AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo | ರೈತ ಚಳವಳಿ ದುರ್ಬಳಕೆಗೆ ಅವಕಾಶ ನೀಡುವುದಿಲ್ಲ: ಪ್ರಧಾನಿ ಆರೋಪ ಅಲ್ಲಗಳೆದ ರೈತ ಒಕ್ಕೂಟಗಳು

ಪ್ರಧಾನಿ ನರೇಂದ್ರ ಮೋದಿಯವರ ‘ರೈತ ಚಳವಳಿಯನ್ನು ವಿಪಕ್ಷಗಳು ದುರ್ಬಳಕೆ ಮಾಡಿಕೊಳ್ಳುತ್ತಿದೆ’ ಮತ್ತು ‘ರೈತರ ದಾರಿ ತಪ್ಪಿಸುತ್ತಿವೆ’ ಎಂಬ ಆರೋಪವನ್ನು ರೈತ ನಾಯಕ ಅಭಿಮನ್ಯು ಕೋಹರ್ ತಳ್ಳಿಹಾಕಿದ್ದಾರೆ. ದೆಹಲಿ ಚಲೋ ಚಳವಳಿ ರಾಜಕೀಯ ರಹಿತವಾಗಿ ನಡೆಯುತ್ತಿದೆ. ಯಾವ ರಾಜಕೀಯ ಪಕ್ಷವನ್ನೂ ರೈತರ ಚಳವಳಿಯನ್ನು ದುರ್ಬಳಕೆ ಮಾಡಲು ಬಿಡುವುದಿಲ್ಲ ಎಂದು ಅವರು ಘೋಷಿಸಿದ್ದಾರೆ.

Delhi Chalo | ರೈತ ಚಳವಳಿ ದುರ್ಬಳಕೆಗೆ ಅವಕಾಶ ನೀಡುವುದಿಲ್ಲ: ಪ್ರಧಾನಿ ಆರೋಪ ಅಲ್ಲಗಳೆದ ರೈತ ಒಕ್ಕೂಟಗಳು
ರೈತ ಪ್ರತಿಭಟನೆ
guruganesh bhat
| Edited By: |

Updated on: Dec 25, 2020 | 8:58 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ‘ರೈತ ಚಳವಳಿಯನ್ನು ವಿಪಕ್ಷಗಳು ದುರ್ಬಳಕೆ ಮಾಡಿಕೊಳ್ಳುತ್ತಿದೆ’ ಮತ್ತು ‘ರೈತರ ದಾರಿ ತಪ್ಪಿಸುತ್ತಿವೆ’ ಎಂಬ ಆರೋಪವನ್ನು ರೈತ ನಾಯಕ ಅಭಿಮನ್ಯು ಕೋಹರ್ ತಳ್ಳಿಹಾಕಿದ್ದಾರೆ. ದೆಹಲಿ ಚಲೋ ಚಳವಳಿ ರಾಜಕೀಯ ರಹಿತವಾಗಿ ನಡೆಯುತ್ತಿದೆ. ಯಾವ ರಾಜಕೀಯ ಪಕ್ಷವನ್ನೂ ರೈತರ ಚಳವಳಿಯನ್ನು ದುರ್ಬಳಕೆ ಮಾಡಲು ಬಿಡುವುದಿಲ್ಲ ಎಂದು ಅವರು ಘೋಷಿಸಿದ್ದಾರೆ.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ನಿಮಿತ್ತ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ 9 ಕೋಟಿ ರೈತರ ಖಾತೆಗೆ ಹಣ ಬಿಡುಗಡೆಗೊಳಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ವಿಪಕ್ಷಗಳು ರೈತರನ್ನು ದಾರಿ ತಪ್ಪಿಸುವ ಕಾರ್ಯದಲ್ಲಿ ನಿರತವಾಗಿವೆ. ದೆಹಲಿ ಚಲೋ ಚಳವಳಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ. ಕಳೆದೊಂದು ತಿಂಗಳಿಂದಲೂ ಸರ್ಕಾರ ಚಳವಳಿಕಾರರ ಜೊತೆ ಮಾತುಕತೆ ನಡೆಸುತ್ತಿದೆ. ಆದರೆ, ರೈತ ನಾಯಕರು ಕೃಷಿ ತಿದ್ದುಪಡಿಗಿಂತ ಟೋಲ್ ಬೂತ್​ಗಳಲ್ಲಿ ಉಚಿತ ಸೇವೆ ಒದಗಿಸಲು, ಹಿಂಸಾಕೃತ್ಯಗಳಲ್ಲಿ ಬಂಧಿತರಾದವರನ್ನು ಬಿಡುಗಡೆಗೊಳಿಸಬೇಕೆಂದು ಒತ್ತಾಯಿಸುತ್ತಿದ್ದಾರೆ ಎಂದು ಪ್ರಧಾನಿ ಎಂದು ಆರೋಪಿಸಿದ್ದರು.

ಈ ಆರೋಪವನ್ನು ನಿರಾಕರಿಸಿರುವ ಅಭಿಮನ್ಯು ಕೋಹರ್, ನಮ್ಮ ಚಳವಳಿಯಲ್ಲಿ ರಾಜಕೀಯದ ಲವಲೇಶವೂ ಸುಳಿಯಲು ಅವಕಾಶ ನೀಡಿಲ್ಲ. ರಾಜಕಾರಣಿಗಳು ಭಾಗವಹಿಸುವುದನ್ನು ನಿಷೇಧಿಸಿದ್ದೇವೆ ಎಂದು ತಿಳಿಸಿದರು.ಕೇಂದ್ರ ಸರ್ಕಾರ ಹೇಳುವಂತೆ ಕನಿಷ್ಠ ಬೆಂಬಲ ಬೆಲೆ ಮುಂದುವರೆಯಲಿದೆ. ಆದರೆ, ಈ ಕುರಿತು ಸರ್ಕಾರ ಲಿಖಿತ ರೂಪದಲ್ಲಿ ಖಚಿತತೆ ನೀಡುತ್ತಿಲ್ಲ ಎಂದು ಪ್ರಶ್ನಿಸುತ್ತಾರೆ 40 ರೈತ ನಾಯಕರ ಒಕ್ಕೂಟವಾದ ಸಂಕ್ಯುತ್ ಕಿಸಾನ್ ಮೋರ್ಚಾದ ಶಿವ್ ಕುಮಾರ್ ಕಕ್ಕಾ. ಆಲ್ ಇಂಡಿಯಾ ಕಿಸಾನ್ ಸಂಘರ್ಷ್ ಕೋರ್ಡಿನೇಷನ್ ಕಮಿಟಿಯ ಕಾರ್ಯದರ್ಶಿ ಅವಿಕ್ ಸಹಾರ ಪ್ರಶ್ನೆಯೂ ಇದೇ ಆಗಿದ್ದು, ಕೆಲ ರೈತ ಸಂಘಟನೆಗಳು ನೂತನ ಕೃಷಿ ಕಾಯ್ದೆಗಳನ್ನು ಬೆಂಬಲಿಸುತ್ತಿವೆ ಎಂಬುದು ಸಹ ಸತ್ಯಕ್ಕೆ ದೂರವಾದದ್ದು ಹೇಳಿದ್ದಾರೆ.

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು