AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಕುಟುಂಬದ ಐವರು ಸದಸ್ಯರು ಅನುಮಾನಾಸ್ಪದ ಸಾವು, ಎಲ್ಲಿ?

ಭೋಪಾಲ್​: ಒಂದೇ ಕುಟುಂಬದ ಐವರು ಸದಸ್ಯರು ಅನುಮಾನಾಸ್ಪದವಾಗಿ ಸಾವನ್ನಪ್ಪಿರೋ ಘಟನೆ ಮಧ್ಯ ಪ್ರದೇಶದ ಟಿಕಂಗಢ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ನಾಲ್ಕು ವರ್ಷದ ಮಗು ಸೇರಿ ಕುಟುಂಬದ ಐವರ ಮೃತದೇಹಗಳು ಅವರ ನಿವಾಸದಲ್ಲೇ ಪತ್ತೆಯಾಗಿದೆ. ಮೃತರನ್ನು ನಿವೃತ್ತ ರಾಜ್ಯ ಸರ್ಕಾರದ ಉದ್ಯೋಗಿ ಧರಮ್​ದಾಸ್​ ಸೋನಿ (62), ಪತ್ನಿ ಪೂನಾ (55), ದಂಪತಿಯ ಪುತ್ರ ಮನೋಹರ (27), ಸೊಸೆ ಸೋನಂ (25) ಹಾಗೂ ಮನೋಹರ ದಂಪತಿಯ ನಾಲ್ಕು ವರ್ಷದ ಮಗ ಎಂದು ಗುರುತಿಸಲಾಗಿದೆ. ಕುಟುಂಬದವರು ತಮ್ಮ ನಿವಾಸದಿಂದ ಇಂದು ಹೊರಬರದ […]

ಒಂದೇ ಕುಟುಂಬದ ಐವರು ಸದಸ್ಯರು ಅನುಮಾನಾಸ್ಪದ ಸಾವು, ಎಲ್ಲಿ?
KUSHAL V
|

Updated on:Aug 23, 2020 | 6:20 PM

Share

ಭೋಪಾಲ್​: ಒಂದೇ ಕುಟುಂಬದ ಐವರು ಸದಸ್ಯರು ಅನುಮಾನಾಸ್ಪದವಾಗಿ ಸಾವನ್ನಪ್ಪಿರೋ ಘಟನೆ ಮಧ್ಯ ಪ್ರದೇಶದ ಟಿಕಂಗಢ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ನಾಲ್ಕು ವರ್ಷದ ಮಗು ಸೇರಿ ಕುಟುಂಬದ ಐವರ ಮೃತದೇಹಗಳು ಅವರ ನಿವಾಸದಲ್ಲೇ ಪತ್ತೆಯಾಗಿದೆ.

ಮೃತರನ್ನು ನಿವೃತ್ತ ರಾಜ್ಯ ಸರ್ಕಾರದ ಉದ್ಯೋಗಿ ಧರಮ್​ದಾಸ್​ ಸೋನಿ (62), ಪತ್ನಿ ಪೂನಾ (55), ದಂಪತಿಯ ಪುತ್ರ ಮನೋಹರ (27), ಸೊಸೆ ಸೋನಂ (25) ಹಾಗೂ ಮನೋಹರ ದಂಪತಿಯ ನಾಲ್ಕು ವರ್ಷದ ಮಗ ಎಂದು ಗುರುತಿಸಲಾಗಿದೆ.

ಕುಟುಂಬದವರು ತಮ್ಮ ನಿವಾಸದಿಂದ ಇಂದು ಹೊರಬರದ ಹಿನ್ನೆಲೆಯಲ್ಲಿ ಪಕ್ಕದ ಮನೆಯವರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರಿಗೆ ಮನೆಯ ಬಾಗಿಲು ಒಳಗಿನಿಂದ ಲಾಕ್​ ಆಗಿರುವುದಾಗಿ ಕಂಡುಬಂದಿದೆ. ಬೀಗ ಮುರಿದು ಒಳಹೊಕ್ಕಾಗ ಮೃತದೇಹಗಳು ಪತ್ತೆಯಾಗಿದೆ.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ ಪೊಲೀಸರು ಪ್ರಾಥಮಿಕ ತನಿಖೆಯಲ್ಲಿ ಇದು ಆತ್ಮಹತ್ಯೆ ಎಂದು ಮಾಹಿತಿ ನೀಡಿದ್ದಾರೆ. ಆದರೆ, ಮನೋಹರ, ಆತನ ಪತ್ನಿ ಸೋನಂ ಮತ್ತು ಮಗುವಿನ ಮೃತದೇಹಗಳ ಮೇಲೆ ಗಾಯದ ಗುರುತುಗಳು ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ. ಕುಟುಂಬದಲ್ಲಿ ಆಸ್ತಿ ವಿವಾದದ ಕುರಿತು ಕಲಹವಿದ್ದ ಹಿನ್ನೆಲೆಯಲ್ಲಿ ಪೊಲೀಸರು ಅನುಮಾನಾಸ್ಪದ ಸನ್ನಿವೇಶದ ಕುರಿತು ತನಿಖೆ ಆರಂಭಿಸಿದ್ದಾರೆ.

Published On - 6:17 pm, Sun, 23 August 20

Follow Us
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ