AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬನ್ ತಿಂದು ಹಣ ಕೊಡ್ಲಿಲ್ಲ, ಪೊಲೀಸರನ್ನ ಕರೆಸಿದ್ರೆ ಸೆಲ್ಯೂಟ್ ಮಾಡಿ ಎಂದ ನಕಲಿ ಐಪಿಎಸ್ ಅಧಿಕಾರಿ ಅರೆಸ್ಟ್​

ಲಕ್ನೋದಲ್ಲಿ ಬನ್ ತಿಂದು ಹಣ ಕೊಡಲು ನಿರಾಕರಿಸಿದ ನಕಲಿ ಐಪಿಎಸ್ ಅಧಿಕಾರಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದಾಗ, ತಾನು ಐಪಿಎಸ್ ಅಧಿಕಾರಿ ಎಂದು ನಟಿಸಿ ಸೆಲ್ಯೂಟ್ ಮಾಡುವಂತೆ ಬೆದರಿಸಿದ್ದ. ಗುರುತಿನ ಚೀಟಿ ತೋರಿಸಲು ವಿಫಲನಾದ ನಂತರ ಆತನ ವಂಚನೆ ಬಯಲಾಯಿತು. ಪೊಲೀಸರ ಸಮಯಪ್ರಜ್ಞೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶಂಸೆ ವ್ಯಕ್ತವಾಗಿದೆ. ವಂಚನೆ ಮತ್ತು ಸರ್ಕಾರಿ ಸಿಬ್ಬಂದಿಗೆ ತಪ್ಪು ಮಾಹಿತಿ ನೀಡಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದೆ.

ಬನ್ ತಿಂದು ಹಣ ಕೊಡ್ಲಿಲ್ಲ, ಪೊಲೀಸರನ್ನ ಕರೆಸಿದ್ರೆ ಸೆಲ್ಯೂಟ್ ಮಾಡಿ ಎಂದ ನಕಲಿ ಐಪಿಎಸ್ ಅಧಿಕಾರಿ ಅರೆಸ್ಟ್​
ನಕಲಿ ಐಪಿಎಸ್ ಅಧಿಕಾರಿImage Credit source: India TV
ನಯನಾ ರಾಜೀವ್
|

Updated on: Jun 17, 2026 | 9:07 AM

Share

ಲಕ್ನೋ, ಜೂನ್ 17: ಬನ್ ತಿಂದು ಹಣ ಕೊಡದೆ ಸತಾಯಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಅವರನ್ನು ಬಂಧಿಸಲು ಇದೊಂದೇ ಕಾರಣವಲ್ಲ. ಬನ್ ತಿಂದು ಹಣ ಕೊಟ್ಟಿಲ್ಲ ಸರ್ ಎಂದು ಅಂಗಡಿ ಮಾಲೀಕ ಪೊಲೀಸರಿಗೆ ಕರೆ ಮಾಡಿದ್ದ, ಪೊಲೀಸ್(Police) ಬಂದು ವಿಚಾರಿಸಿದಾಗ ತಾನು ನೋಯ್ಡಾದಲ್ಲಿ ಕೆಲಸ ಮಾಡುತ್ತಿರುವ ಐಪಿಎಸ್ ಅಧಿಕಾರಿ ನಂಗೆ ಸೆಲ್ಯೂಟ್ ಮಾಡುವುದು ಬಿಟ್ಟು ನನ್ನನ್ನೇ ಪ್ರಶ್ನೆ ಮಾಡ್ತಿದ್ದೀರಾ ಎಂದು ಆ ವ್ಯಕ್ತಿ ಗದರಿದ್ದಾನೆ. ಹಾಗಾದರೆ ಮೊದಲು ಸಮವಸ್ತ್ರದಲ್ಲಿ ಬನ್ನಿ, ಗುರುತಿನ ಚೀಟಿ ತೋರಿಸಿ ಆಮೇಲೆ ಸೆಲ್ಯೂಟ್ ಮಾಡ್ತೀವಿ ಎಂದು ಪೊಲೀಸರು ಕೂಡ ಪಟ್ಟು ಹಿಡಿದಿದ್ದರು.

ವರದಿಗಳ ಪ್ರಕಾರ, ಲಕ್ನೋದ ರಸ್ತೆ ಬದಿಯ ಅಂಗಡಿಯೊಂದರಲ್ಲಿ ಈ ವ್ಯಕ್ತಿ ಬನ್ ತಿಂದು, ಅದಕ್ಕೆ ಆಗಿದ್ದ 40 ರೂಪಾಯಿ ಬಿಲ್ ಕೊಡದೇ ಹೋಗಲು ಯತ್ನಿಸಿದ್ದಾನೆ. ಅಂಗಡಿ ಮಾಲೀಕರು ಇದನ್ನು ವಿರೋಧಿಸಿ ತಕ್ಷಣವೇ ಪೊಲೀಸರಿಗೆ ದೂರು ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಬಂದಾಗ ಆ ವ್ಯಕ್ತಿ ತಾನೊಬ್ಬ ದೊಡ್ಡ ಐಪಿಎಸ್ ಅಧಿಕಾರಿ ಎಂದು ಬೆದರಿಸಲು ಹಾದಿ ತುಳಿದಿದ್ದಾನೆ.

ವಿಚಾರಣೆಗೆ ಬಂದ ಕಾನ್‌ಸ್ಟೆಬಲ್‌ಗಳು ಆತನನ್ನು ಅಣ್ಣಾ ಎಂದು ಕರೆದಾಗ ಕೋಪಗೊಂಡಿದ್ದ, ತಕ್ಷಣವೇ ಪೊಲೀಸರನ್ನು ತಡೆದು, ಅಣ್ಣಾ ಅಂತಾ ಕರೀಬೇಡಿ ಸರ್ ಅನ್ನಿ ಎಂದು ದಬಾಯಿಸಿದ್ದಾನೆ. ನಾನೊಬ್ಬ ಐಪಿಎಸ್ ಅಧಿಕಾರಿ, ನೀವೇಕೆ ನನಗೆ ಸೆಲ್ಯೂಟ್ ಮಾಡುತ್ತಿಲ್ಲ ಎಂದು ಕರ್ತವ್ಯದಲ್ಲಿದ್ದ ಪೊಲೀಸರನ್ನೇ ಪ್ರಶ್ನಿಸಿ ವಿಶೇಷ ಮರ್ಯಾದೆ ನೀಡುವಂತೆ ಹಠ ಹಿಡಿದಿದ್ದಾನೆ.

ಮತ್ತಷ್ಟು ಓದಿ: ಕಸದ ರಾಶಿಯಲ್ಲಿ 59 ಜೀವಂತ ಗುಂಡುಗಳು ಪತ್ತೆ:ಪೊಲೀಸರೇ ಶಾಕ್, ಬೆಚ್ಚಿಬಿದ್ದ ಜನ

ಕಾನ್‌ಸ್ಟೆಬಲ್ ಪ್ರತಿಕ್ರಿಯೆಗೆ ನೆಟ್ಟಿಗರು ಫಿದಾ ಆರೋಪಿಯ ನಾಟಕಕ್ಕೆ ಬೆದರದ ಕಾನ್‌ಸ್ಟೆಬಲ್ ಅತ್ಯಂತ ಶಾಂತವಾಗಿ ಮತ್ತು ವೃತ್ತಿಪರವಾಗಿ ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ. ಆತನಿಗೆ ಖಡಕ್ ಆಗಿ ಉತ್ತರಿಸಿದ ಕಾನ್‌ಸ್ಟೆಬಲ್, ಮೊದಲು ಸರಿಯಾದ ಪೊಲೀಸ್ ಸಮವಸ್ತ್ರ ಧರಿಸಿ ಬನ್ನಿ, ನಿಮ್ಮ ಐಡಿ ಕಾರ್ಡ್ ತೋರಿಸಿ, ಆಮೇಲೆ ನಾನು ನಿಮಗೆ ಸೆಲ್ಯೂಟ್ ಮಾಡುತ್ತೇನೆ. ಅಲ್ಲಿಯವರೆಗೂ ಇಲ್ಲ ಎಂದು ಹೇಳಿದ್ದಾರೆ. ಕಾನ್‌ಸ್ಟೆಬಲ್ ಅವರ ಈ ಸಮಯಪ್ರಜ್ಞೆ ಮತ್ತು ಧೈರ್ಯಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗುತ್ತಿದೆ.

ವಿಡಿಯೋ

ಕೇಳಿದಾಗ ಯಾವುದೇ ಗುರುತಿನ ಚೀಟಿ (ID Card) ತೋರಿಸದ ಹಿನ್ನೆಲೆಯಲ್ಲಿ ಆತ ನಕಲಿ ಎಂಬುದು ಸಾಬೀತಾಗಿದೆ. ಲಕ್ನೋದ ಮಹಾನಗರ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ವಂಚನೆ ಮತ್ತು ಸರ್ಕಾರಿ ಸಿಬ್ಬಂದಿಗೆ ದಾರಿ ತಪ್ಪಿಸಿದ ಆರೋಪದಡಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ಜೈಲಿಗಟ್ಟಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ?
ಸತ್ತವರು ಕನಸಿನಲ್ಲಿ ಯಾವ ರೀತಿ ಬಂದರೆ ಏನರ್ಥ?
ಇಂದು ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಪ್ರಯಾಣ ಯೋಗ!
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯತೀಂದ್ರ ಸಿದ್ದರಾಮಯ್ಯಗೆ ವಿಶೇಷ ಗೌರವ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಫ್ರಾನ್ಸ್‌ನ ಶೃಂಗಸಭೆಯ ಗ್ರೂಪ್ ಫೋಟೋ ವೇಳೆಯೂ ಮೌನವಾಗೇ ನಿಂತ ಟ್ರಂಪ್-ಮೋದಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಗಿ ಅಪ್ಪುಗೆಯಿಲ್ಲದೆ, ಕೈ ಕುಲುಕಿ ಟ್ರಂಪ್​- ಮೋದಿ ಉಭಯಕುಶಲೋಪರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಬಿಲ್ ಕಟ್ಟಲೂ ಹಣ ಇಲ್ವೇ: ಕತ್ತಲಲ್ಲಿ ಮುಳುಗಿದ ಬೆಳಗಾವಿ ತಹಶೀಲ್ದಾರ್ ಕಚೇರಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಧರ್ಮಸ್ಥಳ ಬುರುಡೆ ಪ್ರಕರಣದ SIT ತಂಡ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಕರ್ನಾಟಕದಲ್ಲಿ ಮತ್ತೆ ರೆಸಾರ್ಟ್ ರಾಜಕಾರಣ:ಕಾಂಗ್ರೆಸ್ ಶಾಸಕರು ರೆಸಾರ್ಟ್​​ಗೆ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಅಜ್ಜಿಯ ಪಾರ್ಥಿವ ಶರೀರ ಕಂಡು ಕಣ್ಣೀರಿಟ್ಟ ವಿಜಯ್ ರಾಘವೇಂದ್ರ ಮಗ ಶೌರ್ಯ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ
ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ