AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check: ಸೋನಿಯಾ ಗಾಂಧಿ ಅವರ ಶೆಲ್ಫ್​ನಲ್ಲಿ ಮತಾಂತರದ ಪುಸ್ತಕ? ವೈರಲ್ ಆಗಿದ್ದು ಎಡಿಟ್ ಮಾಡಿದ ಚಿತ್ರ

Sonia Gandhi: ಸೋನಿಯಾ ಗಾಂಧಿಯವರ ಗ್ರಂಥಾಲಯದಲ್ಲಿ“ ಭಾರತವನ್ನು ಕ್ರಿಶ್ಚಿಯನ್ ರಾಷ್ಟ್ರವಾಗಿ ಪರಿವರ್ತಿಸುವುದು ಹೇಗೆ ”ಎಂಬ ಪುಸ್ತಕ? ದಯವಿಟ್ಟು ರಿಟ್ವೀಟ್ ಮಾಡಿ ಮತ್ತು ಬಹಿರಂಗಪಡಿಸಿ ಎಂಬ ಒಕ್ಕಣೆಯೊಂದಿಗೆ ಸೋನಿಯಾ ಗಾಂಧಿ ಅವರ ಫೋಟೊ ವೈರಲ್ ಆಗಿದೆ.

Fact Check: ಸೋನಿಯಾ ಗಾಂಧಿ ಅವರ ಶೆಲ್ಫ್​ನಲ್ಲಿ ಮತಾಂತರದ ಪುಸ್ತಕ? ವೈರಲ್ ಆಗಿದ್ದು ಎಡಿಟ್ ಮಾಡಿದ ಚಿತ್ರ
ಸೋನಿಯಾಗಾಂಧಿಯವರ ವೈರಲ್ ಚಿತ್ರ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jun 01, 2021 | 4:42 PM

Share

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರ ಪುಸ್ತಕದ ಕಪಾಟಿನಲ್ಲಿ “ಭಾರತವನ್ನು ಕ್ರಿಶ್ಚಿಯನ್ ರಾಷ್ಟ್ರವಾಗಿ ಪರಿವರ್ತಿಸುವುದು ಹೇಗೆ” ಎಂಬ ಪುಸ್ತಕವಿದೆ ಎಂದು ತೋರಿಸುವ ಫೋಟೊವೊಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಆದಾಗ್ಯೂ, ವೈರಲ್ ಆಗಿರುವ ಫೋಟೊ ಎಡಿಟ್ ಮಾಡಿದ್ದು. ಸೋನಿಯಾ ಗಾಂಧಿ ಅವರ ಶೆಲ್ಫ್ ನಲ್ಲಿರುವ ಪುಸ್ತಕದ ಹೆಸರನ್ನು ಎಡಿಟ್ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಯಬಿಡಲಾಗಿದೆ. ಸೋನಿಯಾ ಗಾಂಧಿಯವರ ಶೆಲ್ಫ್ ನಲ್ಲಿರುವುದು ಯಾವ ಪುಸ್ತಕ? ವೈರಲ್ ಫೋಟೊ ಬಗ್ಗೆ ಫ್ಯಾಕ್ಟ್ ಚೆಕ್ ಮಾಡಿದ ದಿ ಕ್ವಿಂಟ್, ಸೋನಿಯಾ ಗಾಂಧಿ ಅವರ ಕಪಾಟಿನಲ್ಲಿ How to convert India into Christian nation ಎಂಬ ಪುಸ್ತಕ ಇಲ್ಲ ಎಂದು ಹೇಳಿದೆ. ವೈರಲ್ ಆಗಿರುವ ಫೋಟೊದ ಒರಿಜಿನಲ್ ಫೋಟೊವನ್ನು ಪರಿಶೀಲಿಸಿದರೆ ಕಪಾಟಿನಲ್ಲಿ ಅಂತಹ ಯಾವುದೇ ಪುಸ್ತಕ ಇಲ್ಲ.

ವೈರಲ್ ಚಿತ್ರದ ಜತೆಗಿರುವ ಒಕ್ಕಣೆ ಏನು ಸೋನಿಯಾ ಗಾಂಧಿಯವರ ಗ್ರಂಥಾಲಯದಲ್ಲಿ“ ಭಾರತವನ್ನು ಕ್ರಿಶ್ಚಿಯನ್ ರಾಷ್ಟ್ರವಾಗಿ ಪರಿವರ್ತಿಸುವುದು ಹೇಗೆ ”ಎಂಬ ಪುಸ್ತಕ? ದಯವಿಟ್ಟು ರಿಟ್ವೀಟ್ ಮಾಡಿ ಮತ್ತು ಬಹಿರಂಗಪಡಿಸಿ ಎಂಬ ಒಕ್ಕಣೆಯೊಂದಿಗೆ ಸೋನಿಯಾ ಗಾಂಧಿ ಅವರ ಫೋಟೊ ವೈರಲ್ ಆಗಿದೆ.

ಫೇಸ್‌ಬುಕ್‌ನ ಇನ್ನೊಬ್ಬ ಬಳಕೆದಾರರು, “ಜೂಮ್ ಮಾಡಿ ಮತ್ತು ಬಲಭಾಗವನ್ನು ನೋಡಿ. “ಭಾರತವನ್ನು ಕ್ರಿಶ್ಚಿಯನ್ ರಾಷ್ಟ್ರವಾಗಿ ಪರಿವರ್ತಿಸುವುದು ಹೇಗೆ” ಎಂಬ ಪುಸ್ತಕ. ಯಾವುದೇ ಹೆಚ್ಚಿನ ಪುರಾವೆ ಅಗತ್ಯವಿದೆಯೇ? ಎಂದು ಬರೆದುಕೊಂಡಿದ್ದಾರೆ.

ಇದೇ ರೀತಿಯ ಒಕ್ಕಣೆಯೊಂದಿಗೆ ಸೋನಿಯಾ ಗಾಂಧಿ ಅವರ ಫೋಟೊ ಫೇಸ್‌ಬುಕ್‌ ಮತ್ತು ಟ್ವಿಟರ್ ನಲ್ಲಿ ವೈರಲ್ ಆಗಿದೆ. ಫ್ಯಾಕ್ಟ್ ಚೆಕ್ ವೈರಲ್ ಚಿತ್ರವನ್ನು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ನಡೆಸಿದಾಗ, ಹಿಂದೂಸ್ತಾನ್ ಟೈಮ್ಸ್ ನಲ್ಲಿ ಪ್ರಕಟವಾದ ಸುದ್ದಿ ಸಿಕ್ಕಿದ್ದು , ಅದರಲ್ಲಿ ಇದೇ ಚಿತ್ರ ಸಿಕ್ಕಿದೆ. ಈ ಫೋಟೊ ಪಿಟಿಐ ಸುದ್ದಿಸಂಸ್ಥೆಯದ್ದು ಎಂದು ದಿ ಕ್ವಿಂಟ್ ವರದಿ ಮಾಡಿದೆ. ಪಿಟಿಐ ಆರ್ಕೈವ್​ನಲ್ಲಿ ಈ ಫೋಟೊಗಾಗಿ ಹುಡುಕಾಡಿದಾಗ2020 ರಲ್ಲಿ ಗಾಂಧಿಯವರ ವಿಡಿಯೊ ಸಂವಾದದಿಂದ ಈ ಚಿತ್ರವನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿಯಿತು.

ಹಿಂದೂಸ್ತಾನ್ ಟೈಮ್ಸ್ ನಲ್ಲಿ ಪ್ರಕಟವಾದ ಚಿತ್ರ

ಕಾಂಗ್ರೆಸ್ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಲ್ಲಿ ಹುಡುಕಾಡಿ ವಿಡಿಯೊವನ್ನು ಪರಿಶೀಲಿಸಿ ಮೂಲ ವಿಡಿಯೊವನ್ನು ನೋಡಿದಾಗ, ಬಿಹಾರ ಚುನಾವಣೆಯ ಒಂದು ದಿನ ಮೊದಲು 2020 ಅಕ್ಟೋಬರ್ 27 ರಂದು ಗಾಂಧಿ ಬಿಹಾರದ ಜನರನ್ನು ಉದ್ದೇಶಿಸಿ ಮಾತನಾಡಿದ್ದ ವಿಡಿಯೊ ಇದಾಗಿದೆ.

ವೈರಲ್ ಚಿತ್ರದಲ್ಲಿನ ಅಂಶಗಳನ್ನು ಕಾಂಗ್ರೆಸ್ ವಿಡಿಯೊದಲ್ಲಿನ ದೃಶ್ಯಕ್ಕೆಗೆ ಹೋಲಿಸಿ ನೋಡಿದಾಗ ಸೋನಿಯಾ ಗಾಂಧಿಯವರ ಹಿನ್ನೆಲೆಯಲ್ಲಿರುವ ಕಪಾಟಿನಲ್ಲಿದ್ದದ್ದು ಪವಿತ್ರ ಬೈಬಲ್. ಆದರೆ ‘ಭಾರತವನ್ನು ಕ್ರಿಶ್ಚಿಯನ್ ರಾಷ್ಟ್ರವಾಗಿ ಪರಿವರ್ತಿಸುವುದು ಹೇಗೆ’ ಎಂಬ ಶೀರ್ಷಿಕೆಯ ಪುಸ್ತಕ ಮತ್ತು ಯೇಸುಕ್ರಿಸ್ತನ ಪ್ರತಿಮೆಯನ್ನು ಈ ಚಿತ್ರದಲ್ಲಿ ಎಡಿಟ್ ಮಾಡಲಾಗಿದೆ.

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ಬಿವಿ ಅವರು, “ಈ ಎಡಿಟ್ ಮಾಡಿದ ಚಿತ್ರವನ್ನು ಹಂಚಿಕೊಳ್ಳುವ ಎಲ್ಲ ಸೋಷ್ಯಲ್ ಮೀಡಿಯಾ ಹ್ಯಾಂಡಲ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಲು ನಾವು ನಿರ್ಧರಿಸಿದ್ದೇವೆ. ಅಮಿತ್ ಮಾಲ್ವೇರ್ ಮತ್ತು ಕಂಪನಿಯ ಕೊಳಕು ತಂತ್ರಗಳನ್ನು ಇನ್ನಷ್ಟು ಸಹಿಸುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: Fact Check: ಕಾಂಗ್ರೆಸ್ ಟೂಲ್​ಕಿಟ್ ಎಂದು ವೈರಲ್ ಆದ ದಾಖಲೆ ಕಾಂಗ್ರೆಸ್ ಪಕ್ಷದ ನಕಲಿ ಲೆಟರ್​ಹೆಡ್ ಬಳಸಿ ಮಾಡಿದ್ದು

Published On - 4:42 pm, Tue, 1 June 21

Follow Us
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್