AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ಕೃಷಿ ಕಾಯ್ದೆಗಳು ಅಕ್ರಮ ಮತ್ತು ಅಸಾಂವಿಧಾನಿಕ: ದುಷ್ಯಂತ್ ದವೆ

ಈ ಕಾಯ್ದೆಗಳು ಜಾರಿಯಾದ ನಂತರ ನ್ಯಾಯಾಲಯಗಳಲ್ಲಿ ಪ್ರಕರಣಗಳು ಹೆಚ್ಚಾಗಲಿವೆ. ಇಂಥ ಕಾಯ್ದೆಗಳು ಅನಗತ್ಯ ಎಂದು ದುಷ್ಯಂತ್ ದವೆ ಅಭಿಪ್ರಾಯಪಟ್ಟರು.

ನೂತನ ಕೃಷಿ ಕಾಯ್ದೆಗಳು ಅಕ್ರಮ ಮತ್ತು ಅಸಾಂವಿಧಾನಿಕ: ದುಷ್ಯಂತ್ ದವೆ
ದೆಹಲಿಯ ರಸ್ತೆ ಬದಿಗಳಲ್ಲಿ ವಾಸ್ತವ್ಯ ಹೂಡಿರುವ ಪಂಜಾಬ್​ನ ಪ್ರತಿಭಟನಾ ನಿರತ ಕೃಷಿಕರು
guruganesh bhat
|

Updated on:Dec 06, 2020 | 12:22 PM

Share

ದೆಹಲಿ: ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹೊಸ ಕೃಷಿ ಕಾನೂನುಗಳು ಅಕ್ರಮ ಮತ್ತು ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್​ನ ಅಧ್ಯಕ್ಷ ದುಷ್ಯಂತ್ ದವೆ ಅಭಿಪ್ರಾಯ ವ್ಯಕ್ತಪಡಿಸಿದರು.

ಕೃಷಿ ಸಂಘರ್ಷ ಸಮಿತಿಯ ಸದಸ್ಯ ಬಲ್ದೇವ್ ಸಿಂಗ್ ಸಿರ್ಸಾ ಮತ್ತು ವಕೀಲ ಹರ್ವಿಂದರ್ ಸಿಂಗ್ ಫೂಲ್ಕಾ ಅವರ ಜೊತೆ ನಡೆಸಿದ ಸಭೆಯ ನಂತರ ಪ್ರತಿಕ್ರಿಯಿಸಿದ ಅವರು, ‘ ಪ್ರಜಾಪ್ರಭುತ್ವದ ಬೇರುಗಳ ಮೇಲೇ ಪ್ರಭಾವ ಬೀರುವ ಅಂಶಗಳು ನೂತನ ಕೃಷಿ ಕಾಯ್ದೆಗಳಲ್ಲಿವೆ. ಒಂದು ವೇಳೆ ಜಾರಿಗೆ ಬಂದದ್ದೇ ಆದರೆ, ರೈತರನ್ನು ಸಾಲದ ಕಪಿಮುಷ್ಟಿಯಲ್ಲಿ ಬಂಧಿಸುತ್ತವೆ. ಸಾಲದ ಜಾಲದಲ್ಲಿ ಸಿಲುಕಿ ರೈತರು ಶೋಷಣೆಗೆ ಒಳಗಾಗುವ ಸ್ಥಿತಿ ನಿರ್ಮಾಣವಾಗಲಿದೆ’ ಎಂದು ಹೇಳಿದರು.

ಲಾಭವೊಂದನ್ನೇ ಉತ್ತೇಜಿಸುವ ನೂತನ ಕೃಷಿ ಕಾಯ್ದೆಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಮಧ್ಯಮ ಮತ್ತು ಸಣ್ಣ ಪ್ರಮಾಣದ ರೈತರಿಗೆ ಯಾವ ಸುರಕ್ಷತೆಯನ್ನೂ ಒದಗಿಸುತ್ತಿಲ್ಲ. ನಿಯಮಗಳನ್ನು ಅರ್ಥೈಸಿಕೊಂಡು ವ್ಯಾಪಾರಿಗಳ ಜೊತೆ ಒಪ್ಪಂದ ಮಾಡಿಕೊಳ್ಳುವುದು ಕೃಷಿಕರ ಪಾಲಿಗೆ ಕಷ್ಟವಾಗಲಿದೆ. ಇದರಿಂದ ವ್ಯಾಪಾರಿಗಳಿಂದ ಶೋಷಣೆಗೆ ಒಳಗಾಗುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು. ಕೃಷಿ ಸಂಘರ್ಷ ಸಮಿತಿಯ ಸದಸ್ಯರು ತಮ್ಮನ್ನು ಭೇಟಿಯಾದ ಕುರಿತು ಹೆಮ್ಮೆ ವ್ಯಕ್ತಪಡಿಸಿದರು.

ಕೃಷಿಕರ ಬೇಡಿಕೆಗಳನ್ನು ಆಲಿಸಿ ನೂತನ ಕೃಷಿ ಕಾಯ್ದೆಗಳಿಗೆ ತಿದ್ದುಪಡಿ ಮಾಡುವ ಜವಾಬ್ದಾರಿ ಸರ್ಕಾರದ ಮೇಲಿದೆ. ಕೃಷಿಕರ ಬೆಳೆಗೆ ಕನಿಷ್ಠ ಬೆಂಬಲ ಬೆಲೆ ಕಡ್ಡಾಯವಾಗಿ ದಕ್ಕಲೇಬೇಕು ಎಂದು ಅವರು ವಿವರಿಸಿದರು.

ನ್ಯಾಯಾಂಗವನ್ನು ದೂರವಿಡಬಾರದು.. ಕೇಂದ್ರ ಸರ್ಕಾರ ಈಗಾಗಲೇ, ‘ನ್ಯಾಯಾಂಗ ವ್ಯವಸ್ಥೆಯನ್ನು ಈ ಕಾಯ್ದೆಯ ಪರಾಮರ್ಶೆಯಿಂದ ದೂರವಿಡುವೆನೆಂದು ಹೇಳಿದೆ. ಆದರೆ ನ್ಯಾಯಾಂಗದ ಬಳಿ ರೈತರಿಗೆ ನ್ಯಾಯ ಒದಗಿಸುವ ಎಲ್ಲಾ ಸಾಮರ್ಥ್ಯವಿದೆ. ಸರ್ಕಾರ ನ್ಯಾಯಾಂಗವನ್ನು ಒಳಗೊಂಡೇ ಕಾಯ್ದೆಯನ್ನು ಪರಾಮರ್ಶಿಸಬೇಕು. ಈ ಕಾಯ್ದೆಗಳು ಜಾರಿಯಾದ ನಂತರ ನ್ಯಾಯಾಲಯಗಳಲ್ಲಿ ಪ್ರಕರಣಗಳು ಹೆಚ್ಚಾಗಲಿವೆ. ಇಂಥ ಕಾಯ್ದೆಗಳು ಅನಗತ್ಯ’ ಎಂದು ದುಷ್ಯಂತ್ ದವೆ ಅಭಿಪ್ರಾಯಪಟ್ಟರು.

ರೈತ ಮುಖಂಡರ ಬಳಿ ಕಾಲಾವಕಾಶ ಕೇಳಿದ ಕೇಂದ್ರ ಸಚಿವರು; ಮತ್ತೆ ಡಿ.9ಕ್ಕೆ ಮಾತುಕತೆ

Published On - 11:59 am, Sun, 6 December 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ