯೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಫೋಟೊದ ಫ್ಯಾಕ್ಟ್​ಚೆಕ್ ಇಲ್ಲಿದೆ.

Fact Check: ಅದಾನಿ ಪತ್ನಿಗೆ ನಮಸ್ಕಾರ ಮಾಡಿದ್ರಾ ಪ್ರಧಾನಿ ನರೇಂದ್ರ ಮೋದಿ?
ವೈರಲ್ ಆಗಿರುವ ಫೋಟೊ
Follow us
|

Updated on:Jun 07, 2021 | 3:31 PM

ಬೆಂಗಳೂರು: ಮಹಿಳೆಯೊಬ್ಬರಿಗೆ ಪ್ರಧಾನಿ ನರೇಂದ್ರ ಮೋದಿ ನಮಸ್ಕರಿಸುತ್ತಿರುವ ಫೋಟೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಮೋದಿ ನಮಸ್ಕರಿಸುತ್ತಿರುವ ಮಹಿಳೆ ಉದ್ಯಮಿ ಗೌತಮ್ ಅದಾನಿ ಅವರ ಪತ್ನಿ ಪ್ರೀತಿ ಅದಾನಿ ಎಂಬ ವಿವರಣೆಯೊಂದಿಗೆ ಹಲವಾರು ನೆಟ್ಟಿಗರು ಈ ಫೋಟೊ ಶೇರ್ ಮಾಡಿದ್ದಾರೆ.

ಕಿಸಾನ್ ಕಾಂಗ್ರೆಸ್​ನ ರಾಷ್ಟ್ರೀಯ ಉಪಾಧ್ಯಕ್ಷ ಸುರೇಂದರ್ ಸೋಲಂಕಿ ಅವರು ಇದೇ ಫೋಟೊ ಮತ್ತು ನೀತಾ ಅಂಬಾನಿ ಜತೆ ಮೋದಿ ನಗುತ್ತಾ ಮಾತನಾಡುತ್ತಿರುವ ಫೋಟೊವನ್ನು ಶೇರ್ ಮಾಡಿ ಇದು ನಾಚಿಕೆಗೇಡಿನ ಸರ್ಕಾರ. ಚಳಿಯಲ್ಲಿ ರೈತರು ಉಸಿರುಗಟ್ಟುತ್ತಿರುವಾಗ ಮೋದಿ ಶಿರಬಾಗಿ ತಮ್ಮ ಮಾಲಕಿ ಪ್ರೀತಿ ಅದಾನಿ ಮತ್ತು ನೀತಾ ಅಂಬಾನಿಗಾಗಿ ತಟಸ್ಥರಾಗಿದ್ದರು ಎಂದು ಟ್ವೀಟಿಸಿದ್ದಾರೆ.

ಫ್ಯಾಕ್ಟ್ ಚೆಕ್ ಈ ಫೋಟೊವನ್ನು ಆಲ್ಟ್ ನ್ಯೂಸ್ ಫ್ಯಾಕ್ಟ್ ಚೆಕ್ ಮಾಡಿದ್ದು, ಫೋಟೊದಲ್ಲಿರುವ ಮಹಿಳೆ ಅದಾನಿಯವರ ಪತ್ನಿ ಪ್ರೀತಿ ಅದಾನಿ ಅಲ್ಲ ಎಂದು ಹೇಳಿದೆ. ಫೋಟೊದ ಸತ್ಯಾಸತ್ಯತೆ ಅರಿಯಲು TinEyeನಲ್ಲಿ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ 2018ರಲ್ಲಿ ಒನ್ ಇಂಡಿಯಾ ಹಿಂದಿಯಲ್ಲಿ ಪ್ರಕಟವಾಗಿರುವ ಲೇಖನದಲ್ಲಿ ಈ ಫೋಟೊ ಬಳಸಿರುವುದು ಗಮನಕ್ಕೆ ಬಂದಿದೆ.

ಇದು 2015ರಲ್ಲಿ ಕ್ಲಿಕ್ಕಿಸಿದ ಫೋಟೊ. ಫೋಟೊದಲ್ಲಿರುವ ಮಹಿಳೆ ದೀಪಿಕಾ ಮಂಡೋಲ್. ಇವರು ದೆಹಲಿ ಮೂಲದ ಎನ್​ಜಿಒ ದಿವ್ಯಜ್ಯೋತಿ ಕಲ್ಚರಲ್ ಆರ್ಗನೈಸೇಷನ್ ಮತ್ತು ಸೋಷ್ಯಲ್ ವೆಲ್ಫೇರ್ ಸೊಸೈಟಿಯ (DCOWS) ಸಿಎಫ್ಒ ಆಗಿದ್ದಾರೆ. 2018ರಲ್ಲಿ ಅಮರ್ ಉಜಾಲಾದಲ್ಲಿಯೂ ಇದೇ ಫೋಟೊ ಪ್ರಕಟವಾಗಿತ್ತು.

Fact Check | ಭಾರತೀಯ ರೈಲ್ವೆಯನ್ನು ಅದಾನಿ ಖರೀದಿಸಿದ್ದಾರೆ ಎಂಬ ವೈರಲ್ ವಿಡಿಯೊ ಹಿಂದಿನ ಮರ್ಮವೇನು?

Published On - 7:54 pm, Fri, 18 December 20

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು