AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಅದಾನಿ ಪತ್ನಿಗೆ ನಮಸ್ಕಾರ ಮಾಡಿದ್ರಾ ಪ್ರಧಾನಿ ನರೇಂದ್ರ ಮೋದಿ?

ಖ್ಯಾತ ಉದ್ಯಮಿ ಅದಾನಿಯವರ ಪತ್ನಿ ಪ್ರೀತಿ ಅದಾನಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ನಮಸ್ಕರಿಸುತ್ತಿದ್ದಾರೆ ಎಂಬ ಒಕ್ಕಣೆಯೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಫೋಟೊದ ಫ್ಯಾಕ್ಟ್​ಚೆಕ್ ಇಲ್ಲಿದೆ.

Fact Check: ಅದಾನಿ ಪತ್ನಿಗೆ ನಮಸ್ಕಾರ ಮಾಡಿದ್ರಾ ಪ್ರಧಾನಿ ನರೇಂದ್ರ ಮೋದಿ?
ವೈರಲ್ ಆಗಿರುವ ಫೋಟೊ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jun 07, 2021 | 3:31 PM

Share

ಬೆಂಗಳೂರು: ಮಹಿಳೆಯೊಬ್ಬರಿಗೆ ಪ್ರಧಾನಿ ನರೇಂದ್ರ ಮೋದಿ ನಮಸ್ಕರಿಸುತ್ತಿರುವ ಫೋಟೊ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಮೋದಿ ನಮಸ್ಕರಿಸುತ್ತಿರುವ ಮಹಿಳೆ ಉದ್ಯಮಿ ಗೌತಮ್ ಅದಾನಿ ಅವರ ಪತ್ನಿ ಪ್ರೀತಿ ಅದಾನಿ ಎಂಬ ವಿವರಣೆಯೊಂದಿಗೆ ಹಲವಾರು ನೆಟ್ಟಿಗರು ಈ ಫೋಟೊ ಶೇರ್ ಮಾಡಿದ್ದಾರೆ.

ಕಿಸಾನ್ ಕಾಂಗ್ರೆಸ್​ನ ರಾಷ್ಟ್ರೀಯ ಉಪಾಧ್ಯಕ್ಷ ಸುರೇಂದರ್ ಸೋಲಂಕಿ ಅವರು ಇದೇ ಫೋಟೊ ಮತ್ತು ನೀತಾ ಅಂಬಾನಿ ಜತೆ ಮೋದಿ ನಗುತ್ತಾ ಮಾತನಾಡುತ್ತಿರುವ ಫೋಟೊವನ್ನು ಶೇರ್ ಮಾಡಿ ಇದು ನಾಚಿಕೆಗೇಡಿನ ಸರ್ಕಾರ. ಚಳಿಯಲ್ಲಿ ರೈತರು ಉಸಿರುಗಟ್ಟುತ್ತಿರುವಾಗ ಮೋದಿ ಶಿರಬಾಗಿ ತಮ್ಮ ಮಾಲಕಿ ಪ್ರೀತಿ ಅದಾನಿ ಮತ್ತು ನೀತಾ ಅಂಬಾನಿಗಾಗಿ ತಟಸ್ಥರಾಗಿದ್ದರು ಎಂದು ಟ್ವೀಟಿಸಿದ್ದಾರೆ.

ಫ್ಯಾಕ್ಟ್ ಚೆಕ್ ಈ ಫೋಟೊವನ್ನು ಆಲ್ಟ್ ನ್ಯೂಸ್ ಫ್ಯಾಕ್ಟ್ ಚೆಕ್ ಮಾಡಿದ್ದು, ಫೋಟೊದಲ್ಲಿರುವ ಮಹಿಳೆ ಅದಾನಿಯವರ ಪತ್ನಿ ಪ್ರೀತಿ ಅದಾನಿ ಅಲ್ಲ ಎಂದು ಹೇಳಿದೆ. ಫೋಟೊದ ಸತ್ಯಾಸತ್ಯತೆ ಅರಿಯಲು TinEyeನಲ್ಲಿ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ 2018ರಲ್ಲಿ ಒನ್ ಇಂಡಿಯಾ ಹಿಂದಿಯಲ್ಲಿ ಪ್ರಕಟವಾಗಿರುವ ಲೇಖನದಲ್ಲಿ ಈ ಫೋಟೊ ಬಳಸಿರುವುದು ಗಮನಕ್ಕೆ ಬಂದಿದೆ.

ಇದು 2015ರಲ್ಲಿ ಕ್ಲಿಕ್ಕಿಸಿದ ಫೋಟೊ. ಫೋಟೊದಲ್ಲಿರುವ ಮಹಿಳೆ ದೀಪಿಕಾ ಮಂಡೋಲ್. ಇವರು ದೆಹಲಿ ಮೂಲದ ಎನ್​ಜಿಒ ದಿವ್ಯಜ್ಯೋತಿ ಕಲ್ಚರಲ್ ಆರ್ಗನೈಸೇಷನ್ ಮತ್ತು ಸೋಷ್ಯಲ್ ವೆಲ್ಫೇರ್ ಸೊಸೈಟಿಯ (DCOWS) ಸಿಎಫ್ಒ ಆಗಿದ್ದಾರೆ. 2018ರಲ್ಲಿ ಅಮರ್ ಉಜಾಲಾದಲ್ಲಿಯೂ ಇದೇ ಫೋಟೊ ಪ್ರಕಟವಾಗಿತ್ತು.

Fact Check | ಭಾರತೀಯ ರೈಲ್ವೆಯನ್ನು ಅದಾನಿ ಖರೀದಿಸಿದ್ದಾರೆ ಎಂಬ ವೈರಲ್ ವಿಡಿಯೊ ಹಿಂದಿನ ಮರ್ಮವೇನು?

Published On - 7:54 pm, Fri, 18 December 20

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!