AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಯೋಗಿ ಸರ್ಕಾರ ನಕಲಿ ಎನ್​​ಕೌಂಟರ್ ನಡೆಸಿದೆ: ಅಖಿಲೇಶ್ ಯಾದವ್

ನಕಲಿ ಎನ್‌ಕೌಂಟರ್‌ಗಳ ಮೂಲಕ ಬಿಜೆಪಿ ಸರ್ಕಾರವು ನೈಜ ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದೆ. ಬಿಜೆಪಿಗೆ ನ್ಯಾಯಾಲಯಗಳ ಮೇಲೆ ನಂಬಿಕೆ ಇಲ್ಲ. ಇಂದಿನ ಮತ್ತು ಇತ್ತೀಚಿನ ಎನ್‌ಕೌಂಟರ್‌ಗಳ ಬಗ್ಗೆಯೂ ಸಮಗ್ರ ತನಿಖೆಯಾಗಬೇಕು ಮತ್ತು ಅಪರಾಧಿಗಳನ್ನು ಬಿಡಬಾರದು.

ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಯೋಗಿ ಸರ್ಕಾರ ನಕಲಿ ಎನ್​​ಕೌಂಟರ್ ನಡೆಸಿದೆ: ಅಖಿಲೇಶ್ ಯಾದವ್
ಅಖಿಲೇಶ್ ಯಾದವ್
ರಶ್ಮಿ ಕಲ್ಲಕಟ್ಟ
|

Updated on:Apr 13, 2023 | 6:42 PM

Share

ಲಖನೌ: ಗ್ಯಾಂಗ್​​ಸ್ಟರ್, ರಾಜಕಾರಣಿ ಅತೀಕ್ ಅಹ್ಮದ್ ಅವರ ಪುತ್ರ ಮತ್ತು ಆತನ ಸಹಚರನನ್ನು ಝಾನ್ಸಿಯಲ್ಲಿ ಕೊಲ್ಲಲು ಉತ್ತರ ಪ್ರದೇಶದ ಬಿಜೆಪಿ ಸರ್ಕಾರವು ನಕಲಿ ಎನ್‌ಕೌಂಟರ್ (Fake Encounter) ನಡೆಸಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ (Akhilesh Yadav) ಗುರುವಾರ ಆರೋಪಿಸಿದ್ದಾರೆ. ಉತ್ತರ ಪ್ರದೇಶವನ್ನು (Uttar Pradesh) ಕಾಡುತ್ತಿರುವ ನೈಜ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆ ಸೆಳೆಯಲು ಆಡಳಿತ ಪಕ್ಷ ಯತ್ನಿಸುತ್ತಿದೆ ಎಂದು ಆರೋಪಿಸಿದರು. ಬಿಜೆಪಿ ಸರ್ಕಾರಕ್ಕೆ ನ್ಯಾಯಾಲಯಗಳಲ್ಲಿ ನಂಬಿಕೆಯಿಲ್ಲ. ಅದು ಕಾನೂನನ್ನು ತನ್ನ ಕೈಗೆತ್ತಿಕೊಳ್ಳುತ್ತಿದೆ. ಅಧಿಕಾರದಲ್ಲಿರುವವರು ಯಾರು ಸರಿ ಅಥವಾ ತಪ್ಪು ಎಂದು ತೀರ್ಪು ನೀಡುವುದು ಮತ್ತು ಯಾರು ಬದುಕಬೇಕು ಅಥವಾ ಸಾಯಬೇಕು ಎಂದು ನಿರ್ಧರಿಸುವುದು ಸರಿಯಲ್ಲ ಎಂದಿದ್ದಾರೆ ಅಖಿಲೇಶ್.

ನಕಲಿ ಎನ್‌ಕೌಂಟರ್‌ಗಳ ಮೂಲಕ ಬಿಜೆಪಿ ಸರ್ಕಾರವು ನೈಜ ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಪ್ರಯತ್ನಿಸುತ್ತಿದೆ. ಬಿಜೆಪಿಗೆ ನ್ಯಾಯಾಲಯಗಳ ಮೇಲೆ ನಂಬಿಕೆ ಇಲ್ಲ. ಇಂದಿನ ಮತ್ತು ಇತ್ತೀಚಿನ ಎನ್‌ಕೌಂಟರ್‌ಗಳ ಬಗ್ಗೆಯೂ ಸಮಗ್ರ ತನಿಖೆಯಾಗಬೇಕು ಮತ್ತು ಅಪರಾಧಿಗಳನ್ನು ಬಿಡಬಾರದು. ಅಧಿಕಾರದಲ್ಲಿರುವವರಿಗೆ ಯಾವುದು ಸರಿ ಅಥವಾ ತಪ್ಪು ಎಂದು ನಿರ್ಧರಿಸುವ ಹಕ್ಕಿಲ್ಲ. ಬಿಜೆಪಿ ಸಾಮರಸ್ಯಕ್ಕೆ ವಿರುದ್ಧವಾಗಿದೆ ಎಂದು ಅಖಿಲೇಶ್ ಯಾದವ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಉತ್ತರ ಪ್ರದೇಶದ ಝಾನ್ಸಿಯಲ್ಲಿ ಗುರುವಾರ ನಡೆದ ಎನ್‌ಕೌಂಟರ್‌ನಲ್ಲಿ ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ವಾಂಟೆಡ್ ಆಗಿದ್ದ ಅತೀಕ್ ಅಹ್ಮದ್ ಅವರ ಪುತ್ರ ಅಸಾದ್ ಮತ್ತು ಸಹಚರನ ಹತ್ಯೆಯ ಕುರಿತು ಮಾಜಿ ಮುಖ್ಯಮಂತ್ರಿ ಪ್ರತಿಕ್ರಿಯಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ ಅಸಾದ್ ಮತ್ತು ಗುಲಾಮ್ ಮೋಟಾರ್ ಸೈಕಲ್‌ನಲ್ಲಿ ಪರಾರಿಯಾಗಲು ಪ್ರಯತ್ನಿಸುತ್ತಿದ್ದಾಗ ಝಾನ್ಸಿಯಲ್ಲಿ ವಿಶೇಷ ಕಾರ್ಯಪಡೆ ತಂಡವು ಅವರನ್ನು ತಡೆದಿತು. ಅವರು ಸಿಬ್ಬಂದಿಯ ಮೇಲೆ ಗುಂಡು ಹಾರಿಸಿದ್ದು ಪ್ರತೀಕಾರದ ಗುಂಡಿನ ದಾಳಿಯಲ್ಲಿ ಕೊಲ್ಲಲ್ಪಟ್ಟರು. ಇವರಿಂದ ಅತ್ಯಾಧುನಿಕ ವಿದೇಶಿ ನಿರ್ಮಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿGajendra Singh Shekhawat: ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಬಂಧನಕ್ಕೆ ರಾಜಸ್ಥಾನ ಹೈಕೋರ್ಟ್ ತಡೆಯಾಜ್ಞೆ

ಅದೇ ಕೊಲೆ ಪ್ರಕರಣದಲ್ಲಿ ಅಹ್ಮದ್‌ನನ್ನು ಪ್ರಯಾಗ್‌ರಾಜ್‌ನ ನ್ಯಾಯಾಲಯದ ಮುಂದೆ ಹಾಜರುಪಡಿಸಿದ ದಿನದಂದು ಎನ್‌ಕೌಂಟರ್ ನಡೆದಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. 2005ರಲ್ಲಿ ಆಗಿನ ಬಿಎಸ್‌ಪಿ ಶಾಸಕ ರಾಜು ಪಾಲ್‌ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿ ಉಮೇಶ್‌ ಪಾಲ್‌ ಮತ್ತು ಆತನ ಇಬ್ಬರು ಪೊಲೀಸ್‌ ಭದ್ರತಾ ಸಿಬ್ಬಂದಿಯನ್ನು ಈ ವರ್ಷದ ಫೆಬ್ರುವರಿ 24ರಂದು ಪ್ರಯಾಗ್‌ರಾಜ್‌ನ ಧೂಮಂಗಂಜ್‌ ಪ್ರದೇಶದಲ್ಲಿನ ಅವರ ಮನೆಯ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:36 pm, Thu, 13 April 23

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ