AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ವಿಐಪಿಗಳಿಗೆ ವಸತಿ ಕಲ್ಪಿಸಲು ಮರ ಕಡಿಯಲಾಗಿತ್ತೇ?

ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ ರಾಜ್ಯ ಇಲಾಖೆಯ ಅಧಿಕಾರಿಯೊಬ್ಬರು,  ಕುನೋದಲ್ಲಿ ಹೆಲಿಪ್ಯಾಡ್‌ಗಳನ್ನು ನಿರ್ಮಿಸಲು  ಯಾವುದೇ ಮರವನ್ನು ಕಡಿಯಲಾಗಿಲ್ಲ, ಹಾಗೆ ಆಯ್ಕೆ ಮಾಡಿದ ಜಾಗದಲ್ಲಿ  ಮರಗಳಿಲ್ಲ..

Fact Check: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ವಿಐಪಿಗಳಿಗೆ ವಸತಿ ಕಲ್ಪಿಸಲು ಮರ ಕಡಿಯಲಾಗಿತ್ತೇ?
ನರೇಂದ್ರ ಮೋದಿ
TV9 Web
| Edited By: |

Updated on: Sep 27, 2022 | 6:12 PM

Share

ದೆಹಲಿ: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದಿಂದ ತಂದ ಚೀತಾಗಳನ್ನು ಬಿಡುಗಡೆ ಮಾಡುವುದಕ್ಕಾಗಿ 300 ಅತಿಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಬರುವ ಮುನ್ನ ಇಲ್ಲಿ ಮರಗಳನ್ನು ಕಡಿಯಲಾಗಿದೆ ಎಂದು ಹೇಳುವ ಸುದ್ದಿ ಸತ್ಯಕ್ಕೆ ದೂರವಾದುದು ಎಂದು ಪಿಬಿಐ ಫ್ಯಾಕ್ಟ್ ಚೆಕ್ ಮಾಡಿ ಟ್ವೀಟ್ ಮಾಡಿದೆ. ‘ದಿ ಏಷ್ಯನ್ ಏಜ್’ ಪತ್ರಿಕೆಯಲ್ಲಿ ಪ್ರಕಟವಾದ ಲೇಖನದ ಪ್ರಕಾರ, ರಾಷ್ಟ್ರೀಯ ಉದ್ಯಾನವನವು ಕೇವಲ ಒಂದು ಅತಿಥಿಗೃಹವನ್ನು ಹೊಂದಿತ್ತು, ಆದ್ದರಿಂದ ವಿಐಪಿಗಳಿಗೆ ವಸತಿ ಕಲ್ಪಿಸಲು ಟೆಂಟ್‌ಗಳನ್ನು ಸ್ಥಾಪಿಸಲಾಯಿತು. ಇದಕ್ಕಾಗಿ ಸಾಕಷ್ಟು ಸಂಖ್ಯೆಯ ಮರಗಳನ್ನು ಕಡಿಯಲಾಗಿದೆ ಎಂದು ಹೇಳಿತ್ತು. ಆದಾಗ್ಯೂ, ಮಧ್ಯಪ್ರದೇಶದ ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ರಾಷ್ಟ್ರೀಯ ಉದ್ಯಾನದಲ್ಲಿ ಒಂದೇ ಒಂದು ಮರವನ್ನು ಕಡಿಯಲಾಗಿಲ್ಲ ಮತ್ತು ಮಾಧ್ಯಮದ ವರದಿ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.

ಟೆಂಟ್​  ನಿರ್ಮಿಸಲು ಕಡಿಯಲಾದ ಮರಗಳ ಹೊರತಾಗಿ ಮೋದಿಯವರ ಹೆಲಿಕಾಪ್ಟರ್ ಇಳಿಯಲು ಹೆಲಿಪ್ಯಾಡ್ ಮಾಡಲು ಕತ್ತರಿಸಲಾಗಿದೆ ಎಂದು ಪತ್ರಿಕೆಯ ವರದಿಯ ಕೂಡಾ ಸುಳ್ಳು ಎಂದು ಹೇಳಲಾಗಿದೆ.

ಇದಲ್ಲದೆ, ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ ರಾಜ್ಯ ಇಲಾಖೆಯ ಅಧಿಕಾರಿಯೊಬ್ಬರು,  ಕುನೋದಲ್ಲಿ ಹೆಲಿಪ್ಯಾಡ್‌ಗಳನ್ನು ನಿರ್ಮಿಸಲು  ಯಾವುದೇ ಮರವನ್ನು ಕಡಿಯಲಾಗಿಲ್ಲ, ಹಾಗೆ ಆಯ್ಕೆ ಮಾಡಿದ ಜಾಗದಲ್ಲಿ  ಮರಗಳಿಲ್ಲ, ಮರಗಳನ್ನು ಕಡಿಯಲಾಗಿದೆ ಎಂಬ ಸುದ್ದಿ ಸಂಪೂರ್ಣ ಸುಳ್ಳು” ಎಂದು ಹೇಳಿದರು. ”300 ಮಂದಿ ಅತಿಥಿಗಳಿಗೆ ಟೆಂಟ್‌ ಹಾಕಿದ ವಸತಿ ವ್ಯವಸ್ಥೆಯಾಗಲಿ ಮಾಡಿಲ್ಲ, ಗಣ್ಯರು, ಅಧಿಕಾರಿಗಳು ಇದ್ದ ಸಸೈಪುರ ರೆಸಾರ್ಟ್‌ನಲ್ಲಿ ಟೆಂಟ್‌ ಹಾಕಲಾಗಿತ್ತು. ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಟೆಂಟ್‌ ನಿರ್ಮಿಸಲಾಗಿದೆ ಎಂಬ ಸುದ್ದಿ ಆಧಾರ ರಹಿತ ಎಂದಿದ್ದಾರೆ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ