AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಅಮೆರಿಕಕ್ಕೆ ಹೋದರೂ ಬಿಡದ ರಾಕೇಶ್ ಟಿಕಾಯತ್​; ಪ್ರಧಾನಿ ವಿರುದ್ಧ ಜೋ ಬೈಡನ್​ ಬಳಿಯೇ ದೂರು

ಮೂರು ಕೃಷಿ ಕಾಯ್ದೆಗಳ ಬಗ್ಗೆ ಮಾತುಕತೆ ನಡೆಸಲು ನಾವು ಸಿದ್ಧರಿದ್ದೇವೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಗೊಂದಲ ಸರಿಯಾಗುವವರೆಗೂ ನಾವು ಅನುಷ್ಠಾನಕ್ಕೆ ತರುವುದಿಲ್ಲ ಎಂಬ ಭರವಸೆಯನ್ನೂ ನೀಡಿದೆ.

ಮೋದಿ ಅಮೆರಿಕಕ್ಕೆ ಹೋದರೂ ಬಿಡದ ರಾಕೇಶ್ ಟಿಕಾಯತ್​; ಪ್ರಧಾನಿ ವಿರುದ್ಧ ಜೋ ಬೈಡನ್​ ಬಳಿಯೇ ದೂರು
ರಾಕೇಶ್​ ಟಿಕಾಯತ್​
TV9 Web
| Edited By: |

Updated on:Sep 24, 2021 | 2:44 PM

Share

ದೆಹಲಿ:  ಪ್ರಧಾನಿ ನರೇಂದ್ರ ಮೋದಿಯವರು ಯುಎಸ್​ ಪ್ರವಾಸ (PM Modi US Visit)ದಲ್ಲಿದ್ದಾರೆ. ನಿನ್ನೆ (ಸೆ.23)ಯೇ ಅಮೆರಿಕಕ್ಕೆ ತೆರಳಿರುವ ಅವರು ಯುಎಸ್​ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್​, ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್​ ಮಾರಿಸನ್​, ಜಪಾನ್​ ಪ್ರಧಾನಿ ಯೋಶಿಹಿದೆ ಸುಗಾರನ್ನು ಭೇಟಿಯಾಗಿದ್ದಾರೆ. ಇಂದು ಕ್ವಾಡ್​ ಶೃಂಗಸಭೆ (Quad Summit)ಯಲ್ಲಿ ಭಾಗಿಯಾಗಲಿದ್ದಾರೆ. ನಂತರ ಅಮೆರಿಕ ಅಧ್ಯಕ್ಷ ಜೋ ಬೈಡನ್​ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಯುಎಸ್​ ಪ್ರವಾಸದಲ್ಲಿರುವಾಗ ಇತ್ತ ರೈತ ಮುಖಂಡ ರಾಕೇಶ್​ ಟಿಕಾಯತ್​ ಟ್ವೀಟ್​ ಮಾಡಿ, ಯುಎಸ್ ಅಧ್ಯಕ್ಷ ಜೋ ಬೈಡನ್​ರನ್ನು ಟ್ಯಾಗ್​ ಮಾಡಿ, ತಮ್ಮ ಪ್ರತಿಭಟನೆಯ ಬಗ್ಗೆ ಹೇಳಿದ್ದಾರೆ.  

‘ಡಿಯರ್​ ಪ್ರೆಸಿಡೆಂಟ್​ ಆಫ್​ ಯುಎಸ್​ (@POTUS), ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರ ಅನುಷ್ಠಾನಕ್ಕೆ ತಂದ ಮೂರು ಕೃಷಿ ಕಾಯ್ದೆಗಳ ವಿರುದ್ಧ ನಾವು ಭಾರತೀಯ ರೈತರು ಕಳೆದ 11 ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದೇವೆ. ಈ 11 ತಿಂಗಳುಗಳಲ್ಲಿ 700 ರೈತರು ಮೃತಪಟ್ಟಿದ್ದಾರೆ. ನಾವು ಉಳಿಯಬೇಕೆಂದರೆ ಈ ಕರಾಳ ಕಾನೂನುಗಳನ್ನು ಹಿಂಪಡೆಯಬೇಕು. ನಿಮ್ಮನ್ನು ಪ್ರಧಾನಿ ನರೇಂದ್ರ ಮೋದಿಯವರು ಭೇಟಿಯಾದಾಗ ಈ ಬಗ್ಗೆ ಅವರಿಗೆ ಹೇಳಿ. ನಮ್ಮ ಆತಂಕವನ್ನು ನೀವಾದರೂ ಅವರಿಗೆ ತಿಳಿಸಿ’ ಎಂದು ರಾಕೇಶ್​ ಟಿಕಾಯತ್​ ಟ್ವೀಟ್​ ಮಾಡಿದ್ದಾರೆ.  

ಕೇಂದ್ರ ಸರ್ಕಾರ ಹೊಸದಾಗಿ ಜಾರಿಗೊಳಿಸಿದ ಕೃಷಿ ಕಾನೂನುಗಳು ಕನಿಷ್ಠ ಬೆಂಬಲ ಬೆಲೆ ಸೌಲಭ್ಯ ತೆಗೆದುಹಾಕುತ್ತವೆ. ಈ ಕಾಯ್ದೆಗಳನ್ನು ಸರ್ಕಾರ ಹಿಂಪಡೆಯಬೇಕು ಎಂದು ರೈತರು ದೆಹಲಿಯ ಗಡಿ ಭಾಗಗಳಲ್ಲಿ ಬಹುತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾನಿರತ ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ 11 ಸುತ್ತಿನ ಮಾತುಕತೆಯೂ ವಿಫಲವಾಗಿದೆ. ಹೀಗೆ ಪ್ರತಿಭಟನೆ ನಡೆಸುತ್ತಿರುವ ರೈತಸಂಘಟನೆಗಳಲ್ಲಿ ಪ್ರಮುಖವಾದದ್ದು ಭಾರತೀಯ ಕಿಸಾನ್​ ಯೂನಿಯನ್​ (BKU). ಇದರ ವಕ್ತಾರರಾಗಿರುವ ರಾಕೇಶ್​ ಟಿಕಾಯತ್​ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.

ಮೂರು ಕೃಷಿ ಕಾಯ್ದೆಗಳ ಬಗ್ಗೆ ಮಾತುಕತೆ ನಡೆಸಲು ನಾವು ಸಿದ್ಧರಿದ್ದೇವೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಗೊಂದಲ ಸರಿಯಾಗುವವರೆಗೂ ನಾವು ಅನುಷ್ಠಾನಕ್ಕೆ ತರುವುದಿಲ್ಲ ಎಂಬ ಭರವಸೆಯನ್ನೂ ನೀಡಿದೆ. ಆದರೆ ರೈತಸಂಘಟನೆಗಳು ಮಾತು ಕೇಳುತ್ತಿಲ್ಲ. ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ವಿನಃ ನಾವು ಪ್ರತಿಭಟನೆ ನಡೆಸುವುದಿಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದಾರೆ. ನಿನ್ನೆಯಿಂದ ಪ್ರಧಾನಿ ಮೋದಿ ಯುಎಸ್​ ಪ್ರವಾಸ ಹಮ್ಮಿಕೊಂಡಿದ್ದು, ಇಂದು ಸಂಜೆ ಕ್ವಾಡ್​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೆ, ಅಮೆರಿಕದ ಅಧ್ಯಕ್ಷ ಜೋ ಬೈಡನ್​​ ಜತೆ ದ್ವಿಪಕ್ಷೀಯ ಮಾತುಕತೆಯನ್ನೂ ನಡೆಸಲಿದ್ದಾರೆ.

ಇದನ್ನೂ ಓದಿ: PM Modi US Visit: ಕಮಲಾ ಹ್ಯಾರಿಸ್​ಗೆ ಭಾವನಾತ್ಮಕ ಉಡುಗೊರೆ ನೀಡಿದ ಪ್ರಧಾನಿ ಮೋದಿ; ತಾತ ಗೋಪಾಲನ್​ರನ್ನು ನೆನಪಿಸಿದ ಗಿಫ್ಟ್​

ಸಿಲಿಕಾನ್ ಸಿಟಿಯಲ್ಲಿ ಕಿಡಿಗೇಡಿಗಳ ಅಟ್ಟಹಾಸ; ಬೈಕ್​ನಲ್ಲಿ ಬಂದವರಿಂದ ಮನೆ ಮುಂದೆ ನಿಲ್ಲಿಸಿದ್ದ 17 ಕಾರಿನ ಗಾಜುಗಳು ಪುಡಿ ಪುಡಿ 

(Farmer leader Rakesh Tikait Tweet and Tags Joe Biden Before Indian PM Narendra Modi Meet)

Published On - 2:41 pm, Fri, 24 September 21

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?