AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check | ಪಾಪ್ ತಾರೆ ರಿಹಾನ್ನಾ ಕೈಯಲ್ಲಿ ಪಾಕ್ ಧ್ವಜ; ಫೋಟೊಶಾಪ್ ಫೋಟೊ ವೈರಲ್

ದೆಹಲಿ ಗಡಿಯಲ್ಲಿ ಪ್ರತಿಭಟನೆ ನಿರತ ರೈತರಿಗೆ ಬೆಂಬಲ ಸೂಚಿಸಿ ಟ್ವೀಟ್ ಮಾಡಿದ ಅಮೆರಿಕದ ಖ್ಯಾತ ಪಾಪ್ ಗಾಯಕಿ ರಿಹಾನ್ನಾ ಅವರು ಪಾಕ್ ಧ್ವಜ ಹಿಡಿದಿರುವ ಫೋಟೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದರ ಸತ್ಯಾಸತ್ಯತೆ ಏನು?

Fact Check | ಪಾಪ್ ತಾರೆ ರಿಹಾನ್ನಾ ಕೈಯಲ್ಲಿ ಪಾಕ್ ಧ್ವಜ; ಫೋಟೊಶಾಪ್ ಫೋಟೊ ವೈರಲ್
ರಿಹಾನ್ನಾ ಅವರು ವೆಸ್ಟ್ ಇಂಡೀಸ್ ಧ್ವಜ ಹಿಡಿದಿರುವ ನಿಜ ಚಿತ್ರ ಮತ್ತು ಪಾಕ್ ಧ್ವಜ ಹಿಡಿದಿರುವ ಫೋಟೊಶಾಪ್ ಚಿತ್ರ
ರಶ್ಮಿ ಕಲ್ಲಕಟ್ಟ
| Edited By: |

Updated on: Feb 05, 2021 | 6:38 PM

Share

ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ಬಗ್ಗೆ ನಾವೇಕೆ ಮಾತನಾಡುತ್ತಿಲ್ಲ ಎಂದು ಅಮೆರಿಕದ ಪಾಪ್ ತಾರೆ ರಿಹಾನ್ನಾ ಟ್ವೀಟ್ ಮಾಡಿದ್ದರು. ಈ ಟ್ವೀಟ್ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪರ-ವಿರೋಧ ಚರ್ಚೆಗಳು ನಡೆದಿತ್ತು. ಈ ವಿದ್ಯಮಾನಗಳ ನಡುವೆಯೇ ರಿಹಾನ್ನಾ ಸ್ಟೇಡಿಯಂವೊಂದರಲ್ಲಿ ಪಾಕಿಸ್ತಾನ ಧ್ವಜ ಹಿಡಿದಿರುವ ಫೋಟೊ ವೈರಲ್ ಆಗಿದೆ.

ಉತ್ತರ ಪ್ರದೇಶದ ಬಿಜೆಪಿಯ ಯುವಮೋರ್ಚಾ ಘಟಕದ ನಾಯಕ ಅಭಿಷೇಕ್ ಮಿಶ್ರಾ ಅವರು ರಿಹಾನ್ನಾ ಪಾಕ್ ಧ್ವಜ ಹಿಡಿದಿರುವ ಫೋಟೊ ಮತ್ತು ರಿಹಾನ್ನಾ ಅವರ ಹಳೇ ಟ್ವೀಟ್ ಗಳ ಸ್ಕ್ರೀನ್ ಶಾಟ್​ಗಳನ್ನು ಟ್ವೀಟ್ ಮಾಡಿ ಭಟ್ಟಂಗಿಗಳ ರಾಜಮಾತೆ ಎಂದಿದ್ದರು. ಇದೇ ಫೋಟೊವನ್ನು ಹಲವಾರು ನೆಟ್ಟಿಗರು ಫೇಸ್​ಬುಕ್ ಮತ್ತು ಟ್ವಿಟರ್​ನಲ್ಲಿ ಶೇರ್ ಮಾಡಿದ್ದಾರೆ.

Tweet BJP

ಅಭಿಷೇಕ್ ಮಿಶ್ರಾ ಅವರ ಟ್ವೀಟ್

ಸೋಮ್​ವಂಶಿ  ಅಮೃತಾ ಅವರ ಟ್ವೀಟ್

ಫ್ಯಾಕ್ಟ್​ಚೆಕ್ ವೈರಲ್ ಚಿತ್ರದ ಫ್ಯಾಕ್ಟ್​ಚೆಕ್ ಮಾಡಿದ ಬೂಮ್ ಲೈವ್, ಇದು ಫೋಟೊಶಾಪ್ ಮಾಡಿದ ಚಿತ್ರ ಎಂದು ಹೇಳಿದೆ. 2019ರಲ್ಲಿ ನಡೆದ ವಿಶ್ವಕಪ್ ಕ್ರಿಕೆಟ್ ಪಂದ್ಯದ ವೇಳೆ ರಿಹಾನ್ನಾ ವೆಸ್ಟ್ ಇಂಡೀಸ್ ಧ್ವಜವನ್ನು ಹಿಡಿರುವ ಫೋಟೊ ಇದು.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ರಿಹಾನ್ನಾಳ ಫೋಟೊದ ಹಿಂದಿನ ಸತ್ಯಾಸತ್ಯತೆ ತಿಳಿಯಲು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದರೆ ವೆಸ್ಟ್ ಇಂಡೀಸ್ ಧ್ವಜ ಹಿಡಿದಿರುವ ರಿಹಾನ್ನಾಳ ಫೋಟೊ ಸಿಗುತ್ತದೆ. ರಿಹಾನ್ನಾ ವೆಸ್ಟ್ ಇಂಡೀಸ್ ಧ್ವಜ ಹಿಡಿದಿರುವ ಫೋಟೊವನ್ನು 2019 ಜುಲೈ 1ರಂದು ಐಸಿಸಿ ಟ್ವೀಟ್ ಮಾಡಿತ್ತು.

ವೆಸ್ಟ್ ಇಂಡೀಸ್ ಮತ್ತು ಶ್ರೀಲಂಕಾ ನಡುವಿನ ಪಂದ್ಯವನ್ನು ವೀಕ್ಷಿಸಲು ರಿಹಾನ್ನಾ ಬಂದಿದ್ದರು. ರಿಹಾನ್ನಾ ಸ್ಟೇಡಿಯಂನಲ್ಲಿರುವ ಫೋಟೊವನ್ನು ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ಟ್ವಿಟರ್ ಹ್ಯಾಂಡಲ್ ಕೂಡಾ ಶೇರ್ ಮಾಡಿತ್ತು.

Fact Check | ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿದ ಪಾಕ್ ಪಿಎಂ ಇಮ್ರಾನ್ ಖಾನ್ ; ವೈರಲ್ ವಿಡಿಯೊದಲ್ಲೇನಿದೆ?

ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು