Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಪತ್ರೆಯಲ್ಲಿ ಐಸಿಯು ಬೆಡ್​ ಸಿಗದೆ ಮೃತಪಟ್ಟ ಸೋಂಕಿತೆ; ಕುಟುಂಬದವರಿಂದ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ, ದಾಂಧಲೆ

ರೋಗಿ ಮೃತಪಟ್ಟಿದ್ದರ ಬಗ್ಗೆ ನಮ್ಮ ಸಂತಾಪವಿದೆ. ಆದರೆ ನಾವು ನಮ್ಮ ಶಕ್ತಿಗೂ ಮೀರಿ ಆಕೆಯನ್ನು ಉಳಿಸಲು ಪ್ರಯತ್ನ ಪಟ್ಟಿದ್ದೆವು. ಆದರೂ ಕುಟುಂಬದವರು ಹಲ್ಲೆ ನಡೆಸಿದ್ದು ಶಾಕ್ ಆಗಿದೆ ಎಂದು ಆಸ್ಪತ್ರೆ ಬೇಸರ ವ್ಯಕ್ತಪಡಿಸಿದೆ.

ಆಸ್ಪತ್ರೆಯಲ್ಲಿ ಐಸಿಯು ಬೆಡ್​ ಸಿಗದೆ ಮೃತಪಟ್ಟ ಸೋಂಕಿತೆ; ಕುಟುಂಬದವರಿಂದ ಆಸ್ಪತ್ರೆ ಸಿಬ್ಬಂದಿ ಮೇಲೆ ಹಲ್ಲೆ, ದಾಂಧಲೆ
ದೆಹಲಿ ಆಸ್ಪತ್ರೆಯಲ್ಲಿ ದಾಂಧಲೆ
Follow us
Lakshmi Hegde
|

Updated on: Apr 27, 2021 | 7:24 PM

ದೆಹಲಿ: ಇಲ್ಲಿನ ಸರಿತಾ ವಿಹಾರ್​ನಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ಕೊವಿಡ್​ 19 ಸೋಂಕಿತರೊಬ್ಬರು ಮೃತಪಟ್ಟ ಬೆನ್ನಲ್ಲೇ ಆತನ ಕುಟುಂಬದವರು ದಾಂಧಲೆ ಎಬ್ಬಿಸಿದ್ದಾರೆ. ವೈದ್ಯರು, ನರ್ಸ್​ಗಳು, ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಕೊರೊನಾ ಸೋಂಕಿತ 63 ವರ್ಷದ ಮಹಿಳೆಯೊಬ್ಬರನ್ನು ಇಂದು ಮುಂಜಾನೆ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಐಸಿಯು ಬೆಡ್​ ಸಿಗದೆ ಆಕೆ ಮೃತಪಟ್ಟಿದ್ದರು.

ಇದರಿಂದ ಸಿಟ್ಟಿಗೆದ್ದ ಆಕೆಯ ಕುಟುಂಬದವರು ಬೆಳಗ್ಗೆ ಸುಮಾರು 9 ಗಂಟೆ ಹೊತ್ತಿಗೆ ವೈದ್ಯರು, ನರ್ಸ್​ಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಮೃತ ಕೊವಿಡ್ ಸೋಂಕಿತೆಯ ಕುಟುಂಬದವರು ಆಸ್ಪತ್ರೆ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ವಿಡಿಯೋ ಇದೀಗ ಸಿಕ್ಕಾಪಟೆ ವೈರಲ್ ಆಗಿದೆ. ವೈದ್ಯರು, ನರ್ಸ್​ಗಳ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ಆಸ್ಪತ್ರೆಯ ಕೆಲವು ಸಲಕರಣೆಗಳನ್ನೂ ಹಾಳುಗೆಡವಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆಗ್ನೇಯ ದೆಹಲಿ ಡಿಸಿಪಿ, ಘಟನೆಯ ಬಗ್ಗೆ ನಮಗೆ ಯಾವುದೇ ದೂರು ಬಂದಿಲ್ಲ ಎಂದು ಹೇಳಿದ್ದಾರೆ. ಆಸ್ಪತ್ರೆಯವರಾಗಲಿ, ಮೃತ ಸೋಂಕಿತೆಯ ಕುಟುಂಬದವರಾಗಲೀ ಯಾರೂ ನಮ್ಮ ಬಳಿ ಬಂದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇನ್ನು ಘಟನೆಯ ಬಗ್ಗೆ ಮಾಹಿತಿ ನೀಡಿದ ಅಪೋಲೋ ಆಸ್ಪತ್ರೆ, ಮಹಿಳೆ ನಮ್ಮಲ್ಲಿಗೆ ಬರುವಾಗಲೇ ಆಕೆಯ ಪರಿಸ್ಥಿತಿ ತೀರ ಗಂಭೀರವಾಗಿತ್ತು. ಆದರೂ ನಮ್ಮ ವೈದ್ಯಕೀಯ ಸಿಬ್ಬಂದಿಗೆ ಆಕೆಗೆ ಸೂಕ್ತ ಚಿಕಿತ್ಸೆ ನೀಡಿದ್ದರು. ಆದರೆ ಇಲ್ಲಿ ಬೆಡ್​ಗಳ ಕೊರತೆ ಇರುವುದರಿಂದ ಬೇರೊಂದು ಆಸ್ಪತ್ರೆಗೆ ದಾಖಲಿಸಲು ಕುಟುಂಬಕ್ಕೆ ಹೇಳಲಾಗಿತ್ತು. ಆದರೆ ದುರದೃಷ್ಟವಶಾತ್​ ಅಷ್ಟರಲ್ಲಿ ಮಹಿಳೆ ಮೃತಪಟ್ಟಿದ್ದರು. ಇದನ್ನೇ ನೆಪವನ್ನಾಗಿಟ್ಟುಕೊಂಡು ಕುಟುಂಬದವರು ಆಸ್ಪತ್ರೆಯಲ್ಲಿ ಗಲಾಟೆ ಎಬ್ಬಿಸಿದರು ಎಂದು ಹೇಳಿದೆ. ಆಸ್ಪತ್ರೆ ಸೆಕ್ಯೂರಿಟಿ ಸಿಬ್ಬಂದಿ, ಸ್ಥಳದಲ್ಲಿದ್ದ ಪೊಲೀಸರ ಸಹಾಯದಿಂದ ಪರಿಸ್ಥಿತಿ ನಿಯಂತ್ರಿಸಲಾಯಿತು ಎಂದೂ ತಿಳಿಸಿದೆ.

ರೋಗಿ ಮೃತಪಟ್ಟಿದ್ದರ ಬಗ್ಗೆ ನಮ್ಮ ಸಂತಾಪವಿದೆ. ಆದರೆ ನಾವು ನಮ್ಮ ಶಕ್ತಿಗೂ ಮೀರಿ ಆಕೆಯನ್ನು ಉಳಿಸಲು ಪ್ರಯತ್ನ ಪಟ್ಟಿದ್ದೆವು. ಆದರೂ ಕುಟುಂಬದವರು ಹಲ್ಲೆ ನಡೆಸಿದ್ದು ಶಾಕ್ ಆಗಿದೆ ಎಂದು ಆಸ್ಪತ್ರೆ ಬೇಸರ ವ್ಯಕ್ತಪಡಿಸಿದೆ.

ದೆಹಲಿಯಲ್ಲಿ ಆಕ್ಸಿಜನ್, ಬೆಡ್​ಗಳ ಅಭಾವದಿಂದ ಸಾಯುತ್ತಿರುವ ರೋಗಿಗಳ ಸಂಖ್ಯೆ ಹೆಚ್ಚಾದ ಬೆನ್ನಲ್ಲೇ ದೆಹಲಿ ಹೈಕೋರ್ಟ್ ಆಸ್ಪತ್ರೆಗಳಿಗೆ ಪೊಲೀಸ್ ಭದ್ರತೆಯನ್ನು ನೀಡಲು ಸರ್ಕಾರಕ್ಕೆ ಸೂಚಿಸಿತ್ತು. ಅದರ ಅನ್ವಯ ಈಗ ಬಹುತೇಕ ಆಸ್ಪತ್ರೆಗಳಲ್ಲಿ ಪೊಲೀಸ್ ಬಿಗಿ ಭದ್ರತೆ ಇದೆ. ಆದರೂ ಇಂಥ ಘಟನೆಗಳೂ ನಡೆಯುತ್ತಿವೆ.

ಇದನ್ನೂ ಓದಿ:ಬೆಡ್ ಸಿಕ್ಕಿದರೆ, ಆಕ್ಸಿಜನ್ ಸಿಗಲ್ಲ ಹೀಗಾದ್ರೆ ಹೇಗೆ: ಯಲಹಂಕದ ರೀಗನ್ ಆಸ್ಪತ್ರೆಯ ವಿರುದ್ಧ ಮೃತ ವ್ಯಕ್ತಿಯ ಕುಟುಂಬಸ್ಥರ ಆಕ್ರೋಶ

Producer Ramu’s Last words : ಕೊನೆಯದಾಗಿ ‘ಕೋಟಿ’ ರಾಮು ಮಾತನಾಡಿರುವ ಆಡಿಯೋ!

ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಗೊತ್ತಿರದ ವಿಷಯದ ಬಗ್ಗೆ ಮಾತಾಡುವ ಜಾಯಮಾನ ನನ್ನದಲ್ಲ: ಪಾಟೀಲ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಹರಪನಹಳ್ಳಿಯಲ್ಲಿ ಆಲಿಕಲ್ಲು ಸಹಿತ ಮಳೆ: ವರ್ಷದ ಮೊದಲ ಮಳೆಗೆ ಜನರು ಖುಷ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಯತ್ನಾಳ್​ರನ್ನು ದೇಶದ್ರೋಹಿ ಎಂದು ಜರಿದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಹನಿಟ್ರ್ಯಾಪ್​ ಕೇಸ್: ಡಿಕೆಶಿ ವಿರುದ್ಧ ಹೊಸ ಬಾಂಬ್ ಸಿಡಿಸಿದ ಬಿಜೆಪಿ ಶಾಸಕ
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ಸದನದಲ್ಲಿ ರೋಷಾವೇಶದಿಂದ ಕೂಗಾಡಿದ ಶಾಸಕ ಮುನಿರತ್ನ ನಾಯ್ಡು
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!
ರಾಜಣ್ಣಗೆ ಮಾತ್ರವಲ್ಲ ಪುತ್ರನಿಗೂ ಹನಿಟ್ರ್ಯಾಪ್​​​​​ ಬಲೆಗೆ ಬೀಳಿಸುವ ಸಂಚು!
ಹನಿಟ್ರ್ಯಾಪ್ ಕೇಸ್ ಉನ್ನತ ಮಟ್ಟದ ತನಿಖೆಗೆ: ಸದನದಲ್ಲೇ ಘೋಷಿಸಿದ ಗೃಹ ಸಚಿವ
ಹನಿಟ್ರ್ಯಾಪ್ ಕೇಸ್ ಉನ್ನತ ಮಟ್ಟದ ತನಿಖೆಗೆ: ಸದನದಲ್ಲೇ ಘೋಷಿಸಿದ ಗೃಹ ಸಚಿವ
ಯಾರು ಮಾಡಿಸುತ್ತಿದ್ದಾರೆ ಅಂತ ಹೇಳಿದರೆ ರಾಜಕೀಯ ಆರೋಪವಾಗುತ್ತದೆ: ಸಚಿವ
ಯಾರು ಮಾಡಿಸುತ್ತಿದ್ದಾರೆ ಅಂತ ಹೇಳಿದರೆ ರಾಜಕೀಯ ಆರೋಪವಾಗುತ್ತದೆ: ಸಚಿವ
ರಾಯರೆಡ್ಡಿ ಇಂಗ್ಲಿಷಲ್ಲಿ ಮಾತು; ಯತ್ನಾಳ್ ಸಹ ಇಂಗ್ಲಿಷ್ ಭಾಷೆಯಲ್ಲೇ ಉತ್ತರ!
ರಾಯರೆಡ್ಡಿ ಇಂಗ್ಲಿಷಲ್ಲಿ ಮಾತು; ಯತ್ನಾಳ್ ಸಹ ಇಂಗ್ಲಿಷ್ ಭಾಷೆಯಲ್ಲೇ ಉತ್ತರ!
ನೂತನ ಟ್ರಾವೆಲ್ ಜೆರ್ಸಿಯಲ್ಲಿ ಮಿರಮಿರ ಮಿಂಚಿದ ಆರ್​ಸಿಬಿ ಬಾಯ್ಸ್
ನೂತನ ಟ್ರಾವೆಲ್ ಜೆರ್ಸಿಯಲ್ಲಿ ಮಿರಮಿರ ಮಿಂಚಿದ ಆರ್​ಸಿಬಿ ಬಾಯ್ಸ್