AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಪಿಎಂ ಲಾಡ್ಲಿ ಲಕ್ಷ್ಮಿ ಯೋಜನೆಯಡಿ ಸರ್ಕಾರ ಹೆಣ್ಮಕ್ಕಳಿಗೆ ₹1.6 ಲಕ್ಷ ನೀಡುತ್ತಿದೆಯೇ?

ಪಿಎಂ ಲಾಡ್ಲಿ ಲಕ್ಷ್ಮಿ ಯೋಜನೆಯಡಿ ಹೆಣ್ಣು ಮಕ್ಕಳಿಗೆ ಕೇಂದ್ರ ಸರ್ಕಾರ 1,60,000 ರೂಪಾಯಿಗಳನ್ನು ನೀಡುತ್ತಿದೆ ಎಂಬ ಸಂದೇಶವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು ಈ ಸಂದೇಶ ಫೇಕ್ ಎಂದು ಪಿಐಬಿಯ ಫ್ಯಾಕ್ಟ್ ಚೆಕ್ ವಿಭಾಗ ಟ್ವೀಟ್ ಮಾಡಿದೆ. ವೈರಲ್ ಸಂದೇಶದಲ್ಲಿ ಪ್ರಧಾನಮಂತ್ರಿ ಲಾಡ್ಲಿ ಲಕ್ಷ್ಮಿ ಯೋಜನೆಯನ್ನು ಪಿಎಂ ಲಾಡ್ಲಿ ಲಕ್ಷ್ಮಿ ಯೋಜನೆ ಎಂದು ಬರೆಯಲಾಗಿದೆ.

Fact Check: ಪಿಎಂ ಲಾಡ್ಲಿ ಲಕ್ಷ್ಮಿ ಯೋಜನೆಯಡಿ ಸರ್ಕಾರ ಹೆಣ್ಮಕ್ಕಳಿಗೆ ₹1.6 ಲಕ್ಷ ನೀಡುತ್ತಿದೆಯೇ?
ವೈರಲ್ ಆಗಿರುವ ಸಂದೇಶ ಫೇಕ್
ರಶ್ಮಿ ಕಲ್ಲಕಟ್ಟ
|

Updated on: Feb 07, 2024 | 5:52 PM

Share

ದೆಹಲಿ ಫೆಬ್ರುವರಿ 07: ಪಿಎಂ ಲಾಡ್ಲಿ ಲಕ್ಷ್ಮಿ ಯೋಜನೆಯಡಿ(PM Ladli Laxmi Yojana) ಹೆಣ್ಣು ಮಕ್ಕಳಿಗೆ ಕೇಂದ್ರ ಸರ್ಕಾರ 1,60,000 ರೂಪಾಯಿಗಳನ್ನು ನೀಡುತ್ತಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ (Social Media) ಸಂದೇಶವೊಂದು ಹರಿದಾಡುತ್ತಿದೆ. “ಪಿಎಂ ಲಾಡ್ಲಿ ಲಕ್ಷ್ಮಿ ಯೋಜನೆ. ಪಿಎಂ ಲಾಡ್ಲಿ ಲಕ್ಷ್ಮಿ ಯೋಜನೆ ಅಡಿಯಲ್ಲಿ, ಕೇಂದ್ರ ಸರ್ಕಾರ ಹೆಣ್ಣು ಮಕ್ಕಳಿಗೆ ನಗದು ಮೊತ್ತ ರೂ 1,60,000 ನೀಡುತ್ತಿದೆ” ಎಂದು ಹಿಂದಿಯಲ್ಲಿ ಈ ಸಂದೇಶವಿದೆ. ಸೂಕ್ಷ್ಮವಾಗಿ ಗಮನಿಸಿದಾಗ ವೈರಲ್ ಸಂದೇಶವು ಅಧಿಕೃತವಲ್ಲ ಎಂದು ಕಂಡುಬಂದಿದೆ. ಮೊದಲನೆಯದಾಗಿ, ಸಂದೇಶವು ಯೋಜನೆಯ ಹೆಸರನ್ನು ‘ಪ್ರಧಾನ ಮಂತ್ರಿ ಲಾಡ್ಲಿ ಲಕ್ಷ್ಮಿ ಯೋಜನೆ’ ಬದಲಿಗೆ ‘ಪಿಎಂ ಲಾಡ್ಲಿ ಲಕ್ಷ್ಮಿ ಯೋಜನೆ’ ಎಂದು ಉಲ್ಲೇಖಿಸಿದೆ. ಎರಡನೆಯದಾಗಿ, ಸಂದೇಶವು ಅಪೂರ್ಣವಾಗಿತ್ತು. ಯೋಜನೆ ಮತ್ತು ಹೇಗೆ ಅರ್ಜಿ ಸಲ್ಲಿಸಬೇಕು ಎಂಬುದರ ಕುರಿತು ಹೆಚ್ಚಿನ ಮಾಹಿತಿ ಇಲ್ಲ.

ಫ್ಯಾಕ್ಟ್ ಚೆಕ್

ಈ ಸಂದೇಶವನ್ನು ನಕಲಿ ಎಂದು ಹೇಳಿದ ಪಿಐಬಿಯ ಫ್ಯಾಕ್ಟ್ ಚೆಕ್ ವಿಭಾಗ ” ಪಿಎಂ ಲಾಡ್ಲಿ ಲಕ್ಷ್ಮಿ ಯೋಜನೆ ಅಡಿಯಲ್ಲಿ ಎಲ್ಲಾ ಹೆಣ್ಣುಮಕ್ಕಳಿಗೆ ಕೇಂದ್ರ ಸರ್ಕಾರವು 1,60,000 ರೂಪಾಯಿಗಳನ್ನು ನೀಡುತ್ತಿದೆ ಎಂದು #YouTube ವೀಡಿಯೊದಲ್ಲಿ ಹೇಳಿಕೊಳ್ಳಲಾಗುತ್ತಿದೆ. ಇದು ನಕಲಿ.”. ಕೇಂದ್ರ ಸರ್ಕಾರವು ಅಂತಹ ಯಾವುದೇ ಯೋಜನೆಯನ್ನು ನಡೆಸುತ್ತಿಲ್ಲ ಎಂದು ಹೇಳಿದೆ.

ಅಂದಹಾಗೆ ಈ ಸಂದೇಶ ವೈರಲ್ ಆಗಿರುವುದು ಇದೇ ಮೊದಲಲ್ಲ. ಕಳೆದ ವರ್ಷವೂ ಇದೇ ರೀತಿಯ ಸಂದೇಶ ವೈರಲ್ ಆಗಿತ್ತು.

ಲಾಡ್ಲಿ ಲಕ್ಷ್ಮಿ ಯೋಜನೆ ಎಂದರೇನು?

ಲಾಡ್ಲಿ ಲಕ್ಷ್ಮಿ ಯೋಜನೆಯನ್ನು 2007 ರಲ್ಲಿ ಮಧ್ಯಪ್ರದೇಶ ಸರ್ಕಾರವು ಪ್ರಾರಂಭಿಸಿತು. ಈ ಯೋಜನೆಯ ಉದ್ದೇಶವು ಹೆಣ್ಣು ಮಗುವಿನ ಜನನದ ಬಗ್ಗೆ ಸಮಾಜದ ನಕಾರಾತ್ಮಕ ದೃಷ್ಟಿಕೋನದಲ್ಲಿ ಬದಲಾವಣೆ ತರುವುದು. ಹೆಚ್ಚುವರಿಯಾಗಿ, ಹೆಣ್ಣು ಮಕ್ಕಳ ಲಿಂಗ ಅನುಪಾತ, ಶೈಕ್ಷಣಿಕ ಮತ್ತು ಆರೋಗ್ಯ ಸ್ಥಿತಿಯನ್ನು ಸುಧಾರಿಸುವುದು ಪ್ರಮುಖ ಉಪಕ್ರಮವಾಗಿದೆ. ಯೋಜನೆಯ ಒಟ್ಟಾರೆ ಯಶಸ್ಸಿನ ನಂತರ, ಇತರ ರಾಜ್ಯಗಳು ಸಹ ಹೆಣ್ಣು ಮಗುವಿನ ಉನ್ನತಿಗಾಗಿ ಅಳವಡಿಸಿಕೊಂಡವು ಮತ್ತು ಜಾರಿಗೆ ತಂದವು.

ಲಾಡ್ಲಿ ಲಕ್ಷ್ಮಿ ಯೋಜನೆ ಯಾವ ರಾಜ್ಯದಲ್ಲಿದೆ?

ಇದು ಪ್ರಸ್ತುತ ಉತ್ತರ ಪ್ರದೇಶ, ದೆಹಲಿ, ಬಿಹಾರ, ಛತ್ತೀಸ್‌ಗಢ, ಗೋವಾ ಮತ್ತು ಜಾರ್ಖಂಡ್‌ನಲ್ಲಿ ಕಾರ್ಯನಿರ್ವಹಿಸುತ್ತಿದೆ. 2006 ರ ಜನವರಿ 1 ರಂದು ಅಥವಾ ನಂತರ ಜನಿಸಿದ ಹೆಣ್ಣು ಮಕ್ಕಳು ತೆರಿಗೆ ಪಾವತಿಸದ ಕುಟುಂಬಗಳಲ್ಲಿ ಮತ್ತು ಹೆಣ್ಣು ಅನಾಥರಿಗೆ ಈ ಯೋಜನೆ ಪ್ರಯೋಜನವನ್ನು ನೀಡುತ್ತದೆ.

ಲಾಡ್ಲಿ ಲಕ್ಷ್ಮಿ ಯೋಜನೆಯ ಪ್ರಮುಖ ಲಕ್ಷಣಗಳು

ಈ ಯೋಜನೆಯಡಿಯಲ್ಲಿ ನೋಂದಾಯಿಸಲ್ಪಟ್ಟ ಎಲ್ಲಾ ಹೆಣ್ಣುಮಕ್ಕಳಿಗೆ ಶೈಕ್ಷಣಿಕ ವೆಚ್ಚದೊಂದಿಗೆ ಅನುಕೂಲವಾಗುತ್ತದೆ, ಇದರಿಂದ ಅವರ ಕುಟುಂಬವು ಅವರನ್ನು ಶಾಲೆಗೆ ಕಳುಹಿಸಲು ಸಾಧ್ಯವಾಗುತ್ತದೆ. ಆದರೆ, ಶಾಲೆಯಿಂದ ಹೊರಗುಳಿಯುವ ಹೆಣ್ಣು ಮಕ್ಕಳು ಈ ಯೋಜನೆಯ ಲಾಭ ಪಡೆಯಲು ಸಾಧ್ಯವಾಗುತ್ತಿಲ್ಲ. ಸರ್ಕಾರವು ಆಕೆಯ ಮದುವೆಗಾಗಿ ಅರ್ಜಿದಾರರ ಕುಟುಂಬಕ್ಕೆ 1 ಲಕ್ಷ ರೂ. VR[GLDLOZ 18 ವರ್ಷಕ್ಕಿಂತ ಮೊದಲು ಮದುವೆಯಾದ ಹೆಣ್ಣುಮಕ್ಕಳಿಗೆ ಲಾಡ್ಲಿ ಲಕ್ಷ್ಮಿ ಯೋಜನೆ ಅಡಿಯಲ್ಲಿ ಪ್ರಯೋಜನವಾಗುವುದಿಲ್ಲ

ಲಾಡ್ಲಿ ಲಕ್ಷ್ಮಿ ಯೋಜನೆಯ ಪ್ರಯೋಜನಗಳು

ಲಾಡ್ಲಿ ಲಕ್ಷ್ಮಿ ಯೋಜನೆ ಯೋಜನೆಯಡಿ, ರೂ. 1,18,000ಗಳ ಭರವಸೆಯ ಪ್ರಮಾಣ ಪತ್ರ ಹೆಣ್ಣು ಮಗುವಿನ ಹೆಸರಿನಲ್ಲಿ ನೀಡಲಾಗುತ್ತದೆ ಯೋಜನೆಯಡಿಯಲ್ಲಿ ನೋಂದಾಯಿಸಲಾದ ಹೆಣ್ಣು ಮಗು ತರಗತಿಯಿಂದ ಇನ್ನೊಂದು ತರಗತಿಗೆ ತೇರ್ಗಡೆ ಆದಾಗ ನೀಡಲಾಗುತ್ತದೆ. ಇದಲ್ಲದೆ, ಹುಡುಗಿಗೆ ರೂ. 200/- 11 ನೇ ತರಗತಿಯ ನಂತರ XII ತರಗತಿಯವರೆಗೆ ಆಕೆಯ ಶಿಕ್ಷಣದ ವರ್ಷದಲ್ಲಿ ಪ್ರತಿ ತಿಂಗಳು ರೂ. 4,000/ ನೀಡಲಾಗುತ್ತದೆ.

ಇದನ್ನೂ ಓದಿ: Fact Check: 9 ನೇ ತರಗತಿ ಪಠ್ಯ ಪುಸ್ತಕದಲ್ಲಿ ಡೇಟಿಂಗ್‌ & ರಿಲೇಷನ್​​​​​ಶಿಪ್​​​ ಬಗ್ಗೆ ಪಾಠ ಇರೋದು ನಿಜನಾ?

ಲಾಡ್ಲಿ ಲಕ್ಷ್ಮಿ ಯೋಜನೆಗೆ ಅರ್ಹತೆ ಏನು?

  1. ಹೆಣ್ಣು ಮಗು ಜನವರಿ 1, 2006 ರಂದು ಅಥವಾ ನಂತರ ಜನಿಸಿರಬೇಕು
  2. ಹೆಣ್ಣು ಮಗುವನ್ನು ಸ್ಥಳೀಯ ಅಂಗನವಾಡಿ ಕೇಂದ್ರದಲ್ಲಿ ನೋಂದಣಿ ಮಾಡಿಸಬೇಕು
  3. ಹೆಣ್ಣು ಮಗುವಿನ ಪೋಷಕರು ನೋಂದಣಿಯನ್ನು ಮಾಡಿದ ಆಯಾ ರಾಜ್ಯಗಳ ಸ್ಥಳೀಯರಾಗಿರಬೇಕು.
  4. ಹೆಣ್ಣು ಮಗುವಿನ ಪೋಷಕರು ಸರ್ಕಾರಕ್ಕೆ ಯಾವುದೇ ರೀತಿಯ ತೆರಿಗೆಯನ್ನು ಪಾವತಿಸಬಾರದು
  5. ಲಾಡ್ಲಿ ಲಕ್ಷ್ಮಿ ಯೋಜನೆ ಅಡಿಯಲ್ಲಿ ಪ್ರಯೋಜನಗಳನ್ನು ಪಡೆಯಲು ಅರ್ಜಿಯನ್ನು ಹೆಣ್ಣು ಮಗು ಜನಿಸಿದ 1 ವರ್ಷದೊಳಗೆ ಸಲ್ಲಿಸಬೇಕಾಗುತ್ತದೆ. ಆದರೆ, ಹೆಣ್ಣು ಮಗು ಜನಿಸಿದ 1 ವರ್ಷದೊಳಗೆ ಯೋಜನೆಗೆ ಅರ್ಜಿ ಸಲ್ಲಿಸದಿದ್ದರೆ, ಮುಂದಿನ ವರ್ಷದೊಳಗೆ ಹೆಣ್ಣು ಮಗು ವಾಸಿಸುವ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಬಹುದು. ಅರ್ಜಿಯನ್ನು ಸ್ವೀಕರಿಸುವ/ತಿರಸ್ಕರಿಸುವ ವಿವೇಚನೆಯು ಸಂಗ್ರಾಹಕರಿಗೆ ಮಾತ್ರ ಇರುತ್ತದೆ.
  6. ಅಲ್ಲದೆ, ಹೆಣ್ಣು ಮಗುವಿನ ಪೋಷಕರು ಮರಣ ಹೊಂದಿದಲ್ಲಿ, ಅಂತಹ ಹೆಣ್ಣು ಮಗು ಜನಿಸಿದ 5 ವರ್ಷಗಳೊಳಗೆ ಅರ್ಜಿಯನ್ನು ಸಲ್ಲಿಸಬಹುದು.
  7. ಎರಡನೇ ಹೆಣ್ಣು ಮಗುವಿನ ಸಂದರ್ಭದಲ್ಲಿ, ಕುಟುಂಬ ಯೋಜನೆಯನ್ನು ಅಳವಡಿಸಿಕೊಂಡ ಪೋಷಕರು ಯೋಜನೆಯ ಪ್ರಯೋಜನಗಳನ್ನು ಪಡೆಯಬಹುದು.
  8. ನೋಂದಾಯಿತ ಹೆಣ್ಣು ಮಗುವಿಗೆ 18 ವರ್ಷಕ್ಕಿಂತ ಮೊದಲು ಮದುವೆಯಾಗದಿದ್ದರೆ ಮಾತ್ರ 1 ಲಕ್ಷ ಬಿಡುಗಡೆಯಾಗುತ್ತದೆ.
  9. ಒಂದು ವೇಳೆ ಹೆಣ್ಣು ತನ್ನ ವಿದ್ಯಾಭ್ಯಾಸವನ್ನು ಮಧ್ಯದಲ್ಲೇ ಬಿಟ್ಟರೆ, ಆಕೆ ಯೋಜನೆಯ ಯಾವುದೇ ಪ್ರಯೋಜನಗಳನ್ನು ಪಡೆಯಲು ಅರ್ಹಳಾಗಿರುವುದಿಲ್ಲ
  10. ಲಾಡ್ಲಿ ಲಕ್ಷ್ಮಿ ಯೋಜನೆಯಡಿ ಒಂದು ಕುಟುಂಬದ ಇಬ್ಬರು ಹೆಣ್ಣು ಮಕ್ಕಳಿಗೆ ಅನುಕೂಲವಾಗಲಿದೆ. ಒಂದು ವೇಳೆ ಹುಡುಗಿಯರು ಅವಳಿಗಳಾಗಿದ್ದರೆ ಮೂರನೇ ಹೆಣ್ಣು ಮಗು ಕೂಡ ಪ್ರಯೋಜನವನ್ನು ಪಡೆಯುತ್ತದೆ
  11. ಈ ಯೋಜನೆಯು ಬಡತನ ರೇಖೆಗಿಂತ ಕೆಳಗಿರುವ ಜನರಿಗೆ ಮಾತ್ರ ಮಾನ್ಯವಾಗಿರುತ್ತದೆ.
  12. ಅನಾಥ ಹೆಣ್ಣು ಮಗುವನ್ನು ದತ್ತು ಪಡೆದಾಗ ಮತ್ತು ಕುಟುಂಬವು ದತ್ತು ಸ್ವೀಕಾರದ ಪ್ರಮಾಣಪತ್ರವನ್ನು ಸರಿಯಾಗಿ ಸಲ್ಲಿಸಿದಾಗ ಮಾತ್ರ ಈ ಯೋಜನೆಯ ಪ್ರಯೋಜನಗಳನ್ನು ಪಡೆಯಬಹುದು.

ಮತ್ತಷ್ಟು ಫ್ಯಾಕ್ಟ್ ಚೆಕ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ