AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check ಸ್ಮೃತಿ ಇರಾನಿ ಓದುತ್ತಿದ್ದದ್ದು ರಾಹುಲ್ ಗಾಂಧಿ ಬಗ್ಗೆ ಇರುವ ಪುಸ್ತಕ? ವೈರಲ್ ಫೋಟೊದ ಸತ್ಯಾಸತ್ಯತೆ ಇಲ್ಲಿದೆ

ಈ ಟ್ವೀಟ್‌ನಲ್ಲಿರುವ ಚಿತ್ರ ನೋಡಿದರೆ ಸ್ಮೃತಿ ಇರಾನಿ ಕೈಯಲ್ಲಿರುವುದು ಮುಖಪುಟದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೊ ಇರುವ 'ಮೋದಿ@20' ಎಂಬ ಪುಸ್ತಕ.

Fact Check ಸ್ಮೃತಿ ಇರಾನಿ ಓದುತ್ತಿದ್ದದ್ದು ರಾಹುಲ್ ಗಾಂಧಿ ಬಗ್ಗೆ ಇರುವ ಪುಸ್ತಕ? ವೈರಲ್ ಫೋಟೊದ ಸತ್ಯಾಸತ್ಯತೆ ಇಲ್ಲಿದೆ
ಸ್ಮೃತಿ ಇರಾನಿ
TV9 Web
| Edited By: |

Updated on: Nov 03, 2022 | 9:31 PM

Share

ಕೇಂದ್ರ ಸಚಿವೆ ಸ್ಮೃತಿ ಇರಾನಿ (Smriti Irani) ಅವರು ಪುಸ್ತಕವೊಂದನ್ನು ಓದುತ್ತಿದ್ದು ಪುಸ್ತಕದ ಮುಖಪುಟದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯ(Rahul Gandhi) ಚಿತ್ರವಿದೆ. ‘Rahul Gandhi’s Day-to-Day Schedule 2022 – 2023’ ಎಂಬುದು ಪುಸ್ತಕದ ಹೆಸರು. ಈ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು, ಇದು ಫೋಟೊಶಾಪ್ ಮಾಡಿದ ಚಿತ್ರ. ಸ್ಮೃತಿ ಇರಾನಿಯವರ ದೃಢೀಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಮೂಲ ಫೋಟೋ, ಅವರು ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಜೀವನವನ್ನು ಆಧರಿಸಿದ ‘Modi@20: Dreams meet Delivery’ ಎಂಬ ಶೀರ್ಷಿಕೆಯ ಪುಸ್ತಕವನ್ನು ಓದುತ್ತಿರುವುದನ್ನು ತೋರಿಸುತ್ತದೆ.

ಫ್ಯಾಕ್ಟ್ ಚೆಕ್ ಈ ವೈರಲ್ ಫೋಟೊ ಬಗ್ಗೆ ಫ್ಯಾಕ್ಟ್ ಚೆಕ್ ನಡೆಸಿರುವ ದಿ ಕ್ವಿಂಟ್ ವೈರಲ್ ಫೋಟೊ ಎಡಿಟ್ ಮಾಡಿದ್ದು ಎಂದು ಕಂಡುಕೊಂಡಿದೆ.ವೈರಲ್ ಚಿತ್ರವನ್ನು ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ, ಸ್ಮೃತಿ ಇರಾನಿ ಅವರು 18 ಸೆಪ್ಟೆಂಬರ್ 2002 ರಂದು ಮೋದಿ ಪುಸ್ತಕದ ಹಿಂದಿ ಆವೃತ್ತಿಯ ಬಿಡುಗಡೆಗಾಗಿ ಪಾಟ್ನಾದಲ್ಲಿದ್ದಾಗ ಫೋಟೋವನ್ನು ಹಂಚಿಕೊಂಡಿದ್ದರು.

ಈ ಟ್ವೀಟ್‌ನಲ್ಲಿರುವ ಚಿತ್ರ ನೋಡಿದರೆ ಸ್ಮೃತಿ ಇರಾನಿ ಕೈಯಲ್ಲಿರುವುದು ಮುಖಪುಟದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಫೋಟೊ ಇರುವ ‘ಮೋದಿ@20′ ಎಂಬ ಪುಸ್ತಕ.

ಮೋದಿ@20: ಡ್ರೀಮ್ಸ್ ಮೀಟ್ ಡೆಲಿವರಿ’ ಎಂಬುದು ಮೋದಿಯವರ ಸಾರ್ವಜನಿಕ ಜೀವನದ ಕುರಿತಾದ ಪುಸ್ತಕವಾಗಿದ್ದು, ಇದನ್ನು ಕೇಂದ್ರ ಸಚಿವರಾದ ಅಮಿತ್ ಶಾ ಮತ್ತು ಎಸ್ ಜೈಶಂಕರ್ ಮತ್ತು ಲೇಖಕರಾದ ಅಮಿಶ್ ತ್ರಿಪಾಠಿ ಮತ್ತು ಸುಧಾ ಮೂರ್ತಿ ಸೇರಿದಂತೆ ಹಲವಾರು ಪ್ರಮುಖ ವ್ಯಕ್ತಿಗಳು ಬರೆದಿದ್ದಾರೆ, ಇದನ್ನು ಮೇ 2022 ರಲ್ಲಿ ಬಿಡುಗಡೆ ಮಾಡಲಾಗಿತ್ತು. ಬಿಜೆಪಿಯ ಬಿಹಾರ ಉಸ್ತುವಾರಿ ವಿನೋದ್ ತಾವ್ಡೆ ಅವರೊಂದಿಗೆ ಪುಸ್ತಕದ ಹಿಂದಿ ಆವೃತ್ತಿಯನ್ನು ಬಿಡುಗಡೆ ಮಾಡಲು ಇರಾನಿ ಅವರು ಸೆಪ್ಟೆಂಬರ್ 18 ರಂದು ಬಿಹಾರದ ಪಾಟ್ನಾಕ್ಕೆ ಬಂದಿದ್ದರು.

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್