AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಮದ್ಯ ಮಾರಾಟ ಮಾಡಲು ಆಧಾರ್ ಕಾರ್ಡ್ ಲಿಂಕ್; ರತನ್ ಟಾಟಾ ಹೇಳಿದ್ದಾರೆ ಎನ್ನುವ ಹೇಳಿಕೆ ಫೇಕ್

ಯಾರು ಆಲ್ಕೋಹಾಲನ್ನು ಹಣಕೊಟ್ಟು ಕೊಳ್ಳಬಲ್ಲರೋ ಅವರು ಆಹಾರವನ್ನು ಸಹ ಹಣಕೊಟ್ಟು ಕೊಳ್ಳಬಲ್ಲರು. ಅವರಿಗೆ ನಾವು ಆಹಾರವನ್ನು ಉಚಿತವಾಗಿ ಹೀಗೆ ನೀಡುತ್ತಲೇ ಹೋದರೆ ಅವರು ಹೀಗೆ ಹಣಕೊಟ್ಟು ಕುಡಿಯುತ್ತಲೇ ಇರುತ್ತಾರೆ ಎಂದು ರತನ್ ಟಾಟಾ ಹೇಳಿದ್ದಾರೆ ಎನ್ನಲಾಗುವ ವೈರಲ್ ಪೋಸ್ಟ್ ಫೇಕ್.

Fact Check: ಮದ್ಯ ಮಾರಾಟ ಮಾಡಲು ಆಧಾರ್ ಕಾರ್ಡ್ ಲಿಂಕ್; ರತನ್ ಟಾಟಾ ಹೇಳಿದ್ದಾರೆ ಎನ್ನುವ ಹೇಳಿಕೆ ಫೇಕ್
ವೈರಲ್ ಪೋಸ್ಟ್ ಫೇಕ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jun 10, 2023 | 8:56 PM

Share

ಟಾಟಾ ಟ್ರಸ್ಟ್‌ನ ಅಧ್ಯಕ್ಷ ರತನ್ ಟಾಟಾ (Ratan Tata) ಅವರು ಮದ್ಯ ಮಾರಾಟಕ್ಕೆ(Alcohol sale) ಆಧಾರ್ ಕಾರ್ಡ್‌ಗೆ (Aadhar cards)ಲಿಂಕ್ ಮಾಡಬೇಕೆಂದು ಹೇಳಿದ್ದಾರೆ ಎನ್ನುವ ಪೋಸ್ಟ್ ಈಗ ಮತ್ತೆ ವೈರಲ್ ಆಗಿದೆ. ಎರಡು ವರ್ಷಗಳ ಹಿಂದೆಯೂ ಈ ಪೋಸ್ಟ್ ವೈರಲ್ ಆಗಿತ್ತು. ‘ಮದ್ಯವನ್ನು ಆಧಾರ್ ಕಾರ್ಡಿನ ಮೂಲಕವೇ ವಿಕ್ರಯಿಸಬೇಕು. ಯಾರು ಮದ್ಯವನ್ನು ಕೊಳ್ಳುತ್ತಾರೋ ಅವರಿಗೆ ಸರ್ಕಾರ ನೀಡುವ ಸವಲತ್ತು ಹಾಗೂ ಸಬ್ಸಿಡಿಗಳನ್ನು ರದ್ದು ಪಡಿಸಬೇಕು.ಯಾರು ಆಲ್ಕೋಹಾಲನ್ನು ಹಣಕೊಟ್ಟು ಕೊಳ್ಳಬಲ್ಲರೋ ಅವರು ಆಹಾರವನ್ನು ಸಹ ಹಣಕೊಟ್ಟು ಕೊಳ್ಳಬಲ್ಲರು. ಅವರಿಗೆ ನಾವು ಆಹಾರವನ್ನು ಉಚಿತವಾಗಿ ಹೀಗೆ ನೀಡುತ್ತಲೇ ಹೋದರೆ ಅವರು ಹೀಗೆ ಹಣಕೊಟ್ಟು ಕುಡಿಯುತ್ತಲೇ ಇರುತ್ತಾರೆ’ ಎಂದು ರತನ್ ಟಾಟಾ ಹೇಳಿರುವುದಾಗಿ ಅವರ ಫೋಟೊದಿಂದಿಗೆ ಕನ್ನಡದಲ್ಲಿ ಬರೆದಿರುವ ಬರಹ ಸಾಮಾಜಿಕ ಮಾಧ್ಯಗಳಲ್ಲಿ ಶೇರ್ ಆಗುತ್ತಿದೆ.

ಎರಡು ವರ್ಷಗಳ ಹಿಂದೆ ಇದೇ ಪೋಸ್ಟ್ ಇಂಗ್ಲಿಷ್ ನಲ್ಲಿ ಹರಿದಾಡಿತ್ತು. ಆಗ ಬೂಮ್​​ಲೈವ್  ಆ ಪೋಸ್ಟ್​​ನ ಫ್ಯಾಕ್ಟ್ ಚೆಕ್ ಮಾಡಿ ವೈರಲ್ ಪೋಸ್ಟ್ ಸುಳ್ಳು ಎಂದಿತ್ತು.

ಫ್ಯಾಕ್ಟ್ ಚೆಕ್

ಆದರೆ ನಾನು ಈ ರೀತಿ ಹೇಳಿಲ್ಲ ಎಂದು ಟಾಟಾ ಅವರೇ ಇನ್​​ಸ್ಟಾಗ್ರಾಮ್ ಸ್ಟೋರಿಯಲ್ಲಿ ಹೇಳಿದ್ದಾರೆ. ಇದನ್ನು ನಾನು ಹೇಳಿಲ್ಲ. ಧನ್ಯವಾದಗಳು ಎಂದು ರತನ್ ಟಾಟಾ ಅವರು ವೈರಲ್ ಪೋಸ್ಟ್ ನ ಸ್ಕ್ರೀನ್ ಶಾಟ್ ನ್ನು ತಮ್ಮ ಇನ್ ಸ್ಟಾ ಸ್ಟೋರಿಯಲ್ಲಿ ಹಾಕಿದ್ದಾರೆ.

Ratan tata Insta Story

ಇನ್​​ಸ್ಟಾಗ್ರಾಮ್​​ನಲ್ಲಿ ರತನ್ ಟಾಟಾ ಸ್ಟೋರಿ

ಈ ಹಿಂದೆಯೂ ಟಾಟಾ ಹೇಳಿದ್ದಾರೆ ಎನ್ನಲಾಗುವ ಪೋಸ್ಟ್ ಗಳು ವೈರಲ್ ಆಗಿತ್ತು. ಟಾಟಾ ಗ್ರೂಪ್ ಆಫ್ ಕಂಪನಿಗಳು ಇನ್ನು ಮುಂದೆ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ನೇಮಿಸಿಕೊಳ್ಳುವುದಿಲ್ಲ ಎಂಬ ಸುಳ್ಳು ಸುದ್ದಿಯೂ ವೈರಲ್ ಆಗಿತ್ತು.

ಮತ್ತಷ್ಟು ಫ್ಯಾಕ್ಟ್ ಚೆಕ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ