Fact Check ಬೈಕ್ ಕಳ್ಳತನ ಮಾಡಿ ಪೊಲೀಸರ ಕೈಗೆ ಸಿಕ್ಕ ಭಗವಂತ್ ಮಾನ್​​ನ ಹಳೇ ಚಿತ್ರ ಎಂದು ವೈರಲ್ ಆಗಿರುವ ಚಿತ್ರದ ಸತ್ಯಾಸತ್ಯತೆ ಏನು?

ಪಂಜಾಬ್ ಪೊಲೀಸರು ಬೈಕ್ ಕಳ್ಳತನಕ್ಕಾಗಿ ಮಾನ್ ಮತ್ತು ಇತರ ಮೂವರನ್ನು ಬಂಧಿಸಿದಾಗ ಕ್ಲಿಕಿಸಿದ ಚಿತ್ರವಾಗಿದೆ ಎಂಬ ತಪ್ಪಾದ ಹೇಳಿಕೆ ಈ ಫೋಟೊದೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ಫೋಟೊ ಹೋಳಿ ಹಬ್ಬದ್ದು...

Fact Check ಬೈಕ್ ಕಳ್ಳತನ ಮಾಡಿ ಪೊಲೀಸರ ಕೈಗೆ ಸಿಕ್ಕ ಭಗವಂತ್ ಮಾನ್​​ನ ಹಳೇ ಚಿತ್ರ ಎಂದು ವೈರಲ್ ಆಗಿರುವ ಚಿತ್ರದ ಸತ್ಯಾಸತ್ಯತೆ ಏನು?
ವೈರಲ್ ಆಗಿರುವ ಫೋಟೊ - ಭಗವಂತ್ ಮಾನ್
Follow us
| Updated By: ರಶ್ಮಿ ಕಲ್ಲಕಟ್ಟ

Updated on: Apr 01, 2022 | 9:32 PM

ಹೊಸದಾಗಿ ಚುನಾಯಿತ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್  (Bhagwant Mann) ಅವರ ಹಳೆಯ ಫೋಟೊ ಎಂಬ ಶೀರ್ಷಿಕೆಯೊಂದಿಗೆ ಫೋಟೊವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ.  ಇದು ಪಂಜಾಬ್(Punjab) ಪೊಲೀಸರು ಬೈಕ್ ಕಳ್ಳತನಕ್ಕಾಗಿ ಮಾನ್ ಮತ್ತು ಇತರ ಮೂವರನ್ನು ಬಂಧಿಸಿದಾಗ ಕ್ಲಿಕಿಸಿದ ಚಿತ್ರವಾಗಿದೆ ಎಂಬ ತಪ್ಪಾದ ಹೇಳಿಕೆ ಈ ಫೋಟೊದೊಂದಿಗೆ ಪ್ರಚಾರ ಮಾಡಲಾಗುತ್ತಿದೆ. ಒಬ್ಬ ಯುವಕ ಇತರ ಮೂವರು ಯುವಕರೊಂದಿಗೆ ನೆಲದ ಮೇಲೆ ಕುಳಿತುಕೊಂಡಿದ್ದು ಗಂಭೀರ ಮುಖದೊಂದಿಗೆ ಕ್ಯಾಮೆರಾವನ್ನು ನೋಡುತ್ತಿರುವುದು ಈ ಫೋಟೊದಲ್ಲಿದೆ, ಅವರ ಬಟ್ಟೆಗಳು ಹೋಳಿ ಬಣ್ಣಗಳಲ್ಲಿ ತೇವಗೊಂಡಂತೆ ಕಾಣುತ್ತವೆ. ಈ ಚಿತ್ರದೊಂದಿಗೆ ಹಿಂದಿಯಲ್ಲಿ ಬರೆಯಲಾದ ಶೀರ್ಷಿಕೆಯ ಅನುವಾದ ಹೀಗಿದೆ. ಇದು ಯಾರು ಅಂತ ಊಹಿಸಬಲ್ಲಿರಾ? ಬೈಕ್ ಕಳ್ಳತನ ಮಾಡಿದ್ದಕ್ಕಾಗಿ ಪಂಜಾಬ್ ಪೊಲೀಸರು ಸೆರೆಹಿಡಿದಿರುವ ನಾಲ್ವರು ವ್ಯಕ್ತಿಗಳ ಫೋಟೊ ಇದು ಎಂದು ಬರೆಯಲಾಗಿದೆ. ಫ್ಯಾಕ್ಟ್ ಚೆಕ್ ವೈರಲ್ ಚಿತ್ರದ ಸತ್ಯಾಸತ್ಯತೆ  ಅರಿಯಲು  ಬೂಮ್ ಲೈವ್ ಈ ವೈರಲ್ ಫೋಟೊವನ್ನು ರಿವರ್ಸ್ ಇಮೇಜ್ ಸರ್ಚ್ ಮಾಡಿದೆ. ಹೀಗೆ ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ ಮಾರ್ಚ್ 18, 2022 ರಂದು ಅಪ್‌ಲೋಡ್ ಮಾಡಲಾದ ಪಂಜಾಬಿ ಗಾಯಕ ಮತ್ತು ನಟ ಕರಮ್‌ಜಿತ್ ಅನ್ಮೋಲ್ ಅವರ ಅಧಿಕೃತ ಫೇಸ್‌ಬುಕ್ ಪುಟದಲ್ಲಿ ಈ ಚಿತ್ರ ಸಿಕ್ಕಿದೆ ಈ ಫೋಟೊದೊಂದಿಗೆ “ಭಗವಂತ್ ಮಾನ್ ಮತ್ತು @manjitsidhu ಅವರೊಂದಿಗೆ ಹೋಳಿ ನೆನಪುಗಳು ಎಂಬ ಶೀರ್ಷಿಕೆ ಇದೆ.

ನಟ ಕರಮ್‌ಜಿತ್ ಅನ್ಮೋಲ್ ಅವರ ಅಧಿಕೃತ ಫೇಸ್‌ಬುಕ್ ಪುಟದಲ್ಲಿರುವ ಚಿತ್ರ

ಮಾರ್ಚ್ 13, 2022 ರಂದು ಪ್ರಕಟವಾದ ದಿ ವೈರ್ ವರದಿಯ ಪ್ರಕಾರ, ಕರಮ್‌ಜಿತ್ ಸಿಂಗ್ ಅನ್ಮೋಲ್ ಮಾನ್ ಅವರ ಹಳೆಯ ಸ್ನೇಹಿತ. ಅವರು ಧುರಿ ಕ್ಷೇತ್ರದಲ್ಲಿ ಮಾನ್ ಪರವಾಗಿ ಪ್ರಚಾರ ಮಾಡಿದರು. ಇವರಿಬ್ಬರೂ ತಮ್ಮ ಶಾಲಾ ದಿನಗಳಿಂದಲೂ ಅಂದರೆ 1990 ರಿಂದ ಒಟ್ಟಿಗೆ ಇದ್ದಾರೆ . ಕರಮ್‌ಜಿತ್ ಅವರ ಸಂದರ್ಶನವೊಂದರಲ್ಲಿ  ಆಮ್ ಆದ್ಮಿ ಪಕ್ಷದ ನಾಯಕನ ಬಗ್ಗೆ ಮಾತನಾಡುವುದನ್ನು ಕಾಣಬಹುದು. ಅಷ್ಟೇ ಅಲ್ಲದೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಫೋಟೊದಲ್ಲಿ ಹೇಳುವಂತೆ ಏನಾದರೂ ಇದೆಯೇ ಎಂದು ಪರಿಶೀಲಿಸಲು ಬೂಮ್ ತಂಡಪಂಜಾಬ್‌ನ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಕಚೇರಿಯನ್ನು ಸಂಪರ್ಕಿಸಿದೆ. ಭಗವಂತ್ ಮಾನ್ ಅವರು ಯುವಕರಾಗಿದ್ದಾಗ ಬೈಕ್ ಕಳ್ಳತನದಲ್ಲಿ ಸಿಕ್ಕಿಬಿದ್ದಿದ್ದಾರೆ ಎಂಬ ಆರೋಪದಲ್ಲಿ ಯಾವುದೇ ಸತ್ಯವಿಲ್ಲ ಎಂದು ಬೂಮ್‌ನೊಂದಿಗೆ ಮಾತನಾಡಿದ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಗುರುಪ್ರೀತ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಚಂಡೀಗಢವನ್ನು ಕೂಡಲೇ ಪಂಜಾಬ್​ಗೆ ವರ್ಗಾಯಿಸಬೇಕು; ಸದನದಲ್ಲಿ ಸಿಎಂ ಭಗವಂತ್ ಮಾನ್ ನಿರ್ಣಯ ಮಂಡನೆ

ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್