AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check | ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿದ ಪಾಕ್ ಪಿಎಂ ಇಮ್ರಾನ್ ಖಾನ್ ; ವೈರಲ್ ವಿಡಿಯೊದಲ್ಲೇನಿದೆ?

ಪಾಕ್ ಪ್ರಧಾನಿ ಇಮ್ರಾನ್ ಖಾನ್, ಪಾಕಿಸ್ತಾನಕ್ಕೆ ಈಗ ಪ್ರಬಲವಾದ ಸೈನ್ಯಬೇಕು. ಯಾಕೆ? ಯಾಕೆಂದರೆ ನಮ್ಮ ನೆರೆಯ ರಾಷ್ಟ್ರದಲ್ಲಿ 73 ವರ್ಷಗಳಿಂದ ಈ ರೀತಿಯ ಸರ್ಕಾರವನ್ನು ಕಂಡಿಲ್ಲ ಎಂದು ಹೇಳಿರುವ ವಿಡಿಯೊದ ಸತ್ಯಾಸತ್ಯತೆ ಏನು?

Fact Check | ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿದ ಪಾಕ್ ಪಿಎಂ ಇಮ್ರಾನ್ ಖಾನ್ ; ವೈರಲ್ ವಿಡಿಯೊದಲ್ಲೇನಿದೆ?
ವೈರಲ್ ವಿಡಿಯೊ ಟ್ವೀಟ್
ರಶ್ಮಿ ಕಲ್ಲಕಟ್ಟ
|

Updated on:Jan 14, 2021 | 9:08 PM

Share

ಜನವರಿ 10ರಂದು ಪಾಕಿಸ್ತಾನದ ಹೋರಾಟಗಾರ ಆರಿಫ್ ಅಜಕಿಯಾ 26 ಸೆಕೆಂಡ್ ಅವಧಿಯ ವಿಡಿಯೊವೊಂದನ್ನು ಟ್ವೀಟ್ ಮಾಡಿದ್ದರು. ಈ ವಿಡಿಯೊದಲ್ಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್, ಪಾಕಿಸ್ತಾನಕ್ಕೆ ಈಗ ಪ್ರಬಲವಾದ ಸೈನ್ಯಬೇಕು. ಯಾಕೆ? ಯಾಕೆಂದರೆ ನಮ್ಮ ನೆರೆಯ ರಾಷ್ಟ್ರದಲ್ಲಿ 73 ವರ್ಷಗಳಿಂದ ಈ ರೀತಿಯ ಸರ್ಕಾರವನ್ನು ಕಂಡಿಲ್ಲ ಎಂದು ಹೇಳುತ್ತಿದ್ದಾರೆ. ಅಲ್ಪ ಕ್ಷಣದಲ್ಲಿ ಟಿವಿ ನಿರೂಪಕಿಯ ವಾಯ್ಸ್ ಓವರ್ ಕೇಳಿಸುತ್ತಿದ್ದು ಅದರಲ್ಲಿ ಇಮ್ರಾನ್ ಖಾನ್ ಅವರ ಮಾತೇ ಪುನರುಚ್ಚಾರಣೆಯಾಗಿದೆ.

ಈ ವಿಡಿಯೊದಲ್ಲಿ 92 News ಎಂಬ ಲೋಗೊ ಇದೆ. ಜನವರಿ 11ರಂದು ಅಂಕಣಕಾರ್ತಿ ಶೆಫಾಲಿ ವೈದ್ಯ ಇದೇ ವಿಡಿಯೊವನ್ನು ಪೋಸ್ಟ್ ಮಾಡಿ ನರೇಂದ್ರ ಮೋದಿ ಸರ್ಕಾರಕ್ಕೆ ಇದಕ್ಕಿಂತ ದೊಡ್ಡ ಮಟ್ಟದ ಪ್ರಚಾರ ಸಿಗುವುದಿಲ್ಲ. ನಿಮ್ಮ ಬದ್ಧ ವೈರಿ 73 ವರ್ಷಗಳಲ್ಲಿ ಈ ರೀತಿಯ ಸರ್ಕಾರ ಭಾರತದಲ್ಲಿ ನೋಡಿಲ್ಲ ಎಂದು ಸಾರ್ವಜನಿಕವಾಗಿ ಹೇಳಿದ್ದಾರೆ ಎಂದು ಬರೆದುಕೊಂಡಿದ್ದರು.

ವೈರಲ್ ಆಗಿರುವ ವಿಡಿಯೊದ ಫ್ಯಾಕ್ಟ್ ಚೆಕ್ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೊವನ್ನು ಆಲ್ಟ್ ನ್ಯೂಸ್ ಫ್ಯಾಕ್ಟ್​ಚೆಕ್ ಮಾಡಿದೆ. ಯೂಟ್ಯೂಬ್ ನಲ್ಲಿ 92 News ಎಂದು ಸರ್ಚ್ ಮಾಡಿದಾಗ ಪಾಕಿಸ್ತಾನ ಮೂಲದ ಸುದ್ದಿವಾಹಿನಿ ಇದು ಎಂದು ತಿಳಿದುಬಂದಿದೆ. ಈ ಸುದ್ದಿವಾಹಿನಿಯಲ್ಲಿ ಇಮ್ರಾನ್ ಖಾನ್ ಭಾಷಣದ 20 ಸೆಕೆಂಡ್​ಗಳನ್ನು ಮಾತ್ರ ಹೆಡ್​ಲೈನ್​ನಲ್ಲಿ ತೋರಿಸಲಾಗಿದೆ.

ಇಡೀ ಭಾಷಣದ ಒಂದು ತುಣುಕು ಅಂದರೆ 0:56 ರಿಂದ 1:16 ಅವಧಿಯ ಭಾಷಣವೇ ವೈರಲ್ ಆಗಿರುವುದು. 1.16 ನಿಮಿಷದ ನಂತರ ಖಾನ್ ಅವರು ಭಾರತದಲ್ಲಿ ಫೇಕ್ ವೆಬ್​ಸೈಟ್​ಗಳ ಬಗ್ಗೆ ಇಯು ಡಿಸ್​ಇನ್ಫೋಲ್ಯಾಬ್ ವರದಿಯನ್ನು ಉಲ್ಲೇಖಿಸಿ ಮಾತನಾಡಿದ್ದಾರೆ. ಭಾರತದಲ್ಲಿ ಸುಳ್ಳು ಸುದ್ದಿಗಳು ಯಾವ ರೀತಿ ವ್ಯಾಪಿಸುತ್ತಿವೆ ಎಂದು ಈ ವರದಿ ಹೇಳಿತ್ತು. ಇಮ್ರಾನ್ ಖಾನ್ ಭಾಷಣದಲ್ಲೇನಿದೆ? ಡಿಸೆಂಬರ್ 26ರಂದು ಚಕ್​ವಾಲ್​ನಲ್ಲಿ ಇಮ್ರಾನ್ ಖಾನ್ ಭಾಷಣ ಮಾಡಿದ್ದಾರೆ. ಈ ಬಗ್ಗೆ 92 News HD ಸುದ್ದಿವಾಹಿನಿ ಸೇರಿದಂತೆ ಹಲವಾರು ಮಾಧ್ಯಮಗಳು ವರದಿ ಮಾಡಿವೆ. ಭಾಷಣದ ಪೂರ್ತಿ ವಿಡಿಯೊ ನೋಡಿದರೆ 2.11 ನಿಮಿಷಕ್ಕೆ ತಲುಪುವಾಗ ಖಾನ್ ಇಯು ಡಿಸ್​ಇನ್ಫೋಲ್ಯಾಬ್ ( EU DisinforLab) ವರದಿಯನ್ನು ಉಲ್ಲೇಖಿಸಿದ್ದಾರೆ. ವೈರಲ್ ಆಗಿರುವ ವಿಡಿಯೊ 5:57 ರಿಂದ 6:11 ನಡುವೆ ಇರುವುದಾಗಿದೆ.

5:57 ರ ನಂತರ ಖಾನ್ ಮಾತು ಹೀಗಿದೆ – ‘ಪಾಕಿಸ್ತಾನಕ್ಕೆ ಬಲವಾದ ಸೈನ್ಯ ಬೇಕು, ಅದು ಇಂದು. ಮತ್ತು ಏಕೆ? ಯಾಕೆಂದರೆ ನಮ್ಮ ನೆರೆ ರಾಷ್ಟ್ರವಾದ ಭಾರತದಲ್ಲಿ 73 ವರ್ಷಗಳಲ್ಲಿ ಈ ರೀತಿಯ ಸರ್ವಾಧಿಕಾರಿ, ವರ್ಣಭೇದ ನೀತಿ, ಮುಸ್ಲಿಂ ವಿರೋಧಿ, ಇಸ್ಲಾಂ ವಿರೋಧಿ, ಪಾಕಿಸ್ತಾನ ವಿರೋಧಿ ಮತ್ತು ಕಾಶ್ಮೀರದ ಮೇಲಿನ ವರ್ತನೆಯನ್ನು ನೋಡಿಲ್ಲ’ .  ಅಂದರೆ ಇಮ್ರಾನ್ ಖಾನ್ , ಮೋದಿಯವರನ್ನು ಹೊಗಳಿಲ್ಲ ಎಂಬುದು ಇಲ್ಲಿ ಸ್ಪಷ್ಟ.

Fact Check | ಸ್ಟ್ಯಾಂಡ್​ಅಪ್ ಕಾಮಿಡಿಯನ್ ಮುನಾವರ್​ಗೆ ಥಳಿತ; ವೈರಲ್ ವಿಡಿಯೊದ ಸತ್ಯಾಸತ್ಯತೆ ಏನು?

Published On - 9:07 pm, Thu, 14 January 21

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ