AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಖಿಂಪುರ ಖೇರಿ ಹಿಂಸಾಚಾರ ವಿರೋಧಿಸಿ ಸರಣಿ ಆಂದೋಲನಕ್ಕೆ ಮುಂದಾದ ರೈತರು; ಅ.18ರಂದು ರೈಲು ತಡೆ ಚಳವಳಿ

ಲಖಿಂಪುರ ಖೇರಿ ಹಿಂಸಾಚಾರವನ್ನು ನಾವು ಬಲವಾಗಿ ಖಂಡಿಸುತ್ತೇವೆ. ರೈತರ ಮೇಲಿನ ಹಿಂಸಾಚಾರವನ್ನು ಖಂಡಿಸಿ ನಾವು ಹೊಸ ಸರಣಿಯ ಆಂದೋಲನ ನಡೆಸಲಿದ್ದೇವೆ ಎಂದು ಸಂಯುಕ್ತ ಕಿಸಾನ್​ ಮೋರ್ಚಾ ತಿಳಿಸಿದೆ.

ಲಖಿಂಪುರ ಖೇರಿ ಹಿಂಸಾಚಾರ ವಿರೋಧಿಸಿ ಸರಣಿ ಆಂದೋಲನಕ್ಕೆ ಮುಂದಾದ ರೈತರು; ಅ.18ರಂದು ರೈಲು ತಡೆ ಚಳವಳಿ
ಈ ಹಿಂದೊಮ್ಮೆ ನಡೆದಿದ್ದ ರೈಲು ತಡೆ ಚಳವಳಿಯ ಚಿತ್ರ
TV9 Web
| Edited By: |

Updated on: Oct 09, 2021 | 7:18 PM

Share

ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರ(Lakhimpur Kheri Violence)ದ ವಿರುದ್ಧ ಪ್ರಮುಖ ರೈತ ಸಂಘಟನೆ (Farmers Unions)ಗಳು ಹೊಸ ಸರಣಿ ಆಂದೋಲನ ನಡೆಸಲು ಮುಂದಾಗಿವೆ. ಈ ಹಿಂಸಾಚಾರದಲ್ಲಿ ಒಟ್ಟು 8 ಮಂದಿ ಮೃತಪಟ್ಟಿದ್ದು, ಅದರಲ್ಲಿ ನಾಲ್ವರು ರೈತರು, ಒಬ್ಬ ಪತ್ರಕರ್ತ ಮತ್ತು ಮೂವರು ಬಿಜೆಪಿ ಕಾರ್ಯಕರ್ತರು ಎಂದು ಹೇಳಲಾಗಿದೆ.  ಇನ್ನು ಲಖಿಂಪುರ ಖೇರಿಯಲ್ಲಿ ರೈತರಿಗೆ ಡಿಕ್ಕಿ ಹೊಡೆದಿದ್ದು ಕೇಂದ್ರ ಗೃಹ ಇಲಾಖೆ ರಾಜ್ಯ ಸಚಿವ ಅಜಯ್​ ಮಿಶ್ರಾರ ಪುತ್ರ ಆಶಿಶ್​ ಮಿಶ್ರಾ ಅವರ ಬೆಂಗಾವಲು ವಾಹನ ಎಂದು ಹೇಳಲಾಗಿದ್ದು, ಇಂದು ಆಶಿಶ್​ ಮಿಶ್ರಾ ಬಂಧನ ಕೂಡ ಆಗಿದೆ. ಇದೀಗ ರೈತ ಸಂಘಟನೆಗಳೆಲ್ಲ ಆಶಿಶ್​ ಮಿಶ್ರಾ ವಿರುದ್ಧ ತಿರುಗಿಬಿದ್ದಿವೆ.

ಲಖಿಂಪುರ ಖೇರಿ ಹಿಂಸಾಚಾರವನ್ನು ನಾವು ಬಲವಾಗಿ ಖಂಡಿಸುತ್ತೇವೆ. ರೈತರ ಮೇಲಿನ ಹಿಂಸಾಚಾರವನ್ನು ಖಂಡಿಸಿ ನಾವು ಹೊಸ ಸರಣಿಯ ಆಂದೋಲನ ನಡೆಸಲಿದ್ದೇವೆ. ತನ್ನಿಮಿತ್ತ ಅಕ್ಟೋಬರ್​ 12ರಂದು, ದೇಶದ ವಿವಿಧ ರಾಜ್ಯಗಳ ರೈತರು ಲಖಿಂಪುರ ಖೇರಿಗೆ ಬರಲಿದ್ದಾರೆ. ಇಲ್ಲಿ ಮೃತಪಟ್ಟ ರೈತರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯಲಿದೆ ಎಂದು ವಿವಿಧ ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್​ ಮೋರ್ಚಾ ತಿಳಿಸಿದೆ.  ಹಾಗೇ, ಅಕ್ಟೋಬರ್​ 18ರಂದು ರೈತ ಒಕ್ಕೂಟಗಳು ಮತ್ತೊಮ್ಮೆ ರೈಲು ತಡೆ ಚಳವಳಿ ನಡೆಸಲಿವೆ. ಹಾಗೇ, ಅಕ್ಟೋಬರ್​​ 28ರಂದು ಲಖನೌನಲ್ಲಿ ಮಹಾಪಂಚಾಯತ್​ ನಡೆಸುತ್ತೇವೆ.  ಅಜಯ್​ ಮಿಶ್ರಾರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಈಗಾಗಲೇ ಆಗ್ರಹ ವ್ಯಕ್ತಪಡಿಸಿದ್ದೇವೆ ಎಂದು ಸಂಯುಕ್ತ ಕಿಸಾನ್​ ಮೋರ್ಚಾ ತಿಳಿಸಿದೆ.

ಲಖಿಂಪುರ ಖೇರಿ ಹಿಂಸಾಚಾರದಲ್ಲಿ ಪ್ರಮುಖವಾಗಿ ಕೇಳಿಬರುತ್ತಿರುವುದು ಆಶಿಶ್​ ಮಿಶ್ರಾ ಹೆಸರು. ಅವರು ಇಂದು ಉತ್ತರ ಪ್ರದೇಶ ಕ್ರೈಂ ಬ್ರ್ಯಾಂಚ್​​ಗೆ ವಿಚಾರಣೆ ಹಾಜರಾಗಿದ್ದರು. ಬಳಿಕ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರತಿಭಟನಾ ನಿರತ ರೈತರ ಮೇಲೆ ಎರಡು ವಾಹನಗಳು ಹರಿದಾಗ, ಅದರಲ್ಲಿ ಎಸ್​ಯುವಿ ಓಡಿಸುತ್ತಿದ್ದುದು ಆಶಿಶ್​ ಮಿಶ್ರಾ ಎಂಬುದು ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ಅರೆಸ್ಟ್ ಮಾಡಲಾಗಿದೆ. ಇನ್ನು ಲಖಿಂಪುರ ಖೇರಿಯಲ್ಲಿ ಸೆಕ್ಷನ್​ 144 ಜಾರಿಯಾಗಿದ್ದು, ಅಲ್ಲಿಗೆ ಯಾವುದೇ ರಾಜಕೀಯ ನಾಯಕರಿಗೂ ಪ್ರವೇಶ ನೀಡಲಿಲ್ಲ. ಆದರೆ ರೈತ ಸಂಘಟನೆಗಳು, ರೈತ ನಾಯಕರು ಭೇಟಿ ಕೊಡಬಹುದು ಎಂದು ಹೇಳಲಾಗಿದೆ.  ಒಟ್ಟಾರೆ ಮೂರು ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆ ಪದೇಪದೆ ಬೇರೆಬೇರೆ ರೀತಿಯ ಆಯಾಮಗಳನ್ನು ಪಡೆದುಕೊಳ್ಳುತ್ತಿದೆ. ಈ ಹಿಂದೊಮ್ಮೆ ರೈಲು ಹಳಿಗಳ ಮೇಲೆ ಪ್ರತಿಭಟನೆ ನಡೆಸಿದ ರೈತರ ವಿರುದ್ಧ ದಾಖಲಾಗಿದ್ದ ಕೇಸ್​ಗಳನ್ನು ಇತ್ತೀಚೆಗಷ್ಟೇ ಪಂಜಾಬ್​ ಮುಖ್ಯಮಂತ್ರಿ ಚರಣಜಿತ್​ ಸಿಂಗ್​ ಛನ್ನಿ ಹಿಂಪಡೆದಿದ್ದರು. ಇದೀಗ ಮತ್ತೊಮ್ಮೆ ರೈತರು ರೈಲು ತಡೆ ಚಳವಳಿಗೆ ಮುಂದಾಗಿದ್ದಾರೆ.

ಇದನ್ನೂ ಓದಿ: ಕಲ್ಲಿದ್ದಲು, ಕೊರೊನಾ ಲಸಿಕೆ ಪೂರೈಸಲು ಮನವಿ; ದೆಹಲಿ ಪ್ರವಾಸ ಯಶಸ್ವಿಯಾಗಿದೆ ಎಂದ ಬಸವರಾಜ ಬೊಮ್ಮಾಯಿ

Mangaluru: ಬಲಪಂಥೀಯ ವೇದಿಕೆಗಳಿಂದ ವಿರೋಧ; ಕಾಲೇಜು ಪಾರ್ಕ್​ಗೆ ಸ್ಟಾನ್ ಸ್ವಾಮಿ ಹೆಸರಿಡುವ ನಿರ್ಧಾರ ಮುಂದೂಡಿಕೆ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ