AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಮಹಾಕುಂಭಕ್ಕೆ ತೆರಳುತ್ತಿದ್ದ ಬಸ್ ಅಪಘಾತ ಎಂದು ಪಾಕಿಸ್ತಾನದ ವಿಡಿಯೋ ವೈರಲ್

ಮಹಾ ಕುಂಭಮೇಳಕ್ಕೆ ಹೋಗುತ್ತಿದ್ದ ಬಸ್ ಅಪಘಾತ ಸಂಭವಿಸಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವಿಡಿಯೋ ಸುಳ್ಳು ಎಂದು ನಾವು ಖಚಿತವಾಗಿ ಹೇಳುತ್ತೇವೆ. ತನಿಖೆಯಿಂದ ಈ ವಿಡಿಯೋ ಪಾಕಿಸ್ತಾನದ್ದು ಎಂದು ತಿಳಿದುಬಂದಿದೆ. ಅಲ್ಲಿ ರೈವಿಂಡ್ ತಬ್ಲಿಘಿ ಇಜ್ತೆಮಾದಿಂದ ಹಿಂತಿರುಗುವಾಗ ಬಸ್ ಚರಂಡಿಗೆ ಬಿದ್ದಿದೆ.

Fact Check: ಮಹಾಕುಂಭಕ್ಕೆ ತೆರಳುತ್ತಿದ್ದ ಬಸ್ ಅಪಘಾತ ಎಂದು ಪಾಕಿಸ್ತಾನದ ವಿಡಿಯೋ ವೈರಲ್
Mahakumbh Bus Accident Fact Check
ಪ್ರೀತಿ ಭಟ್​, ಗುಣವಂತೆ
| Edited By: |

Updated on: Feb 04, 2025 | 7:40 PM

Share

ಪ್ರಯಾಗ್‌ರಾಜ್​ನಲ್ಲಿ ನಡೆಯುತ್ತಿರುವ ಮಹಾಕುಂಭಕ್ಕೆ ಅನೇಕ ಫೇಕ್ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇದೀಗ ಬಸ್ಸೊಂದು ಚರಂಡಿಗೆ ಬಿದ್ದಿರುವ ವಿಡಿಯೋ ಹರಿದಾಡುತ್ತಿದೆ. ವಿಡಿಯೋದಲ್ಲಿ ಬಸ್ ಸುತ್ತಲೂ ಅನೇಕ ಜನರು ನಿಂತಿದ್ದಾರೆ. ಅನೇಕ ಬಳಕೆದಾರರು ಈ ವಿಡಿಯೋ ಹಂಚಿಕೊಳ್ಳುವ ಮೂಲಕ, ಈ ಬಸ್ ಪ್ರಯಾಗರಾಜ್ ಮಹಾಕುಂಭಕ್ಕೆ ಹೋಗುತ್ತಿದ್ದಾಗ ಚರಂಡಿಗೆ ಬಿದ್ದಿದೆ ಎಂದು ಬರೆದುಕೊಳ್ಳುತ್ತಿದ್ದಾರೆ. ಈ ಅಪಘಾತದಲ್ಲಿ 10 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಪೋಸ್ಟ್​ನಲ್ಲಿ ಹೇಳಲಾಗಿದೆ.

ಎಕ್ಸ್ ಬಳಕೆದಾರರೊಬ್ಬರು ಈ ವಿಡಿಯೋವನ್ನು ಹಂಚಿಕೊಂಡು, ಇದು ಮಹಾ ಕುಂಭ ಪ್ರಯಾಗರಾಜ್‌ನದ್ದು ಎಂದು ಹೇಳಿಕೊಂಡು “ವೈರಲ್ ಮಹಾ ಕುಂಭ ಬಸ್ ಚರಂಡಿಗೆ ಬಿದ್ದಿದೆ” ಎಂದು ಬರೆದಿದ್ದಾರೆ.

Fact Check:

ಈ ಸುದ್ದಿಯ ಸತ್ಯಾಸತ್ಯತೆಯನ್ನು ಟಿವಿ9 ಕನ್ನಡ ಪರಿಶೋದಿಸಿದಾಗ ಸುಳ್ಳು ಹೇಳಿಕೆಯೊಂದಿಗೆ ಈ ವಿಡಿಯೋ ವೈರಲ್ ಆಗುತ್ತಿದೆ ಎಂಬುದು ಕಂಡುಬಂದಿದೆ. ವೈರಲ್ ಆಗುತ್ತಿರುವ ವಿಡಿಯೋಗೂ ಪ್ರಯಾಗ್‌ರಾಜ್ ಮಹಾಕುಂಭಕ್ಕೂ ಯಾವುದೇ ಸಂಬಂಧವಿಲ್ಲ. ಈ ವಿಡಿಯೋ ಪಾಕಿಸ್ತಾನದ್ದಾಗಿದೆ.

ವೈರಲ್ ವಿಡಿಯೋದ ನಿಜಾಂಶವನ್ನು ತಿಳಿಯಲು ನಾವು ರಿವರ್ಸ್ ಇಮೇಜ್ ಹುಡುಕಾಟದ ಸಹಾಯವನ್ನು ಪಡೆದುಕೊಂಡೆವು. ಆಗ ಈ ವಿಡಿಯೋವನ್ನು ನವೆಂಬರ್ 3, 2024 ರಂದು ಡಾ. ಅಲ್ತಾಫ್ ಬಲೋಚ್ ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ಅಪ್‌ಲೋಡ್ ಮಾಡಿರುವುದು ನಾವು ಕಂಡುಕೊಂಡಿದ್ದೇವೆ. “ರೈವಿಂಡ್ ತಬ್ಲಿಘಿ ಜಮಾತ್‌ನಿಂದ ಹಿಂತಿರುಗುವಾಗ ಪ್ರಯಾಣಿಕರ ಬಸ್ ಚರಂಡಿಗೆ ಬಿದ್ದಿತು” ಎಂಬ ಮಾಹಿತಿ ಇದರಲ್ಲಿದೆ.

ಇದಲ್ಲದೆ, ನವೆಂಬರ್ 4, 2024 ರಂದು ಮಿಷನ್ ಸಲೀಮ್ ಖಾದ್ರಿ 92 ಎಂಬ ಫೇಸ್‌ಬುಕ್ ಪುಟದಲ್ಲಿ ಕೂಡ ಇದೇ ವೈರಲ್ ವಿಡಿಯೋ ಅಪ್‌ಲೋಡ್ ಆಗಿರುವುದನ್ನು ನಾವು ಕಂಡುಕೊಂಡಿದ್ದೇವೆ. ಇಲ್ಲೂ ರೈವಿಂಡ್ ಸಭೆಯಿಂದ ಹಿಂತಿರುಗುವಾಗ ಬಸ್ ಚರಂಡಿಗೆ ಬಿದ್ದಿದೆ ಎಂದು ಬರೆಯಲಾಗಿದೆ.

Fact Check: ಶಾರುಖ್ ಖಾನ್-ಸಲ್ಮಾನ್ ಖಾನ್ ಮಹಾಕುಂಭದಲ್ಲಿ ಸ್ನಾನ ಮಾಡಿದ್ದು ನಿಜವೇ?

ಈ ಮಾಹಿತಿಯ ಆಧಾರದ ಮೇಲೆ ನಾವು ಗೂಗಲ್​ನಲ್ಲಿ ಕೀವರ್ಡ್‌ಗಳೊಂದಿಗೆ ಹುಡುಕಿದಾಗ, ಈ ಅಪಘಾತದ ಕುರಿತು ಹಲವು ಸುದ್ದಿ ವರದಿಗಳು ನಮಗೆ ಸಿಕ್ಕವು. ಪಾಕಿಸ್ತಾನಿ ಸುದ್ದಿ ವಾಹಿನಿ ಹಮ್ ನ್ಯೂಸ್‌ನ ಯೂಟ್ಯೂಬ್ ಚಾನೆಲ್‌ನಲ್ಲಿ, ಈ ವಿಡಿಯೋದ ವಿವರಣೆಯನ್ನು “ತಬ್ಲಿಘಿ ಇಜ್ತೆಮಾದಿಂದ ಇತ್ತೀಚಿನ ಸುದ್ದಿ – ಲಾಹೋರ್‌ನಲ್ಲಿ ಬಸ್ ಚರಂಡಿಗೆ ಬಿದ್ದಿದೆ” ಎಂದು ನೀಡಲಾಗಿದೆ.

ಮಾಹಿತಿಯ ಪ್ರಕಾರ, ಈ ವಿಡಿಯೋ ನವೆಂಬರ್ 3, 2024 ರಂದು, ರೈವಿಂಡ್‌ನಲ್ಲಿ ವಾರ್ಷಿಕ ತಬ್ಲಿಘಿ ಇಜ್ತೆಮಾ ಮುಗಿದ ನಂತರ 70 ಜನರನ್ನು ಹೊತ್ತ ಬಸ್ ಕೋಟ್ ಅಡ್ಡು ಪಟ್ಟಣದ ಕಡೆಗೆ ಬರುತ್ತಿತ್ತು. ಈ ಸಮಯದಲ್ಲಿ, ಈ ಬಸ್ಸಿನ ಚಕ್ರ ಜಾರಿ ಬಸ್ ಚರಂಡಿಗೆ ಬಿದ್ದಿತು. ಅಪಘಾತದಲ್ಲಿ ಸುಮಾರು 30 ಜನರು ಗಾಯಗೊಂಡಿದ್ದಾರೆ. ಈ ಅಪಘಾತದಲ್ಲಿ ಯಾರೂ ಸಾವನ್ನಪ್ಪಿಲ್ಲ ಎಂದು ಬರೆಯಲಾಗಿದೆ.

ಇದಾದ ನಂತರ, ಪ್ರಯಾಗ್‌ರಾಜ್‌ಗೆ ಹೋಗುತ್ತಿದ್ದ ಬಸ್‌ ಅಪಘಾತ ಸಂಭವಿಸಿದೆಯೇ ಎಂದು ನಾವು ಕೀವರ್ಡ್‌ಗಳನ್ನು ಬಳಸಿ ಹುಡುಕಿದೆವು. ಈ ಸಂದರ್ಭ ಇತ್ತೀಚೆಗೆ ಮಹಾ ಕುಂಭಮೇಳದಿಂದ ಹಿಂತಿರುಗುತ್ತಿದ್ದ ಬಸ್ ನಾಸಿಕ್-ಗುಜರಾತ್ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿ 7 ಜನರು ಸಾವನ್ನಪ್ಪಿದ್ದಾರೆ ಎಂದು ನಾವು ಕಂಡುಕೊಂಡೆವು. ಆದರೆ ಈ ವೀಡಿಯೊ ಆ ಘಟನೆಯದ್ದಲ್ಲ.

ಈ ಎಲ್ಲ ಮಾಹಿತಿಯ ಆಧಾರದ ಮೇಲೆ, ಮಹಾ ಕುಂಭಮೇಳಕ್ಕೆ ಹೋಗುತ್ತಿದ್ದ ಬಸ್ ಅಪಘಾತ ಸಂಭವಿಸಿದೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ ವಿಡಿಯೋ ಸುಳ್ಳು ಎಂದು ನಾವು ಖಚಿತವಾಗಿ ಹೇಳುತ್ತೇವೆ. ತನಿಖೆಯಿಂದ ಈ ವಿಡಿಯೋ ಪಾಕಿಸ್ತಾನದ್ದು ಎಂದು ತಿಳಿದುಬಂದಿದೆ. ಅಲ್ಲಿ ರೈವಿಂಡ್ ತಬ್ಲಿಘಿ ಇಜ್ತೆಮಾದಿಂದ ಹಿಂತಿರುಗುವಾಗ ಬಸ್ ಚರಂಡಿಗೆ ಬಿದ್ದಿದೆ.

ಇನ್ನಷ್ಟು ಫ್ಯಾಕ್ಟ್ ಚೆಕ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ
ಭಾಷಣಕ್ಕೆ ಹರಿಪ್ರಸಾದ್​​ ಪಟ್ಟು: ಸದನದಿಂದ ಹೊರಟ ಗವರ್ನರ್​ ತಡೆದು ಹೈಡ್ರಾಮಾ