AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾವಿಗೀಡಾದ ರೈತರಿಗೆ ಸಂದ ಗೌರವ: ಕೃಷಿ ಕಾನೂನು ರದ್ದತಿ ಮಸೂದೆ ಅಂಗೀಕಾರ ಬಗ್ಗೆ ಟಿಕಾಯತ್ ಪ್ರತಿಕ್ರಿಯೆ

ರೈತ ಸಂಘಗಳು ಕೇಂದ್ರದೊಂದಿಗೆ ಮಾತನಾಡದೆ ದೆಹಲಿಯ ಗಡಿಗಳಲ್ಲಿ ಪ್ರತಿಭಟನಾ ಸ್ಥಳಗಳನ್ನು ಬಿಡುವುದಿಲ್ಲ ಎಂದು ಟಿಕಾಯಕತ್ ನಿನ್ನೆ ಹೇಳಿದ್ದರು. ರೈತ ಸಂಘಗಳು ಈ ಮಾತುಕತೆಗೆ ಮಾರ್ಗಗಳನ್ನು ತೆರೆಯುತ್ತವೆ ಎಂದು ಹೇಳಿದ ಟಿಕಾಯತ್, ರೈತರು ತಮ್ಮನ್ನು ತಲುಪದೆ ತಮ್ಮ ಆಂದೋಲನವನ್ನು ಕೊನೆಗೊಳಿಸಬೇಕೆಂದು ಕೇಂದ್ರ ಬಯಸುತ್ತದೆ ಎಂದಿದ್ದಾರೆ.

ಸಾವಿಗೀಡಾದ ರೈತರಿಗೆ ಸಂದ ಗೌರವ: ಕೃಷಿ ಕಾನೂನು ರದ್ದತಿ ಮಸೂದೆ ಅಂಗೀಕಾರ ಬಗ್ಗೆ ಟಿಕಾಯತ್ ಪ್ರತಿಕ್ರಿಯೆ
ರಾಕೇಶ್ ಟಿಕಾಯತ್
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Nov 29, 2021 | 3:19 PM

Share

ದೆಹಲಿ: ಲೋಕಸಭೆಯು ಸೋಮವಾರ ಸಂಸತ್ತಿನಲ್ಲಿ ಕೃಷಿ ಕಾನೂನುಗಳ ರದ್ದತಿ ಮಸೂದೆ 2021 (Farm Laws Repeal Bill, 2021) ಅನ್ನು ಅಂಗೀಕರಿಸುತ್ತಿದ್ದಂತೆ, ಭಾರತೀಯ ಕಿಸಾನ್ ಯೂನಿಯನ್ (BKU) ವಕ್ತಾರ ರಾಕೇಶ್ ಟಿಕಾಯತ್  (Rakesh Tikait)ಇದು ಕಳೆದ ವರ್ಷ ನವೆಂಬರ್‌ನಲ್ಲಿ ಪ್ರಾರಂಭವಾದ ಆಂದೋಲನದ ಸಮಯದಲ್ಲಿ ಮರಣ ಹೊಂದಿದ 750 ರೈತರಿಗೆ ಸಂದ ಗೌರವ ಎಂದಿದ್ದಾರೆ. ಕೇಂದ್ರದ ಮೂರು ಕೃಷಿ ಕಾನೂನುಗಳನ್ನು ಅಧಿಕೃತವಾಗಿ ಹಿಂಪಡೆಯಲು ಉದ್ದೇಶಿಸಿರುವ ಕೃಷಿ ಕಾನೂನುಗಳ ರದ್ದತಿ ಮಸೂದೆ, 2021 ಅನ್ನು ಸಂಸತ್ತಿನ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಸೋಮವಾರ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ (Narendra Singh Tomar) ಅವರು ಮಂಡಿಸಿದರು. ವಿರೋಧ ಪಕ್ಷಗಳ ಗದ್ದಲದ ನಡುವೆಯೇ ಯಾವುದೇ ಚರ್ಚೆಯಿಲ್ಲದೆ ಮಸೂದೆಯನ್ನು ಅಂಗೀಕರಿಸಲಾಯಿತು. ಕೃಷಿ ಕಾನೂನು ರದ್ದು ಮಾಡುವ ಸರ್ಕಾರದ ಕ್ರಮದ ಬಗ್ಗೆ ಮಾತನಾಡಿದ ಟಿಕಾಯತ್, ರೈತರ ಆಂದೋಲನ ಮುಂದುವರಿಯುತ್ತದೆ. “ಕೃಷಿ ಕಾನೂನು ರದ್ದತಿ ಮಸೂದೆಯು ಆಂದೋಲನದ ಸಮಯದಲ್ಲಿ ಮಡಿದ 750 ರೈತರಿಗೆ ಸಂದ ಗೌರವವಾಗಿದೆ. ಕನಿಷ್ಠ ಬೆಂಬಲ ಬೆಲೆ(MSP) ಸೇರಿದಂತೆ ಇತರೆ ಸಮಸ್ಯೆಗಳು ಬಾಕಿ ಉಳಿದಿರುವುದರಿಂದ ಪ್ರತಿಭಟನೆ ಮುಂದುವರಿಯಲಿದೆ ಎಂದು ಹೇಳಿದ್ದಾರೆ.

ರೈತ ಸಂಘಗಳು ಕೇಂದ್ರದೊಂದಿಗೆ ಮಾತನಾಡದೆ ದೆಹಲಿಯ ಗಡಿಗಳಲ್ಲಿ ಪ್ರತಿಭಟನಾ ಸ್ಥಳಗಳನ್ನು ಬಿಡುವುದಿಲ್ಲ ಎಂದು ಟಿಕಾಯಕತ್ ನಿನ್ನೆ ಹೇಳಿದ್ದರು. ರೈತ ಸಂಘಗಳು ಈ ಮಾತುಕತೆಗೆ ಮಾರ್ಗಗಳನ್ನು ತೆರೆಯುತ್ತವೆ ಎಂದು ಹೇಳಿದ ಟಿಕಾಯತ್, ರೈತರು ತಮ್ಮನ್ನು ತಲುಪದೆ ತಮ್ಮ ಆಂದೋಲನವನ್ನು ಕೊನೆಗೊಳಿಸಬೇಕೆಂದು ಕೇಂದ್ರ ಬಯಸುತ್ತದೆ ಎಂದಿದ್ದಾರೆ.

ಮೂರು ಕೃಷಿ ಕಾನೂನುಗಳಿಗೆ ಪರಿಹಾರ ಕಂಡುಕೊಂಡಿರುವ ಕೇಂದ್ರವು ಕಳೆದ ವರ್ಷದಲ್ಲಿ ಆಗಿರುವ ಹಾನಿಯ ಬಗ್ಗೆ ಈಗ ಮಾತನಾಡಬೇಕು ಎಂದು ಅವರು ಹೇಳಿದರು. “ಕೇಂದ್ರವು ಮೋಸದ, ಸುಳ್ಳು ಹೇಳಿಕೆಗಳೊಂದಿಗೆ ವಿಷಯವನ್ನು ಇತ್ಯರ್ಥಗೊಳಿಸಲು ಬಯಸಿದರೆ ಸಮಸ್ಯೆ ಕೊನೆಗೊಳ್ಳುವುದಿಲ್ಲ.”

ಏತನ್ಮಧ್ಯೆ, ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಮಸೂದೆಯ ಮೇಲೆ ಚರ್ಚೆಗೆ ಒತ್ತಾಯಿಸಿದವು. ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಸದನದಲ್ಲಿ ಆದೇಶ ಇದ್ದಾಗ ಅದು ಸಂಭವಿಸಬಹುದು ಎಂದು ಹೇಳಿದರು.

ಇದನ್ನೂ ಓದಿ: Farm Laws Repeal Bill 2021 ಲೋಕಸಭೆಯಲ್ಲಿ ವಿಪಕ್ಷಗಳ ಗದ್ದಲದ ನಡುವೆ ಕೃಷಿ ಕಾನೂನುಗಳ ರದ್ದತಿ ಮಸೂದೆ 2021ಗೆ ಅಂಗೀಕಾರ

ಇದನ್ನೂ ಓದಿ: Farm Laws Repeal Bill 2021 ಕೃಷಿ ಕಾನೂನುಗಳ ರದ್ದತಿ ಮಸೂದೆ 2021ಗೆ ರಾಜ್ಯಸಭೆ ಅಂಗೀಕಾರ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ