AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಕುಟುಂಬದ ಐವರು ಸದಸ್ಯರು ಅನುಮಾನಾಸ್ಪದ ಸಾವು, ಎಲ್ಲಿ?

ಭೋಪಾಲ್​: ಒಂದೇ ಕುಟುಂಬದ ಐವರು ಸದಸ್ಯರು ಅನುಮಾನಾಸ್ಪದವಾಗಿ ಸಾವನ್ನಪ್ಪಿರೋ ಘಟನೆ ಮಧ್ಯ ಪ್ರದೇಶದ ಟಿಕಂಗಢ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ನಾಲ್ಕು ವರ್ಷದ ಮಗು ಸೇರಿ ಕುಟುಂಬದ ಐವರ ಮೃತದೇಹಗಳು ಅವರ ನಿವಾಸದಲ್ಲೇ ಪತ್ತೆಯಾಗಿದೆ. ಮೃತರನ್ನು ನಿವೃತ್ತ ರಾಜ್ಯ ಸರ್ಕಾರದ ಉದ್ಯೋಗಿ ಧರಮ್​ದಾಸ್​ ಸೋನಿ (62), ಪತ್ನಿ ಪೂನಾ (55), ದಂಪತಿಯ ಪುತ್ರ ಮನೋಹರ (27), ಸೊಸೆ ಸೋನಂ (25) ಹಾಗೂ ಮನೋಹರ ದಂಪತಿಯ ನಾಲ್ಕು ವರ್ಷದ ಮಗ ಎಂದು ಗುರುತಿಸಲಾಗಿದೆ. ಕುಟುಂಬದವರು ತಮ್ಮ ನಿವಾಸದಿಂದ ಇಂದು ಹೊರಬರದ […]

ಒಂದೇ ಕುಟುಂಬದ ಐವರು ಸದಸ್ಯರು ಅನುಮಾನಾಸ್ಪದ ಸಾವು, ಎಲ್ಲಿ?
KUSHAL V
|

Updated on:Aug 23, 2020 | 6:20 PM

Share

ಭೋಪಾಲ್​: ಒಂದೇ ಕುಟುಂಬದ ಐವರು ಸದಸ್ಯರು ಅನುಮಾನಾಸ್ಪದವಾಗಿ ಸಾವನ್ನಪ್ಪಿರೋ ಘಟನೆ ಮಧ್ಯ ಪ್ರದೇಶದ ಟಿಕಂಗಢ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ನಾಲ್ಕು ವರ್ಷದ ಮಗು ಸೇರಿ ಕುಟುಂಬದ ಐವರ ಮೃತದೇಹಗಳು ಅವರ ನಿವಾಸದಲ್ಲೇ ಪತ್ತೆಯಾಗಿದೆ.

ಮೃತರನ್ನು ನಿವೃತ್ತ ರಾಜ್ಯ ಸರ್ಕಾರದ ಉದ್ಯೋಗಿ ಧರಮ್​ದಾಸ್​ ಸೋನಿ (62), ಪತ್ನಿ ಪೂನಾ (55), ದಂಪತಿಯ ಪುತ್ರ ಮನೋಹರ (27), ಸೊಸೆ ಸೋನಂ (25) ಹಾಗೂ ಮನೋಹರ ದಂಪತಿಯ ನಾಲ್ಕು ವರ್ಷದ ಮಗ ಎಂದು ಗುರುತಿಸಲಾಗಿದೆ.

ಕುಟುಂಬದವರು ತಮ್ಮ ನಿವಾಸದಿಂದ ಇಂದು ಹೊರಬರದ ಹಿನ್ನೆಲೆಯಲ್ಲಿ ಪಕ್ಕದ ಮನೆಯವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರಿಗೆ ಮನೆಯ ಬಾಗಿಲು ಒಳಗಿನಿಂದ ಲಾಕ್​ ಆಗಿರುವುದಾಗಿ ಕಂಡುಬಂದಿದೆ. ಬೀಗ ಮುರಿದು ಒಳಹೊಕ್ಕಾಗ ಮೃತದೇಹಗಳು ಪತ್ತೆಯಾಗಿದೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಇದು ಆತ್ಮಹತ್ಯೆ ಎಂದು ಮಾಹಿತಿ ನೀಡಿದ್ದಾರೆ. ಆದರೆ, ಮನೋಹರ, ಆತನ ಪತ್ನಿ ಸೋನಂ ಮತ್ತು ಮಗುವಿನ ಮೃತದೇಹಗಳ ಮೇಲೆ ಗಾಯದ ಗುರುತುಗಳು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಕುಟುಂಬದಲ್ಲಿ ಆಸ್ತಿ ವಿವಾದದ ಕುರಿತು ಕಲಹವಿದ್ದ ಹಿನ್ನೆಲೆಯಲ್ಲಿ ಪೊಲೀಸರು ಅನುಮಾನಾಸ್ಪದ ಸನ್ನಿವೇಶದ ಕುರಿತು ತನಿಖೆ ಆರಂಭಿಸಿದ್ದಾರೆ.

Published On - 6:17 pm, Sun, 23 August 20

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್