ನಿಮ್ಮಂತೆ ಮತಾಂಧರನ್ನು ಸ್ತುತಿಸುವುದಿಲ್ಲ; ಪಾಕ್ ಪ್ರಧಾನಿ ಟ್ವೀಟ್​ಗೆ ಭಾರತ ತಿರುಗೇಟು

| Updated By: ರಶ್ಮಿ ಕಲ್ಲಕಟ್ಟ

Updated on: Jun 06, 2022 | 7:25 PM

ಪಾಕ್​​ಗೆ ತಿರುಗೇಟು ನೀಡಿರುವ ಬಾಗ್ಚಿ "ಭಾರತ ಸರ್ಕಾರವು ಎಲ್ಲಾ ಧರ್ಮಗಳಿಗೆ ಅತ್ಯುನ್ನತ ಗೌರವವನ್ನು ನೀಡುತ್ತದೆ. ಇದು ಪಾಕಿಸ್ತಾನಕ್ಕಿಂತ ಭಿನ್ನವಾಗಿದೆ, ಅಲ್ಲಿ ಮತಾಂಧರನ್ನು ಸ್ತುತಿಸಲಾಗುತ್ತಿದೆ ಮತ್ತು ಅವರ ಗೌರವಾರ್ಥವಾಗಿ ಸ್ಮಾರಕಗಳನ್ನು ನಿರ್ಮಿಸಲಾಗುತ್ತದೆ. ಭಾರತದಲ್ಲಿ ಕೋಮು ಸೌಹಾರ್ದತೆಯನ್ನು ಹುಟ್ಟುಹಾಕಲು ..

ನಿಮ್ಮಂತೆ ಮತಾಂಧರನ್ನು ಸ್ತುತಿಸುವುದಿಲ್ಲ; ಪಾಕ್ ಪ್ರಧಾನಿ ಟ್ವೀಟ್​ಗೆ ಭಾರತ ತಿರುಗೇಟು
ಅರಿಂದಮ್ ಬಾಗ್ಚಿ
Follow us on

ದೆಹಲಿ: ಅಮಾನತುಗೊಂಡಿರುವ ಬಿಜೆಪಿ (BJP) ನಾಯಕರು ಪ್ರವಾದಿ ಮೊಹಮ್ಮದ್ (Prophet Muhammad) ಕುರಿತು ಮಾಡಿದ ಇತ್ತೀಚಿನ ಟೀಕೆಗಳನ್ನು ಖಂಡಿಸಿ ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ (Shehbaz Sharif) ಟ್ವೀಟ್​​ಗೆ ಭಾರತ ಸೋಮವಾರ ಪ್ರತಿಕ್ರಿಯಿಸಿದೆ. ಪಾಕಿಸ್ತಾನದ(Pakistan) ಹೇಳಿಕೆಗಳು ಮತ್ತು ಕಾಮೆಂಟ್‌ಗಳನ್ನು ನಾವು ಗಮನಿಸಿದ್ದೇವೆ. ಅಲ್ಪಸಂಖ್ಯಾತರ ಹಕ್ಕುಗಳ ಸರಣಿ ಉಲ್ಲಂಘನೆ ಮಾಡುವವರು ಮತ್ತೊಂದು ರಾಷ್ಟ್ರದಲ್ಲಿ ಅಲ್ಪಸಂಖ್ಯಾತರನ್ನು ನಡೆಸಿಕೊಳ್ಳುವುದರ ಕುರಿತು ಕಾಮೆಂಟ್ ಮಾಡುತ್ತಿದ್ದಾರೆ. ಪಾಕಿಸ್ತಾನದಲ್ಲಿನ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರು ಮತ್ತು ಅಹ್ಮದೀಯರು ಸೇರಿದಂತೆ ಅಲ್ಪಸಂಖ್ಯಾತರ ವ್ಯವಸ್ಥಿತ ಕಿರುಕುಳಕ್ಕೆ ಜಗತ್ತು ಸಾಕ್ಷಿಯಾಗಿದೆ” ಎಂದು ಎಂಇಎ ವಕ್ತಾರ ಅರಿಂದಮ್ ಬಾಗ್ಚಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ನಮ್ಮ ಪ್ರೀತಿಯ ಪ್ರವಾದಿ ಬಗ್ಗೆ ಭಾರತದ ಬಿಜೆಪಿ ನಾಯಕನ ನೋವುಂಟುಮಾಡುವ ಕಾಮೆಂಟ್‌ಗಳನ್ನು ನಾನು ಪ್ರಬಲವಾದ ಪದಗಳಲ್ಲಿ ಖಂಡಿಸಿದೆ. ಮೋದಿಯವರ ನೇತೃತ್ವದಲ್ಲಿ ಭಾರತವು ಧಾರ್ಮಿಕ ಸ್ವಾತಂತ್ರ್ಯವನ್ನು ತುಳಿಯುತ್ತಿದೆ ಮತ್ತು ಮುಸ್ಲಿಮರನ್ನು ಹಿಂಸಿಸುತ್ತಿದೆ ಎಂದು ಪದೇ ಪದೇ ಹೇಳುತ್ತಿದ್ದಾರೆ. ಜಗತ್ತು ಇದನ್ನು ಗಮನಿಸಬೇಕು ಮತ್ತು ಭಾರತವನ್ನು ತೀವ್ರವಾಗಿ ಖಂಡಿಸಬೇಕು. ಪವಿತ್ರ ಪ್ರವಾದಿ (PBUH) ರ ಮೇಲೆ ನಮ್ಮ ಪ್ರೀತಿ ಸರ್ವೋಚ್ಚವಾಗಿದೆ. ಎಲ್ಲಾ ಮುಸ್ಲಿಮರು ತಮ್ಮ ಪವಿತ್ರ ಪ್ರವಾದಿ (PBUH) ಪ್ರೀತಿ ಮತ್ತು ಗೌರವಕ್ಕಾಗಿ ತಮ್ಮ ಜೀವನವನ್ನು ತ್ಯಾಗ ಮಾಡಬಹುದು ಎಂದು ಷರೀಫ್ ಟ್ವೀಟ್ ಮಾಡಿದ್ದರು.

ಪಾಕ್​​ಗೆ ತಿರುಗೇಟು ನೀಡಿರುವ ಬಾಗ್ಚಿ “ಭಾರತ ಸರ್ಕಾರವು ಎಲ್ಲಾ ಧರ್ಮಗಳಿಗೆ ಅತ್ಯುನ್ನತ ಗೌರವವನ್ನು ನೀಡುತ್ತದೆ. ಇದು ಪಾಕಿಸ್ತಾನಕ್ಕಿಂತ ಭಿನ್ನವಾಗಿದೆ, ಅಲ್ಲಿ ಮತಾಂಧರನ್ನು ಸ್ತುತಿಸಲಾಗುತ್ತಿದೆ ಮತ್ತು ಅವರ ಗೌರವಾರ್ಥವಾಗಿ ಸ್ಮಾರಕಗಳನ್ನು ನಿರ್ಮಿಸಲಾಗುತ್ತದೆ. ಭಾರತದಲ್ಲಿ ಕೋಮು ಸೌಹಾರ್ದತೆಯನ್ನು ಹುಟ್ಟುಹಾಕಲು ಪ್ರಯತ್ನಿಸುವ ಮತ್ತು ಎಚ್ಚರಿಕೆಯ ಪ್ರಚಾರದಲ್ಲಿ ತೊಡಗುವ ಬದಲು ಅದರ ಅಲ್ಪಸಂಖ್ಯಾತ ಸಮುದಾಯಗಳ ಸುರಕ್ಷತೆ, ಭದ್ರತೆ ಮತ್ತು ಯೋಗಕ್ಷೇಮದ ಮೇಲೆ ಕೇಂದ್ರೀಕರಿಸಲು ನಾವು ಪಾಕಿಸ್ತಾನಕ್ಕೆ ಕರೆ ನೀಡುತ್ತೇವೆ ಎಂದಿದ್ದಾರೆ

ಇದನ್ನೂ ಓದಿ
ಪ್ರವಾದಿ ಬಗ್ಗೆ ಹೇಳಿಕೆ ವಿವಾದ: ಒಐಸಿ ಟೀಕೆ ಅನಗತ್ಯ ಮತ್ತು ಸಂಕುಚಿತ ಮನಸ್ಸಿನದ್ದು ಎಂದ ಭಾರತ
Nupur Sharma: ಪ್ರವಾದಿ ಮೊಹಮ್ಮದ್ ಕುರಿತ ವಿವಾದಾತ್ಮಕ ಹೇಳಿಕೆಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮ ಯಾರು?
Nupur Sharma: ಬಿಜೆಪಿ ನಾಯಕಿ ನೂಪುರ್ ಶರ್ಮಾ ತಲೆ ಕತ್ತರಿಸಿದವರಿಗೆ 50 ಲಕ್ಷ ಬಹುಮಾನ ಘೋಷಿಸಿದ ಪಾಕಿಸ್ತಾನಿಗಳು
ಪ್ರವಾದಿ ವಿರುದ್ಧ ಹೇಳಿಕೆ ನೀಡಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ; ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ಎಫ್ಐಆರ್


ಏತನ್ಮಧ್ಯೆ, ಪ್ರವಾದಿ ವಿರುದ್ಧದ ವಿವಾದಾತ್ಮಕ ಟೀಕೆಗಳನ್ನು ಸ್ಪಷ್ಟವಾಗಿ ತಿರಸ್ಕರಿಸಲು ಮತ್ತು ಖಂಡನೆಯನ್ನು ತಿಳಿಸಲು ಭಾರತೀಯ ಅಧಿಕಾರಿಗಳನ್ನು ಕರೆಸಿರುವುದಾಗಿ ಪಾಕಿಸ್ತಾನ ಸೋಮವಾರ ಹೇಳಿದೆ.
ಈ ಹೇಳಿಕೆಗಳು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಮತ್ತು ಪಾಕಿಸ್ತಾನದ ಜನರ ಭಾವನೆಗಳನ್ನು ಮಾತ್ರವಲ್ಲದೆ ಪ್ರಪಂಚದಾದ್ಯಂತದ ಮುಸ್ಲಿಮರ ಭಾವನೆಗಳನ್ನು ತೀವ್ರವಾಗಿ ಘಾಸಿಗೊಳಿಸಿವೆ ಎಂದು ಭಾರತೀಯ ರಾಜತಾಂತ್ರಿಕರಿಗೆ ತಿಳಿಸಲಾಗಿದೆ ಎಂದು ವಿದೇಶಾಂಗ ಕಚೇರಿ (ಎಫ್‌ಒ) ಹೇಳಿಕೆಯಲ್ಲಿ ತಿಳಿಸಿದೆ.

ಭಾರತದ ಆಡಳಿತ ಪಕ್ಷ ಬಿಜೆಪಿಯ ಇಬ್ಬರು ಹಿರಿಯ ನಾಯಕರು ಮಾಡಿದ ಅತ್ಯಂತ ಅವಹೇಳನಕಾರಿ ಹೇಳಿಕೆಗಳ ಬಗ್ಗೆ ಪಾಕಿಸ್ತಾನದ ಸ್ಪಷ್ಟ ನಿರಾಕರಣೆ ಮತ್ತು ತೀವ್ರ ಖಂಡನೆಯನ್ನು ವಿದೇಶಾಂಗ ಕಚೇರಿ ಸರ್ಕಾರಕ್ಕೆ ತಿಳಿಸಿತು.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

Published On - 6:00 pm, Mon, 6 June 22