AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಕುಟುಂಬದ ಐವರು ಸದಸ್ಯರು ಅನುಮಾನಾಸ್ಪದ ಸಾವು, ಎಲ್ಲಿ?

ಭೋಪಾಲ್​: ಒಂದೇ ಕುಟುಂಬದ ಐವರು ಸದಸ್ಯರು ಅನುಮಾನಾಸ್ಪದವಾಗಿ ಸಾವನ್ನಪ್ಪಿರೋ ಘಟನೆ ಮಧ್ಯ ಪ್ರದೇಶದ ಟಿಕಂಗಢ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ನಾಲ್ಕು ವರ್ಷದ ಮಗು ಸೇರಿ ಕುಟುಂಬದ ಐವರ ಮೃತದೇಹಗಳು ಅವರ ನಿವಾಸದಲ್ಲೇ ಪತ್ತೆಯಾಗಿದೆ. ಮೃತರನ್ನು ನಿವೃತ್ತ ರಾಜ್ಯ ಸರ್ಕಾರದ ಉದ್ಯೋಗಿ ಧರಮ್​ದಾಸ್​ ಸೋನಿ (62), ಪತ್ನಿ ಪೂನಾ (55), ದಂಪತಿಯ ಪುತ್ರ ಮನೋಹರ (27), ಸೊಸೆ ಸೋನಂ (25) ಹಾಗೂ ಮನೋಹರ ದಂಪತಿಯ ನಾಲ್ಕು ವರ್ಷದ ಮಗ ಎಂದು ಗುರುತಿಸಲಾಗಿದೆ. ಕುಟುಂಬದವರು ತಮ್ಮ ನಿವಾಸದಿಂದ ಇಂದು ಹೊರಬರದ […]

ಒಂದೇ ಕುಟುಂಬದ ಐವರು ಸದಸ್ಯರು ಅನುಮಾನಾಸ್ಪದ ಸಾವು, ಎಲ್ಲಿ?
Follow us
KUSHAL V
|

Updated on:Aug 23, 2020 | 6:20 PM

ಭೋಪಾಲ್​: ಒಂದೇ ಕುಟುಂಬದ ಐವರು ಸದಸ್ಯರು ಅನುಮಾನಾಸ್ಪದವಾಗಿ ಸಾವನ್ನಪ್ಪಿರೋ ಘಟನೆ ಮಧ್ಯ ಪ್ರದೇಶದ ಟಿಕಂಗಢ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ನಾಲ್ಕು ವರ್ಷದ ಮಗು ಸೇರಿ ಕುಟುಂಬದ ಐವರ ಮೃತದೇಹಗಳು ಅವರ ನಿವಾಸದಲ್ಲೇ ಪತ್ತೆಯಾಗಿದೆ.

ಮೃತರನ್ನು ನಿವೃತ್ತ ರಾಜ್ಯ ಸರ್ಕಾರದ ಉದ್ಯೋಗಿ ಧರಮ್​ದಾಸ್​ ಸೋನಿ (62), ಪತ್ನಿ ಪೂನಾ (55), ದಂಪತಿಯ ಪುತ್ರ ಮನೋಹರ (27), ಸೊಸೆ ಸೋನಂ (25) ಹಾಗೂ ಮನೋಹರ ದಂಪತಿಯ ನಾಲ್ಕು ವರ್ಷದ ಮಗ ಎಂದು ಗುರುತಿಸಲಾಗಿದೆ.

ಕುಟುಂಬದವರು ತಮ್ಮ ನಿವಾಸದಿಂದ ಇಂದು ಹೊರಬರದ ಹಿನ್ನೆಲೆಯಲ್ಲಿ ಪಕ್ಕದ ಮನೆಯವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರಿಗೆ ಮನೆಯ ಬಾಗಿಲು ಒಳಗಿನಿಂದ ಲಾಕ್​ ಆಗಿರುವುದಾಗಿ ಕಂಡುಬಂದಿದೆ. ಬೀಗ ಮುರಿದು ಒಳಹೊಕ್ಕಾಗ ಮೃತದೇಹಗಳು ಪತ್ತೆಯಾಗಿದೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಇದು ಆತ್ಮಹತ್ಯೆ ಎಂದು ಮಾಹಿತಿ ನೀಡಿದ್ದಾರೆ. ಆದರೆ, ಮನೋಹರ, ಆತನ ಪತ್ನಿ ಸೋನಂ ಮತ್ತು ಮಗುವಿನ ಮೃತದೇಹಗಳ ಮೇಲೆ ಗಾಯದ ಗುರುತುಗಳು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಕುಟುಂಬದಲ್ಲಿ ಆಸ್ತಿ ವಿವಾದದ ಕುರಿತು ಕಲಹವಿದ್ದ ಹಿನ್ನೆಲೆಯಲ್ಲಿ ಪೊಲೀಸರು ಅನುಮಾನಾಸ್ಪದ ಸನ್ನಿವೇಶದ ಕುರಿತು ತನಿಖೆ ಆರಂಭಿಸಿದ್ದಾರೆ.

Published On - 6:17 pm, Sun, 23 August 20

ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ