AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ವಿಐಪಿಗಳಿಗೆ ವಸತಿ ಕಲ್ಪಿಸಲು ಮರ ಕಡಿಯಲಾಗಿತ್ತೇ?

ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ ರಾಜ್ಯ ಇಲಾಖೆಯ ಅಧಿಕಾರಿಯೊಬ್ಬರು,  ಕುನೋದಲ್ಲಿ ಹೆಲಿಪ್ಯಾಡ್‌ಗಳನ್ನು ನಿರ್ಮಿಸಲು  ಯಾವುದೇ ಮರವನ್ನು ಕಡಿಯಲಾಗಿಲ್ಲ, ಹಾಗೆ ಆಯ್ಕೆ ಮಾಡಿದ ಜಾಗದಲ್ಲಿ  ಮರಗಳಿಲ್ಲ..

Fact Check: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ವಿಐಪಿಗಳಿಗೆ ವಸತಿ ಕಲ್ಪಿಸಲು ಮರ ಕಡಿಯಲಾಗಿತ್ತೇ?
ನರೇಂದ್ರ ಮೋದಿ
TV9 Web
| Edited By: |

Updated on: Sep 27, 2022 | 6:12 PM

Share

ದೆಹಲಿ: ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದಿಂದ ತಂದ ಚೀತಾಗಳನ್ನು ಬಿಡುಗಡೆ ಮಾಡುವುದಕ್ಕಾಗಿ 300 ಅತಿಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಬರುವ ಮುನ್ನ ಇಲ್ಲಿ ಮರಗಳನ್ನು ಕಡಿಯಲಾಗಿದೆ ಎಂದು ಹೇಳುವ ಸುದ್ದಿ ಸತ್ಯಕ್ಕೆ ದೂರವಾದುದು ಎಂದು ಪಿಬಿಐ ಫ್ಯಾಕ್ಟ್ ಚೆಕ್ ಮಾಡಿ ಟ್ವೀಟ್ ಮಾಡಿದೆ. ‘ದಿ ಏಷ್ಯನ್ ಏಜ್’ ಪತ್ರಿಕೆಯಲ್ಲಿ ಪ್ರಕಟವಾದ ಲೇಖನದ ಪ್ರಕಾರ, ರಾಷ್ಟ್ರೀಯ ಉದ್ಯಾನವನವು ಕೇವಲ ಒಂದು ಅತಿಥಿಗೃಹವನ್ನು ಹೊಂದಿತ್ತು, ಆದ್ದರಿಂದ ವಿಐಪಿಗಳಿಗೆ ವಸತಿ ಕಲ್ಪಿಸಲು ಟೆಂಟ್‌ಗಳನ್ನು ಸ್ಥಾಪಿಸಲಾಯಿತು. ಇದಕ್ಕಾಗಿ ಸಾಕಷ್ಟು ಸಂಖ್ಯೆಯ ಮರಗಳನ್ನು ಕಡಿಯಲಾಗಿದೆ ಎಂದು ಹೇಳಿತ್ತು. ಆದಾಗ್ಯೂ, ಮಧ್ಯಪ್ರದೇಶದ ಅರಣ್ಯ ಇಲಾಖೆ ಅಧಿಕಾರಿಗಳು ಕೂಡ ರಾಷ್ಟ್ರೀಯ ಉದ್ಯಾನದಲ್ಲಿ ಒಂದೇ ಒಂದು ಮರವನ್ನು ಕಡಿಯಲಾಗಿಲ್ಲ ಮತ್ತು ಮಾಧ್ಯಮದ ವರದಿ ಸುಳ್ಳು ಎಂದು ಸ್ಪಷ್ಟಪಡಿಸಿದ್ದಾರೆ.

ಟೆಂಟ್​  ನಿರ್ಮಿಸಲು ಕಡಿಯಲಾದ ಮರಗಳ ಹೊರತಾಗಿ ಮೋದಿಯವರ ಹೆಲಿಕಾಪ್ಟರ್ ಇಳಿಯಲು ಹೆಲಿಪ್ಯಾಡ್ ಮಾಡಲು ಕತ್ತರಿಸಲಾಗಿದೆ ಎಂದು ಪತ್ರಿಕೆಯ ವರದಿಯ ಕೂಡಾ ಸುಳ್ಳು ಎಂದು ಹೇಳಲಾಗಿದೆ.

ಇದಲ್ಲದೆ, ಸುದ್ದಿ ಸಂಸ್ಥೆ ಪಿಟಿಐ ಜೊತೆ ಮಾತನಾಡಿದ ರಾಜ್ಯ ಇಲಾಖೆಯ ಅಧಿಕಾರಿಯೊಬ್ಬರು,  ಕುನೋದಲ್ಲಿ ಹೆಲಿಪ್ಯಾಡ್‌ಗಳನ್ನು ನಿರ್ಮಿಸಲು  ಯಾವುದೇ ಮರವನ್ನು ಕಡಿಯಲಾಗಿಲ್ಲ, ಹಾಗೆ ಆಯ್ಕೆ ಮಾಡಿದ ಜಾಗದಲ್ಲಿ  ಮರಗಳಿಲ್ಲ, ಮರಗಳನ್ನು ಕಡಿಯಲಾಗಿದೆ ಎಂಬ ಸುದ್ದಿ ಸಂಪೂರ್ಣ ಸುಳ್ಳು” ಎಂದು ಹೇಳಿದರು. ”300 ಮಂದಿ ಅತಿಥಿಗಳಿಗೆ ಟೆಂಟ್‌ ಹಾಕಿದ ವಸತಿ ವ್ಯವಸ್ಥೆಯಾಗಲಿ ಮಾಡಿಲ್ಲ, ಗಣ್ಯರು, ಅಧಿಕಾರಿಗಳು ಇದ್ದ ಸಸೈಪುರ ರೆಸಾರ್ಟ್‌ನಲ್ಲಿ ಟೆಂಟ್‌ ಹಾಕಲಾಗಿತ್ತು. ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಟೆಂಟ್‌ ನಿರ್ಮಿಸಲಾಗಿದೆ ಎಂಬ ಸುದ್ದಿ ಆಧಾರ ರಹಿತ ಎಂದಿದ್ದಾರೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ