AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಮಗಳನ್ನು ಹಿಂದೂ ಹುಡುಗನಿಗೆ ಮದುವೆ ಮಾಡಿಕೊಟ್ಟ ಕೇರಳದ ಮುಸ್ಲಿಂ ದಂಪತಿ; ವೈರಲ್ ಚಿತ್ರದ ಹಿಂದಿನ ಸತ್ಯಾಸತ್ಯತೆ ಏನು?

ಮುಸ್ಲಿಂ ದಂಪತಿಯ ಪಾದಗಳಿಗೆ ನವ ವಧು ನಮಸ್ಕರಿಸುತ್ತಿರುವ ಫೋಟೊ ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ನಡೆದ ವಿವಾಹ ಸಮಾರಂಭ ದ್ದಾಗಿದೆ. ಇಲ್ಲಿ ಹಿಂದೂ ಕುಟುಂಬದ ಅನಾಥ ಹುಡುಗಿಯ ಮದುವೆಯನ್ನು ಮುಸ್ಲಿಂ ಕುಟುಂಬ ನಡೆಸಿಕೊಟ್ಟು ಮತ ಸೌಹಾರ್ದತೆ ಮೆರೆದಿತ್ತು.

Fact Check: ಮಗಳನ್ನು ಹಿಂದೂ ಹುಡುಗನಿಗೆ ಮದುವೆ ಮಾಡಿಕೊಟ್ಟ ಕೇರಳದ ಮುಸ್ಲಿಂ ದಂಪತಿ; ವೈರಲ್ ಚಿತ್ರದ ಹಿಂದಿನ ಸತ್ಯಾಸತ್ಯತೆ ಏನು?
ವೈರಲ್ ಆಗಿರುವ ಚಿತ್ರ
ರಶ್ಮಿ ಕಲ್ಲಕಟ್ಟ
|

Updated on: Apr 07, 2021 | 7:26 PM

Share

ಕೇರಳದ ಮುಸ್ಲಿಂ ಕುಟುಂಬವೊಂದು ತಮ್ಮ ಮಗಳನ್ನು ಸನಾತನ ಹಿಂದೂ ಯುವಕನಿಗೆ ಮದುವೆ ಮಾಡಿಕೊಟ್ಟಿದೆ. ಮಗಳು ಹಿಂದೂ ಕುಟುಂಬದಲ್ಲಿ ಸುರಕ್ಷಿತಳಾಗಿರುತ್ತಾಳೆ. ಜೈ ಶ್ರೀರಾಮ್ ಎಂಬ ಸಾಲಿನೊಂದಿಗೆ ನವದಂಪತಿಯ ಫೋಟೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಮುಸ್ಲಿಂ ದಂಪತಿಯ ಪಾದಗಳಿಗೆ ನವ ವಧು ನಮಸ್ಕರಿಸುವ ಫೋಟೊ ಇದಾಗಿದೆ. ಆದರೆ ವೈರಲ್ ಪೋಸ್ಟ್ ನಲ್ಲಿ ಹೇಳಿದಂತೆ ಮುಸ್ಲಿಂ ಕುಟುಂಬ ತಮ್ಮ ಮಗಳನ್ನು ಹಿಂದೂ ಹುಡುಗನಿಗೆ ಮದುವೆ ಮಾಡಿಕೊಟ್ಟಿಲ್ಲ. ಫೋಟೊ ಕೇರಳದ್ದು ಆಗಿದ್ದರೂ ಇದರ ಹಿಂದಿನ ಸತ್ಯ ಬೇರೆಯೇ ಇದೆ.

ಫ್ಯಾಕ್ಟ್ ಚೆಕ್ ವೈರಲ್ ಚಿತ್ರದ ಬಗ್ಗೆ ಫ್ಯಾಕ್ಟ್​ಚೆಕ್ ಮಾಡಿದ ಬೂಮ್ ಲೈವ್ ಈ ಫೋಟೊ ಕೇರಳದ್ದು ಎಂದು ಹೇಳಿದೆ. ವೈರಲ್ ಚಿತ್ರವನ್ನು ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ 2020 ಫೆಬ್ರವರಿ 18ರಂದು ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯಲ್ಲಿ ‘Kerala: Muslim man marries off his Hindu foster daughter’ ಎಂಬ ಶೀರ್ಷಿಕೆಯಲ್ಲಿ ಪ್ರಕಟವಾದ ಸುದ್ದಿಯಲ್ಲಿ ಈ ಫೋಟೊ ಬಳಕೆಯಾಗಿದೆ.

ಟೈಮ್ಸ್ ಆಫ್ ಇಂಡಿಯಾ ಪತ್ರಿಕೆ ವರದಿ

ಈ ಸುದ್ದಿ ಪ್ರಕಾರ ಕೇರಳದ ಕಾಸರಗೋಡು ಜಿಲ್ಲೆಯ ಮೇಲ್ಪರಂಬದ ಅಬ್ದುಲ್ಲ ರಹಿಮಾನ್ ಎಂಬವರು ರಾಜೇಶ್ವರಿಯನ್ನು ದತ್ತು ಪಡೆದಿದ್ದರು. ತಮಿಳುನಾಡು ಮೂಲದ ಕೃಷಿ ಕಾರ್ಮಿಕರ ಮಗಳು ರಾಜೇಶ್ವರಿ 10 ವರ್ಷದವಳಿದ್ದಾಗ ಪೋಷಕರನ್ನು ಕಳೆದುಕೊಂಡಿದ್ದಳು.

2020 ಫೆಬ್ರವರಿ 17ರಂದು ಮಾತೃಭೂಮಿ ಪತ್ರಿಕೆಯಲ್ಲಿ ಪ್ರಕಟವಾದ ವರದಿ ಪ್ರಕಾರ ರಾಜೇಶ್ವರಿ ಅವರ ಅಪ್ಪ ಅಬ್ದುಲ್ಲ ಅವರ ಮನೆಯಲ್ಲಿ ಕೆಲಸದಾಳು ಆಗಿದ್ದರು. ಅಬ್ದುಲ್ಲ ಅವರಿಗೆ ಕುನ್ನರಿಯಂ ನಲ್ಲಿ ತೋಟ ಇದ್ದು, ಅಲ್ಲಿ ಈ ದಂಪತಿ ಕೆಲಸ ಮಾಡುತ್ತಿದ್ದರು. ಹಾಗಾಗಿ ರಾಜೇಶ್ವರಿ ಬಾಲ್ಯದಿಂದಲೇ ಅಬ್ದುಲ್ಲ ಅವರ ಕುಟುಂಬದೊಂದಿಗೆ ನಂಟು ಹೊಂದಿದ್ದಳು. ಮಾತೃಭೂಮಿ ಪತ್ರಿಕೆಯಲ್ಲಿ ಪ್ರಕಟವಾದ ವರದಿ

ರಾಜೇಶ್ವರಿ ಅವರ ವರ ವಿಷ್ಣು ಅವರ ಕುಟುಂಬ ದೇವಸ್ಥಾನದಲ್ಲಿಯೇ ಮದುವೆಯಾಗಬೇಕು ಎಂದು ಹಠ ಹಿಡಿದಿದ್ದರಿಂದ ಕಾಞಂಗಾಡ್ ನ ಮಣ್ಯೋಟ್ ದೇವಾಲಯದಲ್ಲಿ ಅವರ ಮದುವೆ ನಡೆದಿತ್ತು. ಈ ದೇವಾಲಯದಲ್ಲಿ ಎಲ್ಲ ಧರ್ಮದ ಜನರಿಗೆ ಪ್ರವೇಶವಿದೆ. ಹಿಂದೂ ಮತ್ತು ಮುಸ್ಲಿಂ ಕುಟುಂಬ ಮತ್ತು ಸ್ನೇಹಿತರ ಉಪಸ್ಥಿತಿಯಲ್ಲಿ ಫೆಬ್ರವರಿ 16ರಂದು ರಾಜೇಶ್ವರಿ ಮತ್ತು ವಿಷ್ಣು ಪ್ರಸಾದ್ ಅವರ ವಿವಾಹ ನಡೆದಿತ್ತು ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಇದನ್ನೂ ಓದಿ:  Fact Check: ಪಶ್ಚಿಮ ಬಂಗಾಳದ ಬಿಜೆಪಿ ಪ್ರಚಾರ ಕಾರ್ಯಕ್ರಮದಲ್ಲಿ ಜನರನ್ನು ಆಕರ್ಷಿಸಲು ಖಾಲಿ ಕುರ್ಚಿಯಲ್ಲಿ ಊಟದ ಪೊಟ್ಟಣ, ವೈರಲ್ ಆಗಿದ್ದು ಹಳೇ ಫೋಟೊ

Fact Check:ಕರ್ನಾಟಕದಲ್ಲಿ ಕೊವಿಡ್ ನಿರ್ಬಂಧ; ಸಾಮಾಜಿಕ ತಾಣದಲ್ಲಿ ವೈರಲ್ ಆಯ್ತು ಹಳೇ ವಿಡಿಯೊ

(Fact Check Viral Photo of Hindu couple seeking blessings of an Elderly Muslim couple)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ