AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo: ಕೇಂದ್ರ ಸರ್ಕಾರಕ್ಕೆ ಉಪವಾಸ ಸತ್ಯಾಗ್ರಹದ ಎಚ್ಚರಿಕೆ ನೀಡಿದ ಪಂಜಾಬ್ ರೈತರು

ಪಟ್ಟು ಬಿಡದೆ ಪ್ರತಿಭಟನೆ ಮುಂದುವರೆಸಿರುವ ಪಂಜಾಬ್ ರೈತರು ಡಿಸೆಂಬರ್ 14ರಿಂದ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ವಿಧಿಸಿದ್ದಾರೆ. ಇತ್ತ ಮೋದಿಯನ್ನು ವಿರೋಧಿಸುವವರು ರಾಷ್ಟ್ರ ವಿರೋಧಿಗಳಲ್ಲ ಎಂದು ಕಾಂಗ್ರೆಸ್ ಹರಿಹಾಯ್ದಿದೆ.

Delhi Chalo: ಕೇಂದ್ರ ಸರ್ಕಾರಕ್ಕೆ ಉಪವಾಸ ಸತ್ಯಾಗ್ರಹದ ಎಚ್ಚರಿಕೆ ನೀಡಿದ ಪಂಜಾಬ್ ರೈತರು
ರೈತ ಮುಖಂಡರ ಜೊತೆ ಸಭೆ ನಡೆಸಿದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ (ಸಂಗ್ರಹ ಚಿತ್ರ)
guruganesh bhat
|

Updated on:Dec 13, 2020 | 6:17 PM

Share

ದೆಹಲಿ: ಪಟ್ಟು ಬಿಡದೆ ಪ್ರತಿಭಟನೆ ಮುಂದುವರೆಸಿರುವ ಪಂಜಾಬ್ ರೈತರು ಡಿಸೆಂಬರ್ 14ರಿಂದ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಜೊತೆ ಇನ್ನೊಂದು ಸುತ್ತಿನ ಸಭೆ ನಡೆಸಿದ ರೈತ ಒಕ್ಕೂಟಗಳ ನಾಯಕರು ಈ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ನಾಳೆ ರಾಜಸ್ಥಾನದ ಶಹಜಹಾನ್​ಪುರದಿಂದ ಸಾವಿರಾರು ರೈತರು ಮೆರವಣಿಗೆಗಳಲ್ಲಿ ರಾಷ್ಟ್ರ ರಾಜಧಾನಿಯತ್ತ ಹೆಜ್ಜೆಹಾಕಲಿದ್ದಾರೆ. ಟ್ರ್ಯಾಕ್ಟರ್​, ಟ್ರಾಲಿಗಳಲ್ಲಿ ಹೊರಟಿರುವ ರೈತರು, ದೆಹಲಿ-ಜೈಪುರ ಮುಖ್ಯ ಹೆದ್ದಾರಿ  ಬಂದ್​ ಮಾಡುವ ಸಾಧ್ಯತೆಯಿದೆ.

ಮೋದಿ ವಿರೋಧಿಗಳು ರಾಷ್ಟ್ರವಿರೋಧಿಗಳಲ್ಲ ಎಂದ ಕಾಂಗ್ರೆಸ್ ಮೋದಿ ವಿರೋಧಿಗಳನ್ನು ಮಾವೋವಾದಿ, ರಾಷ್ಟ್ರವಿರೋಧಿಗಳೆಂದು ಬಿಂಬಿಸಲಾಗುತ್ತಿದೆ ಎಂದು ಕಾಂಗ್ರೆಸ್ ಮತ್ತೊಮ್ಮೆ ದೂರಿದೆ. ಮಾವೋವಾದಿ, ಎಡಪಂಥೀಯ ಮತ್ತು ಸಮಾಜ ಘಾತುಕ ಶಕ್ತಿಗಳು ದೆಹಲಿ ಚಲೋವನ್ನು ಬಳಸಿಕೊಳ್ಳುತ್ತಿವೆ ಎಂಬ ನರೇಂದ್ರ ಸಿಂಗ್ ತೋಮರ್ ಹೇಳಿಕೆಗೆ ಈ ಮೂಲಕ ಕಾಂಗ್ರೆಸ್ ತಿರುಗೇಟು ನೀಡಿದೆ. .

ಕೃಷಿ ಸಚಿವರನ್ನು ಭೇಟಿಯಾದ ಹರಿಯಾಣ ಉಪ ಮುಖ್ಯಮಂತ್ರಿ ದುಷ್ಯಂತ್ ಚೌಟಾಲಾ ಕೇಂದ್ರ ಕೃಷಿ ಸಚಿವರನ್ನು ಹರಿಯಾಣ ಉಪ ಮುಖ್ಯಮಂತ್ರಿ ದುಷ್ಯಂತ್ ಚೌಟಾಲಾ ಭೇಟಿಯಾಗಿ ಚರ್ಚಿಸಿದ್ದಾರೆ. 20ರಿಂದ 24 ಘಂಟೆಗಳಲ್ಲಿ ಒಂದು ನಿರ್ಧಾರ ಹೊರಹೊಮ್ಮುವ ಸಾಧ್ಯತೆಯಿದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಕೃಷಿ ಕಾಯ್ದೆ ಮಂಡನೆಯಾಗುವಾಗ ನಾನು ಸಂಸತ್ತಿನಲ್ಲಿರಲಿಲ್ಲ: ಹನುಮಾನ್ ಬೇನಿವಾಲ್ ನೂತನ ಕೃಷಿ ಕಾಯ್ದೆಗಳಿಗೆ ವಿರೋಧ ವ್ಯಕ್ತಪಡಿಸುತ್ತಲೇ ಬಂದಿರುವ ಎನ್​ಡಿಎ ಅಂಗಪಕ್ಷ ರಾಷ್ಟ್ರೀಯ ಲೋಕತಾಂತ್ರಿಕ ಪಾರ್ಟಿಯ ಮುಖಂಡ ಹನುಮಾನ್ ಬೇನಿವಾಲ್ ಮತ್ತೊಮ್ಮೆ ಗುಡುಗಿದ್ದಾರೆ. ಕೃಷಿ ಕಾಯ್ದೆ ಮಂಡನೆಯಾಗುವಾಗ ನಾನು ಲೋಕಸಭೆಯಲ್ಲಿರಲಿಲ್ಲ. ಹಾಗೇನಾದರೂ ಇದ್ದರೆ, ಅಂದೇ, ಶಿರೋಮಣಿ ಅಕಾಲಿದಳದಂತೆಯೇ ಎನ್​ಡಿಎಯಿಂದ ಹೊರಬರುತ್ತಿದ್ದೆ ಎಂದು ಗುಡುಗಿದ್ದಾರೆ.

Delhi Chalo: ಪಂಜಾಬ್​ನಿಂದ ಹೊರಟಿವೆ 1300 ಟ್ರ್ಯಾಕ್ಟರ್​ಗಳು, ಪ್ರತಿಭಟನೆಯ ಕಾವಿಗೆ ಟೋಲ್​ಗಳು ಮುಕ್ತ ಮುಕ್ತ ಮುಕ್ತ..

Published On - 7:42 pm, Sat, 12 December 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ