AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ಕೃಷಿ ಕಾಯ್ದೆಗಳು ಅಕ್ರಮ ಮತ್ತು ಅಸಾಂವಿಧಾನಿಕ: ದುಷ್ಯಂತ್ ದವೆ

ಈ ಕಾಯ್ದೆಗಳು ಜಾರಿಯಾದ ನಂತರ ನ್ಯಾಯಾಲಯಗಳಲ್ಲಿ ಪ್ರಕರಣಗಳು ಹೆಚ್ಚಾಗಲಿವೆ. ಇಂಥ ಕಾಯ್ದೆಗಳು ಅನಗತ್ಯ ಎಂದು ದುಷ್ಯಂತ್ ದವೆ ಅಭಿಪ್ರಾಯಪಟ್ಟರು.

ನೂತನ ಕೃಷಿ ಕಾಯ್ದೆಗಳು ಅಕ್ರಮ ಮತ್ತು ಅಸಾಂವಿಧಾನಿಕ: ದುಷ್ಯಂತ್ ದವೆ
ದೆಹಲಿಯ ರಸ್ತೆ ಬದಿಗಳಲ್ಲಿ ವಾಸ್ತವ್ಯ ಹೂಡಿರುವ ಪಂಜಾಬ್​ನ ಪ್ರತಿಭಟನಾ ನಿರತ ಕೃಷಿಕರು
guruganesh bhat
|

Updated on:Dec 06, 2020 | 12:22 PM

Share

ದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹೊಸ ಕೃಷಿ ಕಾನೂನುಗಳು ಅಕ್ರಮ ಮತ್ತು ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್​ನ ಅಧ್ಯಕ್ಷ ದುಷ್ಯಂತ್ ದವೆ ಅಭಿಪ್ರಾಯ ವ್ಯಕ್ತಪಡಿಸಿದರು.

ಕೃಷಿ ಸಂಘರ್ಷ ಸಮಿತಿಯ ಸದಸ್ಯ ಬಲ್ದೇವ್ ಸಿಂಗ್ ಸಿರ್ಸಾ ಮತ್ತು ವಕೀಲ ಹರ್ವಿಂದರ್ ಸಿಂಗ್ ಫೂಲ್ಕಾ ಅವರ ಜೊತೆ ನಡೆಸಿದ ಸಭೆಯ ನಂತರ ಪ್ರತಿಕ್ರಿಯಿಸಿದ ಅವರು, ‘ ಪ್ರಜಾಪ್ರಭುತ್ವದ ಬೇರುಗಳ ಮೇಲೇ ಪ್ರಭಾವ ಬೀರುವ ಅಂಶಗಳು ನೂತನ ಕೃಷಿ ಕಾಯ್ದೆಗಳಲ್ಲಿವೆ. ಒಂದು ವೇಳೆ ಜಾರಿಗೆ ಬಂದದ್ದೇ ಆದರೆ, ರೈತರನ್ನು ಸಾಲದ ಕಪಿಮುಷ್ಟಿಯಲ್ಲಿ ಬಂಧಿಸುತ್ತವೆ. ಸಾಲದ ಜಾಲದಲ್ಲಿ ಸಿಲುಕಿ ರೈತರು ಶೋಷಣೆಗೆ ಒಳಗಾಗುವ ಸ್ಥಿತಿ ನಿರ್ಮಾಣವಾಗಲಿದೆ’ ಎಂದು ಹೇಳಿದರು.

ಲಾಭವೊಂದನ್ನೇ ಉತ್ತೇಜಿಸುವ ನೂತನ ಕೃಷಿ ಕಾಯ್ದೆಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಮಧ್ಯಮ ಮತ್ತು ಸಣ್ಣ ಪ್ರಮಾಣದ ರೈತರಿಗೆ ಯಾವ ಸುರಕ್ಷತೆಯನ್ನೂ ಒದಗಿಸುತ್ತಿಲ್ಲ. ನಿಯಮಗಳನ್ನು ಅರ್ಥೈಸಿಕೊಂಡು ವ್ಯಾಪಾರಿಗಳ ಜೊತೆ ಒಪ್ಪಂದ ಮಾಡಿಕೊಳ್ಳುವುದು ಕೃಷಿಕರ ಪಾಲಿಗೆ ಕಷ್ಟವಾಗಲಿದೆ. ಇದರಿಂದ ವ್ಯಾಪಾರಿಗಳಿಂದ ಶೋಷಣೆಗೆ ಒಳಗಾಗುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು. ಕೃಷಿ ಸಂಘರ್ಷ ಸಮಿತಿಯ ಸದಸ್ಯರು ತಮ್ಮನ್ನು ಭೇಟಿಯಾದ ಕುರಿತು ಹೆಮ್ಮೆ ವ್ಯಕ್ತಪಡಿಸಿದರು.

ಕೃಷಿಕರ ಬೇಡಿಕೆಗಳನ್ನು ಆಲಿಸಿ ನೂತನ ಕೃಷಿ ಕಾಯ್ದೆಗಳಿಗೆ ತಿದ್ದುಪಡಿ ಮಾಡುವ ಜವಾಬ್ದಾರಿ ಸರ್ಕಾರದ ಮೇಲಿದೆ. ಕೃಷಿಕರ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಕಡ್ಡಾಯವಾಗಿ ದಕ್ಕಲೇಬೇಕು ಎಂದು ಅವರು ವಿವರಿಸಿದರು.

ನ್ಯಾಯಾಂಗವನ್ನು ದೂರವಿಡಬಾರದು.. ಕೇಂದ್ರ ಸರ್ಕಾರ ಈಗಾಗಲೇ, ‘ನ್ಯಾಯಾಂಗ ವ್ಯವಸ್ಥೆಯನ್ನು ಈ ಕಾಯ್ದೆಯ ಪರಾಮರ್ಶೆಯಿಂದ ದೂರವಿಡುವೆನೆಂದು ಹೇಳಿದೆ. ಆದರೆ ನ್ಯಾಯಾಂಗದ ಬಳಿ ರೈತರಿಗೆ ನ್ಯಾಯ ಒದಗಿಸುವ ಎಲ್ಲಾ ಸಾಮರ್ಥ್ಯವಿದೆ. ಸರ್ಕಾರ ನ್ಯಾಯಾಂಗವನ್ನು ಒಳಗೊಂಡೇ ಕಾಯ್ದೆಯನ್ನು ಪರಾಮರ್ಶಿಸಬೇಕು. ಈ ಕಾಯ್ದೆಗಳು ಜಾರಿಯಾದ ನಂತರ ನ್ಯಾಯಾಲಯಗಳಲ್ಲಿ ಪ್ರಕರಣಗಳು ಹೆಚ್ಚಾಗಲಿವೆ. ಇಂಥ ಕಾಯ್ದೆಗಳು ಅನಗತ್ಯ’ ಎಂದು ದುಷ್ಯಂತ್ ದವೆ ಅಭಿಪ್ರಾಯಪಟ್ಟರು.

ರೈತ ಮುಖಂಡರ ಬಳಿ ಕಾಲಾವಕಾಶ ಕೇಳಿದ ಕೇಂದ್ರ ಸಚಿವರು; ಮತ್ತೆ ಡಿ.9ಕ್ಕೆ ಮಾತುಕತೆ

Published On - 11:59 am, Sun, 6 December 20

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?