AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check ಗೇಟ್ ವೇ ಆಫ್ ಇಂಡಿಯಾಕ್ಕೆ ಬಡಿಯುತ್ತಿರುವ ಅಲೆ, ಈಗ ವೈರಲ್ ಆಗಿರುವ ವಿಡಿಯೊ ಹಳೇದು

ನಡುವೆ ಗೇಟ್‌ವೇ ಆಫ್ ಇಂಡಿಯಾದ ಗೋಡೆಗಳ ಮೇಲೆ ನೀರು ಚಿಮ್ಮುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ರೊಚ್ಚಿಗೆದ್ದಂತಿರುವ ಅಲೆಗಳು ಗೇಟ್ ವೇ ಆಫ್ ಇಂಡಿಯಾಗೆ ಬಡಿಯುತ್ತಿದ್ದು...

Fact Check ಗೇಟ್ ವೇ ಆಫ್ ಇಂಡಿಯಾಕ್ಕೆ ಬಡಿಯುತ್ತಿರುವ ಅಲೆ, ಈಗ ವೈರಲ್ ಆಗಿರುವ ವಿಡಿಯೊ ಹಳೇದು
TV9 Web
| Edited By: |

Updated on:Sep 19, 2022 | 6:41 PM

Share

ಭಾರತೀಯ ಹವಾಮಾನ ಇಲಾಖೆ (IMD) ಸೆಪ್ಟೆಂಬರ್ 15 ರಿಂದ ಸೆಪ್ಟೆಂಬರ್ 19 ರವರೆಗೆ ಮಹಾರಾಷ್ಟ್ರದ ವಿವಿಧ ಭಾಗಗಳಿಗೆ ಯೆಲ್ಲೋ ಮತ್ತು ಆರೆಂಜ್ ಎಚ್ಚರಿಕೆಗಳನ್ನು ನೀಡಿದೆ. ಮುಂಬೈ (Mumbai) ಸೇರಿದಂತೆ ಹಲವಾರು ಪ್ರದೇಶಗಳು ಭಾರೀ ಮಳೆಯಿಂದಾಗಿ ಜಲಾವೃತವಾಗಿದೆ. ಹಲವಾರು ನೆಟ್ಟಿಗರು ಸಾಮಾಜಿಕ ಮಾಧ್ಯಮಗಳಲ್ಲಿ ಮಳೆ, ಮಳೆ ಅವಾಂತರಗಳ ಫೋಟೊ, ವಿಡಿಯೊಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಈ ನಡುವೆ ಗೇಟ್‌ವೇ ಆಫ್ ಇಂಡಿಯಾದ (Gateway of India) ಗೋಡೆಗಳ ಮೇಲೆ ನೀರು ಚಿಮ್ಮುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ರೊಚ್ಚಿಗೆದ್ದಂತಿರುವ ಅಲೆಗಳು ಗೇಟ್ ವೇ ಆಫ್ ಇಂಡಿಯಾಗೆ ಬಡಿಯುತ್ತಿದ್ದು ಹಿನ್ನಲೆಯಲ್ಲಿ ಬಲವಾದ ಗಾಳಿಯ ಶಬ್ದವೂ ಕೇಳಿಸಿತು. ಈ ವಿಡಿಯೊವನ್ನು ಸೆಪ್ಟೆಂಬರ್ 16, 2022 ರಂದು ಚಿತ್ರೀಕರಿಸಲಾಗಿದೆ ಎಂದು ಹೇಳಲಾಗಿದೆ. ಅಂದಹಾಗೆ ಈ ವಿಡಿಯೊ ಇತ್ತೀಚಿನದ್ದಲ್ಲ. ಇದು 2021ರಲ್ಲಿ ಮಹಾರಾಷ್ಟ್ರದಲ್ಲಿ ಚಂಡಮಾರುತ ಬಂದಾಗ ಚಿತ್ರೀಕರಿಸಿದ ವಿಡಿಯೊ ಆಗಿದೆ ಎಂದು ಇಂಡಿಯಾ ಟುಡೇ ಫ್ಯಾಕ್ಟ್ ಚೆಕ್ ಮಾಡಿದೆ.

ಫ್ಯಾಕ್ಟ್ ಚೆಕ್

ವಿಡಿಯೊ ಫ್ರೇಮ್​​ಗಳನ್ನು ರಿವರ್ಸ್ ಚೆಕ್ ಮಾಡಿದಾಗ ನ್ಯೂಸ್ 18 ವರದಿಯಲ್ಲಿನ ವಿಡಿಯೊ ಸಿಕ್ಕಿದೆ.ಈ ವರದಿ ಪ್ರಕಾರ, ಮೇ 2021 ರಲ್ಲಿ ಮಹಾರಾಷ್ಟ್ರಕ್ಕೆ ಟೌಕ್ಟೆ ಚಂಡಮಾರುತ ಅಪ್ಪಳಿಸಿದಾಗ ಗೇಟ್‌ವೇ ಆಫ್ ಇಂಡಿಯಾವನ್ನು ಅಪ್ಪಳಿಸುವ ಅಲೆಗಳ ವಿಡಿಯೊ ಇದಾಗಿದೆ. ಅತ್ಯಂತ ತೀವ್ರವಾದ ಚಂಡಮಾರುತ ಎಂದು ವರ್ಗೀಕರಿಸಲಾದ ಟೌಕ್ಟೆ ಮಹಾರಾಷ್ಟ್ರದಲ್ಲಿ ಕನಿಷ್ಠ ಆರು ಜೀವಗಳನ್ನು ಬಲಿ ತೆಗೆದುಕೊಂಡಿತ್ತು. “ಎನ್‌ಎಸ್ ನೌ” ಎಂಬ ಸುದ್ದಿ ಔಟ್‌ಲೆಟ್ ಮೂಲಕ YouTube ನಲ್ಲಿ ಹಂಚಿಕೊಂಡ ವಿಡಿಯೊದಲ್ಲಿ “ಗೇಟ್‌ವೇ ಆಫ್ ಇಂಡಿಯಾ ಮುಂಬೈ ಇನ್ ಟೌಕ್ಟೆ ತೂಫಾನ್. ಸೈಕ್ಲೋನ್ ಟೌಕ್ಟೆ, ಎನ್‌ಎಸ್ ನೌ ಎಂದು ವಿಡಿಯೊಗೆ ಶೀರ್ಷಿಕೆ ನೀಡಲಾಗಿದೆ. ಸುದ್ದಿ ವರದಿಗಳ ಪ್ರಕಾರ ಗೇಟ್ ವೇ ಆಫ್ ಇಂಡಿಯಾಕ್ಕೆ ಯಾವುದೇ ಹಾನಿಯಾಗದಿದ್ದರೂ, ಈ ಘಟನೆಯಲ್ಲಿ ಸಮುದ್ರಕ್ಕೆ ಎದುರು ಭಾಗದಲ್ಲಿ ನಿರ್ಮಿಸಿರುವ ಸುರಕ್ಷತಾ ಗೋಡೆ ಮತ್ತು ಕಬ್ಬಿಣದ ಗೇಟ್‌ಗಳು ನಾಶವಾಗಿವೆ.  ಆದಾಗ್ಯೂ  ಸೆಪ್ಟೆಂಬರ್ 16, 2022 ರಂದು ಮುಂಬೈ  ಮಳೆಯ ವೈರಲ್ ವಿಡಿಯೊ ಎಂದು ಈಗ ವೈರಲ್ ಆಗಿರುವ ವಿಡಿಯೊ ಕಳೆದ ವರ್ಷದ್ದು.

Published On - 6:22 pm, Mon, 19 September 22

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ವಿಚಾರಣೆಗೆ ಬಂದಿದ್ದ ಮಲ್ಲಿಕಾರ್ಜುನ ಮುತ್ಯಾಗೆ ಶಾಕ್ ಕೊಟ್ಟ ಪೊಲೀಸ್ರು
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!