Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಮ್ಲಾ ಭೂಕುಸಿತದಲ್ಲಿ 3 ತಲೆಮಾರುಗಳನ್ನು ಕಳೆದುಕೊಂಡ ಕುಟುಂಬ; ಮೃತದೇಹಕ್ಕಾಗಿ ಮುಂದುವರಿದ ಹುಡುಕಾಟ

ಹಿಮಾಚಲ ಪ್ರದೇಶದಲ್ಲಿ ಮಳೆ ಸಂಬಂಧಿತ ಘಟನೆಗಳು ಈ ಮಾನ್ಸೂನ್‌ನಲ್ಲಿ 60 ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಪರಿಸರ ಮತ್ತು ಆಸ್ತಿ ಹಾನಿ ಮತ್ತು ಸಾವುನೋವುಗಳಿಂದಾಗಿ ರಾಜ್ಯವು ₹ 10,000 ಕೋಟಿ ನಷ್ಟವನ್ನು ಅನುಭವಿಸಿದೆ ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಹೇಳಿದ್ದಾರೆ.

ಶಿಮ್ಲಾ ಭೂಕುಸಿತದಲ್ಲಿ 3 ತಲೆಮಾರುಗಳನ್ನು ಕಳೆದುಕೊಂಡ ಕುಟುಂಬ; ಮೃತದೇಹಕ್ಕಾಗಿ ಮುಂದುವರಿದ ಹುಡುಕಾಟ
ಶಿಮ್ಲಾ ಭೂಕುಸಿತ
Follow us
ರಶ್ಮಿ ಕಲ್ಲಕಟ್ಟ
|

Updated on: Aug 17, 2023 | 8:02 PM

ಶಿಮ್ಲಾ: ಶಿಮ್ಲಾದಲ್ಲಿ  (Shimla) ಸಂಭವಿಸಿದ ಭೂಕುಸಿತದಲ್ಲಿ (LandSlide) ಒಟ್ಟು ಮೂರು ತಲೆಮಾರುಗಳು ಕಳೆದುಕೊಂಡ ಕುಟುಂಬದ ಸದಸ್ಯರು ಮೃತದೇಹಗಳಿಗಾಗಿ ಕಾಯುತ್ತಿದ್ದಾರೆ ಮೂವರು ಮಕ್ಕಳು ಸೇರಿದಂತೆ  ಮೃತ ಏಳುಮಂದಿಗೆ ಗೌರವ ಸಲ್ಲಿಸುವುದಕ್ಕಾಗಿ ಈ ಕುಟುಂಬ ಕಾಯುತ್ತಿದೆ.ಸೋಮವಾರ ಮೇಘಸ್ಫೋಟದಿಂದ ಉಂಟಾದ ಭೂಕುಸಿತದಿಂದಾಗಿ ದೇವಸ್ಥಾನ ಕುಸಿದು ಬಿದ್ದಿತ್ತು. ಈ ವೇಳೆ ಮೂವರು ಮಕ್ಕಳು ಸೇರಿದಂತೆ ಕುಟುಂಬದ ಏಳು ಮಂದಿ ಒಳಗಿದ್ದರು.  ನನ್ನ ಸಹೋದರ, ಮೂವರು ಮಕ್ಕಳು, ಅತ್ತಿಗೆ, ನಮ್ಮ ಒಬ್ಬ ಹೆಣ್ಣುಮಕ್ಕಳು ಸೇರಿದಂತೆ ಐವರು ನಾಪತ್ತೆಯಾಗಿದ್ದಾರೆ. ರಕ್ಷಣಾ ಸಿಬ್ಬಂದಿ ಶವಗಳನ್ನು ಹುಡುಕಲು ಪ್ರಯತ್ನಿಸುತ್ತಿದ್ದಾರೆ. ಕನಿಷ್ಠ ಅವರ ಅಂತ್ಯಕ್ರಿಯೆಯನ್ನು ನಾನು ಮಾಡಬೇಕೆಂದು ಬಯಸುತ್ತೇನೆ, ನನ್ನ ಸಹೋದರನ ಅಂತ್ಯಕ್ರಿಯೆಯನ್ನು ನನ್ನ ಅಂತ್ಯದ ಮೊದಲು ಹೊರಡುವ ಸಮಯ ಬಂದಿದೆ ಎಂದು ಘಟನೆಯಲ್ಲಿ ಸಾವಿಗೀಡಾದ ಕುಟುಂಬದ ಒಬ್ಬ ವ್ಯಕ್ತಿ ಪವನ್‌ನ ಸಹೋದರ ವಿನೋದ್ ಹೇಳಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಇನ್ನೆರಡು ಮೃತದೇಹಗಳು ಪತ್ತೆಯಾಗಬೇಕಿದೆ. ಈ ನೋವು ನನ್ನ ಜೀವನದುದ್ದಕ್ಕೂ ನನ್ನೊಂದಿಗೆ ಇರುತ್ತದೆ” ಎಂದು ಕುಟುಂಬದ ಮಹಿಳೆಯೊಬ್ಬರು ಹೇಳಿದ್ದಾರೆ. ಶಿಮ್ಲಾದಿಂದ ಹೊರಗೆ ಇರುವ ಪವನ್ ಅವರ ತಂಗಿ, ಕುಟುಂಬದ ಸದಸ್ಯರಲ್ಲಿ ಒಬ್ಬರು ಫೋನ್‌ಗೆ ಕರೆ ಮಾಡಿ ಘಟನೆಯ ಬಗ್ಗೆ ತಿಳಿಸಿದರು. ಶಿಮ್ಲಾಕ್ಕೆ ಹೋಗುವ ರಸ್ತೆಯನ್ನು ಸಹ ನಿರ್ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ನಾವು ನಮ್ಮ ಸಹೋದರ ಮತ್ತು ಇತರರ ಶವವನ್ನು ಹುಡುಕಲು ಬಯಸುತ್ತೇವೆ” ಎಂದು ಪವನ್ ಅವರ ಅಕ್ಕ ಹೇಳಿದ್ದಾರೆ. ನನ್ನ ಕುಟುಂಬದ ಏಳು ಮಂದಿ ಹೋಗಿದ್ದಾರೆ. ಅವರು ನನ್ನನ್ನು ಇಲ್ಲಿಗೆ ಬರಲು ಕೇಳುತ್ತಿದ್ದರು. ಆದರೆ ನಾನು ಮಾಡಲಿಲ್ಲ. ಬಹುಶಃ ನಾನು ಇನ್ನೂ ಸಾಯಲು ಉದ್ದೇಶಿಸಿರಲಿಲ್ಲ. ಮೃತದೇಹ ಸಿಕ್ಕಿದರೆ ನಾವು ಅಂತಿಮ ವಿಧಿವಿಧಾನಗಳನ್ನು ಮಾಡಬಹುದು, ನಮ್ಮ ಕುಟುಂಬ ನಾಶವಾಗಿದೆ,” ಅವರು ಹೇಳಿದರು.

ಇದನ್ನೂ ಓದಿ: ಹಿಮಾಚಲ ಪ್ರದೇಶ, ಉತ್ತರಾಖಂಡದಲ್ಲಿ ಭಾರಿ ಮಳೆ, ಭೂಕುಸಿತ, ಇಲ್ಲಿಯವರೆಗೆ 81 ಮಂದಿ ಸಾವು

ಹಿಮಾಚಲ ಪ್ರದೇಶದಲ್ಲಿ ಮಳೆ ಸಂಬಂಧಿತ ಘಟನೆಗಳು ಈ ಮಾನ್ಸೂನ್‌ನಲ್ಲಿ 60 ಕ್ಕೂ ಹೆಚ್ಚು ಮಂದಿ ಸಾವಿಗೀಡಾಗಿದ್ದಾರೆ. ಪರಿಸರ ಮತ್ತು ಆಸ್ತಿ ಹಾನಿ ಮತ್ತು ಸಾವುನೋವುಗಳಿಂದಾಗಿ ರಾಜ್ಯವು ₹ 10,000 ಕೋಟಿ ನಷ್ಟವನ್ನು ಅನುಭವಿಸಿದೆ ಎಂದು ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಹೇಳಿದ್ದಾರೆ.

ಜಲಾಶಯದಲ್ಲಿ ಹೆಚ್ಚುತ್ತಿರುವ ನೀರಿನ ಮಟ್ಟದಿಂದಾಗಿ ಗ್ರಾಮಗಳಿಗೆ ಪ್ರವೇಶಿಸಲು ಸಾಧ್ಯವಾಗದ ಕಾರಣ ಪಾಂಗ್ ಅಣೆಕಟ್ಟಿನ ಬಳಿಯ ಕಾಂಗ್ರಾದಲ್ಲಿ ತಗ್ಗು ಪ್ರದೇಶಗಳಿಂದ 800 ಕ್ಕೂ ಹೆಚ್ಚು ಜನರನ್ನು ಬುಧವಾರ ಸ್ಥಳಾಂತರಿಸಲಾಯಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
VIDEO: LSG ಫೀಲ್ಡರ್​ಗಳ ಕಮಾಲ್: ವಾಟ್ ಎ ಕ್ಯಾಚ್..!
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ