AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿ ತನ್ನ ವಿರುದ್ಧವಿರುವ 6 ಕೇಸುಗಳನ್ನು ರದ್ದು ಮಾಡುವಂತೆ ಸುಪ್ರೀಂಗೆ ಮನವಿ ಸಲ್ಲಿಸಿದ ಜುಬೇರ್

ಆರು ಪ್ರಕರಣಗಳ ಪೈಕಿ ಮೂರು ಪ್ರಕರಣಗಳು ಲಖೀಂಪುರ್ ಖೇರಿ, ಹಾಥರಸ್ ಮತ್ತು ಸೀತಾಪುರ್​​ನಲ್ಲಿ ದಾಖಲಾಗಿದೆ. ಕೆಲವು ಬಲಪಂಥೀಯ ನಾಯಕರು ದ್ವೇಷ ಪ್ರಚೋದನೆ ಮಾಡುತ್ತಿದ್ದಾರೆ ಎಂದು ಟ್ವೀಟ್ ಮಾಡಿದ ಆರೋಪದಲ್ಲಿ ಜುಬೇರ್ ವಿರುದ್ದ ಕೇಸ್ ದಾಖಲಾಗಿತ್ತು

ಉತ್ತರ ಪ್ರದೇಶದಲ್ಲಿ ತನ್ನ ವಿರುದ್ಧವಿರುವ 6 ಕೇಸುಗಳನ್ನು ರದ್ದು ಮಾಡುವಂತೆ ಸುಪ್ರೀಂಗೆ ಮನವಿ ಸಲ್ಲಿಸಿದ  ಜುಬೇರ್
ಮೊಹಮ್ಮದ್ ಜುಬೇರ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jul 14, 2022 | 7:57 PM

ಉತ್ತರ ಪ್ರದೇಶದಲ್ಲಿ (Uttar Pradesh) ತನ್ನ ವಿರುದ್ಧ ದಾಖಲಾಗಿರುವ ಆರು ಪ್ರಕರಣಗಳನ್ನು ರದ್ದು ಮಾಡಬೇಕು ಎಂದು ಫ್ಯಾಕ್ಟ್ ಚೆಕರ್ ಮೊಹಮ್ಮದ್ ಜುಬೇರ್ (Mohammed Zubair) ಸುಪ್ರೀಂಕೋರ್ಟ್​​ಗೆ (Supreme Court) ಮನವಿ ಸಲ್ಲಿಸಿದ್ದಾರೆ. ಈ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರೂಪಿಸಿದ್ದು ಇದನ್ನೂ ರದ್ದು ಮಾಡಬೇಕು ಎಂದು ಜುಬೇರ್ ಹೇಳಿದ್ದಾರೆ. ಆರು ಪ್ರಕರಣಗಳ ಪೈಕಿ ಮೂರು ಪ್ರಕರಣಗಳು ಲಖೀಂಪುರ್ ಖೇರಿ, ಹಾಥರಸ್ ಮತ್ತು ಸೀತಾಪುರ್​​ನಲ್ಲಿ ದಾಖಲಾಗಿದೆ. ಕೆಲವು ಬಲಪಂಥೀಯ ನಾಯಕರು ದ್ವೇಷ ಪ್ರಚೋದನೆ ಮಾಡುತ್ತಿದ್ದಾರೆ ಎಂದು ಟ್ವೀಟ್ ಮಾಡಿದ ಆರೋಪದಲ್ಲಿ ಜುಬೇರ್ ವಿರುದ್ದ ಕೇಸ್ ದಾಖಲಾಗಿತ್ತು. ಜುಬೇರ್ ತಂಡ ಆದಷ್ಟು ಬೇಗ ವಿಚಾರಣೆ ನಡೆಸಲು ಹೇಳಿದೆ. ಮಂಗಳವಾರ ಜುಬೇರ್ ವಿರುದ್ದ ಸೀತಾಪುರದಲ್ಲಿ ದಾಖಲಾದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ವಿಸ್ತರಿಸಿತ್ತು. ತನಗೆ ಹತ್ಯಾ ಬೆದರಿಕೆ ಬರುತ್ತಿದೆ ಎಂದು ಆಲ್ಟ್ ನ್ಯೂಸ್ ಸಂಸ್ಥಾಪಕ ಜುಬೇರ್ ಸುಪ್ರೀಂಕೋರ್ಟ್ ಗೆ ಹೇಳಿದ್ದರು. ಆದಾಗ್ಯೂ ಉತ್ತರ ಪ್ರದೇಶ ಮತ್ತು ದೆಹಲಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ವಿಸ್ತರಣೆ ಆಗದೇ ಇರುವ ಕಾರಣ ಜುಬೇರ್ ಜೈಲಿನಲ್ಲೇ ಇದ್ದಾರೆ. ಅದೇ ದಿನ ಜುಬೇರ್ ವಿರುದ್ದ ದಾಖಲಾಗಿರುವ ಒಂದಕ್ಕಿಂತ ಹೆಚ್ಚು ಪ್ರಕರಣಗಳ ತನಿಖೆ ನಡೆಸಲು ಉತ್ತರ ಪ್ರದೇಶ ಪೊಲೀಸರು ವಿಶೇಷ ತನಿಖಾ ಸಂಸ್ಥೆಯನ್ನು ರಚಿಸಿದ್ದರು. ಪ್ರಕರಣಗಳ ಬಗ್ಗೆ ತ್ವರಿತ ತನಿಖೆ ನಡೆಸಿ ಚಾರ್ಜ್ ಶೀಟ್ ಸಲ್ಲಿಸುವಂತೆ ಎಸ್ಐಟಿಗೆ ಹೇಳಲಾಗಿದೆ.

4 ವರ್ಷಗಳ ಹಿಂದೆ ಜುಬೇರ್ ಅವರು 1983ರಲ್ಲಿ ಬಿಡುಗಡೆಯಾದ ಖ್ಯಾತ ಸಿನಿಮಾವೊಂದರ ಸ್ಕ್ರೀನ್ ಶಾಟ್ ಟ್ವೀಟ್ ಮಾಡಿದ ವಿಚಾರದಲ್ಲಿ ಜುಬೇರ್ ಅವರನ್ನು ಜೂನ್ 27ರಂದು ದೆಹಲಿ ಪೊಲೀಸರು ಬಂಧಿಸಿದ್ದರು.

ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ
ಕಾರಿನ ಗ್ಲಾಸ್ ಒಡೆದು 11 ಲಕ್ಷ ರೂ. ಕಳ್ಳತನ: ಸಿಸಿಟಿವಿ ವಿಡಿಯೋ ನೋಡಿ
ಕಾರಿನ ಗ್ಲಾಸ್ ಒಡೆದು 11 ಲಕ್ಷ ರೂ. ಕಳ್ಳತನ: ಸಿಸಿಟಿವಿ ವಿಡಿಯೋ ನೋಡಿ