AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: Pahalgam Terrorists Attack- ಬೈಸರನ್ ಕಣಿವೆಯಲ್ಲಿ ಶವಗಳಿರುವ ವೈರಲ್ ಫೋಟೋದ ನಿಜಾಂಶ ಏನು?

Pahalgam Terrorists Attack: ಬೈಸರನ್ ಕಣಿವೆಯಲ್ಲಿ ಶವಗಳು ಬಿದ್ದಿರುವುದನ್ನು ಮತ್ತು ಪೊಲೀಸ್ ಅಧಿಕಾರಿಗಳು ಅವುಗಳನ್ನು ನೋಡಿಕೊಳ್ಳುತ್ತಿರುವುದನ್ನು ವೈರಲ್ ಫೋಟೋದಲ್ಲಿ ಕಾಣಬಹುದು. ಸಾಮಾಜಿಕ ಮಾಧ್ಯಮದಲ್ಲಿ ಕೆಲವು ಬಳಕೆದಾರರು ಈ ಚಿತ್ರವನ್ನು ನಿಜವೆಂದು ನಂಬಿ ಹಂಚಿಕೊಳ್ಳುತ್ತಿದ್ದಾರೆ. ಆದರೆ, ಇದು ಕೃತಕ ಬುದ್ದಿಮತ್ತೆಯಿಂದ (AI) ರಚಿಸಲ್ಪಟ್ಟಿದೆ ಎಂದು ತಿಳಿದುಬಂದಿದೆ.

Fact Check: Pahalgam Terrorists Attack- ಬೈಸರನ್ ಕಣಿವೆಯಲ್ಲಿ ಶವಗಳಿರುವ ವೈರಲ್ ಫೋಟೋದ ನಿಜಾಂಶ ಏನು?
Pahalgam Terror Attack Fact Check (10)
Vinay Bhat
|

Updated on: Apr 25, 2025 | 4:31 PM

Share

ಬೆಂಗಳೂರು (ಏ. 25): ಕಳೆದ ಮಂಗಳವಾರ (ಏಪ್ರಿಲ್ 22) ರಾಜಧಾನಿ ಶ್ರೀನಗರದಿಂದ 100 ಕಿ.ಮೀ. ದಕ್ಷಿಣಕ್ಕೆ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ (Pahalgam Terrorists Attack) ಇಪ್ಪತ್ತಾರು ಮಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. 40 ಭಾರತೀಯ ಸೇನಾ ಸೈನಿಕರನ್ನು ಬಲಿತೆಗೆದುಕೊಂಡ ಪುಲ್ವಾಮಾ ದಾಳಿಯ ನಂತರ, ಏಪ್ರಿಲ್ 22 ರಂದು ನಡೆದ ದಾಳಿ ಇದಾಗಿದೆ. ಈ ಬೆಳವಣಿಗೆಗಳ ಮಧ್ಯೆ, ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರದ ಸನ್ನಿವೇಶ ಎಂದು ಹೇಳಿಕೊಳ್ಳುವ ಹಲವಾರು ಫೋಟೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿವೆ.

ಬೈಸರನ್ ಕಣಿವೆಯಲ್ಲಿ ಶವಗಳು ಬಿದ್ದಿರುವುದನ್ನು ಮತ್ತು ಪೊಲೀಸ್ ಅಧಿಕಾರಿಗಳು ಅವುಗಳನ್ನು ನೋಡಿಕೊಳ್ಳುತ್ತಿರುವುದನ್ನು ವೈರಲ್ ಫೋಟೋದಲ್ಲಿ ಕಾಣಬಹುದು. ಸಾಮಾಜಿಕ ಮಾಧ್ಯಮದಲ್ಲಿ ಕೆಲವು ಬಳಕೆದಾರರು ಈ ಚಿತ್ರವನ್ನು ನಿಜವೆಂದು ನಂಬಿ ಹಂಚಿಕೊಳ್ಳುತ್ತಿದ್ದಾರೆ. ಫೇಸ್​ಬುಕ್ ಬಳಕೆದಾರರೊಬ್ಬರು ಈ ಫೋಟೋವನ್ನು ಹಂಚಿಕೊಂಡು, ‘‘ಟೆರರಿಸ್ತಾನ್‌ನ ದೊಡ್ಡ ಶಕ್ತಿ ಅದರ ಪರಮಾಣು ಬಾಂಬ್ ಅಲ್ಲ, ಬದಲಿಗೆ ಇಲ್ಲಿ ಬೆಳೆಯುತ್ತಿರುವ ಸೂಕ್ಷ್ಮ ಬಾಂಬ್. ಪಾಕಿಸ್ತಾನ ಎಂಬ ವೈರಸ್ ಅನ್ನು ಒಮ್ಮೆ ಅಳಿಸಲು ಪ್ರಯತ್ನಿಸಿ, ಭಾರತ ಸರ್ಕಾರ, ಬಹುಶಃ ಮಾನವೀಯತೆಯನ್ನು ಉಳಿಸಬಹುದು’’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
ಭಾರತ ಮತ್ತು ಪಾಕಿಸ್ತಾನದ ನಡುವೆ ಭಾರೀ ಗುಂಡಿನ ದಾಳಿ?
Image
ಮಗುವಿನ ಅಜ್ಜನನ್ನು ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಕೊಂದಿದ್ದಾರೆ?
Image
ಸ್ಕೂಬಾ ಡ್ರೈವರ್​ಗಳು ನಿಜಕ್ಕೂ ರಾಮ ಸೇತುವಿನ ವಿಡಿಯೋ ತೋರಿಸಿದ್ದಾರೆಯೇ?
Image
ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರಿಯಾಂಕಾ ಗಾಂಧಿ ಪ್ರತಿಭಟನೆ?

ಶವಗಳಿರುವ ವೈರಲ್ ಫೋಟೋದ ನಿಜಾಂಶ ಏನು?:

ಟಿವಿ9 ಕನ್ನಡ ಈ ವೈರಲ್ ಪೋಸ್ಟ್ ಬಗ್ಗೆ ತನಿಖೆ ನಡೆಸಿದ್ದು, ಇದು ಕೃತಕ ಬುದ್ದಿಮತ್ತೆಯಿಂದ (AI) ರಚಿಸಲ್ಪಟ್ಟಿದೆ ಎಂದು ತಿಳಿದುಬಂದಿದೆ. ಇದನ್ನು ಮೆಟಾ AI ಉಪಕರಣದ ಸಹಾಯದಿಂದ ರಚಿಸಲಾಗಿದೆ. ವಾಟರ್‌ಮಾರ್ಕ್ ಇದ್ದರೂ, ಜನರು ಈ ಫೋಟೋವನ್ನು ನಿಜವೆಂದು ಭಾವಿಸಿ ಹಂಚಿಕೊಳ್ಳುತ್ತಿದ್ದಾರೆ.

ನಿಜಾಂಶವನ್ನು ತಿಳಿಯಲು ನಾವು ಮೊದಲು ವೈರಲ್ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿದ್ದೇವೆ. ಇದರಲ್ಲಿ ನಾವು ಮೆಟಾ AI ನ ವಾಟರ್‌ಮಾರ್ಕ್ ಅನ್ನು ಕಂಡೆವು. ಇದರಿಂದ ಚಿತ್ರವನ್ನು ಮೆಟಾ AI ಉಪಕರಣವನ್ನು ಬಳಸಿ ರಚಿಸಲಾಗಿದೆ ಎಂಬುದು ಸ್ಪಷ್ಟವಾಯಿತು. ತನಿಖೆಯನ್ನು ಮತ್ತಷ್ಟು ಮುಂದುವರಿಸಿ, sightengine ಎಂಬ AI ಪರಿಶೀಲನಾ ಉಪಕರಣವನ್ನು ಬಳಸಿಕೊಂಡು ಚಿತ್ರವನ್ನು ಹುಡುಕಿದ್ದೇವೆ. ಇದು ಚಿತ್ರವು ಶೇಕಡಾ 99 ರಷ್ಟು AI ಎಂದು ದೃಢಪಡಿಸಿತು. ಹಾಗೆಯೆ Wadit AI ಎಂಬ ಉಪಕರಣವನ್ನು ಬಳಸಲಾಯಿತು. ಇದು ಕೂಡ ವೈರಲ್ ಆಗಿರುವ ಚಿತ್ರವು AI ಮೂಲಕ ರಚಿಸಲ್ಪಟ್ಟಿದೆ ಎಂದು ಹೇಳಿದೆ.

Fact Check: ಭಾರತ ಮತ್ತು ಪಾಕಿಸ್ತಾನದ ನಡುವೆ ಭಾರೀ ಗುಂಡಿನ ದಾಳಿ?: ವೈರಲ್ ವಿಡಿಯೋದ ಸತ್ಯ ಇಲ್ಲಿದೆ ನೋಡಿ

ಈ ಮೂಲಕ ವೈರಲ್ ಪೋಸ್ಟ್‌ನಲ್ಲಿ ಬಳಸಲಾದ ಚಿತ್ರವು AI ಮೂಲಕ ರಚಿಸಲ್ಪಟ್ಟಿದೆ ಎಂದು ಟಿವಿ ಕನ್ನಡ ತನಿಖೆಯಿಂದ ತಿಳಿದುಬಂದಿದೆ. ಅದನ್ನು ನಿಜವೆಂದು ಪರಿಗಣಿಸಿ, ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡಲಾಗುತ್ತಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಅನೇಕ ಸುಳ್ಳು ಮಾಹಿತಿಗಳು, ವಿಡಿಯೋಗಳು, ಫೋಟೋ ಹರಿದಾಡುತ್ತಿದ್ದು ಯಾವುದೇ ಪೋಸ್ಟ್ ಹಂಚಿಕೊಳ್ಳುವ ಮುನ್ನ ಎಚ್ಚರ ವಹಿಸಿ.

ಇನ್ನು ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ ಬೆನ್ನಲ್ಲೇ ಭಾರತೀಯ ಸೇನೆ ಅಲರ್ಟ್ ಆಗಿದ್ದು, ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಟಾಪ್ ಕಮಾಂಡರ್ ಅಲ್ತಾಫ್ ಲಲ್ಲಿಯನ್ನು ಸೆದೆ ಬಡಿದಿದ್ದಾರೆ. ಪಹಲ್ಗಾಮ್ ದಾಳಿ ಹೊಣೆಯನ್ನು ಲಷ್ಕರ್​-ಎ-ತೊಯ್ಬಾ ಹೊತ್ತುಕೊಂಡಿತ್ತು. ಇದೀಗ ಭಾರತೀಯ ಸೇನೆ ಬಹುದೊಡ್ಡ ಬೇಟೆಯನ್ನೇ ಆಡಿದ್ದು, ಟಾಪ್​ ಕಮಾಂಡರ್​ ಅಲ್ತಾಫ್​ನನ್ನು ಹತ್ಯೆ ಮಾಡಿವೆ.

ಇನ್ನಷ್ಟು ಫ್ಯಾಕ್ಟ್ ಚೆಕ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್