ಮಗು ಸಾವಿನ ಸುದ್ದಿ ಕೇಳುತ್ತಿದ್ದಂತೆ ಆಸ್ಪತ್ರೆ ದ್ವಾರದ ಬಾಗಿಲು ಪೀಸ್ ಪೀಸ್

ಹೈದರಾಬಾದ್: ಆಸ್ಪತ್ರೆಯಲ್ಲಿ ಶಿಶು ಮೃತಪಟ್ಟ ವಿಷಯ ತಿಳಿಯುತ್ತಿದ್ದಂತೆ ಆಕ್ರೋಶಕ್ಕೆ ಒಳಗಾದ ಸಂಬಂಧಿಕರಿಂದ‌‌ ಆಸ್ಪತ್ರೆಯ ಗಾಜುಗಳು ಪುಡಿಪುಡಿಯಾಗಿರುವ ಘಟನೆ ಹೈದರಾಬಾದ್​​ನ ಹಳೇ ಬಸ್ತಿಯಲ್ಲಿರುವ ಪೆಟ್ಲಬುರ್ಜನ್ ಮಾಡರ್ನ್ ಮೆಟರ್ನಿಟಿ‌‌ ಅಸ್ಪತ್ರೆಯಲ್ಲಿ‌‌ ನಡೆದಿದೆ. ವೈದ್ಯರು ಮಗು ಸಾವಿನ ಸುದ್ದಿ ಹೇಳುತ್ತಿದ್ದಂತೆ ಮಗುವಿನ ಸಂಬಂಧಿಕರು ಆಸ್ಪತ್ರೆಯ ಮುಖ್ಯ ದ್ವಾರದ ಬಾಗಿಲಿನ ಗಾಜುಗಳನ್ನು ಹೊಡೆದು ಪುಡಿಪುಡಿ ಮಾಡಿ ಗಲಾಟೆ ಮಾಡಿದ್ದಾರೆ. ತಕ್ಷಣ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ವಿಷಯ ತಿಳಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುಸುಫ್ ಖುರೇಶಿ (32), ಮಹ್ಮದ ಆಶ್ರಫ್ […]

ಮಗು ಸಾವಿನ ಸುದ್ದಿ ಕೇಳುತ್ತಿದ್ದಂತೆ ಆಸ್ಪತ್ರೆ ದ್ವಾರದ ಬಾಗಿಲು ಪೀಸ್ ಪೀಸ್
ಸಾಧು ಶ್ರೀನಾಥ್​

Updated on: May 14, 2020 | 7:51 AM

ಹೈದರಾಬಾದ್: ಆಸ್ಪತ್ರೆಯಲ್ಲಿ ಶಿಶು ಮೃತಪಟ್ಟ ವಿಷಯ ತಿಳಿಯುತ್ತಿದ್ದಂತೆ ಆಕ್ರೋಶಕ್ಕೆ ಒಳಗಾದ ಸಂಬಂಧಿಕರಿಂದ‌‌ ಆಸ್ಪತ್ರೆಯ ಗಾಜುಗಳು ಪುಡಿಪುಡಿಯಾಗಿರುವ ಘಟನೆ ಹೈದರಾಬಾದ್​​ನ ಹಳೇ ಬಸ್ತಿಯಲ್ಲಿರುವ ಪೆಟ್ಲಬುರ್ಜನ್ ಮಾಡರ್ನ್ ಮೆಟರ್ನಿಟಿ‌‌ ಅಸ್ಪತ್ರೆಯಲ್ಲಿ‌‌ ನಡೆದಿದೆ.

ವೈದ್ಯರು ಮಗು ಸಾವಿನ ಸುದ್ದಿ ಹೇಳುತ್ತಿದ್ದಂತೆ ಮಗುವಿನ ಸಂಬಂಧಿಕರು ಆಸ್ಪತ್ರೆಯ ಮುಖ್ಯ ದ್ವಾರದ ಬಾಗಿಲಿನ ಗಾಜುಗಳನ್ನು ಹೊಡೆದು ಪುಡಿಪುಡಿ ಮಾಡಿ ಗಲಾಟೆ ಮಾಡಿದ್ದಾರೆ. ತಕ್ಷಣ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ವಿಷಯ ತಿಳಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಯುಸುಫ್ ಖುರೇಶಿ (32), ಮಹ್ಮದ ಆಶ್ರಫ್ ( 22)‌ ಎಂಬುವವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಈ ಕುರಿತು ಚಾರ್ಮಿನಾರ್‌ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

Published On - 7:37 am, Thu, 14 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us