AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check ಈರುಳ್ಳಿ, ಬೆಳ್ಳುಳ್ಳಿ ತಿನ್ನುವುದಿಲ್ಲ ಎಂದು ಹೇಳಿದ್ದ ನಿರ್ಮಲಾ ಸೀತಾರಾಮನ್ ಚೆನ್ನೈನಲ್ಲಿ ಈರುಳ್ಳಿ ಖರೀದಿಸಿದ್ದಾರೆಯೇ?

ಹಣಕಾಸು ಸಚಿವರ ಕಚೇರಿಯ ಟ್ವಿಟರ್ ಖಾತೆಯಲ್ಲಿ ಅವರು ಮಾಡಿದ ಶಾಪಿಂಗ್‌ನ ಹಲವಾರು ಫೋಟೋಗಳು ಮತ್ತು ವಿಡಿಯೊ ಇದೆ. ಇವುಗಳಲ್ಲಿ ಎಲ್ಲಿಯೂ ಅವರು ಈರುಳ್ಳಿ ಖರೀದಿಸುವುದು ಕಾಣುತ್ತಿಲ್ಲ.

Fact Check ಈರುಳ್ಳಿ, ಬೆಳ್ಳುಳ್ಳಿ ತಿನ್ನುವುದಿಲ್ಲ ಎಂದು ಹೇಳಿದ್ದ ನಿರ್ಮಲಾ ಸೀತಾರಾಮನ್ ಚೆನ್ನೈನಲ್ಲಿ ಈರುಳ್ಳಿ ಖರೀದಿಸಿದ್ದಾರೆಯೇ?
ನಿರ್ಮಲಾ ಸೀತಾರಾಮನ್ ಖರೀದಿಸಿದ್ದು ಈರುಳ್ಳಿ ಅಲ್ಲ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Oct 13, 2022 | 4:58 PM

Share

“ಮೈ ಇತ್ನಾ ಲೆಸೂನ್, ಪ್ಯಾಜ್ ನಹೀ ಖಾತಿ ಹೂ ಜೀ. ಮೈನ್ ಐಸೆ ಪರಿವಾರ್ ಸೆ ಆತಿ ಹೂ ಜಹಾ ಆನಿಯನ್ ಪ್ಯಾಜ್ ಸೆ ಮತ್ಲಬ್ ನಹೀ ರಖ್ತೆ (ನಾನು ಹೆಚ್ಚು ಈರುಳ್ಳಿ ಮತ್ತು ಬೆಳ್ಳುಳ್ಳಿ ತಿನ್ನುವುದಿಲ್ಲ. ನಾನು ಈರುಳ್ಳಿ ತಿನ್ನದ ಕುಟುಂಬದಿಂದ ಬಂದಿದ್ದೇನೆ)-ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) 2019 ರ ಡಿಸೆಂಬರ್‌ನಲ್ಲಿ ಲೋಕಸಭೆಯಲ್ಲಿ ಈರುಳ್ಳಿ (onion) ಬೆಲೆ ಏರಿಕೆಯ ಕುರಿತು ಚರ್ಚೆಯ ಸಂದರ್ಭದಲ್ಲಿ ವಿರೋಧ ಪಕ್ಷದ ಸದಸ್ಯರಿಗೆ ಪ್ರತಿಕ್ರಿಯಿಸುವಾಗ ಹೇಳಿದ ಮಾತು ಇದು. ಇದಾಗಿ ಎರಡು ವರ್ಷಗಳ ನಂತರ ನಿರ್ಮಲಾ ಸೀತಾರಾಮನ್ ಹೇಳಿದ್ದು ಈಗ ಮತ್ತೆ ಸುದ್ದಿಯಾಗುತ್ತಿದೆ. ನಿರ್ಮಲಾ ಸೀತಾರಾಮನ್ ಅವರು ಅಕ್ಟೋಬರ್ 8 ರಂದು ಚೆನ್ನೈನಲ್ಲಿ ತರಕಾರಿ ಶಾಪಿಂಗ್ ಮಾಡಲು ಹೋದಾಗ, ಈರುಳ್ಳಿ ಖರೀದಿಸಿದ್ದರು ಎಂಬುದು ಈಗ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್ ಆಗುತ್ತಿರುವ ಸಂಗತಿ. ಟ್ವಿಟರ್‌ನಲ್ಲಿ ಮಹಾರಾಷ್ಟ್ರ ಕಾಂಗ್ರೆಸ್ ಸೇವಾದಳವು ವಿತ್ತ ಸಚಿವೆ ಬೀದಿ ವ್ಯಾಪಾರಿಯಿಂದ ಈರುಳ್ಳಿ ಖರೀದಿಸುತ್ತಿರುವ ಫೋಟೋವನ್ನು ಶೇರ್ ಮಾಡಿದೆ. ಅದೂ ಎರಡೆರಡು ಬಾರಿ. ನಿರ್ಮಲಾ ಸೀತಾರಾಮನ್ ಅವರು ಈರುಳ್ಳಿ ತಿನ್ನುವುದಿಲ್ಲ ಎಂದು ಸಂಸತ್ತಿನಲ್ಲಿ ಹೇಳಿದ್ದರು. ಅದು ಸುಳ್ಳು ಎಂದು ಫೋಟೊಗೆ ಶೀರ್ಷಿಕೆ ನೀಡಲಾಗಿದೆ. ಆದಾಗ್ಯೂ, ಇದು ಎಡಿಟ್ ಮಾಡಿದ ಫೋಟೊ, ನಿರ್ಮಲಾ ಸೀತಾರಾಮನ್ ಅವರು ಚೆನ್ನೈನಲ್ಲಿ ಈರುಳ್ಳಿ ಖರೀದಿಸಿಲ್ಲ ಎಂದು ಇಂಡಿಯಾ ಟುಡೇ ಫ್ಯಾಕ್ಟ್ ಚೆಕ್ ಮಾಡಿದೆ.

ಫ್ಯಾಕ್ಟ್ ಚೆಕ್

ಹಣಕಾಸು ಸಚಿವರ ಕಚೇರಿಯ ಟ್ವಿಟರ್ ಖಾತೆಯಲ್ಲಿ ಅವರು ಮಾಡಿದ ಶಾಪಿಂಗ್‌ನ ಹಲವಾರು ಫೋಟೋಗಳು ಮತ್ತು ವಿಡಿಯೊ ಇದೆ. ಇವುಗಳಲ್ಲಿ ಎಲ್ಲಿಯೂ ಅವರು ಈರುಳ್ಳಿ ಖರೀದಿಸುವುದು ಕಾಣುತ್ತಿಲ್ಲ. ವಿಡಿಯೊದಲ್ಲಿ ನಿರ್ಮಲಾ ಸೀತಾರಾಮನ್ ಅವಳು ಕಾಡು ಗೆಣಸುಗಳನ್ನು ಖರೀದಿಸುತ್ತಿರುವುದು ಕಾಣುತ್ತದೆ. ಅದೇ ಪ್ರೇಮ್ ನಲ್ಲಿರುವ ಚಿತ್ರದಲ್ಲಿ ಕಾಡು ಗೆಣಸು ಬದಲು ಈರುಳ್ಳಿ ಚಿತ್ರವಿಟ್ಟು ಎಡಿಟ್ ಮಾಡಲಾಗಿದೆ ಎಂಬುದು ಇಲ್ಲಿ ಸ್ಪಷ್ಟವಾಗುತ್ತದೆ.

ಆನಂದ ಕರುಣಾ ವಿದ್ಯಾಲಯವನ್ನು ಉದ್ಘಾಟಿಸಲು ಚೆನ್ನೈಗೆ ಒಂದು ದಿನದ ಪ್ರವಾಸದಲ್ಲಿದ್ದ ನಿರ್ಮಲಾ ಸೀತಾರಾಮನ್ ಅವರು ಮೈಲಾಪುರ ಪ್ರದೇಶದ ದಕ್ಷಿಣ ಮಾದ ಸ್ಟ್ರೀಟ್ ಗೆ ಭೇಟಿ ನೀಡಿದ್ದರು ಎಂದು ದಿ ಹಿಂದೂ ವರದಿ ಮಾಡಿದೆ. ಅಲ್ಲಿ ಅವರು ಸುಂಡಕ್ಕೈ (ಟರ್ಕಿ ಬೆರ್ರಿ), ಪಿಡಿ ಕರನೈ (ಕಾಡು ಗೆಣಸು), ಐದು ಗೊಂಚಲು ಮುಲೈ ಕೀರೈ (ಒಂದು ರೀತಿಯ ಸೊಪ್ಪು), ಮತ್ತು ಮನಾಥಕ್ಕಲಿ ಕೀರೈ (ಸೊಪ್ಪು) ಖರೀದಿಸಿದ್ದಾರೆ.

ಕೇಂದ್ರ ಸಚಿವರ ಜೊತೆಗಿದ್ದ ಬಿಜೆಪಿ ಶಾಸಕಿ ವನತಿ ಶ್ರೀನಿವಾಸನ್ ಅವರು, ಸೀತಾರಾಮನ್ ಅಮರಂತ್ ತಳಿಯ “ತಂಡು ಕೀರೈ” ಖರೀದಿಸಲು ಅಲ್ಲಿ ವಾಹನ ನಿಲ್ಲಿಸಿದ್ದರು. ಆದರೆ ಅದು ಇರಲಿಲ್ಲ. ಆಮೇಲೆ ಅವರು ಇತರ ತರಕಾರಿಗಳನ್ನು ಖರೀದಿಸಿದರು. ಸೀತಾರಾಮನ್ ಅವರು ಚಿಕ್ಕವರಿದ್ದಾಗ ಮೈಲಾಪುರದಲ್ಲಿ ಅನೇಕ ಬೇಸಿಗೆಗಳನ್ನು ಕಳೆದಿದ್ದರು ಮತ್ತು ಆ ಸ್ಥಳವನ್ನು ಚೆನ್ನಾಗಿ ತಿಳಿದಿದ್ದರು ಎಂದು ವನತಿ ಹೇಳಿರುವುದಾಗಿ ವರದಿಯಲ್ಲಿದೆ. ಇಂಡಿಯನ್ ಎಕ್ಸ್‌ಪ್ರೆಸ್ ಮಾರಾಟಗಾರರಲ್ಲಿ ಒಬ್ಬರೊಂದಿಗೆ ಮಾತನಾಡಿದ್ದು ವಿತ್ತ ಸಚಿವರು 200 ರೂಪಾಯಿಯ ತರಕಾರಿ ಖರೀದಿಸಿದ್ದಾರೆ. ವರದಿಯಲ್ಲಿ ಸೀತಾರಾಮನ್ ಅವರು ಖರೀದಿಸಿದ ತರಕಾರಿಗಳ ಪಟ್ಟಿಯಲ್ಲಿ ಈರುಳ್ಳಿ ಇಲ್ಲ. ಹಾಗಾಗಿ ವೈರಲ್ ಆಗಿರುವ ಫೋಟೊ ಎಡಿಟ್ ಮಾಡಿದ್ದು ಎಂಬುದು ಇಲ್ಲಿ ಸ್ಪಷ್ಟವಾಗಿದೆ.

Published On - 4:53 pm, Thu, 13 October 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್