ಆಂಬ್ಯುಲೆನ್ಸ್ ಸಿಗದೆ ಮೃತ ಮಗನ ಶವವನ್ನು ತಳ್ಳುವ ಗಾಡಿಯಲ್ಲಿ ಹೊತ್ತೊಯ್ದ ಪೋಷಕರು

ಆಧುನಿಕ ಯುಗದಲ್ಲಿ ನಾವು ಎಷ್ಟೇ ಮುಂದುವರೆದಿದ್ದೇವೆ ಎಂದು ಹೇಳಿಕೊಂಡರೂ, ಬಡವರ ಪಾಲಿಗೆ ಕನಿಷ್ಠ ಸೌಲಭ್ಯಗಳು ಇಂದಿಗೂ ಮರೀಚಿಕೆಯಾಗಿವೆ ಎಂಬುದಕ್ಕೆ ತೆಲಂಗಾಣದ ಕರೀಂನಗರ ಜಿಲ್ಲೆಯಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಅಂತಿಮ ಪ್ರಯಾಣಕ್ಕೆ ಒಂದು ವಾಹನವೂ ಸಿಗದೆ, ಹೆತ್ತ ಮಗನ ಶವವನ್ನು ಪೋಷಕರು ತಳ್ಳುಗಾಡಿಯಲ್ಲಿ ಸಾಗಿಸಿದ ದೃಶ್ಯ ಪ್ರತಿಯೊಬ್ಬರ ಕಣ್ಣನ್ನು ತೇವಗೊಳಿಸುವಂತಿದೆ. ಕರೀಂನಗರ ಜಿಲ್ಲೆಯ ಶಂಕರಪಟ್ಟಣಂ ಮಂಡಲದ ನಿವಾಸಿ ಯಾಕೂಬ್ ಎಂಬ ಯುವಕ ಅನಾರೋಗ್ಯದಿಂದ ಸಾವನ್ನಪ್ಪಿದ್ದ.

ಆಂಬ್ಯುಲೆನ್ಸ್ ಸಿಗದೆ ಮೃತ ಮಗನ ಶವವನ್ನು ತಳ್ಳುವ ಗಾಡಿಯಲ್ಲಿ ಹೊತ್ತೊಯ್ದ ಪೋಷಕರು
ಸಾವು

Updated on: May 06, 2026 | 1:44 PM

ಕರೀಂನಗರ, ಮೇ 06: ಆಧುನಿಕ ಯುಗದಲ್ಲಿ ನಾವು ಎಷ್ಟೇ ಮುಂದುವರೆದಿದ್ದೇವೆ ಎಂದು ಹೇಳಿಕೊಂಡರೂ, ಬಡವರ ಪಾಲಿಗೆ ಕನಿಷ್ಠ ಸೌಲಭ್ಯಗಳು ಇಂದಿಗೂ ಮರೀಚಿಕೆಯಾಗಿವೆ ಎಂಬುದಕ್ಕೆ ತೆಲಂಗಾಣದ ಕರೀಂನಗರ ಜಿಲ್ಲೆಯಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಅಂತಿಮ ಪ್ರಯಾಣಕ್ಕೆ ಒಂದು ವಾಹನವೂ ಸಿಗದೆ, ಹೆತ್ತ ಮಗನ ಶವವನ್ನು ಪೋಷಕರು ತಳ್ಳುಗಾಡಿಯಲ್ಲಿ ಸಾಗಿಸಿದ ದೃಶ್ಯ ಪ್ರತಿಯೊಬ್ಬರ ಕಣ್ಣನ್ನು ತೇವಗೊಳಿಸುವಂತಿದೆ. ಕರೀಂನಗರ ಜಿಲ್ಲೆಯ ಶಂಕರಪಟ್ಟಣಂ ಮಂಡಲದ ನಿವಾಸಿ ಯಾಕೂಬ್ ಎಂಬ ಯುವಕ ಅನಾರೋಗ್ಯದಿಂದ ಸಾವನ್ನಪ್ಪಿದ್ದ.

ಮಗನನ್ನು ಕಳೆದುಕೊಂಡ ದುಃಖದಲ್ಲಿದ್ದ ಪೋಷಕರಿಗೆ ಆಸ್ಪತ್ರೆಯಿಂದ ಮನೆಗೆ ಮೃತದೇಹವನ್ನು ಸಾಗಿಸಲು ಯಾವುದೇ ಸರ್ಕಾರಿ ವಾಹನ ಅಥವಾ ಆಂಬ್ಯುಲೆನ್ಸ್(Ambulance) ಲಭ್ಯವಾಗಲಿಲ್ಲ. ಅತ್ತ ಖಾಸಗಿ ಆಂಬ್ಯುಲೆನ್ಸ್ ಪಡೆಯಲು ಹಣದ ಬಲವಿಲ್ಲದ ಕಾರಣ, ಅನಿವಾರ್ಯವಾಗಿ ಶವವನ್ನು ನಿಂಬೆಹಣ್ಣು ಮಾರುವ ತಳ್ಳುಗಾಡಿಯ ಮೇಲೆ ಮಲಗಿಸಿ ತಮ್ಮ ನಿವಾಸಕ್ಕೆ ಕೊಂಡೊಯ್ಯಬೇಕಾಯಿತು.

ಮೂಲಭೂತ ಸೌಕರ್ಯಗಳ ಕೊರತೆಯನ್ನು ಬಹಿರಂಗಪಡಿಸುವ ಇಂತಹ ಘಟನೆಗಳು ಇದೇ ಮೊದಲಲ್ಲ. ವ್ಯವಸ್ಥೆಯ ಅಸಡ್ಡೆಗೆ ಸಾಕ್ಷಿಯಾಗಿ ಈ ಹಿಂದೆಯೂ ಇಂತಹ ಕರಾಳ ದೃಶ್ಯಗಳು ವರದಿಯಾಗಿವೆ. ಜನವರಿಯಲ್ಲಿ ಫರಿದಾಬಾದ್‌ನ ಆಸ್ಪತ್ರೆಯಲ್ಲಿ ಕ್ಷಯರೋಗದಿಂದ ಮೃತಪಟ್ಟ 35 ವರ್ಷದ ಮಹಿಳೆಯ ಶವವನ್ನು ಸಾಗಿಸಲು ನೆರವು ಸಿಗದಿದ್ದಾಗ, ಕುಟುಂಬದವರು 12 ಕಿಲೋಮೀಟರ್ ದೂರ ಮೋಟಾರ್‌ಚಾಲಿತ ತಳ್ಳುಗಾಡಿಯಲ್ಲೇ ಶವ ಸಾಗಿಸಿದ್ದರು. ಆನ್‌ಲೈನ್‌ನಲ್ಲಿ ಹರಿದಾಡಿದ ವಿಡಿಯೋದಲ್ಲಿ ಪುಟ್ಟ ಮಗ ತನ್ನ ತಾಯಿಯ ಮುಖವನ್ನು ಬಟ್ಟೆಯಿಂದ ಮುಚ್ಚುತ್ತಿರುವುದು ಕಂಡುಬಂದಿತ್ತು.

ಆಗಸ್ಟ್​ನಲ್ಲಿ ತೆಲಂಗಾಣದಲ್ಲಿ ಅಪಘಾತದಲ್ಲಿ ಮೃತಪಟ್ಟ ಮೊಗುಳಯ್ಯ ಎಂಬ 26 ವರ್ಷದ ಯುವಕನ ಶವ ಸಾಗಿಸಲು ಆಂಬ್ಯುಲೆನ್ಸ್ ಬಾರದೆ ಹೋದಾಗ, ಸ್ವತಃ ಪೊಲೀಸ್ ಅಧಿಕಾರಿಯೊಬ್ಬರು ತಳ್ಳುಗಾಡಿಯಲ್ಲೇ ಮರಣೋತ್ತರ ಪರೀಕ್ಷೆಗೆ ಶವವನ್ನು ಸಾಗಿಸಿದ್ದರು. ಯಾಕೂಬ್ ಕುಟುಂಬಕ್ಕೆ ಎದುರಾದ ಈ ದುಸ್ಥಿತಿಯನ್ನು ಕಂಡು ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತುರ್ತು ಸಂದರ್ಭಗಳಲ್ಲಿಯೂ ಮೂಲಭೂತ ಸಾರಿಗೆ ಸೌಲಭ್ಯಗಳನ್ನು ಒದಗಿಸಲು ವಿಫಲವಾಗಿರುವ ವ್ಯವಸ್ಥೆಯ ವಿರುದ್ಧ ಜನರು ಕಿಡಿಕಾರಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us