AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Fact Check | ಪಾಪ್ ತಾರೆ ರಿಹಾನ್ನಾ ಕೈಯಲ್ಲಿ ಪಾಕ್ ಧ್ವಜ; ಫೋಟೊಶಾಪ್ ಫೋಟೊ ವೈರಲ್

ದೆಹಲಿ ಗಡಿಯಲ್ಲಿ ಪ್ರತಿಭಟನೆ ನಿರತ ರೈತರಿಗೆ ಬೆಂಬಲ ಸೂಚಿಸಿ ಟ್ವೀಟ್ ಮಾಡಿದ ಅಮೆರಿಕದ ಖ್ಯಾತ ಪಾಪ್ ಗಾಯಕಿ ರಿಹಾನ್ನಾ ಅವರು ಪಾಕ್ ಧ್ವಜ ಹಿಡಿದಿರುವ ಫೋಟೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದರ ಸತ್ಯಾಸತ್ಯತೆ ಏನು?

Fact Check | ಪಾಪ್ ತಾರೆ ರಿಹಾನ್ನಾ ಕೈಯಲ್ಲಿ ಪಾಕ್ ಧ್ವಜ; ಫೋಟೊಶಾಪ್ ಫೋಟೊ ವೈರಲ್
ರಿಹಾನ್ನಾ ಅವರು ವೆಸ್ಟ್ ಇಂಡೀಸ್ ಧ್ವಜ ಹಿಡಿದಿರುವ ನಿಜ ಚಿತ್ರ ಮತ್ತು ಪಾಕ್ ಧ್ವಜ ಹಿಡಿದಿರುವ ಫೋಟೊಶಾಪ್ ಚಿತ್ರ
ರಶ್ಮಿ ಕಲ್ಲಕಟ್ಟ
| Edited By: |

Updated on: Feb 05, 2021 | 6:38 PM

Share

ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ಬಗ್ಗೆ ನಾವೇಕೆ ಮಾತನಾಡುತ್ತಿಲ್ಲ ಎಂದು ಅಮೆರಿಕದ ಪಾಪ್ ತಾರೆ ರಿಹಾನ್ನಾ ಟ್ವೀಟ್ ಮಾಡಿದ್ದರು. ಈ ಟ್ವೀಟ್ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪರ-ವಿರೋಧ ಚರ್ಚೆಗಳು ನಡೆದಿತ್ತು. ಈ ವಿದ್ಯಮಾನಗಳ ನಡುವೆಯೇ ರಿಹಾನ್ನಾ ಸ್ಟೇಡಿಯಂವೊಂದರಲ್ಲಿ ಪಾಕಿಸ್ತಾನ ಧ್ವಜ ಹಿಡಿದಿರುವ ಫೋಟೊ ವೈರಲ್ ಆಗಿದೆ.

ಉತ್ತರ ಪ್ರದೇಶದ ಬಿಜೆಪಿಯ ಯುವಮೋರ್ಚಾ ಘಟಕದ ನಾಯಕ ಅಭಿಷೇಕ್ ಮಿಶ್ರಾ ಅವರು ರಿಹಾನ್ನಾ ಪಾಕ್ ಧ್ವಜ ಹಿಡಿದಿರುವ ಫೋಟೊ ಮತ್ತು ರಿಹಾನ್ನಾ ಅವರ ಹಳೇ ಟ್ವೀಟ್ ಗಳ ಸ್ಕ್ರೀನ್ ಶಾಟ್​ಗಳನ್ನು ಟ್ವೀಟ್ ಮಾಡಿ ಭಟ್ಟಂಗಿಗಳ ರಾಜಮಾತೆ ಎಂದಿದ್ದರು. ಇದೇ ಫೋಟೊವನ್ನು ಹಲವಾರು ನೆಟ್ಟಿಗರು ಫೇಸ್​ಬುಕ್ ಮತ್ತು ಟ್ವಿಟರ್​ನಲ್ಲಿ ಶೇರ್ ಮಾಡಿದ್ದಾರೆ.

Tweet BJP

ಅಭಿಷೇಕ್ ಮಿಶ್ರಾ ಅವರ ಟ್ವೀಟ್

ಸೋಮ್​ವಂಶಿ  ಅಮೃತಾ ಅವರ ಟ್ವೀಟ್

ಫ್ಯಾಕ್ಟ್​ಚೆಕ್ ವೈರಲ್ ಚಿತ್ರದ ಫ್ಯಾಕ್ಟ್​ಚೆಕ್ ಮಾಡಿದ ಬೂಮ್ ಲೈವ್, ಇದು ಫೋಟೊಶಾಪ್ ಮಾಡಿದ ಚಿತ್ರ ಎಂದು ಹೇಳಿದೆ. 2019ರಲ್ಲಿ ನಡೆದ ವಿಶ್ವಕಪ್ ಕ್ರಿಕೆಟ್ ಪಂದ್ಯದ ವೇಳೆ ರಿಹಾನ್ನಾ ವೆಸ್ಟ್ ಇಂಡೀಸ್ ಧ್ವಜವನ್ನು ಹಿಡಿರುವ ಫೋಟೊ ಇದು.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ರಿಹಾನ್ನಾಳ ಫೋಟೊದ ಹಿಂದಿನ ಸತ್ಯಾಸತ್ಯತೆ ತಿಳಿಯಲು ಗೂಗಲ್ ರಿವರ್ಸ್ ಇಮೇಜ್ ಸರ್ಚ್ ಮಾಡಿದರೆ ವೆಸ್ಟ್ ಇಂಡೀಸ್ ಧ್ವಜ ಹಿಡಿದಿರುವ ರಿಹಾನ್ನಾಳ ಫೋಟೊ ಸಿಗುತ್ತದೆ. ರಿಹಾನ್ನಾ ವೆಸ್ಟ್ ಇಂಡೀಸ್ ಧ್ವಜ ಹಿಡಿದಿರುವ ಫೋಟೊವನ್ನು 2019 ಜುಲೈ 1ರಂದು ಐಸಿಸಿ ಟ್ವೀಟ್ ಮಾಡಿತ್ತು.

ವೆಸ್ಟ್ ಇಂಡೀಸ್ ಮತ್ತು ಶ್ರೀಲಂಕಾ ನಡುವಿನ ಪಂದ್ಯವನ್ನು ವೀಕ್ಷಿಸಲು ರಿಹಾನ್ನಾ ಬಂದಿದ್ದರು. ರಿಹಾನ್ನಾ ಸ್ಟೇಡಿಯಂನಲ್ಲಿರುವ ಫೋಟೊವನ್ನು ವೆಸ್ಟ್ ಇಂಡೀಸ್ ಕ್ರಿಕೆಟ್ ತಂಡದ ಟ್ವಿಟರ್ ಹ್ಯಾಂಡಲ್ ಕೂಡಾ ಶೇರ್ ಮಾಡಿತ್ತು.

Fact Check | ಪ್ರಧಾನಿ ನರೇಂದ್ರ ಮೋದಿಯವರನ್ನು ಹೊಗಳಿದ ಪಾಕ್ ಪಿಎಂ ಇಮ್ರಾನ್ ಖಾನ್ ; ವೈರಲ್ ವಿಡಿಯೊದಲ್ಲೇನಿದೆ?

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ